Homeಕರ್ನಾಟಕಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

‘ರಾಜ್ಯದಲ್ಲಿ ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬ ಸೂಚನೆಯನ್ನು ಹಾಸನ ಶಾಸಕ ಪ್ರೀತಂಗೌಡ ನೀಡಿದ್ದಾರೆಯೇ?’

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಪ್ರೀತಂ, “ನಿಮಗೆ ಅರ್ಥವಾಗಲಿ ಎಂದು ಬಿಡಿಸಿ, ಬಿಡಿಸಿ ಹೇಳುತ್ತಿದ್ದೇನೆ. ಜನತಾ ದಳಕ್ಕೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ ಲೆಕ್ಕ. ದೇವೇಗೌಡ್ರು- ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಯಾಕೆಂದರೆ ಅವರಿಗೆ ಬರೋದು 20-25 ಸೀಟ್‌. ನೀವು ಬೆಂಗಳೂರಿಗೆ ಹೋಗಬೇಕೆಂದರೆ ಮೈಸೂರು ಮೇಲೆ ಬೆಂಗಳೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮಾರ್ಗದಲ್ಲಿ ಹೋಗಿ ಅಂತ ಮಾತ್ರ ಹೇಳ್ತೀನಿ. ಮೈಸೂರಿಗೆ ಹೋಗಿ, ಬೆಂಗಳೂರಿಗೆ ಹೋಗ್ತೀನಿ ಅಂದ್ರೆ ನಿಮ್ಮಿಷ್ಟ. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ನೀವು ಅವರಿಗೆ ವೋಟ್ ಹಾಕಿದ್ರೂ ಮತ್ತೆ ನಮ್ಮ ಹತ್ತಿರಕ್ಕೆ ಬರಬೇಕು. ಯೋಚನೆ ಮಾಡಿ” ಎಂದು ತಿಳಿಸಿದ್ದಾರೆ.

ಪ್ರೀತಂ ಅವರು ಮಾತನಾಡಿರುವ ವಿಡಿಯೊ ತುಣುಕು ವೈರಲ್ ಆಗುತ್ತಿದೆ. “ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆಯೇ? ಬಿಜೆಪಿ ಬಹುಮತ ಪಡೆಯುವುದಿಲ್ಲವೇ?” ಎಂಬ ಚರ್ಚೆಗೆ ಇವರ ಹೇಳಿಕೆ ಅವಕಾಶ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್‌, “ನಾವು ಪದೇ ಪದೇ ಹೇಳುತ್ತಿದ್ದೇವೆ. ಜೆಡಿಎಸ್‌ಗೆ ಮತ ಹಾಕಿದರೆ ಅದು ಬಿಜೆಪಿಗೆ ಹಾಕಿದಂತೆ. ಅದನ್ನೇ ಈಗ ಸ್ವತಃ ಬಿಜೆಪಿ ಶಾಸಕ ಪ್ರೀತಂ ಗೌಡರೂ ಅನುಮೋದಿಸಿದ್ದಾರೆ. ಮೋದಿ-ದೇವೇಗೌಡರ ಮಧ್ಯೆ ಈಗಾಗಲೇ ಮಾತುಕತೆಯೂ ಆಗಿದೆಯಂತೆ. ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಜೆಡಿಎಸ್ ಬೆಂಬಲಿಸಬೇಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಮನವಿ ಮಾಡಿದೆ.

ಪ್ರೀತಂ ಗೌಡ ಹೇಳಿಕೆಯನ್ನು ಸ್ವಪಕ್ಷೀಯರೇ ಆದ ಸಚಿವ ಅಶ್ವತ್ ನಾರಾಯಣ ವಿರೋಧಿಸಿದ್ದಾರೆ. “ಯಾರೂ ಇಂತಹ ಹೇಳಿಕೆಗಳನ್ನ ನೀಡಬಾರದು. ಇದು ತಪ್ಪು ಸಂದೇಶವನ್ನು ರವಾನಿಸುತ್ತದೆ. ಜೆಡಿಎಸ್ ಅಥವಾ ಕಾಂಗ್ರೆಸ್ ಇಬ್ಬರೂ ಸಹ ಬಿಜೆಪಿ ಪ್ರತಿಸ್ಪರ್ಧಿಗಳು. ಮೋದಿ ಹೆಸರು ಹೇಳಿಕೊಂಡು ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ” ಎಂದು ಟೀಕಿಸಿದ್ದಾರೆ.

“ಚುನಾವಣೆ ಕುರಿತು ಮಾತನಾಡಿ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಜನರ ಬೇಡಿಕೆ, ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತೆ. ಇದರಲ್ಲಿ ಎಲ್ಲರೂ ಭಾಗಿಯಾಗುತ್ತಾರೆ. ನಾವು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನತೆಗೆ ತಿಳಿಸುತ್ತೇವೆ” ಎಂದಿದ್ದಾರೆ.

ಬಿಜೆಪಿ ಟಿಕೆಟ್ ಪಡೆದಿರುವ ಪ್ರೀತಂ ಗೌಡ ಮತ್ತು ಜೆಡಿಎಸ್‌ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಇಬ್ಬರೂ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಬಹುತಮ ಪಡೆಯಲಿದೆ ಅಥವಾ ದೊಡ್ಡ ಪಕ್ಷವಾಗಿ ಹೊಮ್ಮಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬ ಸೂಚನೆಯನ್ನು ಸಮೀಕ್ಷೆಗಳು ಹೇಳುತ್ತಿರುವಾಗ ಪ್ರೀತಂ ಹೇಳಿಕೆ ಸಂಚಲನ ಮೂಡಿಸಿದೆ.

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಗುರುವಾರ ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿದೆ. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ. ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿದೆ ಸರ್ವೇ.

ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

ಇದನ್ನೂ ಓದಿರಿ: ‘ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ’ ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯ ವರದಿ ಪ್ರಕಾರ, ಕಾಂಗ್ರೆಸ್ ಪಕ್ಷವು 106 ರಿಂದ 116 ಸ್ಥಾನ ಗಳಿಸುವ ಸಾಧ್ಯತೆ ಇದೆ. ಆಡಳಿತಾರೂಢ ಬಿಜೆಪಿ 79ರಿಂದ 89 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಜೆಡಿಎಸ್​​ಗೆ 24 ರಿಂದ 34 ಸ್ಥಾನ ದೊರೆತರೆ ಇತರರು 0ಯಿಂದ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ.

ಜನ್‌ ಕೀ ಬಾತ್‌ ಸಮೀಕ್ಷೆಯ ಪ್ರಕಾರ ಬಿಜೆಪಿ 98ರಿಂದ 109 ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರತಿಪಕ್ಷ ಕಾಂಗ್ರೆಸ್‌ 89ರಿಂದ 97 ಸ್ಥಾನಗಳೊಂದಿಗೆ 2ನೇ ಅತಿದೊಡ್ಡ ಪಕ್ಷ ಎನಿಸಿಕೊಳ್ಳಲಿದೆ. ಜೆಡಿಎಸ್‌ 25ರಿಂದ 29 ಸ್ಥಾನಗಳನ್ನಷ್ಟೇ ಗಳಿಸಲಿದೆ. ಇತರರು ಕೇವಲ 1 ಸ್ಥಾನ ಪಡೆಯಲಿದ್ದಾರೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯಬೇಕಿದ್ದರೆ ಕನಿಷ್ಠ 113 ಸ್ಥಾನ ಗಳಿಸಬೇಕಿದ್ದು, ಈ ಬಾರಿ ಆ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಸಮೀಕ್ಷೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...