Homeಮುಖಪುಟ'ಇದು ಮೋದಿ ಸಮೀಕ್ಷೆ, ಎಕ್ಸಿಟ್ ಪೋಲ್ ಅಲ್ಲ': ರಾಹುಲ್‌ ಗಾಂಧಿ

‘ಇದು ಮೋದಿ ಸಮೀಕ್ಷೆ, ಎಕ್ಸಿಟ್ ಪೋಲ್ ಅಲ್ಲ’: ರಾಹುಲ್‌ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸಿಟ್ ಪೋಲ್ ಫಲಿತಾಂಶವನ್ನು ತಿರಸ್ಕರಿಸಿದ್ದು, ಇದು  ಕಲ್ಪನೆಯ  ಸಮೀಕ್ಷೆ ಮತ್ತು ಮೋದಿಯ ಸಮೀಕ್ಷೆ ಎಂದು ಹೇಳಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಮೀಡಿಯಾ ಸಮೀಕ್ಷೆ. ಇದು ಅವರ  ಕಲ್ಪನೆಯ ಸಮೀಕ್ಷೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ ಐತಿಹಾಸಿಕ ಗೆಲುವಿನ ಬಗ್ಗೆ ಅಂಕಿ-ಅಂಶಗಳನ್ನು ಬಹಿರಂಗಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್‌ ಗಾಂಧಿ, ಇಂಡಿಯಾ ಮೈತ್ರಿಕೂಟಕ್ಕೆ ಎಷ್ಟು ಸೀಟುಗಳು ಸಿಗುತ್ತದೆ ಎಂದು ಕೇಳಿದಾಗ, ನೀವು ಸಿಧು ಮೂಸ್ ವಾಲಾ ಅವರ 295 ಹಾಡು ಕೇಳಿದ್ದೀರಾ? 295 ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಶಿವಸೇನಾ (ಉದ್ಧವ್‌ ಬಣ) ಸಂಸದ ಸಂಜಯ್ ರಾವುತ್ ಎಕ್ಸಿಟ್‌ ಪೋಲ್‌ ಫಲಿತಾಂಶಗಳ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಕಾರ್ಪೊರೇಟ್ ಆಟ ಮತ್ತು ವಂಚನೆ’ ಎಂದು ಬಣ್ಣಿಸಿದ್ದು, ಸಮೀಕ್ಷೆ ನಡೆಸುವ ಮಾಧ್ಯಮ ಕಂಪನಿಗಳ ಮೇಲೆ ಒತ್ತಡವಿದೆ ಎಂದು ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್, ಪ್ರತಿಪಕ್ಷದ ಇಂಡಿಯಾ ಮೈತ್ರಿಕೂಟವು 543 ಸದಸ್ಯ ಬಲದ ಲೋಕಸಭೆಯಲ್ಲಿ 295 ರಿಂದ 310 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ. ಈ ಕಂಪನಿಗಳು ಎಕ್ಸಿಟ್ ಪೋಲ್‌ಗಳನ್ನು ಉಚಿತವಾಗಿ ನಡೆಸುತ್ತವೆಯೇ? ಎಂದು ಸಂಜಯ್‌ ರಾವತ್‌ ಪ್ರಶ್ನಿಸಿದ್ದಾರೆ.

ಇಂಡಿಯಾ ಮೈತ್ರಿಕೂಟವು 543 ಸದಸ್ಯ ಬಲದ ಲೋಕಸಭೆಯಲ್ಲಿ 295 ರಿಂದ 310 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ. ಇದು ಎಕ್ಸಿಟ್ ಪೋಲ್ ಅಲ್ಲ ಜನರ ಸಮೀಕ್ಷೆಯ ಮೂಲಕ ಅಂಕಿಅಂಶಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ, ಬಿಹಾರ, ಹರಿಯಾಣ, ಕರ್ನಾಟಕ ರಾಜ್ಯಗಳು ಮಹಾರಾಷ್ಟ್ರದೊಂದಿಗೆ ದೇಶದಲ್ಲಿ ಬದಲಾವಣೆ ತರಲಿವೆ. ನಮಗೆ ಎಕ್ಸಿಟ್ ಪೋಲ್‌ಗಳ ಅಗತ್ಯವಿಲ್ಲ, ನಾವು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ನೆಲದ ವಾಸ್ತವತೆಯನ್ನು ಅರ್ಥಮಾಡಿಕೊಳ್ಳುತ್ತೇವೆ. ಇಂಡಿಯಾ ಮೈತ್ರಿಕೂಟದ ಯುಪಿಯಲ್ಲಿ 80 ರಲ್ಲಿ 35 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ರಾಷ್ಟ್ರೀಯ ಜನತಾದಳ  ಬಿಹಾರದಲ್ಲಿ 40ರಲ್ಲಿ 16 ಸ್ಥಾನಗಳನ್ನು ಗೆಲ್ಲಲಿದೆ  ಸಂಜಯ್‌ ರಾವತ್‌ ಹೇಳಿದ್ದಾರೆ.

ಎಕ್ಸಿಟ್ ಪೋಲ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು “ಸಂಯೋಜಿತ” ಮಾಡಿದ್ದಾರೆ. ಇವೆಲ್ಲವೂ ಅವರು ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳಾಗಿವೆ, ಆದರೆ ನಿಜವಾದ ಫಲಿತಾಂಶಗಳು ತುಂಬಾ ಭಿನ್ನವಾಗಿರುತ್ತವೆ ಎಂದು ಎಕ್ಸಿಟ್ ಪೋಲ್‌ ಫಲಿತಾಂಶಗಳ ಬಗ್ಗೆ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಇದನ್ನು ಓದಿ: ಎಕ್ಸಿಟ್ ಪೋಲ್‌ಗಳನ್ನು ಮೋದಿಯೇ ಸಂಯೋಜಿಸಿದ್ದಾರೆ, ಫಲಿತಾಂಶ ಭಿನ್ನವಾಗಿರಲಿದೆ: ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...