Homeಅಂಕಣಗಳುಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

ಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

- Advertisement -
- Advertisement -

ನಮ್ಮ ಸಿನಿಮಾರಂಗದ ಒಂದೆರೆಡು ಸುದ್ದಿಗಳು ಶಾನೆ ಸ್ವಾರಸ್ಯವಾಗಿವೆಯಂತಲ್ಲಾ! ಗೋಳಿನ ದನಿಯಿಂದ ಹಾಸ್ಯನಟನಾಗಿ ಮೇಲೆ ಬಂದ ಕೋಮಲ್, ಅದು ಬಿಟ್ಟು ಹೀರೋ ಆದಾಗ ಜನ ತಿರಸ್ಕರಿಸಿದರು. ತನ್ನನ್ನು ಜನ ಹೇಗೆ ನೋಡಲು ಬಯಸುತ್ತಾರೆ ಎಂಬುದನ್ನು ಯಾವುದೇ ನಟ ಮೊದಲು ಗ್ರಹಿಸಿಕೊಳ್ಳಬೇಕು. ಅದಾಗದಿದ್ದರೆ, ಜೋತಿಷ್ಯದ ಮೊರೆ ಹೋಗುತ್ತಾರೆ; ಆದರೆ ಕೋಮಲ್ ಜ್ಯೋತಿಷ್ಯಕ್ಕಾಗಿ ದೂರ ಹೋಗದೆ ತನ್ನ ಅಣ್ಣನನ್ನೆ ಆಶ್ರಯಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಈಗ ಜ್ಯೋತಿಷಿಯಂತೆ ಜಾತಕ ಹಿಡಿದು ಗ್ರಹಗತಿಗಳ ಸ್ಥಾನ ಗುರುತಿಸಿ ನಿಮಗೆ ಯಾವ ಗ್ರಹದ ಕಾಟವಿದೆ ಎಂದೆಲ್ಲಾ ಕರಾರುವಕ್ಕಾಗಿ ಹೇಳುತ್ತಾರಂತೆ; ಅಲ್ಲಿಗೆ ಈ ಮಾಜಿ ಹಾಸ್ಯನಟ ದಶರಸ ನಟನಾಗಿರುವ ಸುದ್ದಿ ಕೋಮಲ್‌ರಿಂದ ಹೊರಬಿದ್ದಿದೆ. ನಿನಗೆ ಕೇತು ದೆಸೆಯಿಂದ ಕೇಡಾಗಿದೆ ಎಂದು ತಮ್ಮನಿಗೆ ಹೇಳಿ ಆತ ಐದು ವರ್ಷ ಮೂಲೆಯಲ್ಲಿ ಕೂರುವಂತೆ ಮಾಡಿದ ಈ ಆಧುನಿಕ ಜ್ಯೋತಿಷಿ ಆ ಅವಧಿಯಲ್ಲಿ ತಾನೇ ಮೆರೆಯಲು ಯೋಚಿಸಿದ್ದರಾ? ದಾಯಾದಿ ಮತ್ಸರ ಹೀಗೆ ಎಂದು ಹೇಳಲು ಬರುವುದಿಲ್ಲ. ಕೇತುವಿನಿಂದ ಕೇಡಾಗುತ್ತದೆಂದು ಐದು ವರ್ಷ ಮನೆಯಲ್ಲಿರಲು ತನ್ನ ತಮ್ಮನಿಗೆ ಹೇಳಿದ ಜಗ್ಗೇಶ ತನ್ನ ಜಾತಕ ಕುಂಡಲಿ ಹರಡಿಕೊಂಡು ಗ್ರಹಗತಿಗಳ ಸ್ಥಾನಗಳನ್ನು ಗ್ರಹಿಸಿ ತನ್ನ ಸಿನಿಮಾ ತೋತಾಪುರಿ ತೋಪೆದ್ದೋಗುವ ಸತ್ಯವನ್ನು ಗ್ರಹಿಸಬಹುದಿತಲ್ಲಾ. ಆದ್ದರಿಂದ ಧಿಡೀರನೆ ಉದ್ಭವಿಸಿರುವ ಈ ಉದಯೋನ್ಮುಖ ಬಿಜೆಪಿ ಜ್ಯೋತಿಷಿಯಿಂದ ಹುಷಾರಾಗಿರಿ ಎಂದು ಕಾಂಗೈಗಳು ಪ್ರಚಾರ ಮಾಡುತ್ತಿವೆಯಂತಲ್ಲಾ, ಥೂತ್ತೇರಿ.

******

ಮಾತನಾಡಿಸಿದ ಕೂಡಲೇ ಸೋಮಾರಿ ಮತ್ತು ಜವಬ್ದಾರಿಯಿಲ್ಲದ ಸ್ವಾರ್ಥಿಯಂತೆ ಕಾಣುವ ಅನಂತನಾಗ್ ಹೀರೋ ಆಗಿ ನಲವತ್ತಾರು ವರ್ಷ ತುಂಬಿರುವ ಈ ಸಂದರ್ಭದಲ್ಲಿ ನಾನು ಮೋದಿಯ ಕಟ್ಟಾ ಅಭಿಮಾನಿ ಎಂದುಬಿಟ್ಟಿದ್ದಾರಲ್ಲಾ. ಇಂತಹ ಮಾತು ಇಂತವರ ಬಾಯಲ್ಲಿ ಸುಮ್ಮಸುಮ್ಮನೆ ಬರುವುದಿಲ್ಲ. ಯಾಕೆಂದರೆ ಇಂತವರ ಬಾಯನ್ನೇ ನೋಡುತ್ತಿರುವ ಆರೆಸ್ಸೆಸ್ಸಿಗರು ತಮ್ಮ ಅಜೆಂಡಾಗಳ ರಿಜಿಸ್ಟರಿನಲ್ಲಿ ತಮ್ಮ ಪರ ಮಾತನಾಡಿದವರ ಹೆಸರನ್ನು ದಾಖಲಿಸಿಕೊಂಡು ಅವರನ್ನು ಸ್ಥಾನಮಾನ ಬಿರುದು ಬಾವಲಿಗಳ ಪಟ್ಟಿಗಳಿಗೆ ಸೇರಿಸಿಕೊಳ್ಳುತ್ತವೆ. 1985ರಲ್ಲಿ ಇದೇ ಅನಂತನಾಗ್ ರಾಮಕೃಷ್ಣ ಹೆಗಡೆ ಹೇಳಿದರೆ ನಾನು ಹಾಳು ಬಾವಿಗೂ ಬೀಳಬಲ್ಲೆ ಎಂದುಬಿಟ್ಟಿದ್ದರು. ಆ ಕೂಡಲೇ ಹೆಗಡೆ ಹಾಳು ಬಾವಿ ಮುಚ್ಚಿ ನಜೀರ್ ಸಾಹೇಬರು ಬೋರ್‌ವೆಲ್ ಮುಖಾಂತರ ಜನರಿಗೆ ನೀರುಕೊಡುವ ವ್ಯವಸ್ಥೆ ಮಾಡಿದ್ದು ಈಗ ಇತಿಹಾಸ. ಆದರೆ ಹೆಗಡೆಯವರು ಎಂತಹ ಕಿಲಾಡಿಯೆಂದರೆ ಅನಂತನಾಗ್‌ಗೆ ತಾನೇ ಸಹಾಯ ಮಾಡುವುದರ ಬದಲು ಪಟೇಲರಿಗೆ ಹೇಳಿ ಮಂತ್ರಿ ಮಾಡಿಸಿದರು. ಪಟೇಲರ ಯಣ್ಣೆಪಾರ್ಟಿಗೆ ಒಬ್ಬ ಗುಂಡಿನ ಗೆಳೆಯ ಸಿಕ್ಕಂತಾಯ್ತು. ನಗರಾಭಿವೃದ್ಧಿ ಸಚಿವನಾಗಿ ಈತ ಮಾಡಿದ ಸಾಧನೆ ಎಲ್ಲಿ ಹುಡುಕಿದರೂ ಸಿಗುವುದಿಲ್ಲ. ಕೆಲವು ದಿನ ಖಾತೆಯೇ ಇಲ್ಲದೆ ಮಂತ್ರಿಯಾಗಿದ್ದ ದಾಖಲೆ ಮಾತ್ರ ಈತನ ಹೆಸರಿನಲ್ಲಿ ಹಾಗೇಯೇ ಇದೆ. ಅನಂತನಾಗ್ ಎಂಬ ನಟನ ಬಾಯಿಂದ ಮೋದಿ ಹೊಗಳಿಕೆ ಮಾತು ಸುಮ್ಮಸುಮ್ಮನೆ ಬರುವುದಿಲ್ಲ. ಮೋದಿ ಸರಕಾರದಿಂದ ಅದ್ಯಾವ ಸ್ಥಾನಮಾನ ಪ್ರಶಸ್ತಿ ಸಿಗುತ್ತದೋ ನೋಡಬೇಕೆಂಬುದು ಆತನನ್ನು ಕಂಡರಾಗದವರ ಅಭಿಪ್ರಾಯವಾಗಿದೆಯಲ್ಲಾ, ಥೂತ್ತೇರಿ.

*******

ಈ ದೇಶದಲ್ಲಿ ಮೀಸಲಾತಿ ವಿರೋಧಿಗಳೆಲ್ಲಾ ಹಠಾತ್ತನೆ ಮೀಸಲಾತಿಗಾಗಿ ಹೋರಾಟ ಶುರು ಮಾಡಿಕೊಂಡಿದ್ದಾರಲ್ಲಾ. ಇದೊಂದು ರೀತಿ ಬಸವಣ್ಣನವರ ವಚನದಂತೆ ’ಏರಿಯೇ ಕೆರೆನೀರು ಕುಡಿದಂತೆ, ಬೇಲಿಯೇ ಹೊಲಮೇಯ್ದು ಬಿಸಾಡಿದಂತಲ್ಲಾ’. ಹಿಂದಣದನ್ನು ನೆನಪಿಸಿಕೊಳ್ಳುವುದಾದರೆ, ಮಂಡಲ ವರದಿ ವಿರುದ್ದ ತಿರುಗಿ ಬಿದ್ದ ಬಿಜೆಪಿಯವರು ಕಂಡವರ ಮಕ್ಕಳಿಗೆ ಬೆಂಕಿ ಹಚ್ಚಿದರು. ಉತ್ತರ ಭಾರತದಲ್ಲಿ ಒಕ್ಕಲಿಗರನ್ನು ಮೀಸಲಾತಿಯ ಮಂಡಲ ಕಮೀಷನ್ ಒಳಗೆ ಸೇರಿಸಿದ್ದನ್ನು ಅರಿಯದ ಒಕ್ಕಲಿಗರು ಇಲ್ಲಿ ಮಂಡಲದ ವಿರುದ್ಧ ಪ್ರತಿಭಟಿಸಿದರು. ಮಂಡಲದೊಳಗೆ ನೀವೂ ಇದ್ದೀರಿ ಎಂದು ಯಾರೂ ಹೇಳಲಿಲ್ಲ. ಏಕೆಂದರೆ ನಮ್ಮನ್ನಾಳುವ ಜನ ಮಂಡಲ ಕಮಿಷನ್ ವರದಿಯನ್ನೇ ಓದಿಕೊಂಡಿರಲಿಲ್ಲ. ಈಗ ಈ ಸಮುದಾಯದ ಪ್ರತಿನಿಧಿ ರಾಜಕಾರಣಿಗಳು ಮೀಸಲಾತಿ ಗಲಭೆ ಎಬ್ಬಿಸಲಿದ್ದಾರಲ್ಲಾ. ಹೊಸ ತಲೆಮಾರು ಇದಕ್ಕೆ ಹುಚ್ಚೆದ್ದು ಕುಣಿಯಬಹುದು. ಈಗ ಮೀಸಲು ಗಲಭೆ ಬೇಕಿರುವುದು ಮುಂದುವರಿದ ರಾಜಕಾರಣಿಗಳಿಗೆ. ಉದ್ಯೋಗಗಳೇ ಇಲ್ಲದಿದ್ದರೂ ಎಲ್ಲರೂ ಮೀಸಲು ಕೇಳುವಂತೆ ಮಾಡಿ ಮೀಸಲನ್ನೆ ರದ್ದು ಮಾಡುವ ಸಂಚಿಗಾಗಿ ಬಿಜೆಪಿ ಕಾಯುತ್ತಿದೆಯಂತಲ್ಲಾ, ಥೂತ್ತೇರಿ.

******

ಕರ್ನಾಟಕ ಈವರೆಗೆ ಕಂಡರಿಯದ ಧಾರಾಳತನದ ಮುಖ್ಯಮಂತ್ರಿಗಳು ಏನೂ ಕೇಳಿದರೂ ಕೊಡುವಂತಹ ಕೊಡುಗೈ ದಾನಿಗಳಾಗಿದ್ದಾರಂತಲ್ಲಾ. ಮೀಸಲಾತಿ ವಿಷಯ ಬಂದರೆ ಎಷ್ಟು ಪರಸೆಂಟ್ ಬೇಕು ಹೇಳಿ ಎಂದು ಅವರೇ ಕೇಳುತ್ತಾರೆ. ಅಡಿಕೆ ತೋಟಕ್ಕೆ ಎಲೆಚುಕ್ಕೆ ರೋಗಬಂದು ಯಕ್ಕುಟ್ಟಿ ಹೋಗಿದೆ ಸ್ವಾಮಿ ಎಂದರೆ ಅದರ ಕೊತೆಗೆ ಹವಮಾನ ವೈಪರೀತ್ಯದಿಂದ ಉಂಟಾದ ನಷ್ಟವನ್ನು ಸೇರಿಸಿ ಕೇಳಿ ಎನ್ನುತ್ತಾರೆ. ಇನ್ನ ಶರಾವತಿ ಡ್ಯಾಮಿನ ಹಿನ್ನೀರಿಗೆ ಸಿಕ್ಕಿ ದಿಕ್ಕಾಪಾಲಾದ ಜನರು ಭೂಮಿ ಹಕ್ಕಿನ ಪತ್ರ ಕೇಳಿದರೆ, ಡಿಸೆಂಬರ್ ಒಳಗೆ ಹಿನ್ನೀರಿನಲ್ಲೇ ಹಕ್ಕುಪತ್ರ ಕೊಡುತ್ತೇನೆ ಎನ್ನುತ್ತಾರೆ, ಜೊತೆಗೆ ನೂರಾರು ಕೋಟಿ ರೂಗಳ ಕಾಮಗಾರಿ ಕಲ್ಲುಗಳನ್ನು ಸತ್ತವರ ಗೋರಿಕಲ್ಲುಗಳಂತೆ ನೆಡುತ್ತ ಹೋಗುತ್ತಿದ್ದಾರೆ. ಆದರೆ ಕಬ್ಬಿನ ಬೆಂಬಲ ಬೆಲೆಗಾಗಿ ಹೋರಾಟ ಮಾಡುತ್ತಿರುವ ರೈತರ ಕಡೆ ತಿರುಗಿ ನೋಡಿಲ್ಲ. ಅಕಸ್ಮಾತ್ ಅಲ್ಲಿಗೆ ಹೋದದ್ದಾದರೆ ರೈತರು ಹಿಡಿದು ಉರುಳುಸೇವೆ ಮಾಡಿಸುತ್ತಾರೆಂಬ ಇಲ್ಲದ ಮಾಹಿತಿಯನ್ನ ತಾವೇ ಊಹಿಸಿಕೊಂಡು ಸದ್ಯಕ್ಕೆ ಪರಿಹಾರ ಕಾಣದ ಅಡಿಕೆ ಚುಕ್ಕೆರೋಗ ಇರುವ ಜಾಗ ಹುಡುಕುತ್ತ ಹೊರಟರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...