Homeಅಂಕಣಗಳುಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

ಅನಂತನಾಗ್ ಮೋದಿ ಮೆಚ್ಚಿದ್ದರಲ್ಲಿ ಅಚ್ಚರಿಯೇನಿಲ್ಲ!

- Advertisement -
- Advertisement -

ನಮ್ಮ ಸಿನಿಮಾರಂಗದ ಒಂದೆರೆಡು ಸುದ್ದಿಗಳು ಶಾನೆ ಸ್ವಾರಸ್ಯವಾಗಿವೆಯಂತಲ್ಲಾ! ಗೋಳಿನ ದನಿಯಿಂದ ಹಾಸ್ಯನಟನಾಗಿ ಮೇಲೆ ಬಂದ ಕೋಮಲ್, ಅದು ಬಿಟ್ಟು ಹೀರೋ ಆದಾಗ ಜನ ತಿರಸ್ಕರಿಸಿದರು. ತನ್ನನ್ನು ಜನ ಹೇಗೆ ನೋಡಲು ಬಯಸುತ್ತಾರೆ ಎಂಬುದನ್ನು ಯಾವುದೇ ನಟ ಮೊದಲು ಗ್ರಹಿಸಿಕೊಳ್ಳಬೇಕು. ಅದಾಗದಿದ್ದರೆ, ಜೋತಿಷ್ಯದ ಮೊರೆ ಹೋಗುತ್ತಾರೆ; ಆದರೆ ಕೋಮಲ್ ಜ್ಯೋತಿಷ್ಯಕ್ಕಾಗಿ ದೂರ ಹೋಗದೆ ತನ್ನ ಅಣ್ಣನನ್ನೆ ಆಶ್ರಯಿಸಿದ್ದಾರೆ. ನವರಸ ನಾಯಕ ಜಗ್ಗೇಶ್ ಈಗ ಜ್ಯೋತಿಷಿಯಂತೆ ಜಾತಕ ಹಿಡಿದು ಗ್ರಹಗತಿಗಳ ಸ್ಥಾನ ಗುರುತಿಸಿ ನಿಮಗೆ ಯಾವ ಗ್ರಹದ ಕಾಟವಿದೆ ಎಂದೆಲ್ಲಾ ಕರಾರುವಕ್ಕಾಗಿ ಹೇಳುತ್ತಾರಂತೆ; ಅಲ್ಲಿಗೆ ಈ ಮಾಜಿ ಹಾಸ್ಯನಟ ದಶರಸ ನಟನಾಗಿರುವ ಸುದ್ದಿ ಕೋಮಲ್‌ರಿಂದ ಹೊರಬಿದ್ದಿದೆ. ನಿನಗೆ ಕೇತು ದೆಸೆಯಿಂದ ಕೇಡಾಗಿದೆ ಎಂದು ತಮ್ಮನಿಗೆ ಹೇಳಿ ಆತ ಐದು ವರ್ಷ ಮೂಲೆಯಲ್ಲಿ ಕೂರುವಂತೆ ಮಾಡಿದ ಈ ಆಧುನಿಕ ಜ್ಯೋತಿಷಿ ಆ ಅವಧಿಯಲ್ಲಿ ತಾನೇ ಮೆರೆಯಲು ಯೋಚಿಸಿದ್ದರಾ? ದಾಯಾದಿ ಮತ್ಸರ ಹೀಗೆ ಎಂದು ಹೇಳಲು ಬರುವುದಿಲ್ಲ. ಕೇತುವಿನಿಂದ ಕೇಡಾಗುತ್ತದೆಂದು ಐದು ವರ್ಷ ಮನೆಯಲ್ಲಿರಲು ತನ್ನ ತಮ್ಮನಿಗೆ ಹೇಳಿದ ಜಗ್ಗೇಶ ತನ್ನ ಜಾತಕ ಕುಂಡಲಿ ಹರಡಿಕೊಂಡು ಗ್ರಹಗತಿಗಳ ಸ್ಥಾನಗಳನ್ನು ಗ್ರಹಿಸಿ ತನ್ನ ಸಿನಿಮಾ ತೋತಾಪುರಿ ತೋಪೆದ್ದೋಗುವ ಸತ್ಯವನ್ನು ಗ್ರಹಿಸಬಹುದಿತಲ್ಲಾ. ಆದ್ದರಿಂದ ಧಿಡೀರನೆ ಉದ್ಭವಿಸಿರುವ ಈ ಉದಯೋನ್ಮುಖ ಬಿಜೆಪಿ ಜ್ಯೋತಿಷಿಯಿಂದ ಹುಷಾರಾಗಿರಿ ಎಂದು ಕಾಂಗೈಗಳು ಪ್ರಚಾರ ಮಾಡುತ್ತಿವೆಯಂತಲ್ಲಾ, ಥೂತ್ತೇರಿ.

******

ಮಾತನಾಡಿಸಿದ ಕೂಡಲೇ ಸೋಮಾರಿ ಮತ್ತು ಜವಬ್ದಾರಿಯಿಲ್ಲದ ಸ್ವಾರ್ಥಿಯಂತೆ ಕಾಣುವ ಅನಂತನಾಗ್ ಹೀರೋ ಆಗಿ ನಲವತ್ತಾರು ವರ್ಷ ತುಂಬಿರುವ ಈ ಸಂದರ್ಭದಲ್ಲಿ ನಾನು ಮೋದಿಯ ಕಟ್ಟಾ ಅಭಿಮಾನಿ ಎಂದುಬಿಟ್ಟಿದ್ದಾರಲ್ಲಾ. ಇಂತಹ ಮಾತು ಇಂತವರ ಬಾಯಲ್ಲಿ ಸುಮ್ಮಸುಮ್ಮನೆ ಬರುವುದಿಲ್ಲ. ಯಾಕೆಂದರೆ ಇಂತವರ ಬಾಯನ್ನೇ ನೋಡುತ್ತಿರುವ ಆರೆಸ್ಸೆಸ್ಸಿಗರು ತಮ್ಮ ಅಜೆಂಡಾಗಳ ರಿಜಿಸ್ಟರಿನಲ್ಲಿ ತಮ್ಮ ಪರ ಮಾತನಾಡಿದವರ ಹೆಸರನ್ನು ದಾಖಲಿಸಿಕೊಂಡು ಅವರನ್ನು ಸ್ಥಾನಮಾನ ಬಿರುದು ಬಾವಲಿಗಳ ಪಟ್ಟಿಗಳಿಗೆ ಸೇರಿಸಿಕೊಳ್ಳುತ್ತವೆ. 1985ರಲ್ಲಿ ಇದೇ ಅನಂತನಾಗ್ ರಾಮಕೃಷ್ಣ ಹೆಗಡೆ ಹೇಳಿದರೆ ನಾನು ಹಾಳು ಬಾವಿಗೂ ಬೀಳಬಲ್ಲೆ ಎಂದುಬಿಟ್ಟಿದ್ದರು. ಆ ಕೂಡಲೇ ಹೆಗಡೆ ಹಾಳು ಬಾವಿ ಮುಚ್ಚಿ ನಜೀರ್ ಸಾಹೇಬರು ಬೋರ್‌ವೆಲ್ ಮುಖಾಂತರ ಜನರಿಗೆ ನೀರುಕೊಡುವ ವ್ಯವಸ್ಥೆ ಮಾಡಿದ್ದು ಈಗ ಇತಿಹಾಸ. ಆದರೆ ಹೆಗಡೆಯವರು ಎಂತಹ ಕಿಲಾಡಿಯೆಂದರೆ ಅನಂತನಾಗ್‌ಗೆ ತಾನೇ ಸಹಾಯ ಮಾಡುವುದರ ಬದಲು ಪಟೇಲರಿಗೆ ಹೇಳಿ ಮಂತ್ರಿ ಮಾಡಿಸಿದರು. ಪಟೇಲರ ಯಣ್ಣೆಪಾರ್ಟಿಗೆ ಒಬ್ಬ ಗುಂಡಿನ ಗೆಳೆಯ ಸಿಕ್ಕಂತಾಯ್ತು. ನಗರಾಭಿವೃದ್ಧಿ ಸಚಿವನಾಗಿ ಈತ ಮಾಡಿದ ಸಾಧನೆ ಎಲ್ಲಿ ಹುಡುಕಿದರೂ ಸಿಗುವುದಿಲ್ಲ. ಕೆಲವು ದಿನ ಖಾತೆಯೇ ಇಲ್ಲದೆ ಮಂತ್ರಿಯಾಗಿದ್ದ ದಾಖಲೆ ಮಾತ್ರ ಈತನ ಹೆಸರಿನಲ್ಲಿ ಹಾಗೇಯೇ ಇದೆ. ಅನಂತನಾಗ್ ಎಂಬ ನಟನ ಬಾಯಿಂದ ಮೋದಿ ಹೊಗಳಿಕೆ ಮಾತು ಸುಮ್ಮಸುಮ್ಮನೆ ಬರುವುದಿಲ್ಲ. ಮೋದಿ ಸರಕಾರದಿಂದ ಅದ್ಯಾವ ಸ್ಥಾನಮಾನ ಪ್ರಶಸ್ತಿ ಸಿಗುತ್ತದೋ ನೋಡಬೇಕೆಂಬುದು ಆತನನ್ನು ಕಂಡರಾಗದವರ ಅಭಿಪ್ರಾಯವಾಗಿದೆಯಲ್ಲಾ, ಥೂತ್ತೇರಿ.

*******

ಈ ದೇಶದಲ್ಲಿ ಮೀಸಲಾತಿ ವಿರೋಧಿಗಳೆಲ್ಲಾ ಹಠಾತ್ತನೆ ಮೀಸಲಾತಿಗಾಗಿ ಹೋರಾಟ ಶುರು ಮಾಡಿಕೊಂಡಿದ್ದಾರಲ್ಲಾ. ಇದೊಂದು ರೀತಿ ಬಸವಣ್ಣನವರ ವಚನದಂತೆ ’ಏರಿಯೇ ಕೆರೆನೀರು ಕುಡಿದಂತೆ, ಬೇಲಿಯೇ ಹೊಲಮೇಯ್ದು ಬಿಸಾಡಿದಂತಲ್ಲಾ’. ಹಿಂದಣದನ್ನು ನೆನಪಿಸಿಕೊಳ್ಳುವುದಾದರೆ, ಮಂಡಲ ವರದಿ ವಿರುದ್ದ ತಿರುಗಿ ಬಿದ್ದ ಬಿಜೆಪಿಯವರು ಕಂಡವರ ಮಕ್ಕಳಿಗೆ ಬೆಂಕಿ ಹಚ್ಚಿದರು. ಉತ್ತರ ಭಾರತದಲ್ಲಿ ಒಕ್ಕಲಿಗರನ್ನು ಮೀಸಲಾತಿಯ ಮಂಡಲ ಕಮೀಷನ್ ಒಳಗೆ ಸೇರಿಸಿದ್ದನ್ನು ಅರಿಯದ ಒಕ್ಕಲಿಗರು ಇಲ್ಲಿ ಮಂಡಲದ ವಿರುದ್ಧ ಪ್ರತಿಭಟಿಸಿದರು. ಮಂಡಲದೊಳಗೆ ನೀವೂ ಇದ್ದೀರಿ ಎಂದು ಯಾರೂ ಹೇಳಲಿಲ್ಲ. ಏಕೆಂದರೆ ನಮ್ಮನ್ನಾಳುವ ಜನ ಮಂಡಲ ಕಮಿಷನ್ ವರದಿಯನ್ನೇ ಓದಿಕೊಂಡಿರಲಿಲ್ಲ. ಈಗ ಈ ಸಮುದಾಯದ ಪ್ರತಿನಿಧಿ ರಾಜಕಾರಣಿಗಳು ಮೀಸಲಾತಿ ಗಲಭೆ ಎಬ್ಬಿಸಲಿದ್ದಾರಲ್ಲಾ. ಹೊಸ ತಲೆಮಾರು ಇದಕ್ಕೆ ಹುಚ್ಚೆದ್ದು ಕುಣಿಯಬಹುದು. ಈಗ ಮೀಸಲು ಗಲಭೆ ಬೇಕಿರುವುದು ಮುಂದುವರಿದ ರಾಜಕಾರಣಿಗಳಿಗೆ. ಉದ್ಯೋಗಗಳೇ ಇಲ್ಲದಿದ್ದರೂ ಎಲ್ಲರೂ ಮೀಸಲು ಕೇಳುವಂತೆ ಮಾಡಿ ಮೀಸಲನ್ನೆ ರದ್ದು ಮಾಡುವ ಸಂಚಿಗಾಗಿ ಬಿಜೆಪಿ ಕಾಯುತ್ತಿದೆಯಂತಲ್ಲಾ, ಥೂತ್ತೇರಿ.

******

ಕರ್ನಾಟಕ ಈವರೆಗೆ ಕಂಡರಿಯದ ಧಾರಾಳತನದ ಮುಖ್ಯಮಂತ್ರಿಗಳು ಏನೂ ಕೇಳಿದರೂ ಕೊಡುವಂತಹ ಕೊಡುಗೈ ದಾನಿಗಳಾಗಿದ್ದಾರಂತಲ್ಲಾ. ಮೀಸಲಾತಿ ವಿಷಯ ಬಂದರೆ ಎಷ್ಟು ಪರಸೆಂಟ್ ಬೇಕು ಹೇಳಿ ಎಂದು ಅವರೇ ಕೇಳುತ್ತಾರೆ. ಅಡಿಕೆ ತೋಟಕ್ಕೆ ಎಲೆಚುಕ್ಕೆ ರೋಗಬಂದು ಯಕ್ಕುಟ್ಟಿ ಹೋಗಿದೆ ಸ್ವಾಮಿ ಎಂದರೆ ಅದರ ಕೊತೆಗೆ ಹವಮಾನ ವೈಪರೀತ್ಯದಿಂದ ಉಂಟಾದ ನಷ್ಟವನ್ನು ಸೇರಿಸಿ ಕೇಳಿ ಎನ್ನುತ್ತಾರೆ. ಇನ್ನ ಶರಾವತಿ ಡ್ಯಾಮಿನ ಹಿನ್ನೀರಿಗೆ ಸಿಕ್ಕಿ ದಿಕ್ಕಾಪಾಲಾದ ಜನರು ಭೂಮಿ ಹಕ್ಕಿನ ಪತ್ರ ಕೇಳಿದರೆ, ಡಿಸೆಂಬರ್ ಒಳಗೆ ಹಿನ್ನೀರಿನಲ್ಲೇ ಹಕ್ಕುಪತ್ರ ಕೊಡುತ್ತೇನೆ ಎನ್ನುತ್ತಾರೆ, ಜೊತೆಗೆ ನೂರಾರು ಕೋಟಿ ರೂಗಳ ಕಾಮಗಾರಿ ಕಲ್ಲುಗಳನ್ನು ಸತ್ತವರ ಗೋರಿಕಲ್ಲುಗಳಂತೆ ನೆಡುತ್ತ ಹೋಗುತ್ತಿದ್ದಾರೆ. ಆದರೆ ಕಬ್ಬಿನ ಬೆಂಬಲ ಬೆಲೆಗಾಗಿ ಹೋರಾಟ ಮಾಡುತ್ತಿರುವ ರೈತರ ಕಡೆ ತಿರುಗಿ ನೋಡಿಲ್ಲ. ಅಕಸ್ಮಾತ್ ಅಲ್ಲಿಗೆ ಹೋದದ್ದಾದರೆ ರೈತರು ಹಿಡಿದು ಉರುಳುಸೇವೆ ಮಾಡಿಸುತ್ತಾರೆಂಬ ಇಲ್ಲದ ಮಾಹಿತಿಯನ್ನ ತಾವೇ ಊಹಿಸಿಕೊಂಡು ಸದ್ಯಕ್ಕೆ ಪರಿಹಾರ ಕಾಣದ ಅಡಿಕೆ ಚುಕ್ಕೆರೋಗ ಇರುವ ಜಾಗ ಹುಡುಕುತ್ತ ಹೊರಟರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಕೆಂಪೇಗೌಡರ ಪ್ರತಿಮೆಯನ್ನು ಸರಿಯಾಗಿ ನೋಡಿದ್ದೀರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...