Homeಮುಖಪುಟ‘ಕೇಂದ್ರ ಸರ್ಕಾರ’ ಅಲ್ಲ, ‘ಒಕ್ಕೂಟ ಸರ್ಕಾರ’: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌‌!

‘ಕೇಂದ್ರ ಸರ್ಕಾರ’ ಅಲ್ಲ, ‘ಒಕ್ಕೂಟ ಸರ್ಕಾರ’: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌‌!

- Advertisement -
- Advertisement -

ಮೋದಿ ಸರ್ಕಾರವನ್ನು “ಕೇಂದ್ರ ಸರ್ಕಾರ” ಎಂದು ಉಲ್ಲೇಖಿಸುವುದರ ಬದಲು “ಒಕ್ಕೂಟ ಸರ್ಕಾರ” ಎಂದೇ ತಮಿಳುನಾಡು ಸರ್ಕಾರ ಉಲ್ಲೇಖಿಸುತ್ತದೆ ಎಂದು ಮುಖ್ಯಮಂತ್ರಿ ಬುಧವಾರ ಸ್ಪಷ್ಟಪಡಿಸಿದ್ದಾರೆ. 1957 ರಲ್ಲಿ ಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ “ಇಂಡಿಯನ್ ಯೂನಿಯನ್” ಎಂಬ ಪದವನ್ನು ಬಳಸಿದ್ದನ್ನು ಅವರು ವಿಧಾನಸಭೆಯಲ್ಲಿ ನೆನಪಿಸಿಕೊಂಡಿದ್ದಾರೆ.

ಸಂವಿಧಾನ ಕೂಡಾ ಭಾರತವನ್ನು “ರಾಜ್ಯಗಳ ಒಕ್ಕೂಟ” ಎಂದು ಬಣ್ಣಿಸಿದೆ. ನಾವು ‘‘ಒಕ್ಕೂಟ’’ ಎಂದು ಬಳಸಿದ್ದೇವೆ ಮತ್ತು ಹಾಗೆ ಬಳಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಸ್ಟಾಲಿನ್ ಅವರು ಅಧಿಕಾರ ವಹಿಸಿದಾಗಿನಿಂದ ಮೋದಿ ಸರ್ಕಾರವನ್ನು “ಕೇಂದ್ರ ಸರ್ಕಾರ” ಎಂದು ಕರೆಯುವುದರ ಬದಲಿಗೆ “ಒಕ್ಕೂಟ ಸರ್ಕಾರ” ಎಂಬ ಪದವನ್ನು ಬಳಸಲು ಪ್ರಾರಂಭಿಸಿದ್ದರು.

ಇದನ್ನೂ ಓದಿ: ಮೋದಿ ಸರ್ಕಾರವನ್ನು ‘ಕೇಂದ್ರ ಸರ್ಕಾರ’ ಎಂದು ಉಲ್ಲೇಖಿಸುವುದನ್ನು ಕೈಬಿಟ್ಟ ತಮಿಳುನಾಡು!

ವಿಧಾನಸಭೆಯಲ್ಲಿನ ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್ ಅವರು “ಒಕ್ಕೂಟ” ಎಂಬ ಪದವನ್ನು ಬಳಸುವುದರ ಹಿಂದೆ ಏನಾದರೂ ಉದ್ದೇಶವಿದೆಯೇ ಎಂದು ಆಶ್ಚರ್ಯ ವ್ಯಕ್ತಪಡಿಸಿ ಮುಖ್ಯಮಂತ್ರಿಯಿಂದ ಪ್ರತಿಕ್ರಿಯೆ ಬಯಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸ್ಟಾಲಿನ್, “ಈ ಪದ ಬಳಕೆಯ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಏಕೆಂದರೆ ರಾಜಾಜಿ(ಸಿ. ರಾಜಗೋಪಾಲಾಚಾರಿ) ಅವರೆ ಅಧಿಕಾರದ ಕೇಂದ್ರೀಕರಣದ ವಿರುದ್ಧ ಮತ್ತು ನಿಜವಾದ ಫೆಡರಲಿಸಂ ಪರವಾಗಿ ಮಾತನಾಡಿದ್ದರು. ದಿವಂಗತ ಮಾ.ಪೋ.ಸಿ.(ಶಿವಜ್ಞನಂ) ಸಮಷ್ಠಿ ಎಂಬ ಪದವನ್ನು ಬಳಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಒಕ್ಕೂಟ” ಎಂಬ ಪದದ ಬಳಕೆಯನ್ನು “ಸಾಮಾಜಿಕ ಅಪರಾಧ” ಎಂದು ಪರಿಗಣಿಸುವ ಅಗತ್ಯವಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ. “ನಾವು ಸಂವಿಧಾನದಲ್ಲಿರುವುದನ್ನು ಮಾತ್ರ ಬಳಸುತ್ತಿದ್ದೇವೆ. ಇಂಡಿಯಾ, ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ” ಎಂದು ಅವರು ತಿಳಿಸಿದ್ದಾರೆ.

ಭಾರತವನ್ನು ಅದರ ರಾಜ್ಯಗಳು ರಚಿಸಿವೆ ಎಂದು ಅವರು ಹೇಳಿದ್ದಾರೆ. “ನಮ್ಮ ನಾಯಕರಾದ ಅಣ್ಣಾ (ಸಿ.ಎನ್. ಅನ್ನದುರೈ) ಮತ್ತು ಕಲೈನಾರ್ (ಎಂ. ಕರುಣಾನಿಧಿ) ಅವರು ಬಳಸದ ಪದವನ್ನು ಕೆಲವರು ಬಳಸುತ್ತಿದ್ದಾರೆಂದು ಕೆಲವರು ಆರೋಪಿಸುತ್ತಾರೆ. ಆದರೆ ಡಿಎಂಕೆ 1957 ರಲ್ಲಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಇಂಡಿಯನ್ ಯೂನಿಯನ್ ಎಂಬ ಪದವನ್ನು ಬಳಸಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ ನರ್ತಕಿ ನಟರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...