Homeಕರ್ನಾಟಕಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ: ಬಿಜೆಪಿ ವಿರುದ್ಧ ಜೆಡಿಎಸ್‌ ಟೀಕಾಪ್ರಹಾರ

ದೇವಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ.

- Advertisement -
- Advertisement -

“ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಮಾಜಿ ಪ್ರಧಾನಿಗಳಾದ ದೇವೇಗೌಡರನ್ನು ಆಹ್ವಾನಿಸದೆ ರಾಜ್ಯ ಸರಕಾರ ಶಿಷ್ಟಾಚಾರ ಲೋಪ ಎಸಗಿದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಬೇಕೇ ಹೊರತು ಬಿಜೆಪಿ ಅಲ್ಲ. ಇಷ್ಟಕ್ಕೂ ಅದು ಕೇಶವಕೃಪದ ಕಾರ್ಯಕ್ರಮವಲ್ಲ” ಎಂದು ಜೆಡಿಎಸ್‌ ಆಕ್ರೋಶ ಹೊರಹಾಕಿದೆ.

ಎಚ್‌.ಡಿ.ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಆಹ್ವಾನಿಸಿಲ್ಲವೆಂಬ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌- ಬಿಜೆಪಿ ನಡುವೆ ವಾಕ್ಸಮರ ಮುಂದುವರಿದಿದೆ. ಮತ್ತೆ ಸರಣಿ ಟ್ವೀಟ್‌ಗಳ ಮೂಲಕ ಜೆಡಿಎಸ್‌ ಟೀಕಾಪ್ರಹಾರ ನಡೆಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಸುಳ್‌‌ ಬಿಜೆಪಿ, ಸುಳ್‌ ಸಿಎಂ, ಗೊಬೆಲ್‌ ಬಿಜೆಪಿ’ ಎಂಬ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್‌ಗಳನ್ನು ಮಾಡಿರುವ ಜೆಡಿಎಸ್‌, “ಬೂಟಾಟಿಕೆ ದಾಸಯ್ಯನಿಗೆ ಮೈಯಲ್ಲಾ ಪಂಗನಾಮʼ ಎನ್ನುವಂತಿದೆ ಬಿಜೆಪಿ ಪರಿಸ್ಥಿತಿ. ಕೊಳಕು, ವಿಕೃತಿಗಳ ಮಹಾಸಂಗಮವೇ ಬಿಜೆಪಿ. ರಕ್ತಪೀಪಾಸುತನ, ನರಹಂತಕ ಮನಃಸ್ಥಿತಿಯೇ ಬಿಜೆಪಿಯ ನೈಜಮುಖ. ಆಪರೇಷನ್‌ ಕಮಲವೇ ಅದರ ಶಿಷ್ಟಾಚಾರ, ಸುಳ್ಳಿನ ಪ್ರಚಾರವೇ ಅದರ ಸಂಸ್ಕಾರ” ಎಂದು ಅಭಿಪ್ರಾಯಪಟ್ಟಿದೆ.

“ಎಚ್.ಡಿ.ದೇವೇಗೌಡರನ್ನು ಜೆಡಿಎಸ್ ಎಂದಿಗೂ ಜಾತಿ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಆದರೆ, ನರೇಂದ್ರಮೋದಿಯವರ ಅರ್ಧದಿನದ ʼಕರ್ನಾಟಕದ ಕಾಟಾಚಾರದ ಭೇಟಿʼ ಏನನ್ನು ಗುರಿ ಮಾಡಿಕೊಂಡಿತ್ತು? ಎನ್ನುವುದನ್ನು ಮಾಧ್ಯಮಗಳೇ ನಿರಂತರವಾಗಿ ವರದಿ ಮಾಡುತ್ತಿರುವುದು ಕಾಣುತ್ತಿಲ್ಲವೇ? ಕಮಲದ ಕಣ್ಣಿಗೆ ಕಾಮಾಲೆ ಎನ್ನುವುದು ಖರೆ” ಎಂದು ಟೀಕಿಸಿದೆ.

“ಮಾಜಿ ಪ್ರಧಾನಿಗಳನ್ನು ಸಮಾರಂಭಕ್ಕೆ ಆಹ್ವಾನಿಸಿಲ್ಲ ಎಂದು ಪ್ರಶ್ನೆ ಮಾಡಿದ್ದನ್ನೇ ʼಮಹಾ ಅಪರಾಧʼ ಎಂದು ಚಿತ್ರಿಸುತ್ತಿರುವ ಬಿಜೆಪಿಯ ವಿಕೃತಿ ಆದಿಯಿಂದಲೂ ಧರ್ಮ, ಜಾತಿ ಮತ್ತು ಸುಳ್ಳಿನ ಸುತ್ತಲೇ ಗಿರಕಿ ಹೊಡೆಯುತ್ತಿದೆ ಎನ್ನುವುದು ಸಾರ್ವಕಾಲಿಕ ಸತ್ಯ. ಸತ್ಯವನ್ನು ಮಿಥ್ಯೆ ಎನ್ನಲಾದಿತೆ?” ಎಂದು ಪ್ರಶ್ನಿಸಿದೆ.

“ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಸ್ತಿತ್ವದ ಭಯ ಎನ್ನುವುದು ಹಾಗಿರಲಿ, ಪ್ರಧಾನಿಯ ನಾಮಬಲ ಒಂದಿಲ್ಲದಿದ್ದರೆ ನಿಮಗೆ ಠೇವಣಿಗೂ ಖಾತರಿ ಇಲ್ಲ. ಇನ್ನು 6 ತಿಂಗಳಲ್ಲಿ ಮೋದಿ ಅವರು ಎಷ್ಟು ಸಲ ಕರ್ನಾಟಕಕ್ಕೆ ಓಡೋಡಿ ಬರುತ್ತಾರೋ ನೋಡೋಣ. ಅಲ್ಲಿ ನಿಮ್ಮ ಯೋಗ್ಯತೆಯ ಅಳತೆ ಎಷ್ಟು? ಎಂಬುದು ಗೊತ್ತಾಗುತ್ತದೆ” ಎಂದು ಜೆಡಿಎಸ್ ಕುಟುಕಿದೆ.

“ಬಿಜೆಪಿಯ ಒಕ್ಕಲಿಗ ನಾಯಕರು ಮುನ್ನೆಲೆಗೆ ಬರುವುದನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎನ್ನುತ್ತಿದೆ ಬಿಜೆಪಿ. ʼಭೂತದ ಬಾಯಲ್ಲಿ ಭಗದ್ಗೀತೆʼ ಎಂದರೆ ಇದೇ. ಧರ್ಮ, ಜಾತಿ, ಆಚಾರ, ವಿಚಾರ, ಆಹಾರದ ವಿಷಯದಲ್ಲೇ ವಿಷ-ವಿಕೃತಿಗಳನ್ನು ಬಿತ್ತಿದ ಬಿಜೆಪಿ, ಈಗ ಸಹಿಷ್ಣುತೆಯ ಬಗ್ಗೆ ಪಾಠ ಬಿಗಿಯುತ್ತಿದೆ” ಎಂದು ಹರಿಹಾಯ್ದಿದೆ.

“20 ದಿನಗಳ ಹಿಂದೆ ಸಚಿವ ಅಶ್ವತ್‌ ನಾರಾಯಣ ಅವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿ ಮೃತ್ತಿಕೆ ಸಂಗ್ರಹದ ಬಗ್ಗೆ ತಿಳಿಸಿ ಆಹ್ವಾನಿಸಿದ್ದರಷ್ಟೇ. ಆದರೆ,ಮುಖ್ಯಮಂತ್ರಿಗಳು ಪ್ರತಿಮೆ ಅನಾವರಣಕ್ಕೆ ಆಹ್ವಾನಿಸಿದ್ದರು ಮತ್ತೂ ಆಹ್ವಾನ ಪತ್ರಿಕೆಯಲ್ಲೂ ದೇವೇಗೌಡರ ಹೆಸರನ್ನು ನಮೂದಿಸಲಾಗಿತ್ತೆಂದು ಹಸಿಸುಳ್ಳನ್ನೇ ಬಿಜೆಪಿ ಟ್ವೀಟಿಸಿದೆ” ಎಂದು ಸ್ಪಷ್ಟಪಡಿಸಿದೆ.

“ಬಿಜೆಪಿ ʼಗೊಬೆಲ್ ಸಂತತಿಯ ಶಿಶುʼ ಎನ್ನುವುದಕ್ಕೆ ಇದಕ್ಕಿಂತ ಸತ್ಯ ಸಾಕ್ಷ್ಯ ಬೇಕಾ? ʼಸುಳ್‌ ಬಿಜೆಪಿʼಗೆ ಸತ್ಯವೆಂದರೆ ಅಪಥ್ಯ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ʼಸುಳ್‌ ಸಿಎಂʼ ಎಂದೇ ಪ್ರಖ್ಯಾತಿ ಆಗುತ್ತಿದ್ದಾರೆ. ಇದಲ್ಲವೇ ವಿಪರ್ಯಾಸ?” ಎಂದು ಅಣಕ ಮಾಡಿದೆ.

“ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ, ಸ್ವತಃ ಫೋನ್‌ ಕರೆ ಮೂಲಕ ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ‘ಗೊಬೆಲ್ ಬಿಜೆಪಿ’ ಟ್ವೀಟಿಸಿ ಸುಳ್ಳು ಹೇಳಿದೆ. ಸತ್ಯ ಏನೆಂಬುದನ್ನು ನಾವೂ ಟ್ವೀಟಿನಲ್ಲೇ ರಾಜ್ಯದ ಜನತೆಗೆ ನಿವೇದಿಸಿದ್ದೇವೆ. ಅದನ್ನು ಓದಲು ʼಗೊಬೆಲ್‌ ಬಿಜೆಪಿʼಗೆ ಗರ ಬಡಿದಿದೆಯಾ?” ಎಂದು ಕೇಳಿದೆ.

“ನಾಡಪ್ರಭುಗಳ ವಿಚಾರದಲ್ಲೂ ಜೆಡಿಎಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಹೇಳಿದೆ. ಅರ್ಧದಿನದ ಅರೆಬರೆ ಭೇಟಿಯಲ್ಲಿ ಘನವೇತ್ತ ಪ್ರಧಾನಿಗಳು ಮಾಡಿದ್ದಾದರೂ ಏನು? ‘ಒಂದೇ ಕಲ್ಲಿನಲ್ಲಿ ನಾಲ್ಕು ಜಾತಿಗಳ ಮತಬುಟ್ಟಿಗೆ ಕೈ ಹಾಕಿದ ಪ್ರಧಾನಿ’, ‘ಪ್ರತಿಮಾ ಪಥ, ಮೋದಿ ರಥ’ ಎನ್ನುವ ಸುದ್ದಿಗಳನ್ನು ಕರ್ನಾಟಕ ಬಿಜೆಪಿ ನೋಡಲಿಲ್ಲವೆ?” ಎಂದು ಪ್ರಶ್ನಿಸಿದೆ.

ಇದನ್ನೂ ಓದಿರಿ: ನಾಳೆ ಕಾರ್ಯಕ್ರಮವಿದ್ದಾಗ ದೇವೇಗೌಡರಿಗೆ ಪತ್ರ ಬಂದಿದ್ದು ಮಧ್ಯರಾತ್ರಿ 12.30ಕ್ಕೆ: ಜೆಡಿಎಸ್‌ ಆಕ್ರೋಶ

“ಕಮಲಕ್ಕೆ ಕಾಮಾಲೆ ಕಣ್ಣು ಎನ್ನುವುದು ನಾಟಕವೋ, ಬೂಟಕವೋ? ಜಾತಿವಾರು ಮತಗಳ ಧ್ರುವೀಕರಣಕ್ಕೆ ಹೊರಟವರು ಯಾರು? ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆದು ತಂದವರು ಯಾರು? ಸಂತ ಕನಕದಾಸರ ʼಕುಲ ಕುಲವೆಂದು ಹೊಡೆದಾಡದಿರಿ..ʼ ಪದವನ್ನು ಹೇಳುತ್ತಲೇ ʼಕುಲಕಿಚ್ಚಿನ ರಾಜಕೀಯʼ ಮಾಡಿದವರು ಯಾರು? ಅಂಗೈ ಹುಣ್ಣಿಗೆ ಕನ್ನಡಿ ಯಾಕೆ?” ಎಂದು ಟೀಕಾಪ್ರಹಾರ ನಡೆಸಿದೆ.

“ಕೊನೆಯದಾಗಿ; ಸಂಸ್ಕಾರವೇ ಗೊತ್ತಿಲ್ಲದ ಪಕ್ಷಕ್ಕೆ ಶಿಷ್ಟಾಚಾರ ಮಾತೇಕೆ? ಅದು ತನಗಿಲ್ಲ ಎಂದು ಬಿಜೆಪಿ ಸಾಬೀತುಪಡಿಸಿದೆ. ಕನ್ನಡದ ಆಚಾರ-ವಿಚಾರಕ್ಕೆ ಕೊಡಲಿ ಪೆಟ್ಟು ಹಾಕುತ್ತಿರುವ ಆ ಪಕ್ಷ, ಕನ್ನಡನಾಡಿಗೆ ಬಹುದೊಡ್ಡ ಬೆದರಿಕೆ” ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...