Homeಮುಖಪುಟಚುನಾವಣೆಗೆ ಮೊದಲು ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ: ಎಎಪಿ

ಚುನಾವಣೆಗೆ ಮೊದಲು ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ: ಎಎಪಿ

- Advertisement -
- Advertisement -

ಮಹಿಳಾ ಮೀಸಲಾತಿ ಮಸೂದೆಯು 2024ರ ಲೋಕಸಭೆ ಚುನಾವಣೆಗೆ ಮುನ್ನ ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆಯಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕಿ ಅತಿಶಿ ಅವರು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಸರ್ಕಾರ ಮಂಗಳವಾರ ಮಂಡಿಸಿದ್ದು, ಪಕ್ಷಗಳ ನಡುವೆ ಒಮ್ಮತದ ಕೊರತೆಯಿಂದಾಗಿ 27 ವರ್ಷಗಳಿಂದ ಬಾಕಿ ಉಳಿದಿರುವ ಮಸೂದೆಯನ್ನು ಪುನರುಜ್ಜೀವನಗೊಳಿಸಲಾಗಿದೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಬಿಜೆಪಿಗೆ ಮಹಿಳೆಯರ ಯೋಗಕ್ಷೇಮ ಮತ್ತು ಕಲ್ಯಾಣದಲ್ಲಿ ಆಸಕ್ತಿ ಇಲ್ಲ. ಮಸೂದೆಯ ನಿಬಂಧನೆಗಳನ್ನು ಓದಿದರೆ ಇದೊಂದು ಮಹಿಳೆಯರನ್ನು ಮೂರ್ಖರನ್ನಾಗಿಸುವ ಮಸೂದೆ ಎಂದು ಮನವರಿಕೆಯಾಗುತ್ತದೆ ಎಂದು ಹೇಳಿದ್ದಾರೆ.

ಕ್ಷೇತ್ರ ಮರುವಿಂಗಡಣೆ ಬಳಿಕ ಮಸೂದೆ ಜಾರಿಗೆ ಬರಲಿದೆ. ಮಸೂದೆ ಜಾರಿ ಬಳಿಕ 15 ವರ್ಷಗಳವರೆಗೆ ಜಾರಿಯಲ್ಲಿರಲಿದೆ. ಕ್ಷೇತ್ರ ಪುನರ್‌ವಿಂಗಡಣೆ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಮೀಸಲಾದ ಕ್ಷೇತ್ರಗಳು ಬದಲಾಗುತ್ತವೆ. ಮಹಿಳಾ ಮೀಸಲಾತಿ ಮಸೂದೆಯಲ್ಲಿ ಕ್ಷೇತ್ರ ಮರು ವಿಂಗಡಣೆ ಮತ್ತು ಜನಗಣತಿ ನಿಬಂಧನೆಗಳನ್ನು ಸೇರಿಸಿದ್ದೇಕೆ? ಇದರರ್ಥ ಮುಂಬರುವ 2024ರ ಲೋಕಸಭಾ ಚುನಾವಣೆಗೂ ಮುನ್ನ ಈ ಮಸೂದೆ ಜಾರಿಯಾಗುವುದಿಲ್ಲ ಎಂದು ಅತಿಶಿ ಹೇಳಿದ್ದಾರೆ.

ಕ್ಷೇತ್ರ ಮರು ವಿಂಗಡಣೆ ಮತ್ತು ಗಣತಿ ನಿಬಂಧನೆಗಳನ್ನು ತೆಗೆದು ಹಾಕಿ 2024ರ ಲೋಕಸಭಾ ಚುನಾವಣೆಗೂ ಮುನ್ನವೇ ಮಹಿಳಾ ಮೀಸಲಾತಿ ಮಸೂದೆ ಜಾರಿ ಮಾಡಬೇಕು ನಾವು ಒತ್ತಾಯಿಸುತ್ತೇವೆ ಎಂದು ಎಎಪಿ ನಾಯಕಿ ಅತಿಶಿ ಆಗ್ರಹಿಸಿದ್ದಾರೆ.

ಲೋಕಸಭೆಯ ವಿಶೇಷ ಅಧಿವೇಶನದ ಎರಡನೇ ದಿನವಾದ ಇಂದು ಸಂಸತ್ತಿ ಹೊಸ ಕಟ್ಟಡದಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ ಮಾಡಲಾಗಿದೆ. ಬಿಲ್‌ಗೆ ಕಾಂಗ್ರೆಸ್ ಕೂಡ ಬೆಂಬವನ್ನು ಸೂಚಿಸಿದೆ. ಬಿಲ್‌ ಪ್ರಕಾರ ರಾಜ್ಯಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಸಿಗಲಿದೆ.

ಈ ಕುರಿತು ಸಂಸತ್ತಿನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ನಾರಿ ಶಕ್ತಿ ವಂದನ ಅಧಿನಿಯಮ’ ಮಸೂದೆಯು ಹೆಚ್ಚಿನ ಮಹಿಳೆಯರು ಸಂಸತ್ತು ಮತ್ತು ವಿಧಾನಸಭೆಗಳ ಸದಸ್ಯರಾಗುವುದಕ್ಕೆ ಹೆಚ್ಚಿನ ಅವಕಾಶ ನೀಡುತ್ತದೆ ಎಂದು ಹೇಳಿದ್ದರು.

ಇದನ್ನು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್‌ ಮಂಡನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...