Homeಕರ್ನಾಟಕ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

- Advertisement -
- Advertisement -

“ನಮ್ಮ ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು; ನಿಮ್ಮ ಆಹಾರ ನಿಮ್ಮ ಹಕ್ಕು, ಹಾಲು ಕುಡಿಯಲಿ ಮನೆಯ ಬೆಕ್ಕು, ಬಾಡೇ ನಮ್‌ ಗಾಡು ಬೂದುಗುಂಬಳ ನಿಮ್ಮ ಗಾಡು”- ಹೀಗೆ ಕ್ರಾಂತಿಗೀತೆಯನ್ನು ಹಾಡುವ ಮೂಲಕ ಮಾಂಸಾಹಾರದ ಕುರಿತ ಅಸಹನೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆಗುತ್ತಿರುವ ಅಡ್ಡಿಯನ್ನು ಪ್ರತಿಭಟನಾಕಾರರು ಖಂಡಿಸಿದರು.

ಅಸ್ಪೃಶ್ಯತೆ, ಜಾತೀಯತೆ, ಅಸಮಾನತೆಗಳ ವಿರುದ್ಧ ದನಿ ಎತ್ತಿದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಮತ್ತು ಬೃಹತ್‌ ಸಮಾವೇಶದಲ್ಲಿ ಬ್ರಾಹ್ಮಣ್ಯದ ವಿರುದ್ಧ ಘೋಷಣೆಗಳು ಮೊಳಗಿದವು. ಮನುವಾದದ ಹಿಡಿತಕ್ಕೆ ಸಿಲುಕು ಬಲಿಪಶುಗಳಾಗುತ್ತಿರುವ ದಲಿತಾದಿ ಶೂದ್ರ ಸಮುದಾಯಗಳ ಯುವಕರನ್ನು ರಕ್ಷಿಸಬೇಕೆಂಬ ಆಶಯ ವ್ಯಕ್ತವಾಯಿತು.

ಕೇಂದ್ರ ರೈಲು ನಿಲ್ದಾಣದಿಂದ ಹಿಡಿದು, ಫ್ರೀಡಂ ಪಾರ್ಕ್‌ವರೆಗೆ ಶಾಂತಿಯುತ ಜಾಥಾ ನಡೆಯಿತು. ಬಳಿಕ ನಡೆದ ಸಮಾವೇಶದಲ್ಲಿ ಚಿಂತಕರು ಮಾತನಾಡಿದರು. ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, “ಪೇಜಾವರ ಮಠದ ಸ್ವಾಮೀಜಿಯವರು ನನಗೆ ಬಹಳ ಆತ್ಮೀಯರು. ಅವರು ತೀರಿಕೊಳ್ಳುವ ಮೂರು ತಿಂಗಳ ಹಿಂದೆ ನಮ್ಮನ್ನು ಮೈಸೂರಿನ ಕೃಷ್ಣಧಾಮಕ್ಕೆ ಕರೆದುಕೊಂಡು ಮಾತನಾಡಿಸಿದರು. ಮೈಸೂರಿನ ದಲಿತ ಕೇರಿಗಳಾದ ಅಶೋಕಪುರಂಗೆ, ಗಾಂಧಿನಗರಕ್ಕೆ ಹೋಗಬೇಕೆಂದು ನಿರ್ಧರಿಸಿದ್ದೇನೆ, ನೀವೆಲ್ಲ ನಿಂತು ಸಹಕರಿಸಿ ಎಂದರು. ಪೂಜ್ಯ ಪೇಜಾವರ ಸ್ವಾಮೀಜಿಯವರೇ, ನೀವು ನಮ್ಮ ಅಶೋಕಪುರಂಗಾಗಲೀ, ಗಾಂಧಿನಗರಕ್ಕಾಗಿ ಬರಬೇಕಾದರೆ ನಮ್ಮದೊಂದು ಷರತ್ತಿದೆ. ನೀವು ನಮ್ಮ ಮೊಹಲ್ಲಾಕ್ಕೆ ಬರುವುದಾದರೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬರಬೇಕು ಎಂದು ಆಗ್ರಹಿಸಿದೆವು. ಅವರು ಆಗುವುದಿಲ್ಲ ಎಂದರು. ಸಂವಿಧಾನ ಶಿಲ್ಪಿಗೆ ಮಾಲಾರ್ಪಣೆ ಮಾಡುವುದಿಲ್ಲ ಎಂಬುದು ರಾಷ್ಟ್ರದ್ರೋಹ ಅಲ್ಲವಾ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ರೈತ ಹೋರಾಟಕ್ಕೆ ಒಂದು ವರ್ಷ: ರಾಜ್ಯದಲ್ಲಿ ನಡೆದ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ


ಈ ದೇಶದ ಸಂವಿಧಾನ ಒಪ್ಪಲ್ಲ ಎಂಬುದು ರಾಷ್ಟ್ರದ್ರೋಹ ಅಲ್ಲವಾ? ಈ ನೆಲದ ಕಾನೂನಿನ ಮುಂದೆ ಯಾವ ಸ್ವಾಮೀಜಿಯು ದೊಡ್ಡವರಲ್ಲ. ಯಾವ ಯತಿಗಳೂ ದೊಡ್ಡವರಲ್ಲ. ಈ ಸಂವಿಧಾನ ದೊಡ್ಡದು. ಪ್ರತಿಮೆಗೆ ಮಾಲಾರ್ಪಣೆ ಮಾಡುವುದು ಬೇಡ ಸ್ವಾಮೀಜಿ, ದಲಿತರು ಕೊಡುವ ಒಂದು ಲೋಟ ಪಾನಕ ಅಥವಾ ಮಜ್ಜಿಗೆಯನ್ನಾದರೂ ಕುಡಿಯಿರಿ ಎಂದೆವು. ನನ್ನಿಂದಾಗದು ಎಂದರು. ಕುರಿ ಫ್ರೈಯೋ, ಚಿಕನ್ ಫ್ರೈಯೋ ಅಲ್ಲ. ಕೇವಲ ಪಾನಕ, ಮಜ್ಜಿಗೆ ಕುಡಿಯಲೂ ಆಗಲ್ಲ ಎನ್ನುವ ಸ್ವಾಮೀಜಿಗಳು ದಲಿತ ಕೇರಿಗೆ ಪಾದಾಯಾತ್ರೆ ಬರುವ ಉದ್ದೇಶವಾದರೂ ಏನು? ಎಂದು ಜ್ಞಾನಪ್ರಕಾಶ್ ಸ್ವಾಮೀಜಿ ಕೇಳಿದರು.

“ಒಂದು ಲೋಟ ಮಜ್ಜಿಗೆಯನ್ನು ತೆಗೆದುಕೊಳ್ಳಲು ಯೋಗ್ಯತೆ ಇಲ್ಲದ ನೀವು, ನಿಮ್ಮ ಪಾದಯಾತ್ರೆ ಬೂಟಾಟಿಕೆಯಲ್ಲವೇ ಎಂದು ಹಂಸಲೇಖರು ಹೇಳಿರುವುದರಲ್ಲಿ ಏನು ತಪ್ಪಿದೆ. ಹೀಗೆ ಕೇಳಿದರೆ ಸಂವಿಧಾನ ವಿರೋಧಿಯೇ, ಜನಾಂಗ ವಿರೋಧಿಯೇ? ಯಾವ ಸಂವಿಧಾನದಲ್ಲಿ ಇದ್ದೀರಿ ನೀವು? ಯಾವ ಸಂವಿಧಾನಕ್ಕೆ ನೀವು ಸೆಲ್ಯೂಟ್ ಮಾಡುತ್ತೀರಿ?” ಎಂದು ಪ್ರಶ್ನಿಸಿದರು.

“ಇಂದು ಕ್ಷಮೆಯನ್ನು ಕೇಳಬೇಕಾದವರು ಯಾರು? ಒಂದು ಪುಟ್ಟ ಮಗು ದೇವಸ್ಥಾನದಲ್ಲಿ ಹೆಜ್ಜೆಹಾಕಿದ್ದಕ್ಕೆ ದಂಡ ಹಾಕಿದಿರಲ್ಲ, ಯಾರು ಯಾರನ್ನು ಕ್ಷಮೆ ಕೇಳಬೇಕು? ಒಂದು ಪ್ಲಾಸ್ಟಿಕ್‌ ಬಕೆಟ್‌ ಮುಟ್ಟಿದ್ದಕ್ಕೆ ಒಬ್ಬ ಗರ್ಭಿಣಿ ಹೆಣ್ಣು ಮಗಳನ್ನು ಒದ್ದು ಸಾಯಿಸಿದಿರಲ್ಲ, ಯಾರು ಕ್ಷಮೆ ಕೇಳಬೇಕು? ದಲಿತ ವಾಚ್‌ ಕಟ್ಟಿದ ಎಂದು ಚೆನ್ನೈನಲ್ಲಿ ಕೈ ಕತ್ತರಿಸಿ ಹಾಕಿದಿರಲ್ಲ, ಯಾರು ಕ್ಷಮೆ ಕೇಳಬೇಕು? ಮೀಸೆ ಬಿಟ್ಟ ಕಾರಣಕ್ಕೆ ದಲಿತನಿಗೆ ಚಾಕು ಹಾಕಿ ಚುಚ್ಚಿದಿರಲ್ಲ, ಯಾರು ಕ್ಷಮೆ ಕೇಳಬೇಕು? ಮಂಗಳೂರಿನಲ್ಲಿ ಪೊಲೀಸ್ ಡ್ರಸ್‌ನಲ್ಲಿದ್ದ ನಮ್ಮ ಹೆಣ್ಣು ಮಗಳನ್ನು ಅಸ್ಪೃಶ್ಯರು ಎಂದು ಹೇಳಿ ಹೊರಗೆ ಕಳಿಸಿದಿರಲ್ಲ, ಯಾರು ಕ್ಷಮೆ ಕೇಳಬೇಕು? ನಿಮ್ಮಂಥ ನೀಚರು ಯಾರಾದರೂ ಜಗತ್ತಿನಲ್ಲಿ ಇದ್ದಾರಾ? ನಾಡಿನ ಬಹುಸಂಖ್ಯಾತರ ಕ್ಷಮೆಯನ್ನು ನೀವೆಷ್ಟು ಕೇಳಬೇಕು” ಎಂದು ಪ್ರಶ್ನೆಗಳ ಸುರಿಮಳೆಗೈದರು.

ಪ್ರೊ.ಹ.ರಾ.ಮಹೇಶ್ ಮಾತನಾಡಿ, “ಬಿಎಸ್‌ಪಿ ಹೊರತುಪಡಿಸಿ ಯಾವ ವಿರೋಧ ಪಕ್ಷವೂ ಹಂಸಲೇಖರ ಪರ ನಿಲ್ಲದಿರುವುದು ವಿಷಾದನೀಯ. ಹಂಸಲೇಖರು ಕ್ಷಮೆ ಕೇಳಿದ ಬಳಿಕವೂ ಅವರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಯಾಕೆಂದರೆ ಅವರು ಅಬ್ರಾಹ್ಮಣರಾಗಿದ್ದಾರೆ. ಬಸವನಗುಡಿಯ ಬ್ರಾಹ್ಮಣ್ಯ, ಹಂಸಲೇಖ ಅವರ ಮೇಲೆ ಪ್ರಕರಣ ದಾಖಲಿಸಿದೆ. ವಿರೋಧ ಪಕ್ಷಗಳು ಹಂಸಲೇಖರ ಪರ ನಿಂತಿದ್ದರೆ ಪ್ರಕರಣ ದಾಖಲಾಗುತ್ತಿರಲಿಲ್ಲ” ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!


ಅಂಬೇಡ್ಕರ್‌ ಅವರನ್ನು ಉಳಿಸಿಕೊಳ್ಳುವುದು ಕೇವಲ ದಲಿತರ ಕೆಲಸವಲ್ಲ. ಸಂವಿಧಾನದ ಉಳಿವಿಗಾಗಿ ಮಾತನಾಡುವವರ ಪರ ನಾವು ನಿಲ್ಲದಿದ್ದರೆ ನಾವು ಸಂವಿಧಾನವನ್ನು ಕಳೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಚಿಂತಕ ಎಲ್‌.ಎನ್‌.ಮುಕುಂದರಾಜ್‌ ಮಾತನಾಡಿ, “ಮಾಂಸ ತಿನ್ನುವವರನ್ನು ರಾಕ್ಷಸರು ಎಂದು ಒಬ್ಬ ಹೆಣ್ಣು ಮಗಳು ಹೇಳಿದ್ದು ನೋಡಿದೆವು. ಹೌದು ನಾವು ರಾಕ್ಷಸರು. ರಾಕ್ಷಸ ಎಂದರೆ ರಕ್ಷಕ. ರಾಕ್ಷಸ ಎಂದರೆ ನೆಲವನ್ನು ಉತ್ತುವವನು ಮತ್ತು ಬಿತ್ತುವವನು” ಎಂದು ವಿಶ್ಲೇಷಿಸಿದರು.

“ವೈದಿಕರ ಮಠ, ಮಂದಿರಗಳನ್ನು ಬಹಿಷ್ಕರಿಸೋಣ. ನಮ್ಮದೇ ದೇವರುಗಳನ್ನು ಪೂಜಿಸೋಣ. ಭಾರತಾಂಭೆಯನ್ನು ಪೂಜಿಸೋಣ” ಎಂದು ತಿಳಿಸಿದರು.

ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಮಾತನಾಡಿ, “ಪ್ರತಿಭಟನೆಯ ವೇಳೆ ಒಬ್ಬ ಪುರೋಹಿತ ಹಂಸಲೇಖರ ಭಾವಚಿತ್ರಕ್ಕೆ ಒದೆಯುತ್ತಾನೆ. ಪುರೋಹಿತ ಎಂಬ ಪದದ ಅರ್ಥವಾದರೂ ಈತನಿಗೆ ಗೊತ್ತಿದ್ದರೆ ಈ ಕೆಲಸವನ್ನು ಮಾಡುತ್ತಿರಲಿಲ್ಲ. ಹೀಗೆ ವರ್ತಿಸುವ ಮೂಲಕ ತನಗೇ ತಾನೇ ಅವಮಾನ ಮಾಡಿಕೊಂಡಿದ್ದಾನೆ. ನೀವು ಮನುಷ್ಯರಾ? ಮನುಷ್ಯರಂತೆ ಆಗಬೇಕೆಂದರೆ ಪೆರಿಯಾರ್‌‌, ಬಸವಣ್ಣ, ಕುಂದ್ಮಲ್ ರಂಗರಾವ್‌ ಅವರಂತೆ ಬ್ರಾಹ್ಮಣ್ಯ ಬಿಟ್ಟು ಹೊರಬನ್ನಿ” ಎಂದರು.

“ಶೂದ್ರ ಯುವಕರು ಬಲಿಪಶುಗಳಾಗುತ್ತಿದ್ದಾರೆ. ಪಕ್ಷಾಂತರಿಗಳು ಸಮುದಾಯಗಳನ್ನು ಬಲಿಕೊಡುತ್ತಿದ್ದಾರೆ. ಹಂಸಲೇಖ ಅವರು ತಪ್ಪು ಮಾತನಾಡಿಲ್ಲ. ಹಂಸಲೇಖರ ಮೇಲೆ ಅಹಂಕಾರದ ಶ್ರೇಷ್ಠತೆಯ ವ್ಯಸನದ ಅಜ್ಞಾನ ದಾಳಿ ಮಾಡಿದೆ” ಎಂದು ಹೇಳಿದರು.

ಚಿಂತಕಿ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, “ಅವರು ದಲಿತ ಕೇರಿಗೆ ಬರಲಿ, ಬಾರದಿರಲಿ ಅಷ್ಟು ಮಹತ್ವ ಕೊಡಬೇಕಾಗಿಲ್ಲ. ಮಾಂಸಾಹಾರವನ್ನು ತಿನ್ನಲು ಕಲಿಸಿದ್ದು ಅವರೇ. ಈಗ ಮಾಂಸಾಹಾರವನ್ನು ಟೀಕಿಸುತ್ತಿದ್ದಾರೆ. ಹಂಸಲೇಖರು ದೊಡ್ಡವರು- ಹೀಗಾಗಿ ಕ್ಷಮೆ ಕೇಳಿದ್ದಾರೆ. ಹಂಸಲೇಖರಿಗೆ ಆಗಿದ್ದು, ಏನು ಮಾಡುತ್ತಿದ್ದೆವೋ ಗೊತ್ತಿಲ್ಲ” ಎಂದು ಹರಿಹಾಯ್ದರು.

ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಮಲ್ಲಿಕಾ ಘಂಟಿ ಮಾತನಾಡಿ, “ಅಂಬೇಡ್ಕರ್‌ ಅವರು ಅಕ್ಷರ ಭಿಕ್ಷೆ ನೀಡದಿದ್ದರೆ ನಾನು ಯಾರದೋ ಮನೆಯಲ್ಲಿ ಸಗಣಿ ಬಾಚಬೇಕಾಗುತ್ತಿತ್ತು” ಎಂದರು.

ಹಂಸಲೇಖರನ್ನು ಮಹಾಗುರು ಎನ್ನುತ್ತಿದ್ದ ಯಾರೂ ಬಂದಿಲ್ಲ. ಎದೆಗೆ ಬೀಜ ಬಿತ್ತದೆ ತಲೆಗೆ ಬೀಜ ಬಿತ್ತಿದರೆ ಎದೆಯಲ್ಲಿ ಅಂತಃಕರಣ ಹೊಮ್ಮುವುದಿಲ್ಲ. ಕೈಗೆ ತ್ರಿಶೂಲ ಬರುತ್ತದೆ ಅಷ್ಟೇ. ಸಂವಿಧಾನ ಓದುವ ವ್ಯವಧಾನ ಇರದ ಶೂದ್ರ ಹುಡುಗರ ತಲೆಯೊಳಗೆ ಸಗಣಿಯನ್ನು ತುಂಬಲಾಗಿದೆ. ಗರ್ಭಗುಡಿಯೊಳಗೆ ಕಸ ಹೊಡೆಯಲು ಈ ಹುಡುಗರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ವಿಷಾದಿಸಿದರು.


ಇದನ್ನೂ ಓದಿರಿ: ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈವಾಗ ಉಡುಪಿ ಸ್ವಾಮಿ ವಿಧಿವಶರಾಗಿದ್ದಾರೆ ಈಗ ಅವರ ಬಗ್ಗೆ ಅಂಬೇಡ್ಕರ್ ಆರೋಪ ಮಾಡುವ ಜ್ಞಾನಪ್ರಕಾಶ ಸ್ವಾಮಿಗಳೇ ಈ ಬಗ್ಗೆ ನಿಮ್ಮಲ್ಲಿ ಯಾವುದಾದರೂ ಪುರಾವೆಗಳು ಇವೆಯೇ ಅಥವಾ ಪ್ರಚಾರಕ್ಕಾಗಿ ನೀವು ಸುಳ್ಳು ಹೇಳುತ್ತಿರಬಹುದಲ್ಲವೆ!
    ಯಾಕೆಂದರೆ ಯಾವುದೇ ವೇದಿಕೆಯಲ್ಲಿ ಸ್ವಾಮಿಜಿ ಸಮಕ್ಷಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಬಹುದಿತ್ತಲ್ಲವೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...