Homeಕರ್ನಾಟಕ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

- Advertisement -
- Advertisement -

“ನಮ್ಮ ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು; ನಿಮ್ಮ ಆಹಾರ ನಿಮ್ಮ ಹಕ್ಕು, ಹಾಲು ಕುಡಿಯಲಿ ಮನೆಯ ಬೆಕ್ಕು, ಬಾಡೇ ನಮ್‌ ಗಾಡು ಬೂದುಗುಂಬಳ ನಿಮ್ಮ ಗಾಡು”- ಹೀಗೆ ಕ್ರಾಂತಿಗೀತೆಯನ್ನು ಹಾಡುವ ಮೂಲಕ ಮಾಂಸಾಹಾರದ ಕುರಿತ ಅಸಹನೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆಗುತ್ತಿರುವ ಅಡ್ಡಿಯನ್ನು ಪ್ರತಿಭಟನಾಕಾರರು ಖಂಡಿಸಿದರು.

ಅಸ್ಪೃಶ್ಯತೆ, ಜಾತೀಯತೆ, ಅಸಮಾನತೆಗಳ ವಿರುದ್ಧ ದನಿ ಎತ್ತಿದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬೆಂಬಲಿಸಿ ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ (ಕರ್ನಾಟಕ) ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಮತ್ತು ಬೃಹತ್‌ ಸಮಾವೇಶದಲ್ಲಿ ಬ್ರಾಹ್ಮಣ್ಯದ ವಿರುದ್ಧ ಘೋಷಣೆಗಳು ಮೊಳಗಿದವು. ಮನುವಾದದ ಹಿಡಿತಕ್ಕೆ ಸಿಲುಕು ಬಲಿಪಶುಗಳಾಗುತ್ತಿರುವ ದಲಿತಾದಿ ಶೂದ್ರ ಸಮುದಾಯಗಳ ಯುವಕರನ್ನು ರಕ್ಷಿಸಬೇಕೆಂಬ ಆಶಯ ವ್ಯಕ್ತವಾಯಿತು.

ಕೇಂದ್ರ ರೈಲು ನಿಲ್ದಾಣದಿಂದ ಹಿಡಿದು, ಫ್ರೀಡಂ ಪಾರ್ಕ್‌ವರೆಗೆ ಶಾಂತಿಯುತ ಜಾಥಾ ನಡೆಯಿತು. ಬಳಿಕ ನಡೆದ ಸಮಾವೇಶದಲ್ಲಿ ಚಿಂತಕರು ಮಾತನಾಡಿದರು. ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, “ಪೇಜಾವರ ಮಠದ ಸ್ವಾಮೀಜಿಯವರು ನನಗೆ ಬಹಳ ಆತ್ಮೀಯರು. ಅವರು ತೀರಿಕೊಳ್ಳುವ ಮೂರು ತಿಂಗಳ ಹಿಂದೆ ನಮ್ಮನ್ನು ಮೈಸೂರಿನ ಕೃಷ್ಣಧಾಮಕ್ಕೆ ಕರೆದುಕೊಂಡು ಮಾತನಾಡಿಸಿದರು. ಮೈಸೂರಿನ ದಲಿತ ಕೇರಿಗಳಾದ ಅಶೋಕಪುರಂಗೆ, ಗಾಂಧಿನಗರಕ್ಕೆ ಹೋಗಬೇಕೆಂದು ನಿರ್ಧರಿಸಿದ್ದೇನೆ, ನೀವೆಲ್ಲ ನಿಂತು ಸಹಕರಿಸಿ ಎಂದರು. ಪೂಜ್ಯ ಪೇಜಾವರ ಸ್ವಾಮೀಜಿಯವರೇ, ನೀವು ನಮ್ಮ ಅಶೋಕಪುರಂಗಾಗಲೀ, ಗಾಂಧಿನಗರಕ್ಕಾಗಿ ಬರಬೇಕಾದರೆ ನಮ್ಮದೊಂದು ಷರತ್ತಿದೆ. ನೀವು ನಮ್ಮ ಮೊಹಲ್ಲಾಕ್ಕೆ ಬರುವುದಾದರೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬರಬೇಕು ಎಂದು ಆಗ್ರಹಿಸಿದೆವು. ಅವರು ಆಗುವುದಿಲ್ಲ ಎಂದರು. ಸಂವಿಧಾನ ಶಿಲ್ಪಿಗೆ ಮಾಲಾರ್ಪಣೆ ಮಾಡುವುದಿಲ್ಲ ಎಂಬುದು ರಾಷ್ಟ್ರದ್ರೋಹ ಅಲ್ಲವಾ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ರೈತ ಹೋರಾಟಕ್ಕೆ ಒಂದು ವರ್ಷ: ರಾಜ್ಯದಲ್ಲಿ ನಡೆದ ಪ್ರತಿಭಟನೆ ಚಿತ್ರಗಳಲ್ಲಿ ನೋಡಿ


ಈ ದೇಶದ ಸಂವಿಧಾನ ಒಪ್ಪಲ್ಲ ಎಂಬುದು ರಾಷ್ಟ್ರದ್ರೋಹ ಅಲ್ಲವಾ? ಈ ನೆಲದ ಕಾನೂನಿನ ಮುಂದೆ ಯಾವ ಸ್ವಾಮೀಜಿಯು ದೊಡ್ಡವರಲ್ಲ. ಯಾವ ಯತಿಗಳೂ ದೊಡ್ಡವರಲ್ಲ. ಈ ಸಂವಿಧಾನ ದೊಡ್ಡದು. ಪ್ರತಿಮೆಗೆ ಮಾಲಾರ್ಪಣೆ ಮಾಡುವುದು ಬೇಡ ಸ್ವಾಮೀಜಿ, ದಲಿತರು ಕೊಡುವ ಒಂದು ಲೋಟ ಪಾನಕ ಅಥವಾ ಮಜ್ಜಿಗೆಯನ್ನಾದರೂ ಕುಡಿಯಿರಿ ಎಂದೆವು. ನನ್ನಿಂದಾಗದು ಎಂದರು. ಕುರಿ ಫ್ರೈಯೋ, ಚಿಕನ್ ಫ್ರೈಯೋ ಅಲ್ಲ. ಕೇವಲ ಪಾನಕ, ಮಜ್ಜಿಗೆ ಕುಡಿಯಲೂ ಆಗಲ್ಲ ಎನ್ನುವ ಸ್ವಾಮೀಜಿಗಳು ದಲಿತ ಕೇರಿಗೆ ಪಾದಾಯಾತ್ರೆ ಬರುವ ಉದ್ದೇಶವಾದರೂ ಏನು? ಎಂದು ಜ್ಞಾನಪ್ರಕಾಶ್ ಸ್ವಾಮೀಜಿ ಕೇಳಿದರು.

“ಒಂದು ಲೋಟ ಮಜ್ಜಿಗೆಯನ್ನು ತೆಗೆದುಕೊಳ್ಳಲು ಯೋಗ್ಯತೆ ಇಲ್ಲದ ನೀವು, ನಿಮ್ಮ ಪಾದಯಾತ್ರೆ ಬೂಟಾಟಿಕೆಯಲ್ಲವೇ ಎಂದು ಹಂಸಲೇಖರು ಹೇಳಿರುವುದರಲ್ಲಿ ಏನು ತಪ್ಪಿದೆ. ಹೀಗೆ ಕೇಳಿದರೆ ಸಂವಿಧಾನ ವಿರೋಧಿಯೇ, ಜನಾಂಗ ವಿರೋಧಿಯೇ? ಯಾವ ಸಂವಿಧಾನದಲ್ಲಿ ಇದ್ದೀರಿ ನೀವು? ಯಾವ ಸಂವಿಧಾನಕ್ಕೆ ನೀವು ಸೆಲ್ಯೂಟ್ ಮಾಡುತ್ತೀರಿ?” ಎಂದು ಪ್ರಶ್ನಿಸಿದರು.

“ಇಂದು ಕ್ಷಮೆಯನ್ನು ಕೇಳಬೇಕಾದವರು ಯಾರು? ಒಂದು ಪುಟ್ಟ ಮಗು ದೇವಸ್ಥಾನದಲ್ಲಿ ಹೆಜ್ಜೆಹಾಕಿದ್ದಕ್ಕೆ ದಂಡ ಹಾಕಿದಿರಲ್ಲ, ಯಾರು ಯಾರನ್ನು ಕ್ಷಮೆ ಕೇಳಬೇಕು? ಒಂದು ಪ್ಲಾಸ್ಟಿಕ್‌ ಬಕೆಟ್‌ ಮುಟ್ಟಿದ್ದಕ್ಕೆ ಒಬ್ಬ ಗರ್ಭಿಣಿ ಹೆಣ್ಣು ಮಗಳನ್ನು ಒದ್ದು ಸಾಯಿಸಿದಿರಲ್ಲ, ಯಾರು ಕ್ಷಮೆ ಕೇಳಬೇಕು? ದಲಿತ ವಾಚ್‌ ಕಟ್ಟಿದ ಎಂದು ಚೆನ್ನೈನಲ್ಲಿ ಕೈ ಕತ್ತರಿಸಿ ಹಾಕಿದಿರಲ್ಲ, ಯಾರು ಕ್ಷಮೆ ಕೇಳಬೇಕು? ಮೀಸೆ ಬಿಟ್ಟ ಕಾರಣಕ್ಕೆ ದಲಿತನಿಗೆ ಚಾಕು ಹಾಕಿ ಚುಚ್ಚಿದಿರಲ್ಲ, ಯಾರು ಕ್ಷಮೆ ಕೇಳಬೇಕು? ಮಂಗಳೂರಿನಲ್ಲಿ ಪೊಲೀಸ್ ಡ್ರಸ್‌ನಲ್ಲಿದ್ದ ನಮ್ಮ ಹೆಣ್ಣು ಮಗಳನ್ನು ಅಸ್ಪೃಶ್ಯರು ಎಂದು ಹೇಳಿ ಹೊರಗೆ ಕಳಿಸಿದಿರಲ್ಲ, ಯಾರು ಕ್ಷಮೆ ಕೇಳಬೇಕು? ನಿಮ್ಮಂಥ ನೀಚರು ಯಾರಾದರೂ ಜಗತ್ತಿನಲ್ಲಿ ಇದ್ದಾರಾ? ನಾಡಿನ ಬಹುಸಂಖ್ಯಾತರ ಕ್ಷಮೆಯನ್ನು ನೀವೆಷ್ಟು ಕೇಳಬೇಕು” ಎಂದು ಪ್ರಶ್ನೆಗಳ ಸುರಿಮಳೆಗೈದರು.

ಪ್ರೊ.ಹ.ರಾ.ಮಹೇಶ್ ಮಾತನಾಡಿ, “ಬಿಎಸ್‌ಪಿ ಹೊರತುಪಡಿಸಿ ಯಾವ ವಿರೋಧ ಪಕ್ಷವೂ ಹಂಸಲೇಖರ ಪರ ನಿಲ್ಲದಿರುವುದು ವಿಷಾದನೀಯ. ಹಂಸಲೇಖರು ಕ್ಷಮೆ ಕೇಳಿದ ಬಳಿಕವೂ ಅವರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಯಾಕೆಂದರೆ ಅವರು ಅಬ್ರಾಹ್ಮಣರಾಗಿದ್ದಾರೆ. ಬಸವನಗುಡಿಯ ಬ್ರಾಹ್ಮಣ್ಯ, ಹಂಸಲೇಖ ಅವರ ಮೇಲೆ ಪ್ರಕರಣ ದಾಖಲಿಸಿದೆ. ವಿರೋಧ ಪಕ್ಷಗಳು ಹಂಸಲೇಖರ ಪರ ನಿಂತಿದ್ದರೆ ಪ್ರಕರಣ ದಾಖಲಾಗುತ್ತಿರಲಿಲ್ಲ” ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಅಧಿವೇಶನ ಮುಗಿಯುವವರೆಗೆ ಪ್ರಾರ್ಥನಾ ಸಭೆ ನಡೆಸದಂತೆ ಬೆಳಗಾವಿ ಕ್ರಿಶ್ಚಿಯನ್ನರಿಗೆ ಪೊಲೀಸರ ‘ಸ್ನೇಹಪೂರ್ವಕ’ ಎಚ್ಚರಿಕೆ!


ಅಂಬೇಡ್ಕರ್‌ ಅವರನ್ನು ಉಳಿಸಿಕೊಳ್ಳುವುದು ಕೇವಲ ದಲಿತರ ಕೆಲಸವಲ್ಲ. ಸಂವಿಧಾನದ ಉಳಿವಿಗಾಗಿ ಮಾತನಾಡುವವರ ಪರ ನಾವು ನಿಲ್ಲದಿದ್ದರೆ ನಾವು ಸಂವಿಧಾನವನ್ನು ಕಳೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಚಿಂತಕ ಎಲ್‌.ಎನ್‌.ಮುಕುಂದರಾಜ್‌ ಮಾತನಾಡಿ, “ಮಾಂಸ ತಿನ್ನುವವರನ್ನು ರಾಕ್ಷಸರು ಎಂದು ಒಬ್ಬ ಹೆಣ್ಣು ಮಗಳು ಹೇಳಿದ್ದು ನೋಡಿದೆವು. ಹೌದು ನಾವು ರಾಕ್ಷಸರು. ರಾಕ್ಷಸ ಎಂದರೆ ರಕ್ಷಕ. ರಾಕ್ಷಸ ಎಂದರೆ ನೆಲವನ್ನು ಉತ್ತುವವನು ಮತ್ತು ಬಿತ್ತುವವನು” ಎಂದು ವಿಶ್ಲೇಷಿಸಿದರು.

“ವೈದಿಕರ ಮಠ, ಮಂದಿರಗಳನ್ನು ಬಹಿಷ್ಕರಿಸೋಣ. ನಮ್ಮದೇ ದೇವರುಗಳನ್ನು ಪೂಜಿಸೋಣ. ಭಾರತಾಂಭೆಯನ್ನು ಪೂಜಿಸೋಣ” ಎಂದು ತಿಳಿಸಿದರು.

ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಮಾತನಾಡಿ, “ಪ್ರತಿಭಟನೆಯ ವೇಳೆ ಒಬ್ಬ ಪುರೋಹಿತ ಹಂಸಲೇಖರ ಭಾವಚಿತ್ರಕ್ಕೆ ಒದೆಯುತ್ತಾನೆ. ಪುರೋಹಿತ ಎಂಬ ಪದದ ಅರ್ಥವಾದರೂ ಈತನಿಗೆ ಗೊತ್ತಿದ್ದರೆ ಈ ಕೆಲಸವನ್ನು ಮಾಡುತ್ತಿರಲಿಲ್ಲ. ಹೀಗೆ ವರ್ತಿಸುವ ಮೂಲಕ ತನಗೇ ತಾನೇ ಅವಮಾನ ಮಾಡಿಕೊಂಡಿದ್ದಾನೆ. ನೀವು ಮನುಷ್ಯರಾ? ಮನುಷ್ಯರಂತೆ ಆಗಬೇಕೆಂದರೆ ಪೆರಿಯಾರ್‌‌, ಬಸವಣ್ಣ, ಕುಂದ್ಮಲ್ ರಂಗರಾವ್‌ ಅವರಂತೆ ಬ್ರಾಹ್ಮಣ್ಯ ಬಿಟ್ಟು ಹೊರಬನ್ನಿ” ಎಂದರು.

“ಶೂದ್ರ ಯುವಕರು ಬಲಿಪಶುಗಳಾಗುತ್ತಿದ್ದಾರೆ. ಪಕ್ಷಾಂತರಿಗಳು ಸಮುದಾಯಗಳನ್ನು ಬಲಿಕೊಡುತ್ತಿದ್ದಾರೆ. ಹಂಸಲೇಖ ಅವರು ತಪ್ಪು ಮಾತನಾಡಿಲ್ಲ. ಹಂಸಲೇಖರ ಮೇಲೆ ಅಹಂಕಾರದ ಶ್ರೇಷ್ಠತೆಯ ವ್ಯಸನದ ಅಜ್ಞಾನ ದಾಳಿ ಮಾಡಿದೆ” ಎಂದು ಹೇಳಿದರು.

ಚಿಂತಕಿ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, “ಅವರು ದಲಿತ ಕೇರಿಗೆ ಬರಲಿ, ಬಾರದಿರಲಿ ಅಷ್ಟು ಮಹತ್ವ ಕೊಡಬೇಕಾಗಿಲ್ಲ. ಮಾಂಸಾಹಾರವನ್ನು ತಿನ್ನಲು ಕಲಿಸಿದ್ದು ಅವರೇ. ಈಗ ಮಾಂಸಾಹಾರವನ್ನು ಟೀಕಿಸುತ್ತಿದ್ದಾರೆ. ಹಂಸಲೇಖರು ದೊಡ್ಡವರು- ಹೀಗಾಗಿ ಕ್ಷಮೆ ಕೇಳಿದ್ದಾರೆ. ಹಂಸಲೇಖರಿಗೆ ಆಗಿದ್ದು, ಏನು ಮಾಡುತ್ತಿದ್ದೆವೋ ಗೊತ್ತಿಲ್ಲ” ಎಂದು ಹರಿಹಾಯ್ದರು.

ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ನಿವೃತ್ತ ಕುಲಪತಿ ಮಲ್ಲಿಕಾ ಘಂಟಿ ಮಾತನಾಡಿ, “ಅಂಬೇಡ್ಕರ್‌ ಅವರು ಅಕ್ಷರ ಭಿಕ್ಷೆ ನೀಡದಿದ್ದರೆ ನಾನು ಯಾರದೋ ಮನೆಯಲ್ಲಿ ಸಗಣಿ ಬಾಚಬೇಕಾಗುತ್ತಿತ್ತು” ಎಂದರು.

ಹಂಸಲೇಖರನ್ನು ಮಹಾಗುರು ಎನ್ನುತ್ತಿದ್ದ ಯಾರೂ ಬಂದಿಲ್ಲ. ಎದೆಗೆ ಬೀಜ ಬಿತ್ತದೆ ತಲೆಗೆ ಬೀಜ ಬಿತ್ತಿದರೆ ಎದೆಯಲ್ಲಿ ಅಂತಃಕರಣ ಹೊಮ್ಮುವುದಿಲ್ಲ. ಕೈಗೆ ತ್ರಿಶೂಲ ಬರುತ್ತದೆ ಅಷ್ಟೇ. ಸಂವಿಧಾನ ಓದುವ ವ್ಯವಧಾನ ಇರದ ಶೂದ್ರ ಹುಡುಗರ ತಲೆಯೊಳಗೆ ಸಗಣಿಯನ್ನು ತುಂಬಲಾಗಿದೆ. ಗರ್ಭಗುಡಿಯೊಳಗೆ ಕಸ ಹೊಡೆಯಲು ಈ ಹುಡುಗರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ವಿಷಾದಿಸಿದರು.


ಇದನ್ನೂ ಓದಿರಿ: ಹಂಸಲೇಖ ಹೇಳಿಕೆ ಪರವಾಗಿ ಬೆಂಗಳೂರಿನಲ್ಲಿ ಬೃಹತ್‌ ‘ಜನದನಿ’ ರ್‍ಯಾಲಿ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈವಾಗ ಉಡುಪಿ ಸ್ವಾಮಿ ವಿಧಿವಶರಾಗಿದ್ದಾರೆ ಈಗ ಅವರ ಬಗ್ಗೆ ಅಂಬೇಡ್ಕರ್ ಆರೋಪ ಮಾಡುವ ಜ್ಞಾನಪ್ರಕಾಶ ಸ್ವಾಮಿಗಳೇ ಈ ಬಗ್ಗೆ ನಿಮ್ಮಲ್ಲಿ ಯಾವುದಾದರೂ ಪುರಾವೆಗಳು ಇವೆಯೇ ಅಥವಾ ಪ್ರಚಾರಕ್ಕಾಗಿ ನೀವು ಸುಳ್ಳು ಹೇಳುತ್ತಿರಬಹುದಲ್ಲವೆ!
    ಯಾಕೆಂದರೆ ಯಾವುದೇ ವೇದಿಕೆಯಲ್ಲಿ ಸ್ವಾಮಿಜಿ ಸಮಕ್ಷಮದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಬಹುದಿತ್ತಲ್ಲವೆ.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...