Homeಅಂಕಣಗಳುಚಿಕ್ಕಮಗಳೂರು ಜನಕ್ಕೆ ಈ ಸೋಲು ಬೇಕಿತ್ತು ಸಾರ್!

ಚಿಕ್ಕಮಗಳೂರು ಜನಕ್ಕೆ ಈ ಸೋಲು ಬೇಕಿತ್ತು ಸಾರ್!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣವಚನ ತೆಗೆದುಕೊಂಡ ಸಿದ್ದು ಅವರ ಲಕ್ಕಿನಲ್ಲಿ ಎಡೂರಪ್ಪನವರ ಪಾಲು ಪ್ರಧಾನವಾಗಿದೆಯಂತಲ್ಲಾ. ಮೊದಲು ಸಿದ್ದು ಮುಖ್ಯಮಂತ್ರಿಯಾಗಬೇಕಾದರೆ, ಎಡೂರಪ್ಪ ಬಿಜೆಪಿ ವಿರುದ್ಧ ಸಿಡಿದೆದ್ದು ಕೆಜೆಪಿ ಮಾಡಿ ಚುನಾವಣೆಗಿಳಿದು ಬಿಜೆಪಿಯನ್ನು ಕೇವಲ ನಲವತ್ತು ಸೀಟಿಗೆ ಇಳಿಸಿದ್ದು ಕಾರಣವಾದರೆ, ಈ ಸಾರ್ತಿಗೆ, ದಾರಿ ಇನ್ನು ಇರುವಾಗಲೇ ಮಾರ್ಗಮಧ್ಯದಲ್ಲಿ ಯಡ್ಡಿಯವರನ್ನು ಇಳಿಸಿ ಕಣ್ಣೀರು ತರಿಸಿದ್ದರ ಜೊತೆಗೆ, ಬಿಜೆಪಿಯಲ್ಲಿದ್ದರೂ ಬಾಯಿ ಸ್ವಚ್ಛವಾಗಿಟ್ಟುಕೊಂಡಿದ್ದ ಜಗದೀಶ್ ಶೆಟ್ಟರ್ ಅವರಿಗೆ ಮಾಡಿದ ಅವಮಾನವೂ ಕಾರಣವಾಗಿದೆಯಂತಲ್ಲಾ. ಆದರೆ ಬುದ್ಧಿವಂತ ಸಿದ್ದು ಅವರು ಯಡ್ಡಿಯವರ ದೆಸೆಯಿಂದ ತಮ್ಮ ದೆಸೆ ಕುದುರಿದ್ದದನ್ನು ಎಲ್ಲೂ ಹೇಳಿಕೊಂಡಿಲ್ಲ. ಆದರೂ ಮನದೊಳಗೇ ಒಂದು ಕೃತಜ್ಞತೆಯಿದೆ. ಅದೇ ಕಾರಣಕ್ಕೆ ಏನೋ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನಗೌಡನಿಗೆ ಟಿಕೆಟ್ ತಪ್ಪಿಸಿ ಗೋಣಿಮಾಲತೇಶರನ್ನ ಕ್ಯಾಂಡಿಡೇಟ್ ಮಾಡಿ, ಎಡೂರಪ್ಪನವರ ಮಗನಿಗೆ ಸಹಾಯ ಮಾಡಿದ್ದಾರೆಂದು ಜನರು ಹೇಳುತ್ತಿದ್ದಾರಂತಲ್ಲಾ. ಇದರಲ್ಲಿ ಡಿ.ಕೆ.ಶಿ ಕೈವಾಡವನ್ನು ಅಲ್ಲಗಳೆಯಲಾಗುತ್ತಿಲ್ಲವಲ್ಲಾ, ಥೂತ್ತೇರಿ.

*******

ಪಂಚರತ್ನ ಮುಂದಿಟ್ಟುಕೊಂಡು ಇಡೀ ಕರ್ನಾಟಕವನ್ನು ಸುತ್ತಿ ಬಂದ ಕುಮಾರಣ್ಣನ ಪಾರ್ಟಿ ವಿಧಾನಸಭೆಯಲ್ಲಿ ನಿಗದಿತ ಸಂಖ್ಯೆಯ ಮಾನ್ಯತೆ ಕಳೆದುಕೊಂಡು ತನ್ನ ಕುಮಾರಣ್ಣನ ಪಕ್ಷ ವಿಸರ್ಜನೆ ಘೋಷಣೆಗೆ ಕಾಯುತ್ತಿದೆಯಂತಲ್ಲಾ. ಹಾಗೇ ನೋಡಿದರೆ ಬಿಜೆಪಿಯಂತೆ ದಳ ಕೂಡ ಎಂದೂ ಮೆಜಾರಿಟಿ ಪಡೆಯದ ಪಾರ್ಟಿ; ಇದು ಗೊತ್ತಿದ್ದರಿಂದಲೇ ಕುಮಾರಣ್ಣ ನನ್ನ ಪಾರ್ಟಿಗೆ ಬಹುಮತ ಬರದಿದ್ದರೆ ವಿಸರ್ಜಿಸುತ್ತೇನೆ ಎಂದಿದ್ದು ಸಾಮಾಜಿಕ ಮಾಧ್ಯಮಗಳ ಲ್ಲಿ ಹರಿದಾಡಿತ್ತು. ಹಾಗೆ ನೋಡಿದರೆ ಕುಮಾರಣ್ಣನ ಪಾರ್ಟಿ ತನಗೆ ತಾನೇ ವಿಸರ್ಜಿಸಿಕೊಳ್ಳುತ್ತ ಹೊರಟು ಶಾನೆ ವರ್ಷವಾಯ್ತು. ಮೊದಲಿಗೆ ಜಿ.ಟಿ.ದೇವೇಗೌಡರು ಹೊರನಡೆದು ಕಾಂಗ್ರೆಸ್ ಮನೆಯ ಬಾಗಿಲಿಗೆ ಹೋಗಿ ಮತ್ತೆ ವಾಪಸ್ ಬಂದರು; ನಂತರ ಹಲವಾರು ಜನ ಹೊರನಡೆದೇಬಿಟ್ಟರು. ಪಾರ್ಟಿ ಅಧ್ಯಕ್ಷನಾದವನು ಜವಾಬ್ದಾರಿಯಿಂದ ನಡೆದುಕೊಂಡು, ಎಲ್ಲರನ್ನು ತನ್ನ ತೆಕ್ಕೆಗೆ ತೆಗೆದುಕೊಂಡು, ಅಸಮಾಧಾನಗೊಂಡವರನ್ನ ಸಾಂತ್ವನಗೊಳಿಸುತ್ತ ಸಣ್ಣತನಗಳನ್ನು ಮೀರುತ್ತ ಪಾರ್ಟಿ ಕಾರ್ಯಕರ್ತರ ರಕ್ಷಕನಾಗಿರಬೇಕು. ಮುಖಂಡನಲ್ಲಿ ಈ ಗುಣಗಳಿಲ್ಲದಿದ್ದರೆ ಹಿಂಬಾಲಕರು ಒಂದೊಂದು ಹಂತದಲ್ಲಿ ಖಾಲಿಯಾಗುತ್ತಾರೆ. ಕುಮಾರಣ್ಣನ ಪಂಚರತ್ನಕ್ಕಿಂತ ಪಾರ್ಟಿ ಮುಖಂಡರು ಮುಖ್ಯವಾಗಬೇಕಿತ್ತು. ಐದು ವರ್ಷ ದುರಾಡಳಿತ ನಡೆಸಿದವರನ್ನು ಬಿಟ್ಟು ಕಾಂಗ್ರೆಸ್ ಟೀಕಿಸುವುದು ಮುಖ್ಯವಾಗಬಾರದಿತ್ತು. ನಿಜಕ್ಕೂ ದಳದಂತಹ ಪಾರ್ಟಿ ಇರಬೇಕು. ಅದು ಇದ್ದು ಬಿಜೆಪಿಯನ್ನ ಕಾಂಗ್ರೆಸ್ಸನ್ನ ನಿಯಂತ್ರಿಸಬೇಕು. ಆ ಎರಡೂ ಪಾರ್ಟಿಗಳಿಗಿಂತ ಜವಾಬ್ದಾರಿಯಿಂದ ವರ್ತಿಸಬೇಕಾಗಿದೆಯಲ್ಲಾ, ಇದು ಸಾಧ್ಯವೇ ಥೂತ್ತೇರಿ.

*****

ಕರ್ನಾಟಕದ ಜನಸ್ತೋಮಕ್ಕೆ ಬೇಕಿದ್ದ ಒಂದು ಚುನಾವಣಾ ಸೋಲು ಕಡೆಗೂ ಸಂಭವಿಸಿ ಜನ ನಿಟ್ಟುಸಿರುಬಿಟ್ಟರಂತಲ್ಲಾ. ಜನಕ್ಕೆ ಬೇಕಿದ್ದ ಆ ಸೋತ ವ್ಯಕ್ತಿ ಸಿ.ಟಿ ರವಿ. ತನ್ನ ಸೋಲನ್ನು ಇನ್ನೂ ನಂಬದ ಸಿ.ಟಿ ರವಿಯವರನ್ನು ಮಾತನಾಡಿಸಿ ಒಂದಿಷ್ಟು ಮನರಂಜನೆ ತೆಗೆದುಕೊಳ್ಳಲು ಫೋನ್ ಮಾಡಿದರೆ, ರಿಂಗಾಯ್ತು. ರಿಂಗ್‌ಟೋನ್: ’ನಮಸ್ತೆ ಸದಾ ವತ್ಸಲೇ ಮಾತೃಭೂಮಿ..’.

“ಹಲೋ ಯಾರು?”

“ನಾನು ಸಾರ್ ಯಾಹೂ.”

“ಯಾಹೂ ಅಂದ್ರೆ ಯಾರ್ರಿ?”

“ಇದೇನ್ ಸಾರ್ ಹಿಂಗ್ ಕೇಳ್ತಿರಿ? ನೀವೆ ಒಂದು ಸತಿ ಕಲಾಮಂದಿದರಲ್ಲಿ ಸನ್ಮಾನ ಮಾಡಿದ್ರಿ..”

“ಆಗ್ಲೆ ಇಪ್ಪತ್ತು ವರ್ಷ ಆಯ್ತಲ್ರೀ?”

“ಹೌದು ಸಾರ್, ಆಗ ನೀವು ವಳ್ಳೆಯವರಾಗಿದ್ರಿ.”

“ಆಗ ಒಳ್ಳೆಯವನಾಗಿದ್ದೆ ಅಂದ್ರೆ ಈಗ ಕೆಟ್ಟೊಗಿದ್ದಿನಾ?”

“ಹೌದು ಸಾರ್, ನೀವು ಈಗ ಒಳ್ಳೆಯವರಾಗಿದ್ರೆ, ಚಿಕ್ಕಮಗಳೂರಿನ ನೀರಿನ ವಿಷಯ ಮಾತಾಡಿ, ಕರಗಡದ ಸಮಸ್ಯೆ ಬಗೆಹರಸತಿದ್ರಿ. ಅದುಬಿಟ್ಟು ಬಾಬಾ ಬುಡನ್‌ಗಿರಿ ಹಿಡಕಂಡ್ರಿ.”

ಇದನ್ನೂ ಓದಿ: ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

“ಬಾಬಾ ಬುಡನ್‌ಗಿರಿ ಹಿಡಕೊಂಡು ದತ್ತಪೀಠ ಮಾಡಿದ್ಕೆ ನಾನು ನಾಲ್ಕು ಸಾರಿ ಗೆದ್ದದ್ದು.”

“ಈಗ್ಯಾಕೆ ಸೋತ್ರಿ ಸಾರ್?”

“ನಮ್ಮವರೆ ವಿಶ್ವಾಸ ದ್ರೋಹ ಮಾಡಿದ್ರು?”

“ನೀವು ವಿಶ್ವಾಸ ಕಳಕೊಂಡ ಮ್ಯಾಲೆ ಅವುರು ದ್ರೋಹ ಮಾಡದು ಸಹಜ ಅಲ್ಲವಾ?”

“ನಾನು ಯಾರ ವಿಶ್ವಾಸವನ್ನು ಕಳಕೊಂಡಿಲ್ಲ. ಸಮರ್ಥ ರೀತಿಲಿ ಆಡಳಿತ ಮಾಡಿದ್ದಿವಿ. ನಮ್ಮದು ಒಳ್ಳೆ ಸರಕಾರ ಗೊತ್ತ?”

“ನನಿಗಾಗೊ ಆಶ್ಚರ್ಯ ಯಾವುದು ಅಂದ್ರೆ ಸಾರ್.. ನಿಮ್ಮ ಸರಕಾರ ಸಮಾಜಘಾತುಕ ಶಕ್ತಿತರ ಕೆಲಸ ಮಾಡ್ತು. ಅದೆಲ್ಲ ನಿಮಗೆ ಒಳ್ಳೆದಾಗಿ ಕಾಣ್ತದಲ್ಲಾ ಅದೇ ದುರಂತ. ಒಂದು ತಪ್ಪು ತಪ್ಪಾಗಿ ಕಾಣದೆ ನಿಮಗೆಲ್ಲ ಸರಿಯಾಗಿ ಕಾಣ್ತದೆ ಅಂದ್ರೆ ಒಂದು ಪಾರ್ಟಿ ಜನಕ್ಕೆ ಏನೋ ಆಗಿ ಕಾಣ್ಸಿದೆ ಅನ್ಸುತ್ತೆ ಸಾರ್.”

“ನಮಗೇನೂ ಆಗಿಲ್ಲ, ನಿಮ್ಮ ಪೂರ್ವಗ್ರಹನ ಸರಿಮಾಡಿಕಳಿ.”

“ನಿಮ್ಮ ಬಗ್ಗೆ ಯಾವ ಪೂರ್ವಗ್ರಹದ ಅಗತ್ಯ ಇಲ್ಲ. ಸಾರ್ ನಿಮ್ಮ ಪಾರ್ಟಿ ಕೃತ್ಯಗಳೇ ಅಂಗಿದ್ದೊ.”

“ನಾವು ಕಾಂಗ್ರೆಸ್ಸಿಗರಿಗಿಂತ ಒಳ್ಳೆ ಆಡಳಿತ ಕೊಟ್ಟಿದ್ದಿವಿ.”

“ನಿಜ ಸಾರ್, ಆ ಕಾಂಗ್ರೆಸ್‌ನವು ಎಂದೂ ನಲವತ್ತು ಪರಸೆಂಟ್ ತಗೊಂಡಿರಲಿಲ್ಲ, ಆ ಕಾರಣಕ್ಕೆ ಯಾವ ಮಂತ್ರಿನೂ ರಾಜಿನಾಮೆ ಕೊಟ್ಟು ಟಿಕೆಟ್ ಇಲ್ದೆ ಮನಿಗೋಗಿರಲಿಲ್ಲ. ಸಿಕ್ಕಿದ್ದೆ ಅವಕಾಶ ಅಂತ ಪಠ್ಯಪುಸ್ತಕ ತಿದ್ದಿ ಪುರೋಹಿತರ ಅಜೆಂಡ ಸೇರಿಸಿರಲಿಲ್ಲ. ಕುವೆಂಪುಗೆ ಅವಮಾನ ಮಾಡಿದಾಗ್ಲು ನೀವು ಸುಮ್ಮನಿದ್ರಿ. ಆಡತಯಿದ್ದ ನಾಟಕ ನಿಲ್ಲಿಸಿದ್ರಿ, ಟಿಪ್ಪುವನ್ನ ವಿಕೃತವಾಗಿ ಚಿತ್ರಿಸಿ ನಾಟಕ ಆಡಿದ್ರಿ, ಅದನ್ನ ಟೀಕೆ ಮಾಡಿದ ಸಿದ್ದರಾಮಯ್ಯನವರನ್ನ “ಸಿದ್ರಾಮುಲ್ಲಖಾನ್” ಅಂತ ಕರದ್ರಿ. ಮಹಿಳೆಯರ ಬಗ್ಗೆ ನಿಮ್ಮಲ್ಲಿ ಎಂಥ ಬಾವುನೆ ಅದೆ ಅನ್ನದ ಹೇಳೋದೆ ಬೇಕಿಲ್ಲ. ಸೋಮಣ್ಣ ಪಾಪ ಬಡ ಹೆಂಗಸಿಗೆ ಸಾರ್ವಜನಿಕವಾಗಿ ಹೊಡೆದು, ಆಮೇಲೆ ಆ ಹೆಂಗಸಿಗೆ ದುಡ್ಡುಕೊಟ್ಟರು. ಸೋಮಣ್ಣ ಹೊಡಿಲಿಲ್ಲ, ತಮಾಸಿಗೆ ಭುಜ ತಟ್ಟಿದ್ದು ಅಂತ ಹೇಳಿಸಿದ್ರಿ. ನಿಮ್ಮ ಇಡೀ ಪಾರ್ಟಿ ಜನ ಒಂದೇ ಒಂದು ಒಳ್ಳೆ ಮಾತಾಡಲಿಲ್ಲ. ನಿಮ್ಮ ಸರಕಾರ ಒಂದೇ ಒಂದು ಜನ ಮೆಚ್ಚುವ ಕೆಲಸ ಮಾಡಲಿಲ್ಲ. ಜಾತಿ ಜಗಳ ಮಾಡಿಸಿದ್ರಿ. ಮುಸಲ್ಮಾನರ ಮೇಲೆ ಬಿದ್ದು ಗಲಭೆ ಮಾಡಿಸಿದ್ರಿ. ಸುಳ್ಳು ಕೇಸಾಕ್ಸಿದ್ರಿ. ಇಡೀ ನಾಡೆ ಒಂದು ಅವ್ಯಕ್ತ ಭಯದಲ್ಲಿ ಕ್ಷೆಭೆಗೊಳಗಾಗಿತ್ತು. ನಿಮ್ಮಂಥ ಜವಾಬ್ದಾರಿಯಿರೊ ಯುವ ನಾಯಕರು ಪುರೋಹಿತಶಾಹಿಗಳ ಗುಲಾಮರಾಗಿದ್ರಿ. ಬಹಳ ವಿಶಾಲವಾದ ಮನಸ್ಸಿನ ಪರಂಪರೆಯಿಂದ ಬಂದ ನಿಮಗೆ ಆರೆಸ್ಸೆಸ್ ಆಶ್ರಯದ ಅಗತ್ಯ ಇರಲಿಲ್ಲ. ಚಿಕ್ಕಮಗಳೂರು ಬ್ರಿಟಿಷರು ಕೂಡ ಮೆಚ್ಚಿದ ಸುಂದರ ನಾಡು. ಅಲ್ಲಿ ಇಂಗ್ಲೆಂಡಿನಿಂದ, ಜರ್ಮನಿಯಿಂದ ಬಂದು ತೋಟ ಮಾಡಿದೋರವುರೆ, ಮದ್ರಾಸಿನಿಂದ ಬಂದು ತೋಟ ಮಾಡಿದೋರವುರೆ. ಹಿಂಗೆ ಜಗತ್ತಿಗೇ ತೆರೆಕೊಂಡ ಚಿಕ್ಕಮಗಳೂರಿಗೆ ಪುರೋಹಿತಶಾಹಿ ತರಹ ಮಾತನಾಡೊ ರಾಜಕಾರಣಿ ಬೇಕಿಲ್ಲ ಅಂತ ಜನಕ್ಕೆ ಅನ್ನಿಸಿ ನಿಮ್ಮನ್ನ ಸೋಲಿಸಿದ್ರು ಸಾರ್. ನಿಮ್ಮ ಸೋಲಿನ ಕಾರಣಗಳು ಯಾವ ಕಾರಣಕ್ಕೂ ನಿಮಗೆ ಹೊಳಿಯಲ್ಲ. ಯಾಕೆ ಅಂದ್ರೆ ನಿಮ್ಮ ಕಣ್ಣಿಗೆ ಪೊರೆಯಾಗಿವೆ. ನೀವು ಇನ್ನೊಂದು ದಾಖಲೆ ಮಾಡಿದ್ದೀರಿ ಸಾರ್. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಲ್ಕುಳಿ ವಿಠ್ಠಲ ಹೆಗಡೆಯವರನ್ನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನನ್ನಾಗಿ ಮಾಡ್ತು. ಆತ ಸಾಮಾನ್ಯ ವ್ಯಕ್ತಿಯೇನಲ್ಲ. ಆತ ಬರದಿರೊ ’ಮಂಗನಬ್ಯಾಟೆ’ಗೆ ಅಕಾಡೆಮಿ ಅವಾರ್ಡು ಬಂದಿದೆ. ಹೆಗಡೆ ನಿಮಗಾಗಲ್ಲ ಅಂತ ಹೇಳಿ ಸಾಹಿತ್ಯ ಸಮ್ಮೇಳನ ನ್ಯಡಿದಂಗೆ ಮಾಡಿದ್ರಿ. ಸಮ್ಮೇಳನದ ಜಾಗಕ್ಕೆ ಭಜರಂಗಿಗಳು ಬಂದು ಬಾಯಿ ಹರಕೊಂಡು ಸಮ್ಮೇಳನ ನಿಲ್ಲಿಸಿದ್ರು. ಇದು ಇತಿಹಾಸದಲ್ಲಿ ದಾಖಲಾದ ಅಭಿವ್ಯಕ್ತಿ ಸ್ವಾತಂತ್ರ ಹರಣದ ಘಟನೆ. ಕನ್ನಡ ಸಾಹಿತ್ಯಕ್ಕೆ ನೀವು ಮಾಡಿದ ಅವಮಾನ. ಭುವನೇಶ್ವರಿಗೆ ಮಾಡಿದ ದ್ರೋಹ. ದೂರದ ಊರುಗಳಿಂದ ಬಂದ ಸಾಹಿತಿಗಳು ನಿಮ್ಮನ್ನ ನಿಂದಿಸುತ್ತಾ ಇದೊಂದು ಅನಾಗರಿಕ ನಡೆ, ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ, ಕನ್ನಡ ಸಾಹಿತ್ಯ ಪರಿಷತ್ ಕಟ್ಟಿ ಬೆಳೆಸಿದವರಿಗೆ ಮಾಡಿದ ಅವಮಾನ, ಇದೇ ಜಿಲ್ಲೆಯ ಹಿರೇಕೂಡಿಗೆಯಲ್ಲಿ ಹುಟ್ಟಿದ ಕುವೆಂಪುಗೆ ಮಾಡಿದ ಅವಮಾನ ಅಂತ ಬೈಕಂಡೋದ್ರು ಸಾರ್. ಮಾತಾಡಿ ಸಾರ್ ಹೇಳಿ ಏನಾರ. ಹಲೋ. ಹಲೋ. ಹಲೋ”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....