Homeಅಂಕಣಗಳುಚಿಕ್ಕಮಗಳೂರು ಜನಕ್ಕೆ ಈ ಸೋಲು ಬೇಕಿತ್ತು ಸಾರ್!

ಚಿಕ್ಕಮಗಳೂರು ಜನಕ್ಕೆ ಈ ಸೋಲು ಬೇಕಿತ್ತು ಸಾರ್!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣವಚನ ತೆಗೆದುಕೊಂಡ ಸಿದ್ದು ಅವರ ಲಕ್ಕಿನಲ್ಲಿ ಎಡೂರಪ್ಪನವರ ಪಾಲು ಪ್ರಧಾನವಾಗಿದೆಯಂತಲ್ಲಾ. ಮೊದಲು ಸಿದ್ದು ಮುಖ್ಯಮಂತ್ರಿಯಾಗಬೇಕಾದರೆ, ಎಡೂರಪ್ಪ ಬಿಜೆಪಿ ವಿರುದ್ಧ ಸಿಡಿದೆದ್ದು ಕೆಜೆಪಿ ಮಾಡಿ ಚುನಾವಣೆಗಿಳಿದು ಬಿಜೆಪಿಯನ್ನು ಕೇವಲ ನಲವತ್ತು ಸೀಟಿಗೆ ಇಳಿಸಿದ್ದು ಕಾರಣವಾದರೆ, ಈ ಸಾರ್ತಿಗೆ, ದಾರಿ ಇನ್ನು ಇರುವಾಗಲೇ ಮಾರ್ಗಮಧ್ಯದಲ್ಲಿ ಯಡ್ಡಿಯವರನ್ನು ಇಳಿಸಿ ಕಣ್ಣೀರು ತರಿಸಿದ್ದರ ಜೊತೆಗೆ, ಬಿಜೆಪಿಯಲ್ಲಿದ್ದರೂ ಬಾಯಿ ಸ್ವಚ್ಛವಾಗಿಟ್ಟುಕೊಂಡಿದ್ದ ಜಗದೀಶ್ ಶೆಟ್ಟರ್ ಅವರಿಗೆ ಮಾಡಿದ ಅವಮಾನವೂ ಕಾರಣವಾಗಿದೆಯಂತಲ್ಲಾ. ಆದರೆ ಬುದ್ಧಿವಂತ ಸಿದ್ದು ಅವರು ಯಡ್ಡಿಯವರ ದೆಸೆಯಿಂದ ತಮ್ಮ ದೆಸೆ ಕುದುರಿದ್ದದನ್ನು ಎಲ್ಲೂ ಹೇಳಿಕೊಂಡಿಲ್ಲ. ಆದರೂ ಮನದೊಳಗೇ ಒಂದು ಕೃತಜ್ಞತೆಯಿದೆ. ಅದೇ ಕಾರಣಕ್ಕೆ ಏನೋ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನಗೌಡನಿಗೆ ಟಿಕೆಟ್ ತಪ್ಪಿಸಿ ಗೋಣಿಮಾಲತೇಶರನ್ನ ಕ್ಯಾಂಡಿಡೇಟ್ ಮಾಡಿ, ಎಡೂರಪ್ಪನವರ ಮಗನಿಗೆ ಸಹಾಯ ಮಾಡಿದ್ದಾರೆಂದು ಜನರು ಹೇಳುತ್ತಿದ್ದಾರಂತಲ್ಲಾ. ಇದರಲ್ಲಿ ಡಿ.ಕೆ.ಶಿ ಕೈವಾಡವನ್ನು ಅಲ್ಲಗಳೆಯಲಾಗುತ್ತಿಲ್ಲವಲ್ಲಾ, ಥೂತ್ತೇರಿ.

*******

ಪಂಚರತ್ನ ಮುಂದಿಟ್ಟುಕೊಂಡು ಇಡೀ ಕರ್ನಾಟಕವನ್ನು ಸುತ್ತಿ ಬಂದ ಕುಮಾರಣ್ಣನ ಪಾರ್ಟಿ ವಿಧಾನಸಭೆಯಲ್ಲಿ ನಿಗದಿತ ಸಂಖ್ಯೆಯ ಮಾನ್ಯತೆ ಕಳೆದುಕೊಂಡು ತನ್ನ ಕುಮಾರಣ್ಣನ ಪಕ್ಷ ವಿಸರ್ಜನೆ ಘೋಷಣೆಗೆ ಕಾಯುತ್ತಿದೆಯಂತಲ್ಲಾ. ಹಾಗೇ ನೋಡಿದರೆ ಬಿಜೆಪಿಯಂತೆ ದಳ ಕೂಡ ಎಂದೂ ಮೆಜಾರಿಟಿ ಪಡೆಯದ ಪಾರ್ಟಿ; ಇದು ಗೊತ್ತಿದ್ದರಿಂದಲೇ ಕುಮಾರಣ್ಣ ನನ್ನ ಪಾರ್ಟಿಗೆ ಬಹುಮತ ಬರದಿದ್ದರೆ ವಿಸರ್ಜಿಸುತ್ತೇನೆ ಎಂದಿದ್ದು ಸಾಮಾಜಿಕ ಮಾಧ್ಯಮಗಳ ಲ್ಲಿ ಹರಿದಾಡಿತ್ತು. ಹಾಗೆ ನೋಡಿದರೆ ಕುಮಾರಣ್ಣನ ಪಾರ್ಟಿ ತನಗೆ ತಾನೇ ವಿಸರ್ಜಿಸಿಕೊಳ್ಳುತ್ತ ಹೊರಟು ಶಾನೆ ವರ್ಷವಾಯ್ತು. ಮೊದಲಿಗೆ ಜಿ.ಟಿ.ದೇವೇಗೌಡರು ಹೊರನಡೆದು ಕಾಂಗ್ರೆಸ್ ಮನೆಯ ಬಾಗಿಲಿಗೆ ಹೋಗಿ ಮತ್ತೆ ವಾಪಸ್ ಬಂದರು; ನಂತರ ಹಲವಾರು ಜನ ಹೊರನಡೆದೇಬಿಟ್ಟರು. ಪಾರ್ಟಿ ಅಧ್ಯಕ್ಷನಾದವನು ಜವಾಬ್ದಾರಿಯಿಂದ ನಡೆದುಕೊಂಡು, ಎಲ್ಲರನ್ನು ತನ್ನ ತೆಕ್ಕೆಗೆ ತೆಗೆದುಕೊಂಡು, ಅಸಮಾಧಾನಗೊಂಡವರನ್ನ ಸಾಂತ್ವನಗೊಳಿಸುತ್ತ ಸಣ್ಣತನಗಳನ್ನು ಮೀರುತ್ತ ಪಾರ್ಟಿ ಕಾರ್ಯಕರ್ತರ ರಕ್ಷಕನಾಗಿರಬೇಕು. ಮುಖಂಡನಲ್ಲಿ ಈ ಗುಣಗಳಿಲ್ಲದಿದ್ದರೆ ಹಿಂಬಾಲಕರು ಒಂದೊಂದು ಹಂತದಲ್ಲಿ ಖಾಲಿಯಾಗುತ್ತಾರೆ. ಕುಮಾರಣ್ಣನ ಪಂಚರತ್ನಕ್ಕಿಂತ ಪಾರ್ಟಿ ಮುಖಂಡರು ಮುಖ್ಯವಾಗಬೇಕಿತ್ತು. ಐದು ವರ್ಷ ದುರಾಡಳಿತ ನಡೆಸಿದವರನ್ನು ಬಿಟ್ಟು ಕಾಂಗ್ರೆಸ್ ಟೀಕಿಸುವುದು ಮುಖ್ಯವಾಗಬಾರದಿತ್ತು. ನಿಜಕ್ಕೂ ದಳದಂತಹ ಪಾರ್ಟಿ ಇರಬೇಕು. ಅದು ಇದ್ದು ಬಿಜೆಪಿಯನ್ನ ಕಾಂಗ್ರೆಸ್ಸನ್ನ ನಿಯಂತ್ರಿಸಬೇಕು. ಆ ಎರಡೂ ಪಾರ್ಟಿಗಳಿಗಿಂತ ಜವಾಬ್ದಾರಿಯಿಂದ ವರ್ತಿಸಬೇಕಾಗಿದೆಯಲ್ಲಾ, ಇದು ಸಾಧ್ಯವೇ ಥೂತ್ತೇರಿ.

*****

ಕರ್ನಾಟಕದ ಜನಸ್ತೋಮಕ್ಕೆ ಬೇಕಿದ್ದ ಒಂದು ಚುನಾವಣಾ ಸೋಲು ಕಡೆಗೂ ಸಂಭವಿಸಿ ಜನ ನಿಟ್ಟುಸಿರುಬಿಟ್ಟರಂತಲ್ಲಾ. ಜನಕ್ಕೆ ಬೇಕಿದ್ದ ಆ ಸೋತ ವ್ಯಕ್ತಿ ಸಿ.ಟಿ ರವಿ. ತನ್ನ ಸೋಲನ್ನು ಇನ್ನೂ ನಂಬದ ಸಿ.ಟಿ ರವಿಯವರನ್ನು ಮಾತನಾಡಿಸಿ ಒಂದಿಷ್ಟು ಮನರಂಜನೆ ತೆಗೆದುಕೊಳ್ಳಲು ಫೋನ್ ಮಾಡಿದರೆ, ರಿಂಗಾಯ್ತು. ರಿಂಗ್‌ಟೋನ್: ’ನಮಸ್ತೆ ಸದಾ ವತ್ಸಲೇ ಮಾತೃಭೂಮಿ..’.

“ಹಲೋ ಯಾರು?”

“ನಾನು ಸಾರ್ ಯಾಹೂ.”

“ಯಾಹೂ ಅಂದ್ರೆ ಯಾರ್ರಿ?”

“ಇದೇನ್ ಸಾರ್ ಹಿಂಗ್ ಕೇಳ್ತಿರಿ? ನೀವೆ ಒಂದು ಸತಿ ಕಲಾಮಂದಿದರಲ್ಲಿ ಸನ್ಮಾನ ಮಾಡಿದ್ರಿ..”

“ಆಗ್ಲೆ ಇಪ್ಪತ್ತು ವರ್ಷ ಆಯ್ತಲ್ರೀ?”

“ಹೌದು ಸಾರ್, ಆಗ ನೀವು ವಳ್ಳೆಯವರಾಗಿದ್ರಿ.”

“ಆಗ ಒಳ್ಳೆಯವನಾಗಿದ್ದೆ ಅಂದ್ರೆ ಈಗ ಕೆಟ್ಟೊಗಿದ್ದಿನಾ?”

“ಹೌದು ಸಾರ್, ನೀವು ಈಗ ಒಳ್ಳೆಯವರಾಗಿದ್ರೆ, ಚಿಕ್ಕಮಗಳೂರಿನ ನೀರಿನ ವಿಷಯ ಮಾತಾಡಿ, ಕರಗಡದ ಸಮಸ್ಯೆ ಬಗೆಹರಸತಿದ್ರಿ. ಅದುಬಿಟ್ಟು ಬಾಬಾ ಬುಡನ್‌ಗಿರಿ ಹಿಡಕಂಡ್ರಿ.”

ಇದನ್ನೂ ಓದಿ: ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

“ಬಾಬಾ ಬುಡನ್‌ಗಿರಿ ಹಿಡಕೊಂಡು ದತ್ತಪೀಠ ಮಾಡಿದ್ಕೆ ನಾನು ನಾಲ್ಕು ಸಾರಿ ಗೆದ್ದದ್ದು.”

“ಈಗ್ಯಾಕೆ ಸೋತ್ರಿ ಸಾರ್?”

“ನಮ್ಮವರೆ ವಿಶ್ವಾಸ ದ್ರೋಹ ಮಾಡಿದ್ರು?”

“ನೀವು ವಿಶ್ವಾಸ ಕಳಕೊಂಡ ಮ್ಯಾಲೆ ಅವುರು ದ್ರೋಹ ಮಾಡದು ಸಹಜ ಅಲ್ಲವಾ?”

“ನಾನು ಯಾರ ವಿಶ್ವಾಸವನ್ನು ಕಳಕೊಂಡಿಲ್ಲ. ಸಮರ್ಥ ರೀತಿಲಿ ಆಡಳಿತ ಮಾಡಿದ್ದಿವಿ. ನಮ್ಮದು ಒಳ್ಳೆ ಸರಕಾರ ಗೊತ್ತ?”

“ನನಿಗಾಗೊ ಆಶ್ಚರ್ಯ ಯಾವುದು ಅಂದ್ರೆ ಸಾರ್.. ನಿಮ್ಮ ಸರಕಾರ ಸಮಾಜಘಾತುಕ ಶಕ್ತಿತರ ಕೆಲಸ ಮಾಡ್ತು. ಅದೆಲ್ಲ ನಿಮಗೆ ಒಳ್ಳೆದಾಗಿ ಕಾಣ್ತದಲ್ಲಾ ಅದೇ ದುರಂತ. ಒಂದು ತಪ್ಪು ತಪ್ಪಾಗಿ ಕಾಣದೆ ನಿಮಗೆಲ್ಲ ಸರಿಯಾಗಿ ಕಾಣ್ತದೆ ಅಂದ್ರೆ ಒಂದು ಪಾರ್ಟಿ ಜನಕ್ಕೆ ಏನೋ ಆಗಿ ಕಾಣ್ಸಿದೆ ಅನ್ಸುತ್ತೆ ಸಾರ್.”

“ನಮಗೇನೂ ಆಗಿಲ್ಲ, ನಿಮ್ಮ ಪೂರ್ವಗ್ರಹನ ಸರಿಮಾಡಿಕಳಿ.”

“ನಿಮ್ಮ ಬಗ್ಗೆ ಯಾವ ಪೂರ್ವಗ್ರಹದ ಅಗತ್ಯ ಇಲ್ಲ. ಸಾರ್ ನಿಮ್ಮ ಪಾರ್ಟಿ ಕೃತ್ಯಗಳೇ ಅಂಗಿದ್ದೊ.”

“ನಾವು ಕಾಂಗ್ರೆಸ್ಸಿಗರಿಗಿಂತ ಒಳ್ಳೆ ಆಡಳಿತ ಕೊಟ್ಟಿದ್ದಿವಿ.”

“ನಿಜ ಸಾರ್, ಆ ಕಾಂಗ್ರೆಸ್‌ನವು ಎಂದೂ ನಲವತ್ತು ಪರಸೆಂಟ್ ತಗೊಂಡಿರಲಿಲ್ಲ, ಆ ಕಾರಣಕ್ಕೆ ಯಾವ ಮಂತ್ರಿನೂ ರಾಜಿನಾಮೆ ಕೊಟ್ಟು ಟಿಕೆಟ್ ಇಲ್ದೆ ಮನಿಗೋಗಿರಲಿಲ್ಲ. ಸಿಕ್ಕಿದ್ದೆ ಅವಕಾಶ ಅಂತ ಪಠ್ಯಪುಸ್ತಕ ತಿದ್ದಿ ಪುರೋಹಿತರ ಅಜೆಂಡ ಸೇರಿಸಿರಲಿಲ್ಲ. ಕುವೆಂಪುಗೆ ಅವಮಾನ ಮಾಡಿದಾಗ್ಲು ನೀವು ಸುಮ್ಮನಿದ್ರಿ. ಆಡತಯಿದ್ದ ನಾಟಕ ನಿಲ್ಲಿಸಿದ್ರಿ, ಟಿಪ್ಪುವನ್ನ ವಿಕೃತವಾಗಿ ಚಿತ್ರಿಸಿ ನಾಟಕ ಆಡಿದ್ರಿ, ಅದನ್ನ ಟೀಕೆ ಮಾಡಿದ ಸಿದ್ದರಾಮಯ್ಯನವರನ್ನ “ಸಿದ್ರಾಮುಲ್ಲಖಾನ್” ಅಂತ ಕರದ್ರಿ. ಮಹಿಳೆಯರ ಬಗ್ಗೆ ನಿಮ್ಮಲ್ಲಿ ಎಂಥ ಬಾವುನೆ ಅದೆ ಅನ್ನದ ಹೇಳೋದೆ ಬೇಕಿಲ್ಲ. ಸೋಮಣ್ಣ ಪಾಪ ಬಡ ಹೆಂಗಸಿಗೆ ಸಾರ್ವಜನಿಕವಾಗಿ ಹೊಡೆದು, ಆಮೇಲೆ ಆ ಹೆಂಗಸಿಗೆ ದುಡ್ಡುಕೊಟ್ಟರು. ಸೋಮಣ್ಣ ಹೊಡಿಲಿಲ್ಲ, ತಮಾಸಿಗೆ ಭುಜ ತಟ್ಟಿದ್ದು ಅಂತ ಹೇಳಿಸಿದ್ರಿ. ನಿಮ್ಮ ಇಡೀ ಪಾರ್ಟಿ ಜನ ಒಂದೇ ಒಂದು ಒಳ್ಳೆ ಮಾತಾಡಲಿಲ್ಲ. ನಿಮ್ಮ ಸರಕಾರ ಒಂದೇ ಒಂದು ಜನ ಮೆಚ್ಚುವ ಕೆಲಸ ಮಾಡಲಿಲ್ಲ. ಜಾತಿ ಜಗಳ ಮಾಡಿಸಿದ್ರಿ. ಮುಸಲ್ಮಾನರ ಮೇಲೆ ಬಿದ್ದು ಗಲಭೆ ಮಾಡಿಸಿದ್ರಿ. ಸುಳ್ಳು ಕೇಸಾಕ್ಸಿದ್ರಿ. ಇಡೀ ನಾಡೆ ಒಂದು ಅವ್ಯಕ್ತ ಭಯದಲ್ಲಿ ಕ್ಷೆಭೆಗೊಳಗಾಗಿತ್ತು. ನಿಮ್ಮಂಥ ಜವಾಬ್ದಾರಿಯಿರೊ ಯುವ ನಾಯಕರು ಪುರೋಹಿತಶಾಹಿಗಳ ಗುಲಾಮರಾಗಿದ್ರಿ. ಬಹಳ ವಿಶಾಲವಾದ ಮನಸ್ಸಿನ ಪರಂಪರೆಯಿಂದ ಬಂದ ನಿಮಗೆ ಆರೆಸ್ಸೆಸ್ ಆಶ್ರಯದ ಅಗತ್ಯ ಇರಲಿಲ್ಲ. ಚಿಕ್ಕಮಗಳೂರು ಬ್ರಿಟಿಷರು ಕೂಡ ಮೆಚ್ಚಿದ ಸುಂದರ ನಾಡು. ಅಲ್ಲಿ ಇಂಗ್ಲೆಂಡಿನಿಂದ, ಜರ್ಮನಿಯಿಂದ ಬಂದು ತೋಟ ಮಾಡಿದೋರವುರೆ, ಮದ್ರಾಸಿನಿಂದ ಬಂದು ತೋಟ ಮಾಡಿದೋರವುರೆ. ಹಿಂಗೆ ಜಗತ್ತಿಗೇ ತೆರೆಕೊಂಡ ಚಿಕ್ಕಮಗಳೂರಿಗೆ ಪುರೋಹಿತಶಾಹಿ ತರಹ ಮಾತನಾಡೊ ರಾಜಕಾರಣಿ ಬೇಕಿಲ್ಲ ಅಂತ ಜನಕ್ಕೆ ಅನ್ನಿಸಿ ನಿಮ್ಮನ್ನ ಸೋಲಿಸಿದ್ರು ಸಾರ್. ನಿಮ್ಮ ಸೋಲಿನ ಕಾರಣಗಳು ಯಾವ ಕಾರಣಕ್ಕೂ ನಿಮಗೆ ಹೊಳಿಯಲ್ಲ. ಯಾಕೆ ಅಂದ್ರೆ ನಿಮ್ಮ ಕಣ್ಣಿಗೆ ಪೊರೆಯಾಗಿವೆ. ನೀವು ಇನ್ನೊಂದು ದಾಖಲೆ ಮಾಡಿದ್ದೀರಿ ಸಾರ್. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಲ್ಕುಳಿ ವಿಠ್ಠಲ ಹೆಗಡೆಯವರನ್ನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನನ್ನಾಗಿ ಮಾಡ್ತು. ಆತ ಸಾಮಾನ್ಯ ವ್ಯಕ್ತಿಯೇನಲ್ಲ. ಆತ ಬರದಿರೊ ’ಮಂಗನಬ್ಯಾಟೆ’ಗೆ ಅಕಾಡೆಮಿ ಅವಾರ್ಡು ಬಂದಿದೆ. ಹೆಗಡೆ ನಿಮಗಾಗಲ್ಲ ಅಂತ ಹೇಳಿ ಸಾಹಿತ್ಯ ಸಮ್ಮೇಳನ ನ್ಯಡಿದಂಗೆ ಮಾಡಿದ್ರಿ. ಸಮ್ಮೇಳನದ ಜಾಗಕ್ಕೆ ಭಜರಂಗಿಗಳು ಬಂದು ಬಾಯಿ ಹರಕೊಂಡು ಸಮ್ಮೇಳನ ನಿಲ್ಲಿಸಿದ್ರು. ಇದು ಇತಿಹಾಸದಲ್ಲಿ ದಾಖಲಾದ ಅಭಿವ್ಯಕ್ತಿ ಸ್ವಾತಂತ್ರ ಹರಣದ ಘಟನೆ. ಕನ್ನಡ ಸಾಹಿತ್ಯಕ್ಕೆ ನೀವು ಮಾಡಿದ ಅವಮಾನ. ಭುವನೇಶ್ವರಿಗೆ ಮಾಡಿದ ದ್ರೋಹ. ದೂರದ ಊರುಗಳಿಂದ ಬಂದ ಸಾಹಿತಿಗಳು ನಿಮ್ಮನ್ನ ನಿಂದಿಸುತ್ತಾ ಇದೊಂದು ಅನಾಗರಿಕ ನಡೆ, ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ, ಕನ್ನಡ ಸಾಹಿತ್ಯ ಪರಿಷತ್ ಕಟ್ಟಿ ಬೆಳೆಸಿದವರಿಗೆ ಮಾಡಿದ ಅವಮಾನ, ಇದೇ ಜಿಲ್ಲೆಯ ಹಿರೇಕೂಡಿಗೆಯಲ್ಲಿ ಹುಟ್ಟಿದ ಕುವೆಂಪುಗೆ ಮಾಡಿದ ಅವಮಾನ ಅಂತ ಬೈಕಂಡೋದ್ರು ಸಾರ್. ಮಾತಾಡಿ ಸಾರ್ ಹೇಳಿ ಏನಾರ. ಹಲೋ. ಹಲೋ. ಹಲೋ”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...