Homeಅಂಕಣಗಳುಚಿಕ್ಕಮಗಳೂರು ಜನಕ್ಕೆ ಈ ಸೋಲು ಬೇಕಿತ್ತು ಸಾರ್!

ಚಿಕ್ಕಮಗಳೂರು ಜನಕ್ಕೆ ಈ ಸೋಲು ಬೇಕಿತ್ತು ಸಾರ್!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪ್ರಮಾಣವಚನ ತೆಗೆದುಕೊಂಡ ಸಿದ್ದು ಅವರ ಲಕ್ಕಿನಲ್ಲಿ ಎಡೂರಪ್ಪನವರ ಪಾಲು ಪ್ರಧಾನವಾಗಿದೆಯಂತಲ್ಲಾ. ಮೊದಲು ಸಿದ್ದು ಮುಖ್ಯಮಂತ್ರಿಯಾಗಬೇಕಾದರೆ, ಎಡೂರಪ್ಪ ಬಿಜೆಪಿ ವಿರುದ್ಧ ಸಿಡಿದೆದ್ದು ಕೆಜೆಪಿ ಮಾಡಿ ಚುನಾವಣೆಗಿಳಿದು ಬಿಜೆಪಿಯನ್ನು ಕೇವಲ ನಲವತ್ತು ಸೀಟಿಗೆ ಇಳಿಸಿದ್ದು ಕಾರಣವಾದರೆ, ಈ ಸಾರ್ತಿಗೆ, ದಾರಿ ಇನ್ನು ಇರುವಾಗಲೇ ಮಾರ್ಗಮಧ್ಯದಲ್ಲಿ ಯಡ್ಡಿಯವರನ್ನು ಇಳಿಸಿ ಕಣ್ಣೀರು ತರಿಸಿದ್ದರ ಜೊತೆಗೆ, ಬಿಜೆಪಿಯಲ್ಲಿದ್ದರೂ ಬಾಯಿ ಸ್ವಚ್ಛವಾಗಿಟ್ಟುಕೊಂಡಿದ್ದ ಜಗದೀಶ್ ಶೆಟ್ಟರ್ ಅವರಿಗೆ ಮಾಡಿದ ಅವಮಾನವೂ ಕಾರಣವಾಗಿದೆಯಂತಲ್ಲಾ. ಆದರೆ ಬುದ್ಧಿವಂತ ಸಿದ್ದು ಅವರು ಯಡ್ಡಿಯವರ ದೆಸೆಯಿಂದ ತಮ್ಮ ದೆಸೆ ಕುದುರಿದ್ದದನ್ನು ಎಲ್ಲೂ ಹೇಳಿಕೊಂಡಿಲ್ಲ. ಆದರೂ ಮನದೊಳಗೇ ಒಂದು ಕೃತಜ್ಞತೆಯಿದೆ. ಅದೇ ಕಾರಣಕ್ಕೆ ಏನೋ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನಗೌಡನಿಗೆ ಟಿಕೆಟ್ ತಪ್ಪಿಸಿ ಗೋಣಿಮಾಲತೇಶರನ್ನ ಕ್ಯಾಂಡಿಡೇಟ್ ಮಾಡಿ, ಎಡೂರಪ್ಪನವರ ಮಗನಿಗೆ ಸಹಾಯ ಮಾಡಿದ್ದಾರೆಂದು ಜನರು ಹೇಳುತ್ತಿದ್ದಾರಂತಲ್ಲಾ. ಇದರಲ್ಲಿ ಡಿ.ಕೆ.ಶಿ ಕೈವಾಡವನ್ನು ಅಲ್ಲಗಳೆಯಲಾಗುತ್ತಿಲ್ಲವಲ್ಲಾ, ಥೂತ್ತೇರಿ.

*******

ಪಂಚರತ್ನ ಮುಂದಿಟ್ಟುಕೊಂಡು ಇಡೀ ಕರ್ನಾಟಕವನ್ನು ಸುತ್ತಿ ಬಂದ ಕುಮಾರಣ್ಣನ ಪಾರ್ಟಿ ವಿಧಾನಸಭೆಯಲ್ಲಿ ನಿಗದಿತ ಸಂಖ್ಯೆಯ ಮಾನ್ಯತೆ ಕಳೆದುಕೊಂಡು ತನ್ನ ಕುಮಾರಣ್ಣನ ಪಕ್ಷ ವಿಸರ್ಜನೆ ಘೋಷಣೆಗೆ ಕಾಯುತ್ತಿದೆಯಂತಲ್ಲಾ. ಹಾಗೇ ನೋಡಿದರೆ ಬಿಜೆಪಿಯಂತೆ ದಳ ಕೂಡ ಎಂದೂ ಮೆಜಾರಿಟಿ ಪಡೆಯದ ಪಾರ್ಟಿ; ಇದು ಗೊತ್ತಿದ್ದರಿಂದಲೇ ಕುಮಾರಣ್ಣ ನನ್ನ ಪಾರ್ಟಿಗೆ ಬಹುಮತ ಬರದಿದ್ದರೆ ವಿಸರ್ಜಿಸುತ್ತೇನೆ ಎಂದಿದ್ದು ಸಾಮಾಜಿಕ ಮಾಧ್ಯಮಗಳ ಲ್ಲಿ ಹರಿದಾಡಿತ್ತು. ಹಾಗೆ ನೋಡಿದರೆ ಕುಮಾರಣ್ಣನ ಪಾರ್ಟಿ ತನಗೆ ತಾನೇ ವಿಸರ್ಜಿಸಿಕೊಳ್ಳುತ್ತ ಹೊರಟು ಶಾನೆ ವರ್ಷವಾಯ್ತು. ಮೊದಲಿಗೆ ಜಿ.ಟಿ.ದೇವೇಗೌಡರು ಹೊರನಡೆದು ಕಾಂಗ್ರೆಸ್ ಮನೆಯ ಬಾಗಿಲಿಗೆ ಹೋಗಿ ಮತ್ತೆ ವಾಪಸ್ ಬಂದರು; ನಂತರ ಹಲವಾರು ಜನ ಹೊರನಡೆದೇಬಿಟ್ಟರು. ಪಾರ್ಟಿ ಅಧ್ಯಕ್ಷನಾದವನು ಜವಾಬ್ದಾರಿಯಿಂದ ನಡೆದುಕೊಂಡು, ಎಲ್ಲರನ್ನು ತನ್ನ ತೆಕ್ಕೆಗೆ ತೆಗೆದುಕೊಂಡು, ಅಸಮಾಧಾನಗೊಂಡವರನ್ನ ಸಾಂತ್ವನಗೊಳಿಸುತ್ತ ಸಣ್ಣತನಗಳನ್ನು ಮೀರುತ್ತ ಪಾರ್ಟಿ ಕಾರ್ಯಕರ್ತರ ರಕ್ಷಕನಾಗಿರಬೇಕು. ಮುಖಂಡನಲ್ಲಿ ಈ ಗುಣಗಳಿಲ್ಲದಿದ್ದರೆ ಹಿಂಬಾಲಕರು ಒಂದೊಂದು ಹಂತದಲ್ಲಿ ಖಾಲಿಯಾಗುತ್ತಾರೆ. ಕುಮಾರಣ್ಣನ ಪಂಚರತ್ನಕ್ಕಿಂತ ಪಾರ್ಟಿ ಮುಖಂಡರು ಮುಖ್ಯವಾಗಬೇಕಿತ್ತು. ಐದು ವರ್ಷ ದುರಾಡಳಿತ ನಡೆಸಿದವರನ್ನು ಬಿಟ್ಟು ಕಾಂಗ್ರೆಸ್ ಟೀಕಿಸುವುದು ಮುಖ್ಯವಾಗಬಾರದಿತ್ತು. ನಿಜಕ್ಕೂ ದಳದಂತಹ ಪಾರ್ಟಿ ಇರಬೇಕು. ಅದು ಇದ್ದು ಬಿಜೆಪಿಯನ್ನ ಕಾಂಗ್ರೆಸ್ಸನ್ನ ನಿಯಂತ್ರಿಸಬೇಕು. ಆ ಎರಡೂ ಪಾರ್ಟಿಗಳಿಗಿಂತ ಜವಾಬ್ದಾರಿಯಿಂದ ವರ್ತಿಸಬೇಕಾಗಿದೆಯಲ್ಲಾ, ಇದು ಸಾಧ್ಯವೇ ಥೂತ್ತೇರಿ.

*****

ಕರ್ನಾಟಕದ ಜನಸ್ತೋಮಕ್ಕೆ ಬೇಕಿದ್ದ ಒಂದು ಚುನಾವಣಾ ಸೋಲು ಕಡೆಗೂ ಸಂಭವಿಸಿ ಜನ ನಿಟ್ಟುಸಿರುಬಿಟ್ಟರಂತಲ್ಲಾ. ಜನಕ್ಕೆ ಬೇಕಿದ್ದ ಆ ಸೋತ ವ್ಯಕ್ತಿ ಸಿ.ಟಿ ರವಿ. ತನ್ನ ಸೋಲನ್ನು ಇನ್ನೂ ನಂಬದ ಸಿ.ಟಿ ರವಿಯವರನ್ನು ಮಾತನಾಡಿಸಿ ಒಂದಿಷ್ಟು ಮನರಂಜನೆ ತೆಗೆದುಕೊಳ್ಳಲು ಫೋನ್ ಮಾಡಿದರೆ, ರಿಂಗಾಯ್ತು. ರಿಂಗ್‌ಟೋನ್: ’ನಮಸ್ತೆ ಸದಾ ವತ್ಸಲೇ ಮಾತೃಭೂಮಿ..’.

“ಹಲೋ ಯಾರು?”

“ನಾನು ಸಾರ್ ಯಾಹೂ.”

“ಯಾಹೂ ಅಂದ್ರೆ ಯಾರ್ರಿ?”

“ಇದೇನ್ ಸಾರ್ ಹಿಂಗ್ ಕೇಳ್ತಿರಿ? ನೀವೆ ಒಂದು ಸತಿ ಕಲಾಮಂದಿದರಲ್ಲಿ ಸನ್ಮಾನ ಮಾಡಿದ್ರಿ..”

“ಆಗ್ಲೆ ಇಪ್ಪತ್ತು ವರ್ಷ ಆಯ್ತಲ್ರೀ?”

“ಹೌದು ಸಾರ್, ಆಗ ನೀವು ವಳ್ಳೆಯವರಾಗಿದ್ರಿ.”

“ಆಗ ಒಳ್ಳೆಯವನಾಗಿದ್ದೆ ಅಂದ್ರೆ ಈಗ ಕೆಟ್ಟೊಗಿದ್ದಿನಾ?”

“ಹೌದು ಸಾರ್, ನೀವು ಈಗ ಒಳ್ಳೆಯವರಾಗಿದ್ರೆ, ಚಿಕ್ಕಮಗಳೂರಿನ ನೀರಿನ ವಿಷಯ ಮಾತಾಡಿ, ಕರಗಡದ ಸಮಸ್ಯೆ ಬಗೆಹರಸತಿದ್ರಿ. ಅದುಬಿಟ್ಟು ಬಾಬಾ ಬುಡನ್‌ಗಿರಿ ಹಿಡಕಂಡ್ರಿ.”

ಇದನ್ನೂ ಓದಿ: ಬಿಜೆಪಿ ಯಂಗೆ ಚೊಕ್ಕ ಮಾಡಿವಿ ನೋಡಿ!

“ಬಾಬಾ ಬುಡನ್‌ಗಿರಿ ಹಿಡಕೊಂಡು ದತ್ತಪೀಠ ಮಾಡಿದ್ಕೆ ನಾನು ನಾಲ್ಕು ಸಾರಿ ಗೆದ್ದದ್ದು.”

“ಈಗ್ಯಾಕೆ ಸೋತ್ರಿ ಸಾರ್?”

“ನಮ್ಮವರೆ ವಿಶ್ವಾಸ ದ್ರೋಹ ಮಾಡಿದ್ರು?”

“ನೀವು ವಿಶ್ವಾಸ ಕಳಕೊಂಡ ಮ್ಯಾಲೆ ಅವುರು ದ್ರೋಹ ಮಾಡದು ಸಹಜ ಅಲ್ಲವಾ?”

“ನಾನು ಯಾರ ವಿಶ್ವಾಸವನ್ನು ಕಳಕೊಂಡಿಲ್ಲ. ಸಮರ್ಥ ರೀತಿಲಿ ಆಡಳಿತ ಮಾಡಿದ್ದಿವಿ. ನಮ್ಮದು ಒಳ್ಳೆ ಸರಕಾರ ಗೊತ್ತ?”

“ನನಿಗಾಗೊ ಆಶ್ಚರ್ಯ ಯಾವುದು ಅಂದ್ರೆ ಸಾರ್.. ನಿಮ್ಮ ಸರಕಾರ ಸಮಾಜಘಾತುಕ ಶಕ್ತಿತರ ಕೆಲಸ ಮಾಡ್ತು. ಅದೆಲ್ಲ ನಿಮಗೆ ಒಳ್ಳೆದಾಗಿ ಕಾಣ್ತದಲ್ಲಾ ಅದೇ ದುರಂತ. ಒಂದು ತಪ್ಪು ತಪ್ಪಾಗಿ ಕಾಣದೆ ನಿಮಗೆಲ್ಲ ಸರಿಯಾಗಿ ಕಾಣ್ತದೆ ಅಂದ್ರೆ ಒಂದು ಪಾರ್ಟಿ ಜನಕ್ಕೆ ಏನೋ ಆಗಿ ಕಾಣ್ಸಿದೆ ಅನ್ಸುತ್ತೆ ಸಾರ್.”

“ನಮಗೇನೂ ಆಗಿಲ್ಲ, ನಿಮ್ಮ ಪೂರ್ವಗ್ರಹನ ಸರಿಮಾಡಿಕಳಿ.”

“ನಿಮ್ಮ ಬಗ್ಗೆ ಯಾವ ಪೂರ್ವಗ್ರಹದ ಅಗತ್ಯ ಇಲ್ಲ. ಸಾರ್ ನಿಮ್ಮ ಪಾರ್ಟಿ ಕೃತ್ಯಗಳೇ ಅಂಗಿದ್ದೊ.”

“ನಾವು ಕಾಂಗ್ರೆಸ್ಸಿಗರಿಗಿಂತ ಒಳ್ಳೆ ಆಡಳಿತ ಕೊಟ್ಟಿದ್ದಿವಿ.”

“ನಿಜ ಸಾರ್, ಆ ಕಾಂಗ್ರೆಸ್‌ನವು ಎಂದೂ ನಲವತ್ತು ಪರಸೆಂಟ್ ತಗೊಂಡಿರಲಿಲ್ಲ, ಆ ಕಾರಣಕ್ಕೆ ಯಾವ ಮಂತ್ರಿನೂ ರಾಜಿನಾಮೆ ಕೊಟ್ಟು ಟಿಕೆಟ್ ಇಲ್ದೆ ಮನಿಗೋಗಿರಲಿಲ್ಲ. ಸಿಕ್ಕಿದ್ದೆ ಅವಕಾಶ ಅಂತ ಪಠ್ಯಪುಸ್ತಕ ತಿದ್ದಿ ಪುರೋಹಿತರ ಅಜೆಂಡ ಸೇರಿಸಿರಲಿಲ್ಲ. ಕುವೆಂಪುಗೆ ಅವಮಾನ ಮಾಡಿದಾಗ್ಲು ನೀವು ಸುಮ್ಮನಿದ್ರಿ. ಆಡತಯಿದ್ದ ನಾಟಕ ನಿಲ್ಲಿಸಿದ್ರಿ, ಟಿಪ್ಪುವನ್ನ ವಿಕೃತವಾಗಿ ಚಿತ್ರಿಸಿ ನಾಟಕ ಆಡಿದ್ರಿ, ಅದನ್ನ ಟೀಕೆ ಮಾಡಿದ ಸಿದ್ದರಾಮಯ್ಯನವರನ್ನ “ಸಿದ್ರಾಮುಲ್ಲಖಾನ್” ಅಂತ ಕರದ್ರಿ. ಮಹಿಳೆಯರ ಬಗ್ಗೆ ನಿಮ್ಮಲ್ಲಿ ಎಂಥ ಬಾವುನೆ ಅದೆ ಅನ್ನದ ಹೇಳೋದೆ ಬೇಕಿಲ್ಲ. ಸೋಮಣ್ಣ ಪಾಪ ಬಡ ಹೆಂಗಸಿಗೆ ಸಾರ್ವಜನಿಕವಾಗಿ ಹೊಡೆದು, ಆಮೇಲೆ ಆ ಹೆಂಗಸಿಗೆ ದುಡ್ಡುಕೊಟ್ಟರು. ಸೋಮಣ್ಣ ಹೊಡಿಲಿಲ್ಲ, ತಮಾಸಿಗೆ ಭುಜ ತಟ್ಟಿದ್ದು ಅಂತ ಹೇಳಿಸಿದ್ರಿ. ನಿಮ್ಮ ಇಡೀ ಪಾರ್ಟಿ ಜನ ಒಂದೇ ಒಂದು ಒಳ್ಳೆ ಮಾತಾಡಲಿಲ್ಲ. ನಿಮ್ಮ ಸರಕಾರ ಒಂದೇ ಒಂದು ಜನ ಮೆಚ್ಚುವ ಕೆಲಸ ಮಾಡಲಿಲ್ಲ. ಜಾತಿ ಜಗಳ ಮಾಡಿಸಿದ್ರಿ. ಮುಸಲ್ಮಾನರ ಮೇಲೆ ಬಿದ್ದು ಗಲಭೆ ಮಾಡಿಸಿದ್ರಿ. ಸುಳ್ಳು ಕೇಸಾಕ್ಸಿದ್ರಿ. ಇಡೀ ನಾಡೆ ಒಂದು ಅವ್ಯಕ್ತ ಭಯದಲ್ಲಿ ಕ್ಷೆಭೆಗೊಳಗಾಗಿತ್ತು. ನಿಮ್ಮಂಥ ಜವಾಬ್ದಾರಿಯಿರೊ ಯುವ ನಾಯಕರು ಪುರೋಹಿತಶಾಹಿಗಳ ಗುಲಾಮರಾಗಿದ್ರಿ. ಬಹಳ ವಿಶಾಲವಾದ ಮನಸ್ಸಿನ ಪರಂಪರೆಯಿಂದ ಬಂದ ನಿಮಗೆ ಆರೆಸ್ಸೆಸ್ ಆಶ್ರಯದ ಅಗತ್ಯ ಇರಲಿಲ್ಲ. ಚಿಕ್ಕಮಗಳೂರು ಬ್ರಿಟಿಷರು ಕೂಡ ಮೆಚ್ಚಿದ ಸುಂದರ ನಾಡು. ಅಲ್ಲಿ ಇಂಗ್ಲೆಂಡಿನಿಂದ, ಜರ್ಮನಿಯಿಂದ ಬಂದು ತೋಟ ಮಾಡಿದೋರವುರೆ, ಮದ್ರಾಸಿನಿಂದ ಬಂದು ತೋಟ ಮಾಡಿದೋರವುರೆ. ಹಿಂಗೆ ಜಗತ್ತಿಗೇ ತೆರೆಕೊಂಡ ಚಿಕ್ಕಮಗಳೂರಿಗೆ ಪುರೋಹಿತಶಾಹಿ ತರಹ ಮಾತನಾಡೊ ರಾಜಕಾರಣಿ ಬೇಕಿಲ್ಲ ಅಂತ ಜನಕ್ಕೆ ಅನ್ನಿಸಿ ನಿಮ್ಮನ್ನ ಸೋಲಿಸಿದ್ರು ಸಾರ್. ನಿಮ್ಮ ಸೋಲಿನ ಕಾರಣಗಳು ಯಾವ ಕಾರಣಕ್ಕೂ ನಿಮಗೆ ಹೊಳಿಯಲ್ಲ. ಯಾಕೆ ಅಂದ್ರೆ ನಿಮ್ಮ ಕಣ್ಣಿಗೆ ಪೊರೆಯಾಗಿವೆ. ನೀವು ಇನ್ನೊಂದು ದಾಖಲೆ ಮಾಡಿದ್ದೀರಿ ಸಾರ್. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಲ್ಕುಳಿ ವಿಠ್ಠಲ ಹೆಗಡೆಯವರನ್ನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನನ್ನಾಗಿ ಮಾಡ್ತು. ಆತ ಸಾಮಾನ್ಯ ವ್ಯಕ್ತಿಯೇನಲ್ಲ. ಆತ ಬರದಿರೊ ’ಮಂಗನಬ್ಯಾಟೆ’ಗೆ ಅಕಾಡೆಮಿ ಅವಾರ್ಡು ಬಂದಿದೆ. ಹೆಗಡೆ ನಿಮಗಾಗಲ್ಲ ಅಂತ ಹೇಳಿ ಸಾಹಿತ್ಯ ಸಮ್ಮೇಳನ ನ್ಯಡಿದಂಗೆ ಮಾಡಿದ್ರಿ. ಸಮ್ಮೇಳನದ ಜಾಗಕ್ಕೆ ಭಜರಂಗಿಗಳು ಬಂದು ಬಾಯಿ ಹರಕೊಂಡು ಸಮ್ಮೇಳನ ನಿಲ್ಲಿಸಿದ್ರು. ಇದು ಇತಿಹಾಸದಲ್ಲಿ ದಾಖಲಾದ ಅಭಿವ್ಯಕ್ತಿ ಸ್ವಾತಂತ್ರ ಹರಣದ ಘಟನೆ. ಕನ್ನಡ ಸಾಹಿತ್ಯಕ್ಕೆ ನೀವು ಮಾಡಿದ ಅವಮಾನ. ಭುವನೇಶ್ವರಿಗೆ ಮಾಡಿದ ದ್ರೋಹ. ದೂರದ ಊರುಗಳಿಂದ ಬಂದ ಸಾಹಿತಿಗಳು ನಿಮ್ಮನ್ನ ನಿಂದಿಸುತ್ತಾ ಇದೊಂದು ಅನಾಗರಿಕ ನಡೆ, ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ, ಕನ್ನಡ ಸಾಹಿತ್ಯ ಪರಿಷತ್ ಕಟ್ಟಿ ಬೆಳೆಸಿದವರಿಗೆ ಮಾಡಿದ ಅವಮಾನ, ಇದೇ ಜಿಲ್ಲೆಯ ಹಿರೇಕೂಡಿಗೆಯಲ್ಲಿ ಹುಟ್ಟಿದ ಕುವೆಂಪುಗೆ ಮಾಡಿದ ಅವಮಾನ ಅಂತ ಬೈಕಂಡೋದ್ರು ಸಾರ್. ಮಾತಾಡಿ ಸಾರ್ ಹೇಳಿ ಏನಾರ. ಹಲೋ. ಹಲೋ. ಹಲೋ”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...