Homeಮುಖಪುಟಭಾರತದ ಸ್ವಾತಂತ್ರ್ಯ ಕುರಿತ ಭಾಗವತ್ ಹೇಳಿಕೆ 'ದೇಶದ್ರೋಹಕ್ಕೆ ಸಮ' : ರಾಹುಲ್ ಗಾಂಧಿ

ಭಾರತದ ಸ್ವಾತಂತ್ರ್ಯ ಕುರಿತ ಭಾಗವತ್ ಹೇಳಿಕೆ ‘ದೇಶದ್ರೋಹಕ್ಕೆ ಸಮ’ : ರಾಹುಲ್ ಗಾಂಧಿ

- Advertisement -
- Advertisement -

ರಾಮ ಮಂದಿರ ಪ್ರತಿಷ್ಠಾಪನೆಯ ನಂತರ ಭಾರತಕ್ಕೆ ‘ನಿಜವಾದ ಸ್ವಾತಂತ್ರ್ಯ’ ಬಂತು ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆ ದೇಶದ್ರೋಹಕ್ಕೆ ಸಮನಾಗಿದ್ದು, ಭಾಗವತ್ ಭಾರತೀಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ (ಜ.14) ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯ ಕೋಟ್ಲಾ ರಸ್ತೆಯಲ್ಲಿರುವ ನಿರ್ಮಿಸಿರುವ ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, “ಸ್ವಾತಂತ್ರ್ಯ ಚಳವಳಿ ಮತ್ತು ಸಂವಿಧಾನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾರ್ವಜನಿಕವಾಗಿ ಹೇಳುವ ದಿಟ್ಟತನವನ್ನು ಮೋಹನ್ ಭಾಗವತ್ ಪ್ರದರ್ಶಿಸಿದ್ದಾರೆ. ನಿನ್ನೆ ಅವರು ಏನು ಹೇಳಿದ್ದಾರೊ ಅದು ದೇಶದ್ರೋಹಕ್ಕೆ ಸಮವಾಗಿದೆ” ಎಂದು ಹೇಳಿದ್ದಾರೆ.

“ಬೇರೆ ದೇಶದಲ್ಲಾಗಿದ್ದರೆ ಸಾರ್ವಜನಿಕವಾಗಿ ಇಂತಹ ಹೇಳಿಕೆ ನೀಡುವವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುತ್ತಿದ್ದರು. ಭಾಗವತ್ ಅವರು ಇಷ್ಟೊತ್ತಿಗೆ ಬಂಧನವಾಗಬೇಕಿತ್ತು” ಎಂದಿದ್ದಾರೆ.

ಹೊಸ ಪ್ರಧಾನ ಕಚೇರಿಯು ಸಂವಿಧಾನದ ಅಡಿಪಾಯದ ಸಂಕೇತವನ್ನು ಹೊಂದಿದೆ ಎಂದು ಒತ್ತಿ ಹೇಳಿದ ರಾಹುಲ್ ಗಾಂಧಿ, ಕೇಸರಿ ಪಕ್ಷ ಮತ್ತು ಕಾಂಗ್ರೆಸ್‌ನ ಸಿದ್ಧಾಂತ ನಡುವೆ ಸಂಘರ್ಷ ಇರುವುದರಿಂದ ಆರ್‌ಎಸ್‌ಎಸ್‌ನೊಂದಿಗೆ ನಮ್ಮ ಕಾರ್ಯಕರ್ತರು ನಾಗರಿಕ ಯುದ್ಧ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನೂ ತನ್ನ ನಿಯಂತ್ರಣಕ್ಕೆ ಪಡೆದುಕೊಂಡಿದೆ. ನಾವು ಈಗ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಭಾರತೀಯ ರಾಜ್ಯಗಳ ವಿರುದ್ಧವೇ ಹೋರಾಡುವಂತಾಗಿದೆ” ಎಂದಿದ್ದಾರೆ.

ಬಿಜೆಪಿ ನೇತೃತ್ವದ ಸರ್ಕಾರವು ಭಾರತದ ಬಗ್ಗೆ ಕಾಂಗ್ರೆಸ್‌ಗಿಂತ ಸಂಪೂರ್ಣವಾಗಿ ಭಿನ್ನವಾದ ದೃಷ್ಟಿಕೋನವನ್ನು ಹೊಂದಿದೆ. “ಅವರು ಭಾರತವನ್ನು ನೆರಳಿನ, ಗುಪ್ತ, ರಹಸ್ಯ ಸಮಾಜದಿಂದ ಹಾಗೂ ಒಬ್ಬ ವ್ಯಕ್ತಿ ನಡೆಸಬೇಕೆಂದು ಬಯಸುತ್ತಾರೆ. ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ಜಾತಿಗಳ ಮತ್ತು ಬುಡಕಟ್ಟು ಜನಾಂಗದವರ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ. ಇದು ಅವರ ಕಾರ್ಯಸೂಚಿ” ಎಂದು ಹೇಳಿದ್ದಾರೆ.

1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿಲ್ಲ ಎಂಬ ಮಾತು ಪ್ರತಿ ಭಾರತೀಯರಿಗೆ ಮಾಡಿದ ಅವಮಾನವಾಗಿದೆ. ಅಜ್ಞಾನದಿಂದ ಕೂಡಿದ ಇಂತಹ ಹೇಳಿಕೆಗಳನ್ನು ಆಲಿಸದೇ ಇರುವುದು ಸೂಕ್ತ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...