Homeಅಂತರಾಷ್ಟ್ರೀಯಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

- Advertisement -
- Advertisement -

ತನ್ನ ತಂದೆಯನ್ನು 1200 ಕಿ.ಮೀ. ದೂರದ ಹಳ್ಳಿಗೆ ತಲುಪಿಸಿದ ಜ್ಯೋತಿ ಕುಮಾರಿಯ ವರದಿಯನ್ನು ಇಟ್ಟು ಭಾರತೀಯರನ್ನು ಹೊಗಳಿದ ಇವಾಂಕ ಟ್ರಂಪ್ ವಿರುದ್ದ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ಗಿಂತಲೂ ದೂರದ ಹಳ್ಳಿಗೆ ಸೈಕಲ್‌ನ ಹಿಂಭಾಗದಲ್ಲಿ ಕೂರಿಸಿ ಕರೆದೊಯ್ದದ ಜ್ಯೋತಿ ಕುಮಾರಿ ಎಂಬ ಬಿಹಾರದ ಬಾಲಕಿಯನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಇವಾಂಕ ಟ್ರಂಪ್ “ಈ ಸಾಧನೆಯೂ ಭಾರತೀಯರ ಸಹಿಷ್ಣುತೆ ಮತ್ತು ಪ್ರೀತಿಯ ಕಲ್ಪನೆಯನ್ನು ಸೆರೆಹಿಡಿದಿದೆ, ಹಾಗೆಯೆ ಸೈಕ್ಲಿಂಗ್ ಪಡರೇಷನ್ ಕೂಡಾ” ಎಂದು ಹೇಳಿದ್ದರು. ಇದನ್ನು ಖಂಡಿಸಿ ಹಲವಾರು ಜನರು ಇವಾಂಕ ಇವಾಂಕ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇಂಡಿಯಾಟುಡೆಯ ಮಾಜಿ ಸಂಪಾದಕ ದಿಲೀಪ್ ಮಂಡಲ್ “ಜ್ಯೋತಿ ಪಾಸ್ವಾನ್ ಅವರ ಈ ಕಥೆಯು ಧೈರ್ಯ ಮತ್ತು ಉತ್ಸಾಹದ ಜೊತೆಗೆ ಭಾರತದ ಬಗ್ಗೆ ಇರುವ ದುಃಖ ಮತ್ತು ಅಸ್ವಸ್ಥತೆಯನ್ನು ಸಹ ತೋರಿಸುತ್ತದೆ. ಅಂತಹ ಕಥೆಗಳು ಭಾರತದಿಂದ ಜಗತ್ತನ್ನು ತಲುಪಬಾರದು ಎಂದು ಹಾರೈಸುತ್ತೇನೆ. ವಿಶ್ವದ ಜನಸಂಖ್ಯೆಯ 17% ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕಲ್ಯಾಣವಿಲ್ಲದೆ ವಿಶ್ವದ ಕಲ್ಯಾಣ ಅಸಾಧ್ಯ. ಎಚ್‌ಡಿಐನಲ್ಲಿ ಭಾರತ 130 ನೇ ಸ್ಥಾನದಲ್ಲಿದೆ.” ಎಂದು ಹೇಳಿದ್ದಾರೆ.

ಲೇಖಕಿ ರೂಪಾ ಸುಬ್ರಮಣ್ಯ “ನೀವು ಗಂಭೀರವಾಗಿ ಈ ವಿಸ್ಮೃತಿಶೀಲರಾಗಿದ್ದೀರಾ? ಭಾರತದ ಕೆಟ್ಟ ಕಲ್ಪನೆಯ ಲಾಕ್‌ಡೌನ್ ನಿಂದಾಗಿ ಈ ಮಗು ಮತ್ತು ಅವಳ ಕುಟುಂಬವು ಭಯಾನಕ ಅನುಭವವನ್ನು ಅನುಭವಿಸಿದೆ. ಈ ಘಟನೆ ಅವಳು ವೃತ್ತಿಪರ ಸೈಕ್ಲಿಸ್ಟ್ ಆಗಬೇಕೆಂಬ ಆಕಾಂಕ್ಷೆಯಿಂದ ಆಗಿದ್ದಲ್ಲ, ಇದು ಮಾನವೀಯ ದುರಂತವಾಗಿದೆ.” ಎಂದು ಹೇಳಿದ್ದಾರೆ.

ಲೇಖಕಿ ಸಂಜುಕ್ತ ಬಸು “ಬಡತನ ಎಂದರೇನು ಎಂಬುದರ ಬಗ್ಗೆ ನಿಮಗೆ ಗೊತ್ತಿಲ್ಲ. ನಿಮಗೆ ನಾಚಿಕೆಯಾಗಬೇಕು.” ಎಂದು ಹೇಳಿದ್ದಾರೆ.

ಮತ್ತೊಬ್ಬರು “ಇದರಲ್ಲಿ ಏನು ಸುಂದರವಾಗಿದೆ? ನೀವು ಬಾಲಕಿಯ ಅಸಹಾಯಕತೆಯನ್ನು ನೋಡುತ್ತಿಲ್ಲ. ಇದು ಮೋದಿ ಸರ್ಕಾರದ ಸಂಪೂರ್ಣ ವೈಫಲ್ಯ.” ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

ಮತ್ತೊಬ್ಬರು, “ನಮ್ಮಲ್ಲಿ ಅಂತಹ ನೂರಾರು ಜ್ಯೋತಿ ಕುಮಾರಿಯರು, ಹಸಿವಿನ ಹೊಟ್ಟೆ, ಬರಿಯ ಬೆತ್ತಲೆ ಪಾದಗಳು, ತಾಯಂದಿರು, ಅಂಗವಿಕಲರು ಇದ್ದಾರೆ. ಅಲ್ಲದೆ ಅವರೂ ಇದೇ ರೀತಿ ಅವರ ಸೈಕಲಿನಲ್ಲಿ, ಕಾಲ್ನಡಿಗೆಯಲ್ಲಿ, ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ಮಕ್ಕಳನ್ನು ಹೊಂದಿರುವ ತಾಯಂದಿರು ಇನ್ನೂ ದೂರ ಹೋಗುತ್ತಿದ್ದಾರೆ. ಇದು ನಮಗೆ ಹೆಮ್ಮೆಯ ಅಥವಾ ವಿಷಾದದ ವಿಷಯವೇ ಎಂದು ನನಗೆ ತಿಳಿದಿಲ್ಲ.” ಎಂದು ಹೇಳಿ ಕೆಳಗಿನ ಚಿತ್ರವನ್ನು ಟ್ಯಾಗ್ ಮಾಡಿದ್ದಾರೆ.

ಸೂರ್ಯನಾರಾಯಣ್ ಎಂಬವರು “ಇದು ನಿಜವಾಗಿಯೂ ನಿಮ್ಮ ತಂದೆಯ ಸ್ನೇಹಿತರಾರ ನರೇಂದ್ರ ಮೋದಿಯ ವೈಫಲ್ಯವನ್ನು ತೋರಿಸುತ್ತಿದೆ. ಭಾರತದಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೇ ಲಾಕ್ ಡೌನ್ ಮಾಡಿದರಿಂದ, ಇಂತಹ ಲಕ್ಷಾಂತರ ಬಡ ಜನರನ್ನು ಹತಾಶೆಗೆ ತಳ್ಳಿದೆ. ನೀವು ಅದನ್ನು ಕೆಲವು ದೊಡ್ಡ ಸಾಧನೆ ಎಂದು ತೋರಿಸುತ್ತಿದ್ದೀರಿ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ಬಿಹಾರ ಮೂಲದ 15 ವರ್ಷದ ಬಾಲಕಿ ಜ್ಯೋತಿ ಕುಮಾರಿ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ದೂರದ ಹಳ್ಳಿಗೆ ಸೈಕಲ್ ಮೂಲಕ ಕರೆದೊಯ್ದಿದ್ದರು. ಇದನ್ನು ಗಮನಿಸಿದ ಸೈಕ್ಲಿಂಗ್ ಫಡರೇಷನ್ ಬಾಲಕಿಯನ್ನು ಲಾಕ್ ಡೌನ್ ನಂತರ ಟ್ರಯಲ್ ಗೆ ಬರುವಂತೆ ಕೇಳಿಕೊಂಡಿತ್ತು.


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


ಓದಿ: ಅಮೆರಿಕಾ ಅಧ್ಯಕ್ಷರ 200 ವೆಂಟಿಲೇಟರ್ ಮತ್ತು ಪ್ರಧಾನಿ ಮೋದಿಯ ಕತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...