Homeಅಂತರಾಷ್ಟ್ರೀಯಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

- Advertisement -
- Advertisement -

ತನ್ನ ತಂದೆಯನ್ನು 1200 ಕಿ.ಮೀ. ದೂರದ ಹಳ್ಳಿಗೆ ತಲುಪಿಸಿದ ಜ್ಯೋತಿ ಕುಮಾರಿಯ ವರದಿಯನ್ನು ಇಟ್ಟು ಭಾರತೀಯರನ್ನು ಹೊಗಳಿದ ಇವಾಂಕ ಟ್ರಂಪ್ ವಿರುದ್ದ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ಗಿಂತಲೂ ದೂರದ ಹಳ್ಳಿಗೆ ಸೈಕಲ್‌ನ ಹಿಂಭಾಗದಲ್ಲಿ ಕೂರಿಸಿ ಕರೆದೊಯ್ದದ ಜ್ಯೋತಿ ಕುಮಾರಿ ಎಂಬ ಬಿಹಾರದ ಬಾಲಕಿಯನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಇವಾಂಕ ಟ್ರಂಪ್ “ಈ ಸಾಧನೆಯೂ ಭಾರತೀಯರ ಸಹಿಷ್ಣುತೆ ಮತ್ತು ಪ್ರೀತಿಯ ಕಲ್ಪನೆಯನ್ನು ಸೆರೆಹಿಡಿದಿದೆ, ಹಾಗೆಯೆ ಸೈಕ್ಲಿಂಗ್ ಪಡರೇಷನ್ ಕೂಡಾ” ಎಂದು ಹೇಳಿದ್ದರು. ಇದನ್ನು ಖಂಡಿಸಿ ಹಲವಾರು ಜನರು ಇವಾಂಕ ಇವಾಂಕ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇಂಡಿಯಾಟುಡೆಯ ಮಾಜಿ ಸಂಪಾದಕ ದಿಲೀಪ್ ಮಂಡಲ್ “ಜ್ಯೋತಿ ಪಾಸ್ವಾನ್ ಅವರ ಈ ಕಥೆಯು ಧೈರ್ಯ ಮತ್ತು ಉತ್ಸಾಹದ ಜೊತೆಗೆ ಭಾರತದ ಬಗ್ಗೆ ಇರುವ ದುಃಖ ಮತ್ತು ಅಸ್ವಸ್ಥತೆಯನ್ನು ಸಹ ತೋರಿಸುತ್ತದೆ. ಅಂತಹ ಕಥೆಗಳು ಭಾರತದಿಂದ ಜಗತ್ತನ್ನು ತಲುಪಬಾರದು ಎಂದು ಹಾರೈಸುತ್ತೇನೆ. ವಿಶ್ವದ ಜನಸಂಖ್ಯೆಯ 17% ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕಲ್ಯಾಣವಿಲ್ಲದೆ ವಿಶ್ವದ ಕಲ್ಯಾಣ ಅಸಾಧ್ಯ. ಎಚ್‌ಡಿಐನಲ್ಲಿ ಭಾರತ 130 ನೇ ಸ್ಥಾನದಲ್ಲಿದೆ.” ಎಂದು ಹೇಳಿದ್ದಾರೆ.

ಲೇಖಕಿ ರೂಪಾ ಸುಬ್ರಮಣ್ಯ “ನೀವು ಗಂಭೀರವಾಗಿ ಈ ವಿಸ್ಮೃತಿಶೀಲರಾಗಿದ್ದೀರಾ? ಭಾರತದ ಕೆಟ್ಟ ಕಲ್ಪನೆಯ ಲಾಕ್‌ಡೌನ್ ನಿಂದಾಗಿ ಈ ಮಗು ಮತ್ತು ಅವಳ ಕುಟುಂಬವು ಭಯಾನಕ ಅನುಭವವನ್ನು ಅನುಭವಿಸಿದೆ. ಈ ಘಟನೆ ಅವಳು ವೃತ್ತಿಪರ ಸೈಕ್ಲಿಸ್ಟ್ ಆಗಬೇಕೆಂಬ ಆಕಾಂಕ್ಷೆಯಿಂದ ಆಗಿದ್ದಲ್ಲ, ಇದು ಮಾನವೀಯ ದುರಂತವಾಗಿದೆ.” ಎಂದು ಹೇಳಿದ್ದಾರೆ.

ಲೇಖಕಿ ಸಂಜುಕ್ತ ಬಸು “ಬಡತನ ಎಂದರೇನು ಎಂಬುದರ ಬಗ್ಗೆ ನಿಮಗೆ ಗೊತ್ತಿಲ್ಲ. ನಿಮಗೆ ನಾಚಿಕೆಯಾಗಬೇಕು.” ಎಂದು ಹೇಳಿದ್ದಾರೆ.

ಮತ್ತೊಬ್ಬರು “ಇದರಲ್ಲಿ ಏನು ಸುಂದರವಾಗಿದೆ? ನೀವು ಬಾಲಕಿಯ ಅಸಹಾಯಕತೆಯನ್ನು ನೋಡುತ್ತಿಲ್ಲ. ಇದು ಮೋದಿ ಸರ್ಕಾರದ ಸಂಪೂರ್ಣ ವೈಫಲ್ಯ.” ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

ಮತ್ತೊಬ್ಬರು, “ನಮ್ಮಲ್ಲಿ ಅಂತಹ ನೂರಾರು ಜ್ಯೋತಿ ಕುಮಾರಿಯರು, ಹಸಿವಿನ ಹೊಟ್ಟೆ, ಬರಿಯ ಬೆತ್ತಲೆ ಪಾದಗಳು, ತಾಯಂದಿರು, ಅಂಗವಿಕಲರು ಇದ್ದಾರೆ. ಅಲ್ಲದೆ ಅವರೂ ಇದೇ ರೀತಿ ಅವರ ಸೈಕಲಿನಲ್ಲಿ, ಕಾಲ್ನಡಿಗೆಯಲ್ಲಿ, ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ಮಕ್ಕಳನ್ನು ಹೊಂದಿರುವ ತಾಯಂದಿರು ಇನ್ನೂ ದೂರ ಹೋಗುತ್ತಿದ್ದಾರೆ. ಇದು ನಮಗೆ ಹೆಮ್ಮೆಯ ಅಥವಾ ವಿಷಾದದ ವಿಷಯವೇ ಎಂದು ನನಗೆ ತಿಳಿದಿಲ್ಲ.” ಎಂದು ಹೇಳಿ ಕೆಳಗಿನ ಚಿತ್ರವನ್ನು ಟ್ಯಾಗ್ ಮಾಡಿದ್ದಾರೆ.

ಸೂರ್ಯನಾರಾಯಣ್ ಎಂಬವರು “ಇದು ನಿಜವಾಗಿಯೂ ನಿಮ್ಮ ತಂದೆಯ ಸ್ನೇಹಿತರಾರ ನರೇಂದ್ರ ಮೋದಿಯ ವೈಫಲ್ಯವನ್ನು ತೋರಿಸುತ್ತಿದೆ. ಭಾರತದಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೇ ಲಾಕ್ ಡೌನ್ ಮಾಡಿದರಿಂದ, ಇಂತಹ ಲಕ್ಷಾಂತರ ಬಡ ಜನರನ್ನು ಹತಾಶೆಗೆ ತಳ್ಳಿದೆ. ನೀವು ಅದನ್ನು ಕೆಲವು ದೊಡ್ಡ ಸಾಧನೆ ಎಂದು ತೋರಿಸುತ್ತಿದ್ದೀರಿ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ಬಿಹಾರ ಮೂಲದ 15 ವರ್ಷದ ಬಾಲಕಿ ಜ್ಯೋತಿ ಕುಮಾರಿ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ದೂರದ ಹಳ್ಳಿಗೆ ಸೈಕಲ್ ಮೂಲಕ ಕರೆದೊಯ್ದಿದ್ದರು. ಇದನ್ನು ಗಮನಿಸಿದ ಸೈಕ್ಲಿಂಗ್ ಫಡರೇಷನ್ ಬಾಲಕಿಯನ್ನು ಲಾಕ್ ಡೌನ್ ನಂತರ ಟ್ರಯಲ್ ಗೆ ಬರುವಂತೆ ಕೇಳಿಕೊಂಡಿತ್ತು.


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


ಓದಿ: ಅಮೆರಿಕಾ ಅಧ್ಯಕ್ಷರ 200 ವೆಂಟಿಲೇಟರ್ ಮತ್ತು ಪ್ರಧಾನಿ ಮೋದಿಯ ಕತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...