Homeಅಂತರಾಷ್ಟ್ರೀಯಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

- Advertisement -
- Advertisement -

ತನ್ನ ತಂದೆಯನ್ನು 1200 ಕಿ.ಮೀ. ದೂರದ ಹಳ್ಳಿಗೆ ತಲುಪಿಸಿದ ಜ್ಯೋತಿ ಕುಮಾರಿಯ ವರದಿಯನ್ನು ಇಟ್ಟು ಭಾರತೀಯರನ್ನು ಹೊಗಳಿದ ಇವಾಂಕ ಟ್ರಂಪ್ ವಿರುದ್ದ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ಗಿಂತಲೂ ದೂರದ ಹಳ್ಳಿಗೆ ಸೈಕಲ್‌ನ ಹಿಂಭಾಗದಲ್ಲಿ ಕೂರಿಸಿ ಕರೆದೊಯ್ದದ ಜ್ಯೋತಿ ಕುಮಾರಿ ಎಂಬ ಬಿಹಾರದ ಬಾಲಕಿಯನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಇವಾಂಕ ಟ್ರಂಪ್ “ಈ ಸಾಧನೆಯೂ ಭಾರತೀಯರ ಸಹಿಷ್ಣುತೆ ಮತ್ತು ಪ್ರೀತಿಯ ಕಲ್ಪನೆಯನ್ನು ಸೆರೆಹಿಡಿದಿದೆ, ಹಾಗೆಯೆ ಸೈಕ್ಲಿಂಗ್ ಪಡರೇಷನ್ ಕೂಡಾ” ಎಂದು ಹೇಳಿದ್ದರು. ಇದನ್ನು ಖಂಡಿಸಿ ಹಲವಾರು ಜನರು ಇವಾಂಕ ಇವಾಂಕ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇಂಡಿಯಾಟುಡೆಯ ಮಾಜಿ ಸಂಪಾದಕ ದಿಲೀಪ್ ಮಂಡಲ್ “ಜ್ಯೋತಿ ಪಾಸ್ವಾನ್ ಅವರ ಈ ಕಥೆಯು ಧೈರ್ಯ ಮತ್ತು ಉತ್ಸಾಹದ ಜೊತೆಗೆ ಭಾರತದ ಬಗ್ಗೆ ಇರುವ ದುಃಖ ಮತ್ತು ಅಸ್ವಸ್ಥತೆಯನ್ನು ಸಹ ತೋರಿಸುತ್ತದೆ. ಅಂತಹ ಕಥೆಗಳು ಭಾರತದಿಂದ ಜಗತ್ತನ್ನು ತಲುಪಬಾರದು ಎಂದು ಹಾರೈಸುತ್ತೇನೆ. ವಿಶ್ವದ ಜನಸಂಖ್ಯೆಯ 17% ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕಲ್ಯಾಣವಿಲ್ಲದೆ ವಿಶ್ವದ ಕಲ್ಯಾಣ ಅಸಾಧ್ಯ. ಎಚ್‌ಡಿಐನಲ್ಲಿ ಭಾರತ 130 ನೇ ಸ್ಥಾನದಲ್ಲಿದೆ.” ಎಂದು ಹೇಳಿದ್ದಾರೆ.

ಲೇಖಕಿ ರೂಪಾ ಸುಬ್ರಮಣ್ಯ “ನೀವು ಗಂಭೀರವಾಗಿ ಈ ವಿಸ್ಮೃತಿಶೀಲರಾಗಿದ್ದೀರಾ? ಭಾರತದ ಕೆಟ್ಟ ಕಲ್ಪನೆಯ ಲಾಕ್‌ಡೌನ್ ನಿಂದಾಗಿ ಈ ಮಗು ಮತ್ತು ಅವಳ ಕುಟುಂಬವು ಭಯಾನಕ ಅನುಭವವನ್ನು ಅನುಭವಿಸಿದೆ. ಈ ಘಟನೆ ಅವಳು ವೃತ್ತಿಪರ ಸೈಕ್ಲಿಸ್ಟ್ ಆಗಬೇಕೆಂಬ ಆಕಾಂಕ್ಷೆಯಿಂದ ಆಗಿದ್ದಲ್ಲ, ಇದು ಮಾನವೀಯ ದುರಂತವಾಗಿದೆ.” ಎಂದು ಹೇಳಿದ್ದಾರೆ.

ಲೇಖಕಿ ಸಂಜುಕ್ತ ಬಸು “ಬಡತನ ಎಂದರೇನು ಎಂಬುದರ ಬಗ್ಗೆ ನಿಮಗೆ ಗೊತ್ತಿಲ್ಲ. ನಿಮಗೆ ನಾಚಿಕೆಯಾಗಬೇಕು.” ಎಂದು ಹೇಳಿದ್ದಾರೆ.

ಮತ್ತೊಬ್ಬರು “ಇದರಲ್ಲಿ ಏನು ಸುಂದರವಾಗಿದೆ? ನೀವು ಬಾಲಕಿಯ ಅಸಹಾಯಕತೆಯನ್ನು ನೋಡುತ್ತಿಲ್ಲ. ಇದು ಮೋದಿ ಸರ್ಕಾರದ ಸಂಪೂರ್ಣ ವೈಫಲ್ಯ.” ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

ಮತ್ತೊಬ್ಬರು, “ನಮ್ಮಲ್ಲಿ ಅಂತಹ ನೂರಾರು ಜ್ಯೋತಿ ಕುಮಾರಿಯರು, ಹಸಿವಿನ ಹೊಟ್ಟೆ, ಬರಿಯ ಬೆತ್ತಲೆ ಪಾದಗಳು, ತಾಯಂದಿರು, ಅಂಗವಿಕಲರು ಇದ್ದಾರೆ. ಅಲ್ಲದೆ ಅವರೂ ಇದೇ ರೀತಿ ಅವರ ಸೈಕಲಿನಲ್ಲಿ, ಕಾಲ್ನಡಿಗೆಯಲ್ಲಿ, ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ಮಕ್ಕಳನ್ನು ಹೊಂದಿರುವ ತಾಯಂದಿರು ಇನ್ನೂ ದೂರ ಹೋಗುತ್ತಿದ್ದಾರೆ. ಇದು ನಮಗೆ ಹೆಮ್ಮೆಯ ಅಥವಾ ವಿಷಾದದ ವಿಷಯವೇ ಎಂದು ನನಗೆ ತಿಳಿದಿಲ್ಲ.” ಎಂದು ಹೇಳಿ ಕೆಳಗಿನ ಚಿತ್ರವನ್ನು ಟ್ಯಾಗ್ ಮಾಡಿದ್ದಾರೆ.

ಸೂರ್ಯನಾರಾಯಣ್ ಎಂಬವರು “ಇದು ನಿಜವಾಗಿಯೂ ನಿಮ್ಮ ತಂದೆಯ ಸ್ನೇಹಿತರಾರ ನರೇಂದ್ರ ಮೋದಿಯ ವೈಫಲ್ಯವನ್ನು ತೋರಿಸುತ್ತಿದೆ. ಭಾರತದಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೇ ಲಾಕ್ ಡೌನ್ ಮಾಡಿದರಿಂದ, ಇಂತಹ ಲಕ್ಷಾಂತರ ಬಡ ಜನರನ್ನು ಹತಾಶೆಗೆ ತಳ್ಳಿದೆ. ನೀವು ಅದನ್ನು ಕೆಲವು ದೊಡ್ಡ ಸಾಧನೆ ಎಂದು ತೋರಿಸುತ್ತಿದ್ದೀರಿ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ಬಿಹಾರ ಮೂಲದ 15 ವರ್ಷದ ಬಾಲಕಿ ಜ್ಯೋತಿ ಕುಮಾರಿ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ದೂರದ ಹಳ್ಳಿಗೆ ಸೈಕಲ್ ಮೂಲಕ ಕರೆದೊಯ್ದಿದ್ದರು. ಇದನ್ನು ಗಮನಿಸಿದ ಸೈಕ್ಲಿಂಗ್ ಫಡರೇಷನ್ ಬಾಲಕಿಯನ್ನು ಲಾಕ್ ಡೌನ್ ನಂತರ ಟ್ರಯಲ್ ಗೆ ಬರುವಂತೆ ಕೇಳಿಕೊಂಡಿತ್ತು.


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


ಓದಿ: ಅಮೆರಿಕಾ ಅಧ್ಯಕ್ಷರ 200 ವೆಂಟಿಲೇಟರ್ ಮತ್ತು ಪ್ರಧಾನಿ ಮೋದಿಯ ಕತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...