Homeಅಂತರಾಷ್ಟ್ರೀಯಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

- Advertisement -
- Advertisement -

ತನ್ನ ತಂದೆಯನ್ನು 1200 ಕಿ.ಮೀ. ದೂರದ ಹಳ್ಳಿಗೆ ತಲುಪಿಸಿದ ಜ್ಯೋತಿ ಕುಮಾರಿಯ ವರದಿಯನ್ನು ಇಟ್ಟು ಭಾರತೀಯರನ್ನು ಹೊಗಳಿದ ಇವಾಂಕ ಟ್ರಂಪ್ ವಿರುದ್ದ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ಗಿಂತಲೂ ದೂರದ ಹಳ್ಳಿಗೆ ಸೈಕಲ್‌ನ ಹಿಂಭಾಗದಲ್ಲಿ ಕೂರಿಸಿ ಕರೆದೊಯ್ದದ ಜ್ಯೋತಿ ಕುಮಾರಿ ಎಂಬ ಬಿಹಾರದ ಬಾಲಕಿಯನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಇವಾಂಕ ಟ್ರಂಪ್ “ಈ ಸಾಧನೆಯೂ ಭಾರತೀಯರ ಸಹಿಷ್ಣುತೆ ಮತ್ತು ಪ್ರೀತಿಯ ಕಲ್ಪನೆಯನ್ನು ಸೆರೆಹಿಡಿದಿದೆ, ಹಾಗೆಯೆ ಸೈಕ್ಲಿಂಗ್ ಪಡರೇಷನ್ ಕೂಡಾ” ಎಂದು ಹೇಳಿದ್ದರು. ಇದನ್ನು ಖಂಡಿಸಿ ಹಲವಾರು ಜನರು ಇವಾಂಕ ಇವಾಂಕ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇಂಡಿಯಾಟುಡೆಯ ಮಾಜಿ ಸಂಪಾದಕ ದಿಲೀಪ್ ಮಂಡಲ್ “ಜ್ಯೋತಿ ಪಾಸ್ವಾನ್ ಅವರ ಈ ಕಥೆಯು ಧೈರ್ಯ ಮತ್ತು ಉತ್ಸಾಹದ ಜೊತೆಗೆ ಭಾರತದ ಬಗ್ಗೆ ಇರುವ ದುಃಖ ಮತ್ತು ಅಸ್ವಸ್ಥತೆಯನ್ನು ಸಹ ತೋರಿಸುತ್ತದೆ. ಅಂತಹ ಕಥೆಗಳು ಭಾರತದಿಂದ ಜಗತ್ತನ್ನು ತಲುಪಬಾರದು ಎಂದು ಹಾರೈಸುತ್ತೇನೆ. ವಿಶ್ವದ ಜನಸಂಖ್ಯೆಯ 17% ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕಲ್ಯಾಣವಿಲ್ಲದೆ ವಿಶ್ವದ ಕಲ್ಯಾಣ ಅಸಾಧ್ಯ. ಎಚ್‌ಡಿಐನಲ್ಲಿ ಭಾರತ 130 ನೇ ಸ್ಥಾನದಲ್ಲಿದೆ.” ಎಂದು ಹೇಳಿದ್ದಾರೆ.

ಲೇಖಕಿ ರೂಪಾ ಸುಬ್ರಮಣ್ಯ “ನೀವು ಗಂಭೀರವಾಗಿ ಈ ವಿಸ್ಮೃತಿಶೀಲರಾಗಿದ್ದೀರಾ? ಭಾರತದ ಕೆಟ್ಟ ಕಲ್ಪನೆಯ ಲಾಕ್‌ಡೌನ್ ನಿಂದಾಗಿ ಈ ಮಗು ಮತ್ತು ಅವಳ ಕುಟುಂಬವು ಭಯಾನಕ ಅನುಭವವನ್ನು ಅನುಭವಿಸಿದೆ. ಈ ಘಟನೆ ಅವಳು ವೃತ್ತಿಪರ ಸೈಕ್ಲಿಸ್ಟ್ ಆಗಬೇಕೆಂಬ ಆಕಾಂಕ್ಷೆಯಿಂದ ಆಗಿದ್ದಲ್ಲ, ಇದು ಮಾನವೀಯ ದುರಂತವಾಗಿದೆ.” ಎಂದು ಹೇಳಿದ್ದಾರೆ.

ಲೇಖಕಿ ಸಂಜುಕ್ತ ಬಸು “ಬಡತನ ಎಂದರೇನು ಎಂಬುದರ ಬಗ್ಗೆ ನಿಮಗೆ ಗೊತ್ತಿಲ್ಲ. ನಿಮಗೆ ನಾಚಿಕೆಯಾಗಬೇಕು.” ಎಂದು ಹೇಳಿದ್ದಾರೆ.

ಮತ್ತೊಬ್ಬರು “ಇದರಲ್ಲಿ ಏನು ಸುಂದರವಾಗಿದೆ? ನೀವು ಬಾಲಕಿಯ ಅಸಹಾಯಕತೆಯನ್ನು ನೋಡುತ್ತಿಲ್ಲ. ಇದು ಮೋದಿ ಸರ್ಕಾರದ ಸಂಪೂರ್ಣ ವೈಫಲ್ಯ.” ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

ಮತ್ತೊಬ್ಬರು, “ನಮ್ಮಲ್ಲಿ ಅಂತಹ ನೂರಾರು ಜ್ಯೋತಿ ಕುಮಾರಿಯರು, ಹಸಿವಿನ ಹೊಟ್ಟೆ, ಬರಿಯ ಬೆತ್ತಲೆ ಪಾದಗಳು, ತಾಯಂದಿರು, ಅಂಗವಿಕಲರು ಇದ್ದಾರೆ. ಅಲ್ಲದೆ ಅವರೂ ಇದೇ ರೀತಿ ಅವರ ಸೈಕಲಿನಲ್ಲಿ, ಕಾಲ್ನಡಿಗೆಯಲ್ಲಿ, ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ಮಕ್ಕಳನ್ನು ಹೊಂದಿರುವ ತಾಯಂದಿರು ಇನ್ನೂ ದೂರ ಹೋಗುತ್ತಿದ್ದಾರೆ. ಇದು ನಮಗೆ ಹೆಮ್ಮೆಯ ಅಥವಾ ವಿಷಾದದ ವಿಷಯವೇ ಎಂದು ನನಗೆ ತಿಳಿದಿಲ್ಲ.” ಎಂದು ಹೇಳಿ ಕೆಳಗಿನ ಚಿತ್ರವನ್ನು ಟ್ಯಾಗ್ ಮಾಡಿದ್ದಾರೆ.

ಸೂರ್ಯನಾರಾಯಣ್ ಎಂಬವರು “ಇದು ನಿಜವಾಗಿಯೂ ನಿಮ್ಮ ತಂದೆಯ ಸ್ನೇಹಿತರಾರ ನರೇಂದ್ರ ಮೋದಿಯ ವೈಫಲ್ಯವನ್ನು ತೋರಿಸುತ್ತಿದೆ. ಭಾರತದಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೇ ಲಾಕ್ ಡೌನ್ ಮಾಡಿದರಿಂದ, ಇಂತಹ ಲಕ್ಷಾಂತರ ಬಡ ಜನರನ್ನು ಹತಾಶೆಗೆ ತಳ್ಳಿದೆ. ನೀವು ಅದನ್ನು ಕೆಲವು ದೊಡ್ಡ ಸಾಧನೆ ಎಂದು ತೋರಿಸುತ್ತಿದ್ದೀರಿ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ಬಿಹಾರ ಮೂಲದ 15 ವರ್ಷದ ಬಾಲಕಿ ಜ್ಯೋತಿ ಕುಮಾರಿ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ದೂರದ ಹಳ್ಳಿಗೆ ಸೈಕಲ್ ಮೂಲಕ ಕರೆದೊಯ್ದಿದ್ದರು. ಇದನ್ನು ಗಮನಿಸಿದ ಸೈಕ್ಲಿಂಗ್ ಫಡರೇಷನ್ ಬಾಲಕಿಯನ್ನು ಲಾಕ್ ಡೌನ್ ನಂತರ ಟ್ರಯಲ್ ಗೆ ಬರುವಂತೆ ಕೇಳಿಕೊಂಡಿತ್ತು.


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


ಓದಿ: ಅಮೆರಿಕಾ ಅಧ್ಯಕ್ಷರ 200 ವೆಂಟಿಲೇಟರ್ ಮತ್ತು ಪ್ರಧಾನಿ ಮೋದಿಯ ಕತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...