Homeಅಂತರಾಷ್ಟ್ರೀಯಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

- Advertisement -
- Advertisement -

ತನ್ನ ತಂದೆಯನ್ನು 1200 ಕಿ.ಮೀ. ದೂರದ ಹಳ್ಳಿಗೆ ತಲುಪಿಸಿದ ಜ್ಯೋತಿ ಕುಮಾರಿಯ ವರದಿಯನ್ನು ಇಟ್ಟು ಭಾರತೀಯರನ್ನು ಹೊಗಳಿದ ಇವಾಂಕ ಟ್ರಂಪ್ ವಿರುದ್ದ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ಗಿಂತಲೂ ದೂರದ ಹಳ್ಳಿಗೆ ಸೈಕಲ್‌ನ ಹಿಂಭಾಗದಲ್ಲಿ ಕೂರಿಸಿ ಕರೆದೊಯ್ದದ ಜ್ಯೋತಿ ಕುಮಾರಿ ಎಂಬ ಬಿಹಾರದ ಬಾಲಕಿಯನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಇವಾಂಕ ಟ್ರಂಪ್ “ಈ ಸಾಧನೆಯೂ ಭಾರತೀಯರ ಸಹಿಷ್ಣುತೆ ಮತ್ತು ಪ್ರೀತಿಯ ಕಲ್ಪನೆಯನ್ನು ಸೆರೆಹಿಡಿದಿದೆ, ಹಾಗೆಯೆ ಸೈಕ್ಲಿಂಗ್ ಪಡರೇಷನ್ ಕೂಡಾ” ಎಂದು ಹೇಳಿದ್ದರು. ಇದನ್ನು ಖಂಡಿಸಿ ಹಲವಾರು ಜನರು ಇವಾಂಕ ಇವಾಂಕ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇಂಡಿಯಾಟುಡೆಯ ಮಾಜಿ ಸಂಪಾದಕ ದಿಲೀಪ್ ಮಂಡಲ್ “ಜ್ಯೋತಿ ಪಾಸ್ವಾನ್ ಅವರ ಈ ಕಥೆಯು ಧೈರ್ಯ ಮತ್ತು ಉತ್ಸಾಹದ ಜೊತೆಗೆ ಭಾರತದ ಬಗ್ಗೆ ಇರುವ ದುಃಖ ಮತ್ತು ಅಸ್ವಸ್ಥತೆಯನ್ನು ಸಹ ತೋರಿಸುತ್ತದೆ. ಅಂತಹ ಕಥೆಗಳು ಭಾರತದಿಂದ ಜಗತ್ತನ್ನು ತಲುಪಬಾರದು ಎಂದು ಹಾರೈಸುತ್ತೇನೆ. ವಿಶ್ವದ ಜನಸಂಖ್ಯೆಯ 17% ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕಲ್ಯಾಣವಿಲ್ಲದೆ ವಿಶ್ವದ ಕಲ್ಯಾಣ ಅಸಾಧ್ಯ. ಎಚ್‌ಡಿಐನಲ್ಲಿ ಭಾರತ 130 ನೇ ಸ್ಥಾನದಲ್ಲಿದೆ.” ಎಂದು ಹೇಳಿದ್ದಾರೆ.

ಲೇಖಕಿ ರೂಪಾ ಸುಬ್ರಮಣ್ಯ “ನೀವು ಗಂಭೀರವಾಗಿ ಈ ವಿಸ್ಮೃತಿಶೀಲರಾಗಿದ್ದೀರಾ? ಭಾರತದ ಕೆಟ್ಟ ಕಲ್ಪನೆಯ ಲಾಕ್‌ಡೌನ್ ನಿಂದಾಗಿ ಈ ಮಗು ಮತ್ತು ಅವಳ ಕುಟುಂಬವು ಭಯಾನಕ ಅನುಭವವನ್ನು ಅನುಭವಿಸಿದೆ. ಈ ಘಟನೆ ಅವಳು ವೃತ್ತಿಪರ ಸೈಕ್ಲಿಸ್ಟ್ ಆಗಬೇಕೆಂಬ ಆಕಾಂಕ್ಷೆಯಿಂದ ಆಗಿದ್ದಲ್ಲ, ಇದು ಮಾನವೀಯ ದುರಂತವಾಗಿದೆ.” ಎಂದು ಹೇಳಿದ್ದಾರೆ.

ಲೇಖಕಿ ಸಂಜುಕ್ತ ಬಸು “ಬಡತನ ಎಂದರೇನು ಎಂಬುದರ ಬಗ್ಗೆ ನಿಮಗೆ ಗೊತ್ತಿಲ್ಲ. ನಿಮಗೆ ನಾಚಿಕೆಯಾಗಬೇಕು.” ಎಂದು ಹೇಳಿದ್ದಾರೆ.

ಮತ್ತೊಬ್ಬರು “ಇದರಲ್ಲಿ ಏನು ಸುಂದರವಾಗಿದೆ? ನೀವು ಬಾಲಕಿಯ ಅಸಹಾಯಕತೆಯನ್ನು ನೋಡುತ್ತಿಲ್ಲ. ಇದು ಮೋದಿ ಸರ್ಕಾರದ ಸಂಪೂರ್ಣ ವೈಫಲ್ಯ.” ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

ಮತ್ತೊಬ್ಬರು, “ನಮ್ಮಲ್ಲಿ ಅಂತಹ ನೂರಾರು ಜ್ಯೋತಿ ಕುಮಾರಿಯರು, ಹಸಿವಿನ ಹೊಟ್ಟೆ, ಬರಿಯ ಬೆತ್ತಲೆ ಪಾದಗಳು, ತಾಯಂದಿರು, ಅಂಗವಿಕಲರು ಇದ್ದಾರೆ. ಅಲ್ಲದೆ ಅವರೂ ಇದೇ ರೀತಿ ಅವರ ಸೈಕಲಿನಲ್ಲಿ, ಕಾಲ್ನಡಿಗೆಯಲ್ಲಿ, ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ಮಕ್ಕಳನ್ನು ಹೊಂದಿರುವ ತಾಯಂದಿರು ಇನ್ನೂ ದೂರ ಹೋಗುತ್ತಿದ್ದಾರೆ. ಇದು ನಮಗೆ ಹೆಮ್ಮೆಯ ಅಥವಾ ವಿಷಾದದ ವಿಷಯವೇ ಎಂದು ನನಗೆ ತಿಳಿದಿಲ್ಲ.” ಎಂದು ಹೇಳಿ ಕೆಳಗಿನ ಚಿತ್ರವನ್ನು ಟ್ಯಾಗ್ ಮಾಡಿದ್ದಾರೆ.

ಸೂರ್ಯನಾರಾಯಣ್ ಎಂಬವರು “ಇದು ನಿಜವಾಗಿಯೂ ನಿಮ್ಮ ತಂದೆಯ ಸ್ನೇಹಿತರಾರ ನರೇಂದ್ರ ಮೋದಿಯ ವೈಫಲ್ಯವನ್ನು ತೋರಿಸುತ್ತಿದೆ. ಭಾರತದಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೇ ಲಾಕ್ ಡೌನ್ ಮಾಡಿದರಿಂದ, ಇಂತಹ ಲಕ್ಷಾಂತರ ಬಡ ಜನರನ್ನು ಹತಾಶೆಗೆ ತಳ್ಳಿದೆ. ನೀವು ಅದನ್ನು ಕೆಲವು ದೊಡ್ಡ ಸಾಧನೆ ಎಂದು ತೋರಿಸುತ್ತಿದ್ದೀರಿ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ಬಿಹಾರ ಮೂಲದ 15 ವರ್ಷದ ಬಾಲಕಿ ಜ್ಯೋತಿ ಕುಮಾರಿ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ದೂರದ ಹಳ್ಳಿಗೆ ಸೈಕಲ್ ಮೂಲಕ ಕರೆದೊಯ್ದಿದ್ದರು. ಇದನ್ನು ಗಮನಿಸಿದ ಸೈಕ್ಲಿಂಗ್ ಫಡರೇಷನ್ ಬಾಲಕಿಯನ್ನು ಲಾಕ್ ಡೌನ್ ನಂತರ ಟ್ರಯಲ್ ಗೆ ಬರುವಂತೆ ಕೇಳಿಕೊಂಡಿತ್ತು.


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


ಓದಿ: ಅಮೆರಿಕಾ ಅಧ್ಯಕ್ಷರ 200 ವೆಂಟಿಲೇಟರ್ ಮತ್ತು ಪ್ರಧಾನಿ ಮೋದಿಯ ಕತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...