Homeಅಂತರಾಷ್ಟ್ರೀಯಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

ಬಾಲಕಿ ಜ್ಯೋತಿ 1200 ಕಿ.ಮಿ. ಕ್ರಮಿಸಿದ್ದು ಭಾರತೀಯರ ಸುಂದರವಾದ ಸಾಧನೆಯೆಂದ ಇವಾಂಕ ಟ್ರಂಪ್: ಹಲವರ ಆಕ್ರೋಶ

- Advertisement -
- Advertisement -

ತನ್ನ ತಂದೆಯನ್ನು 1200 ಕಿ.ಮೀ. ದೂರದ ಹಳ್ಳಿಗೆ ತಲುಪಿಸಿದ ಜ್ಯೋತಿ ಕುಮಾರಿಯ ವರದಿಯನ್ನು ಇಟ್ಟು ಭಾರತೀಯರನ್ನು ಹೊಗಳಿದ ಇವಾಂಕ ಟ್ರಂಪ್ ವಿರುದ್ದ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ಗಿಂತಲೂ ದೂರದ ಹಳ್ಳಿಗೆ ಸೈಕಲ್‌ನ ಹಿಂಭಾಗದಲ್ಲಿ ಕೂರಿಸಿ ಕರೆದೊಯ್ದದ ಜ್ಯೋತಿ ಕುಮಾರಿ ಎಂಬ ಬಿಹಾರದ ಬಾಲಕಿಯನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಗಳು ಇವಾಂಕ ಟ್ರಂಪ್ “ಈ ಸಾಧನೆಯೂ ಭಾರತೀಯರ ಸಹಿಷ್ಣುತೆ ಮತ್ತು ಪ್ರೀತಿಯ ಕಲ್ಪನೆಯನ್ನು ಸೆರೆಹಿಡಿದಿದೆ, ಹಾಗೆಯೆ ಸೈಕ್ಲಿಂಗ್ ಪಡರೇಷನ್ ಕೂಡಾ” ಎಂದು ಹೇಳಿದ್ದರು. ಇದನ್ನು ಖಂಡಿಸಿ ಹಲವಾರು ಜನರು ಇವಾಂಕ ಇವಾಂಕ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇಂಡಿಯಾಟುಡೆಯ ಮಾಜಿ ಸಂಪಾದಕ ದಿಲೀಪ್ ಮಂಡಲ್ “ಜ್ಯೋತಿ ಪಾಸ್ವಾನ್ ಅವರ ಈ ಕಥೆಯು ಧೈರ್ಯ ಮತ್ತು ಉತ್ಸಾಹದ ಜೊತೆಗೆ ಭಾರತದ ಬಗ್ಗೆ ಇರುವ ದುಃಖ ಮತ್ತು ಅಸ್ವಸ್ಥತೆಯನ್ನು ಸಹ ತೋರಿಸುತ್ತದೆ. ಅಂತಹ ಕಥೆಗಳು ಭಾರತದಿಂದ ಜಗತ್ತನ್ನು ತಲುಪಬಾರದು ಎಂದು ಹಾರೈಸುತ್ತೇನೆ. ವಿಶ್ವದ ಜನಸಂಖ್ಯೆಯ 17% ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕಲ್ಯಾಣವಿಲ್ಲದೆ ವಿಶ್ವದ ಕಲ್ಯಾಣ ಅಸಾಧ್ಯ. ಎಚ್‌ಡಿಐನಲ್ಲಿ ಭಾರತ 130 ನೇ ಸ್ಥಾನದಲ್ಲಿದೆ.” ಎಂದು ಹೇಳಿದ್ದಾರೆ.

ಲೇಖಕಿ ರೂಪಾ ಸುಬ್ರಮಣ್ಯ “ನೀವು ಗಂಭೀರವಾಗಿ ಈ ವಿಸ್ಮೃತಿಶೀಲರಾಗಿದ್ದೀರಾ? ಭಾರತದ ಕೆಟ್ಟ ಕಲ್ಪನೆಯ ಲಾಕ್‌ಡೌನ್ ನಿಂದಾಗಿ ಈ ಮಗು ಮತ್ತು ಅವಳ ಕುಟುಂಬವು ಭಯಾನಕ ಅನುಭವವನ್ನು ಅನುಭವಿಸಿದೆ. ಈ ಘಟನೆ ಅವಳು ವೃತ್ತಿಪರ ಸೈಕ್ಲಿಸ್ಟ್ ಆಗಬೇಕೆಂಬ ಆಕಾಂಕ್ಷೆಯಿಂದ ಆಗಿದ್ದಲ್ಲ, ಇದು ಮಾನವೀಯ ದುರಂತವಾಗಿದೆ.” ಎಂದು ಹೇಳಿದ್ದಾರೆ.

ಲೇಖಕಿ ಸಂಜುಕ್ತ ಬಸು “ಬಡತನ ಎಂದರೇನು ಎಂಬುದರ ಬಗ್ಗೆ ನಿಮಗೆ ಗೊತ್ತಿಲ್ಲ. ನಿಮಗೆ ನಾಚಿಕೆಯಾಗಬೇಕು.” ಎಂದು ಹೇಳಿದ್ದಾರೆ.

ಮತ್ತೊಬ್ಬರು “ಇದರಲ್ಲಿ ಏನು ಸುಂದರವಾಗಿದೆ? ನೀವು ಬಾಲಕಿಯ ಅಸಹಾಯಕತೆಯನ್ನು ನೋಡುತ್ತಿಲ್ಲ. ಇದು ಮೋದಿ ಸರ್ಕಾರದ ಸಂಪೂರ್ಣ ವೈಫಲ್ಯ.” ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ.

ಮತ್ತೊಬ್ಬರು, “ನಮ್ಮಲ್ಲಿ ಅಂತಹ ನೂರಾರು ಜ್ಯೋತಿ ಕುಮಾರಿಯರು, ಹಸಿವಿನ ಹೊಟ್ಟೆ, ಬರಿಯ ಬೆತ್ತಲೆ ಪಾದಗಳು, ತಾಯಂದಿರು, ಅಂಗವಿಕಲರು ಇದ್ದಾರೆ. ಅಲ್ಲದೆ ಅವರೂ ಇದೇ ರೀತಿ ಅವರ ಸೈಕಲಿನಲ್ಲಿ, ಕಾಲ್ನಡಿಗೆಯಲ್ಲಿ, ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ಮಕ್ಕಳನ್ನು ಹೊಂದಿರುವ ತಾಯಂದಿರು ಇನ್ನೂ ದೂರ ಹೋಗುತ್ತಿದ್ದಾರೆ. ಇದು ನಮಗೆ ಹೆಮ್ಮೆಯ ಅಥವಾ ವಿಷಾದದ ವಿಷಯವೇ ಎಂದು ನನಗೆ ತಿಳಿದಿಲ್ಲ.” ಎಂದು ಹೇಳಿ ಕೆಳಗಿನ ಚಿತ್ರವನ್ನು ಟ್ಯಾಗ್ ಮಾಡಿದ್ದಾರೆ.

ಸೂರ್ಯನಾರಾಯಣ್ ಎಂಬವರು “ಇದು ನಿಜವಾಗಿಯೂ ನಿಮ್ಮ ತಂದೆಯ ಸ್ನೇಹಿತರಾರ ನರೇಂದ್ರ ಮೋದಿಯ ವೈಫಲ್ಯವನ್ನು ತೋರಿಸುತ್ತಿದೆ. ಭಾರತದಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೇ ಲಾಕ್ ಡೌನ್ ಮಾಡಿದರಿಂದ, ಇಂತಹ ಲಕ್ಷಾಂತರ ಬಡ ಜನರನ್ನು ಹತಾಶೆಗೆ ತಳ್ಳಿದೆ. ನೀವು ಅದನ್ನು ಕೆಲವು ದೊಡ್ಡ ಸಾಧನೆ ಎಂದು ತೋರಿಸುತ್ತಿದ್ದೀರಿ!” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಗುರುಗ್ರಾಮ್‌ನಲ್ಲಿ ಸಿಲುಕಿಕೊಂಡಿದ್ದ ಬಿಹಾರ ಮೂಲದ 15 ವರ್ಷದ ಬಾಲಕಿ ಜ್ಯೋತಿ ಕುಮಾರಿ ತನ್ನ ಗಾಯಗೊಂಡ ತಂದೆಯನ್ನು 1,200 ಕಿ.ಮೀ ದೂರದ ಹಳ್ಳಿಗೆ ಸೈಕಲ್ ಮೂಲಕ ಕರೆದೊಯ್ದಿದ್ದರು. ಇದನ್ನು ಗಮನಿಸಿದ ಸೈಕ್ಲಿಂಗ್ ಫಡರೇಷನ್ ಬಾಲಕಿಯನ್ನು ಲಾಕ್ ಡೌನ್ ನಂತರ ಟ್ರಯಲ್ ಗೆ ಬರುವಂತೆ ಕೇಳಿಕೊಂಡಿತ್ತು.


ಓದಿ: ತಾನು ಮಾಡುವ ಮಹಾನ್‌ ತಪ್ಪುಗಳಿಗೆ ಮೋದಿ ಬೆಲೆತೆರದೆ ಉಳಿದುಕೊಳ್ಳುವುದಾದರೂ ಹೇಗೆ?


ಓದಿ: ಅಮೆರಿಕಾ ಅಧ್ಯಕ್ಷರ 200 ವೆಂಟಿಲೇಟರ್ ಮತ್ತು ಪ್ರಧಾನಿ ಮೋದಿಯ ಕತೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...