Homeಕರ್ನಾಟಕಕುರುಬ ಸಮುದಾಯದ ಸ್ವಾಮೀಜಿ ವಿರುದ್ಧ ಅವಾಚ್ಯ ಪದಬಳಸಿದ ಮಾಧುಸ್ವಾಮಿ: ಹಾಲುಮತ ಮಹಾಸಭಾ ಖಂಡನೆ

ಕುರುಬ ಸಮುದಾಯದ ಸ್ವಾಮೀಜಿ ವಿರುದ್ಧ ಅವಾಚ್ಯ ಪದಬಳಸಿದ ಮಾಧುಸ್ವಾಮಿ: ಹಾಲುಮತ ಮಹಾಸಭಾ ಖಂಡನೆ

- Advertisement -
- Advertisement -

ಕುರುಬ ಸಮುದಾಯದ ಸ್ವಾಮೀಜಿಯೊಬ್ಬರ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತುಚ್ಚವಾಗಿ ಮಾತನಾಡಿರುವ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಕುರುಬ ಸಮುದಾಯದ ವ್ಯಕ್ತಿಯೊಬ್ಬರು ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೊಬೈಲ್‌ಗೆ ಕರೆ ಮಾಡಿ ಮಾತನಾಡಿದಾಗ ತಾನು ಲಿಂಗಾಯತ ಸಮುದಾಯಕ್ಕೆ ಮಾತ್ರ ಸಚಿವ ಎಂದಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಾರ್ವಜನಿಕ ವ್ಯಕ್ತಿಯೊಬ್ಬರು ಅದರಲ್ಲೂ ಕಾನೂನು ಸಚಿವರಾಗಿರುವ ಜೆ.ಸಿ.ಮಾಧುಸ್ವಾಮಿ ಹೀಗೆ ಒರಟಾಗಿ ತನ್ನ ಸಮುದಾಯಕ್ಕೆ ಮಾತ್ರ ಸೀಮಿತ ಮಂತ್ರಿ ಎಂದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾನೂನು ಸಚಿವರೇ ಚಿಕ್ಕನಾಯಕನಹಳ್ಳಿಯಲ್ಲಿ ಕನಕ ಪ್ರತಿಮೆ ವಿಷಯದ ಕುರಿತು ಕುರುಬ ಸ್ವಾಮೀಜಿಯೊಬ್ಬರಿಗೆ ಕನಿಷ್ಟ ಪದಗಳನ್ನು ಬಳಸಿರುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದರಿಂದ ಆಕ್ರೋಶಗೊಂಡಿರುವ ಕುರುಬ ಸಮುದಾಯದ ಸಂಘಟನೆಗಳು ಸಚಿವರು ಬಹಿರಂಗ ಕ್ಷಮೆ ಕೇಳಬೇಕು. ಸಂವಿಧಾನಬದ್ದವಾಗಿ ಯಾವ ಭೇದವೂ ಮಾಡುವುದಿಲ್ಲವೆಂದು ಪ್ರಮಾಣ ವಚನ ಸ್ವೀಕರಿಸಿರುವ ಜೆ.ಸಿ.ಮಾಧುಸ್ವಾಮಿ ಅವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಬೇಕೆಂದು ಹಾಲುಮತ ಮಹಾಸಭಾ ತುಮಕೂರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರನ್ನು ಒತ್ತಾಯಿಸಿದೆ.

ಕಾನೂನು ಸಚಿವರಾಗಿಯೂ ಹೀಗೆ ಬೇಜವಾಬ್ದಾರಿತನದಿಂದ ಮಾತನಾಡಿರುವುದು ಮತ್ತು ತಾನು ಲಿಂಗಾಯತರಿಗೆ ಮಾತ್ರ ಮಂತ್ರಿ ಎಂದು ಹೇಳಿರುವುದು ಸೂಕ್ತವಲ್ಲ. ಸಚಿವರು ಹೀಗೆ ವರ್ತಿಸುವ ಮೂಲಕ ತಾನು ತೆಗೆದುಕೊಂಡ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಟಿ.ಎಂ. ಗರುಡಯ್ಯ, ಟಿ.ಇ.ರಘುರಾಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇನ್ನೊಂದೆಡೆ ಕುರುಬ ಸಮುದಾಯದ ಸ್ವಾಮೀಜಿಯ ಬಗ್ಗೆ ಹಗುರವಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜೆ.ಸಿ. ಮಾಧುಸ್ವಾಮಿ ಅವರನ್ನು ಕರೆಸಿಕೊಂಡು ಕಿವಿಮಾತು ಹೇಳಿದ್ದಾರೆ. ಸ್ವಾಮೀಜಿಯವರ ಬಗ್ಗೆ ಹಾಗೆಲ್ಲ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ. ಇದಕ್ಕೆ ಜೆ.ಸಿ. ಮಾಧುಸ್ವಾಮಿ ನಾನು ಯಾವ ಸ್ವಾಮೀಜಿ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ ಎಂದು ಮಾಧ್ಯಮಗಳ ಮುಂದೆ ಗರಂ ಆಗಿಯೇ ಹೇಳಿ ಹೊರಟು ಹೋಗಿದ್ದಾರೆ.

ಇದೇ ವೇಳೆ ಯಾವ ಜಾಗದಲ್ಲಿ ಕುರುಬ ಸಮುದಾಯದ ಸ್ವಾಮೀಜಿ ವಿರುದ್ಧ ಮಾತನಾಡಿದ್ದರೋ ಅದೇ ಜಾಗದಲ್ಲಿ ಬೃಹತ್ ಕನಕ ಜಯಂತಿ ಮಾಡಿ ಜೆ.ಸಿ. ಮಾಧುಸ್ವಾಮಿಗೆ ವೇದಿಕೆಯ ಮೂಲಕ ಸೂಕ್ತ ಉತ್ತರ ನೀಡಲು ಕುರುಬ ಸಮುದಾಯ ಸಿದ್ದವಾಗಿದೆ. ಜೊತೆಗೆ ಕಾನೂನು ಸಚಿವರು ಪಾಲ್ಗೊಳ್ಳುವ ಸಭೆ ಸಮಾರಂಭಗಳಲ್ಲಿ ಕಪ್ಪು ಬಾವುಟ ಪ್ರದರ್ಶನಕ್ಕೆ ಕುರುಬ ಸಮುದಾಯ ಮುಂದಾಗಿದೆ.

ಕಾನೂನು ಸಚಿವರಾಗಿರುವ ಜೆ.ಸಿ.ಮಾಧುಸ್ವಾಮಿ ಕಾನೂನುಗಳನ್ನು ಗಾಳಿಗೆ ತೂರುವುದು ರಾಜ್ಯಪಾಲದಿಂದ ತೆಗೆದುಕೊಂಡ ಪ್ರಮಾಣವಚನ ಉಲ್ಲಂಘಿಸಿ ವರ್ತಿಸುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಧಿಕಾರ ದಕ್ಕಿದ ಕೂಡಲೇ ಅಹಂಕಾರದ ಮೂಟೆಗಳಂತೆ ವರ್ತಿಸುವುದನ್ನು ನಮ್ಮ ರಾಜಕಾರಣಿಗಳು ಮೊದಲು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...