Homeಅಂಕಣಗಳುಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

ಮಾತಿನ ಮೂಲಕ ದೇಹದ ಅಸ್ಪೃಶ್ಯತೆ ಮೀರಿದ ಟ್ರಾನ್ಸ್ ಜೆಂಡರ್ ರೇಡಿಯೊ ಜಾಕಿ ಪ್ರಿಯಾಂಕಾ

- Advertisement -
- Advertisement -
ಎಲೆಮರೆ-23

ಕಾಲಕಾಲಕ್ಕೆ ಜಾತಿವಾದಿ, ಗಂಡಾಳ್ವಿಕೆ ಸಮಾಜವು ಅಸ್ಪೃಶ್ಯತೆಯ ಪಟ್ಟಿಯಲ್ಲಿ ಹೊಸ ಸಮುದಾಯಗಳನ್ನು ಸೇರಿಸುತ್ತಾ ಮುಟ್ಟದವರೆಂದು ಪಟ್ಟ ಕಟ್ಟಿ ದೂರ ಇಡುವ ಪ್ರಕ್ರಿಯೆ ಸದಾ ಜಾರಿಯಲ್ಲಿರುತ್ತದೆ. ಹೀಗೆ ರೂಪುಗೊಂಡ ನವ ಅಸ್ಪೃಶ್ಯರೆಂದರೆ ಟ್ರಾನ್ಸ್ ಜೆಂಡರ್ ಅಥವಾ ತೃತೀಯ ಲಿಂಗಿಗಳು. ಇವರ ಬಗೆಗೆ ಅನಗತ್ಯ ಭಯ ಹುಟ್ಟಿಸಿ ಅವರನ್ನು ನೋಡುವ ನೋಟಕ್ರಮದಲ್ಲೇ ಕೀಳುತನವನ್ನು ಬೆರೆಸಿ ಹತ್ತಿರ ಬಂದರೆ ಚೇಳು ಕಡಿದಂತೆ ದೂರ ಸರಿಸುವ ಪ್ರವೃತ್ತಿ ಅನೇಕರಲ್ಲಿದೆ. ಹೀಗಾಗಿ ಟ್ರಾನ್ಸ್ ಜೆಂಡರ್ ಸಮುದಾಯಕ್ಕೆ ದೈಹಿಕವಾಗಿ ಕಾಣಿಸಿಕೊಳ್ಳುವ ಕೆಲಸಗಳಿಗಿಂತ ದೈಹಿಕವಾಗಿ ಕಾಣಿಸಿಕೊಳ್ಳದ ಕೆಲಸಗಳು ಸಿಗತೊಡಗಿದವು. ಇದರಲ್ಲಿ ರೇಡಿಯೋ ಜಾಕಿ ವೃತ್ತಿಯೂ ಒಂದು. ಇಲ್ಲಿ ಮಾತನಾಡುತ್ತಿರುವವರು ಯಾರು ಎಂದು ತಕ್ಷಣಕ್ಕೆ ಗುರುತಾಗದು. ಹಾಗಾಗಿಯೇ ಧ್ವನಿಯನ್ನು ಕೇಳಿಸಿಕೊಳ್ಳುವುದಕ್ಕೆ ದೇಹದ ಸೌಂದರ್ಯವಾಗಲಿ, ಅಂಗವೈಕಲ್ಯವಾಗಲಿ, ಜಾತಿಧರ್ಮ ಲಿಂಗದ ತರತಮಗಳಾಗಲಿ ಅಡ್ಡಿ ಬರಲಾರವು. ಈ ಕಾರಣಕ್ಕೆ ಇಂದು ಟ್ರಾನ್ಸ್ ಜೆಂಡರ್ ಸಮುದಾಯ ರೇಡಿಯೋ ಜಾಕಿ ವೃತ್ತಿಯತ್ತ ಆಕರ್ಷಿತರಾಗುತ್ತಿದ್ದಾರೆ. ಇಂತಹದ್ದೊಂದು ಪ್ರಯೋಗಕ್ಕೆ ಮೊದಲ ಹೆಜ್ಜೆ ಇಟ್ಟದ್ದು ಬೆಂಗಳೂರಿನ ಗಿರಿನಗರದ ನಿವಾಸಿ ರೇಡಿಯೋ ಜಾಕಿಯಾದ ಟ್ರಾನ್ಸ್ ಮಹಿಳೆ ಪ್ರಿಯಾಂಕ ದಿವಾಕರ್.

`ಮಾಗಡಿಯಲ್ಲಿ ಮೇ 30, 1985ರಲ್ಲಿ ಜನಿಸಿದಾಗ ನಾನು ಹುಡುಗನಾಗಿದ್ದೆ. ರಾಜು ಎಂದು ಹೆಸರಿಟ್ಟಿದ್ದ ಅಪ್ಪ-ಅಮ್ಮ ತುಂಬಾ ಪ್ರೀತಿಸುತ್ತಿದ್ದರು. ಆದರೆ ನನ್ನ ದೇಹದಲ್ಲಿ ಆಗುತ್ತಿದ್ದ ಬದಲಾವಣೆಯನ್ನು ಅವರು ಅರ್ಥಮಾಡಿಕೊಳ್ಳಲಿಲ್ಲ. ಚಾಮರಾಜಪೇಟೆಯಲ್ಲಿ ಶಾಲೆಗೆ ಹೋಗುತ್ತಿದ್ದಾಗಲೇ ನಾನು ಹೆಣ್ಣಿನಂತೆ ವರ್ತಿಸಲು ಶುರು ಮಾಡಿದ್ದೆ. ಹುಡುಗಿಯರೊಂದಿಗೆ ಕೂರಬೇಕು, ಅವರಂತೆ ಬಟ್ಟೆ ಧರಿಸಬೇಕು ಎನಿಸುತ್ತಿತ್ತು. ಮನೆಯಲ್ಲಿ ರಂಗೋಲಿ ಹಾಕುತ್ತಿದ್ದೆ. ತಾಯಿಯೊಂದಿಗೆ ಬೇರೆಯವರ ಮನೆ ಕೆಲಸಕ್ಕೆ ಹೋಗುತ್ತಿದ್ದೆ. ಈ ವರ್ತನೆ ಕಂಡು ಪೋಷಕರು ಬೈಯಲು ಶುರು ಮಾಡಿದರು. ಶಾಲೆಯಲ್ಲಿ ಸ್ನೇಹಿತರು ಹಾಗೂ ಶಿಕ್ಷಕರು ಹೀಯಾಳಿಸಿ ಖೋಜಾ ಎನ್ನುತ್ತಿದ್ದರು. ಆಗ ನಾನು ದೈಹಿಕವಾಗಿ ಹುಡುಗನಂತೆ ಇದ್ದೆ. ಆದರೆ ಮನಸ್ಸಿನ ಭಾವನೆಗಳು ಹುಡುಗಿಯಂತಿದ್ದವು. ಕಷ್ಟಪಟ್ಟು 9ನೇ ತರಗತಿಯವರೆಗೆ ಓದಿದೆ. ಆದರೆ ಯಾತನೆ ಶುರುವಾಯಿತು. ಯಾರೂ ನನ್ನನ್ನು ಅರ್ಥಮಾಡಿಕೊಳ್ಳುತ್ತಿಲ್ಲವಲ್ಲ ಎಂಬ ಬೇಸರವಿತ್ತು. ಆಗಲೇ ನಾನು ಮನೆ ಬಿಡುವ ತೀರ್ಮಾನ ಮಾಡಿದೆ’ ಎಂದು ಪ್ರಿಯಾಂಕ ತನ್ನ ಬಾಲ್ಯದ ರೂಪಾಂತರವನ್ನು ನೆನೆಯುತ್ತಾರೆ.

ಮುಂದುವರಿದು `ಗೊರಗುಂಟೆಪಾಳ್ಯದ ಆ ವೇಶ್ಯೆಯರ ಮನೆ (ಹಮಾಮ್) ಸೇರಿಕೊಂಡಾಗ ನನಗಿನ್ನೂ 13 ವರ್ಷ ಗಂಡಾಗಿದ್ದ ನನಗೆ ಹೆಣ್ಣಾಗಬೇಕೆಂಬ ಆಸೆ ಹುಟ್ಟಿತು. ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ದುಡ್ಡು ಹೊಂದಿಸಲು ಮನೆ ಬಿಟ್ಟುಬಂದ ನಾನು ದೇಹ ಮಾರಿಕೊಳ್ಳಲು ಶುರುಮಾಡಿದೆ. ಹತ್ತು ವರ್ಷ ಲೈಂಗಿಕ ಕಾರ್ಯಕರ್ತೆಯಾಗಿ ಕೆಲಸ ಮಾಡಿರಬಹುದು. ಆ ಸಂದರ್ಭದಲ್ಲಿ ಹೆಚ್ಚಿನ ಗಂಡಸರು ನನ್ನೊಂದಿಗೆ ಕ್ರೂರವಾಗಿ ವರ್ತಿಸಿದ್ದಾರೆ. ಒಬ್ಬ ಮಾತ್ರ ಎಲ್ಲಾ ಕೆಲಸ ಮುಗಿದ ಮೇಲೆ `ನೀನು ಇಲ್ಲಿ ಯಾಕಿದ್ದೀಯಾ? ಈ ಲೋಕದಿಂದ ಹೊರ ಬಾ. ನೋಡಲು ಸುಂದರವಾಗಿದ್ದೀಯಾ. ಒಳ್ಳೆಯ ಕೆಲಸ ಮಾಡಿಕೊಂಡು ಬದುಕಿಕೊ’ ಎಂದು ಸಲಹೆ ನೀಡಿದ್ದ. ಆ ವ್ಯಕ್ತಿಯ ಮಾತು ಮುದ ನೀಡಿತು. ಈ ವೃತ್ತಿ ತೊರೆಯಬೇಕು ಎಂದು ಮೊದಲ ಬಾರಿ ಅನಿಸಿದ್ದೇ ಆಗ’ ಎನ್ನುತ್ತಾರೆ.

ಪ್ರಿಯಾಂಕ ಒಂದು ದಿನ ರಸ್ತೆ ಬದಿಯಲ್ಲಿ ಗಿರಾಕಿಗಳಿಗಾಗಿ ಕಾಯುತ್ತಿರುವಾಗ, ಮೂರುನಾಲ್ಕು ಮಂದಿ ಕಾರಿನಲ್ಲಿ ಎಲ್ಲಿಗೋ ಕರೆದೊಯ್ದು ಒಬ್ಬರ ಬಳಿಕ ಒಬ್ಬರು ಮೈಮೇಲೆ ಎರಗಿ ದುಡ್ಡು ಕೊಡದೆ ಓಡುತ್ತಾರೆ. ಈ ಘಟನೆ ಪ್ರಿಯಾಂಕಳನ್ನು ಘಾಸಿಗೊಳಿಸುತ್ತದೆ. `ಸೆಕ್ಸ್ ವರ್ಕ್ ಇನ್ನು ಸಾಕು’ ಅನ್ನಿಸುತ್ತದೆ. ಏನಾದರೂ ಸಾಧಿಸಬೇಕು ಎಂಬ ಭಾವನೆ ಮೊಳೆಯುತ್ತದೆ. ಈ ಸಂದರ್ಭಕ್ಕೆ ಎನ್‍ಜಿಒ ಸಂಸ್ಥೆ ಸಂಗಮ ನೆರವಿಗೆ ಬರುತ್ತದೆ. ಈ ಹಂತದಲ್ಲಿ 2010 ರಲ್ಲಿ ಜೈನ್ ಸಮೂಹ ಸಂಸ್ಥೆ ನಡೆಸುತ್ತಿರುವ ಎಫ್.ಎಂ. 90.4 ರೇಡಿಯೊ ಆಕ್ಟೀವ್ ಪ್ರಿಯಾಂಕಳನ್ನು ಸಂದರ್ಶಿಸಿ, ರೇಡಿಯೋ ಜಾಕಿಯನ್ನಾಗಿ ಸೇರಿಸಿಕೊಳ್ಳುತ್ತದೆ. ಇದೀಗ ಪ್ರತಿ ಗುರುವಾರ `ಯಾರಿವರು’ ಎನ್ನುವ ಜನಪ್ರಿಯ ಕಾರ್ಯಕ್ರಮದಲ್ಲಿ ಸ್ವತಃ ಪ್ರಿಯಾಂಕ ಟ್ರಾನ್ಸ್ ಜೆಂಡರ್ ಸಮುದಾಯದ ನೋವಿಗೆ ಧ್ವನಿಯಾಗಿದ್ದಾರೆ.

ಈಚೆಗೆ ಮುಂಬೈನ ಹಮ್ ಸಫರ್ ಸಂಸ್ಥೆಯು ಪ್ರಿಯಾಂಕ ನಡೆಸುವ ‘ಯಾರಿವರು?’ ಅತ್ಯುತ್ತಮ ಕಾರ್ಯಕ್ರಮ ಎಂದು ಪ್ರಶಸ್ತಿ ನೀಡಿದೆ. ಮುಂಬೈನ ರೇಡಿಯೋ ಕಾನೆಕ್ಸ್ ಸಂಸ್ಥೆಯು 2018ರಲ್ಲಿ ‘ಯಾರಿವರು?’ ಕಾರ್ಯಕ್ರಮಕ್ಕೆ ‘ಗೋಲ್ಡನ್ ಅವಾರ್ಡ್‘ ಪ್ರಶಸ್ತಿ ನೀಡಿತ್ತು. ಇದರೊಂದಿಗೆ, ಸುವರ್ಣ ರಾಜ್ಯ ಪ್ರಶಸ್ತಿ, ಯುವ ಸಾಧಕಿ ಪ್ರಶಸ್ತಿ, ನಮ್ಮ ಬೆಂಗಳೂರು ಪ್ರಶಸ್ತಿ, 2018ರ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಒಳಗೊಂಡಂತೆ, ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಎಂದು ‘ಲಿಮ್ಕಾ ಬುಕ್ ಆಫ್ ರೆಕಾಡ್ರ್ಸ್’ನಲ್ಲಿ ಪ್ರಿಯಾಂಕ ಹೆಸರು ಸೇರಿಕೊಂಡಿದೆ. ಪ್ರಿಯಾಂಕಳ ಸಾಧನೆಯ ಹಾದಿ ಗುರುತಿಸಿ ವಿವಿಧ ಸಂಸ್ಥೆಗಳು 25ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ನೀಡಿವೆ. ನಟ ಧನಂಜಯ ಅವರೊಂದಿಗೆ ‘ಜಯನಗರ 4ನೇ ಬ್ಲಾಕ್’ ಕಿರುಚಿತ್ರದಲ್ಲಿ ನಟಿಸಿ ಪ್ರಿಯಾಂಕ ಗಮನ ಸೆಳೆದಿದ್ದಾಳೆ. ಇದೇ ದಾರಿಯಲ್ಲಿ ಸೌಮ್ಯ, ಏ ಮಾಮ, ನೀನ್ ಗಂಡ್ಸ ಹೆಂಗ್ಸ, ಅವ್ನಿ, ಸಿದ್ಧಿ ಸೀರೆ ಹೀಗೆ ಅನೇಕ ಕಿರುಚಿತ್ರಗಳಲ್ಲಿ ಪ್ರಿಯಾಂಕ ನಟಿಸಿದ್ದಾಳೆ. ಪಯಣ ಎನ್ನುವ ಎನ್.ಜಿ.ಓ ಸಹಾಯದಿಂದ ಮೆನಿ ಕ್ವೀನ್ಸ್ ಪ್ರಾಜೆಕ್ಟ್ ನಲ್ಲಿ ಸಂಜೋತ ತೆಲಂಗ್ ಅವರು ಪ್ರಿಯಾಂಕ ಅವರನ್ನು ಅಂತಾರಾಷ್ಟ್ರೀಯ ಮಟ್ಟದ ಫ್ಯಾಶನ್ ಶೋಗೆ ಫೋಟೋಗ್ರಫಿ ಮಾಡಿದ್ದರು. ಪ್ಯಾರಿಸ್‍ನಲ್ಲಿ ಪ್ರಿಯಾಂಕ ಮಿಂಚಿದ್ದರು. ಈ ಕುರಿತು ಬಿ.ಬಿ.ಸಿ ವರದಿ ಮಾಡಿತ್ತು. ಹೀಗೆ ರಸ್ತೆ ಬದಿ ನಿಂತು ಗಿರಾಕಿಗಳಿಗಾಗಿ ಕಾಯುತ್ತಿದ್ದ ಪ್ರಿಯಾಂಕ ತಾನೆ ಟ್ರಾನ್ಸ್ ಜೆಂಡರ್ ಸಮುದಾಯಕ್ಕೆ ಮಾದರಿಯಾಗಿದ್ದಾರೆ.

`ಹತ್ತು ವರ್ಷದ ಬಳಿಕ ಮನೆಯವರು ನನ್ನನ್ನು ಒಪ್ಪಿಕೊಂಡಿದ್ದಾರೆ. ನಾನು ಇದೀಗ ಪೋಷಕರೊಂದಿಗೆ ಗಿರಿನಗರದಲ್ಲಿ ನೆಲೆಸಿದ್ದೇನೆ. ಅವರನ್ನು ನಾನೇ ಸಲಹುತ್ತಿದ್ದೇನೆ. ಮದುವೆ ಆಗಬೇಕೆಂಬ ಆಸೆ ಇದೆ. ನನ್ನ ಮನಸ್ಸನ್ನು ಅರ್ಥಮಾಡಿಕೊಂಡು ಬದುಕುವ ಹುಡುಗ ಸಿಕ್ಕಿದರೆ ವಿವಾಹವಾಗಿ ಒಂದು ಮಗುವನ್ನು ದತ್ತು ತೆಗೆದುಕೊಳ್ಳುತ್ತೇನೆ. ಇಷ್ಟು ವರ್ಷಗಳ ನನ್ನ ಅನುಭವಗಳ ಕುರಿತು ಪುಸ್ತಕ ಬರೆಯುತ್ತಿದ್ದೇನೆ. ಕಾರ್ ಡ್ರೈವಿಂಗ್, ಇಂಗ್ಲಿಷ್ ಕಲಿಯುತ್ತಿದ್ದು ಶಿಕ್ಷಣ ಮುಂದುವರಿಸಬೇಕೆಂಬ ಆಸೆ ಇದೆ. ನೃತ್ಯವೆಂದರೆ ಇಷ್ಟ. ಹಲವು ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ರೇಡಿಯೋ ಜಾಕಿ ಎಂದು ಇದೀಗ ಎಲ್ಲರೂ ನನ್ನನ್ನು ಗೌರವಿಸುತ್ತಾರೆ. ಇದು ಬದುಕಿನ ಬಗ್ಗೆ ಪ್ರೀತಿ ಮೂಡಿಸಿದೆ. ಆದರೆ ನನ್ನ ಅದೆಷ್ಟೋ ಸ್ನೇಹಿತರು ಇನ್ನೂ ಆ ವೇಶ್ಯಾಗೃಹಗಳಲ್ಲಿ ಕರಗುತ್ತಿದ್ದಾರೆ. ಖಂಡಿತ ಅವರಿಗೆಲ್ಲಾ ಸಹಾಯ ಮಾಡುವ ತುಡಿತವಿದೆ’ ಎಂದು ಪ್ರಿಯಾಂಕ ತನ್ನ ಕನಸು ಕಾಣ್ಕೆಗಳನ್ನು ಹೇಳಿಕೊಳ್ಳುತ್ತಾರೆ. ಪ್ರಿಯಾಂಕಳ ಕನಸುಗಳು ಈಡೇರಲಿ, ಮತ್ತಷ್ಟು ಎತ್ತರೆತ್ತರಕ್ಕೆ ಬೆಳೆದು ಟ್ರಾನ್ಸ್ ಜೆಂಡರ್ ಸಮುದಾಯದಲ್ಲಿ ಹೊಸ ಕನಸುಗಳ ಕಟ್ಟಲು ಪ್ರೇರಣೆಯಾಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...