Homeನ್ಯಾಯ ಪಥಪಿಕೆ ಟಾಕೀಸ್: ಭವಿಷ್ಯ, ಆಯ್ಕೆ, ಸ್ವಇಚ್ಛೆ ಮತ್ತು ದೇವರ ಕಲ್ಪನೆಗಳ ಸುತ್ತ ಸುತ್ತುವ ಜಾಕೊರ ಸಿನಿಮಾಗಳು

ಪಿಕೆ ಟಾಕೀಸ್: ಭವಿಷ್ಯ, ಆಯ್ಕೆ, ಸ್ವಇಚ್ಛೆ ಮತ್ತು ದೇವರ ಕಲ್ಪನೆಗಳ ಸುತ್ತ ಸುತ್ತುವ ಜಾಕೊರ ಸಿನಿಮಾಗಳು

- Advertisement -
- Advertisement -

ಪಿಕೆ ಟಾಕೀಸ್ 14/ ಜಾಗತಿಕ ಸಿನಿಮಾ/ ಬೆಲ್ಜಿಯಂ/ ಜಾಕೊ ವಂಡೊಮಾಲ್

ಮಿಸ್ಟರ್ ನೋಬಡಿ (MR. Nobody, ಇಂಗ್ಲಿಷ್, 2009)

ವಿಚ್ಛೇದನೆಗೊಂಡಿರುವ ತಂದೆತಾಯಿಗಳು ಬೇರೆಯಾಗುತ್ತಿದ್ದಾರೆ. ಅವರ ಹತ್ತು ವರ್ಷದ ಮಗ ನಿಮೋ ನೋಬಡಿ ಯಾರೊಂದಿಗೆ ಹೋಗಬೇಕೆನ್ನುವ ಗೊಂದಲದಲ್ಲಿರುತ್ತಾನೆ. ರೈಲ್ವೆ ನಿಲ್ದಾಣದಲ್ಲಿ ತಾಯಿ ಮಾತ್ರ ರೈಲು ಹತ್ತುತ್ತಾಳೆ. ರೈಲು ಮುಂದಕ್ಕೆ ಚಲಿಸುತ್ತಿದ್ದಂತೆ, ತಾಯಿ ಮಗನನ್ನು ತನ್ನೊಂದಿಗೆ ಬರಲು ಕರೆಯುತ್ತಾಳೆ. ರೈಲಿನ ಹಿಂದೆ ಓಡುತ್ತಿರುವ ಬಾಲಕನನ್ನು ನಿಲ್ದಾಣದಲ್ಲಿ ನಿಂತಿರುವ ತಂದೆಯೂ ಅವನ ಬಳಿಗೆ ಬರಲು ಕರೆಯುತ್ತಾನೆ. ಈಗ ಯಾರ ಜೊತೆ ಹೋಗಬೇಕೆಂಬ ಆಯ್ಕೆಯಿಂದ ಪ್ರಾರಂಭವಾಗಿ, ಭವಿಷತ್ತಿನ ವಿವಿಧ ಸಂಭವನೀಯ ಬದುಕುಗಳೇ ಈ ಸಿನಿಮಾ.

ಸಿನಿಮಾದ ಮೊದಲ ದೃಶ್ಯ: ಅದು 2092ನೇ ಇಸವಿ, ಮನುಕುಲ ಸಾವನ್ನು ಜಯಿಸಿರುತ್ತದೆ. ಆಗ ಭೂಮಿಯ ಮೇಲೆ ಕೊನೆಯದಾಗಿ ಸಾಯುವವನು ನೂರ ಹದಿನೆಂಟು ವರ್ಷಗಳು ತುಂಬಿದ ವೃದ್ಧ ನೋಬಡಿ. ಕೋಮಾದಿಂದ ಹೊರಬಂದ ಮಿಸ್ಟರ್ ನೋಬಡಿಯ ಬದುಕಿನ ಬಗ್ಗೆ ಅಲ್ಲಿಗೆ ಬಂದ ಯುವ ಪತ್ರಕರ್ತನೊಬ್ಬ ಕೇಳುತ್ತಾನೆ. ಬಾಲಕನ ವಾಯ್ಸ್ ಓವರ್‌ನಿಂದ ಮುಂದುವರಿಯುವ ಕಥೆಯಲ್ಲಿ ಬಟರ್‌ಫ್ಲೈ ಎಫೆಕ್ಟ್
ಕುರಿತು ಹೇಳುತ್ತಾನೆ. ಚಿಟ್ಟೆಯೊಂದು ಹಾರುವಾಗ ಒಣಗಿದ ಎಲೆಯೊಂದು ಹಾರಿ ರಸ್ತೆ ಬದಿಯ ಫುಟ್‌ಪಾತ್‌ನಲ್ಲಿ ನಡೆದುಬರುತ್ತಿರುವ ಇಬ್ಬರು ಭೇಟಿಯಾಗಲು ಸಹಾಯ ಮಾಡುತ್ತದೆ. ಹೀಗೆ ಒಂದಾದ ಜೋಡಿಗೆ ಮಗನಾಗಿ ನಿಮೋ ಹುಟ್ಟುತ್ತಾನೆ.

ಹತ್ತು ವರ್ಷವಿರುವಾಗ ಸಿಹಿ ತಿಂಡಿಯ ಅಂಗಡಿಗೆ ಹೋಗುವ ನಿಮೋ ಎರಡು ಬಗೆಯ ತಿಂಡಿಯನ್ನು ನೋಡಿ ಆಯ್ಕೆ ಮಾಡಲು ಪ್ರಯತ್ನಿಸಿ ಸಾಧ್ಯವಾಗದೆ ವಾಪಸ್ಸಾಗುತ್ತಾನೆ. ಬರುವ ದಾರಿಯಲ್ಲಿ ನಿಮೋ ತನ್ನ ಮೂವರು ಗೆಳತಿಯರನ್ನು ನೋಡುತ್ತಾನೆ. ಅವರು ಅನ್ನಾ, ಎಲ್ಲಿಸ್ಸಾ ಮತ್ತು ಜೀನ್. ಅವರಲ್ಲಿ ಅನ್ನಾ ಅವನಿಗೆ ಅತಿ ಅಚ್ಚು ಮೆಚ್ಚು.

ಒಂದು ಕಥಾ ಎಳೆಯಲ್ಲಿ ತಾಯಿಯೊಂದಿಗೆ ಹೋದ ನಿಮೋ ಬೇರೆ ಊರಿನಲ್ಲಿ ಬೆಳೆದು ಹದಿನಾಲ್ಕು ವಯಸ್ಸಿನವನಾಗುತ್ತಾನೆ. ಅವನ ಶಾಲೆಗೆ ಅನ್ನಾ ಬರುತ್ತಾಳೆ. ಅನ್ನಾಳತ್ತ ಆಕರ್ಷಿತಗೊಳ್ಳುತ್ತಾನೆ. ಒಮ್ಮೆ ನದಿಯ ದಡದಲ್ಲಿ ಕುಳಿತಿರುವ ನಿಮೋನನ್ನು ಈಜಲು ಅನ್ನಾ ಕರೆಯುತ್ತಾಳೆ. ತನಗೆ ಈಜು ಬಾರದನ್ನು ಮುಚ್ಚಿಡಲು ಅವಳಿಗೆ ಕೋಪದಿಂದ ಬರುವುದಿಲ್ಲವೆನ್ನುತ್ತಾನೆ. ಅಲ್ಲಿಂದ ಅವನು ಒಂಟಿಯಾಗಿಯೇ ಬದುಕುತ್ತಾನೆ. ಇನ್ನೊಂದು ಆಯ್ಕೆಯಲ್ಲಿ ತನಗೆ ಈಜು ಬಾರದ ವಿಷಯವನ್ನು ಅನ್ನಾಗೆ ಹೇಳುತ್ತಾನೆ. ಅನ್ನಾ ನಿಮೋನ ನಡುವೆ ಪ್ರೀತಿಯಾಗುತ್ತದೆ. ಇಲ್ಲಿಂದ ಕಥೆ ಎರಡು ಭಾಗಗಳಾಗುತ್ತದೆ. ಮೊದಲನೆಯದು ಇಬ್ಬರು ಮದುವೆಯಾಗಿ ಮಕ್ಕಳೊಂದಿಗೆ ಸುಖವಾಗಿ ಬದುಕುತ್ತಿರುವಾಗ, ನಿಮೋನ ಕಾರು ನದಿಗೆ ಹಾರಿ ಬಾಗಿಲು ತೆಗೆಯಲಾಗದೆ ನಿಮೋ ಸಾಯುವುದು ಕಥೆಯ ಕೊನೆ.

ಇನ್ನೊಂದು ಕಥಾ ಎಳೆಯಲ್ಲಿ ನಿಮೋನ ತಾಯಿಯ ಹೊಸ ಗಂಡನ ಮುಂಚಿನ ಮದುವೆಯಿಂದ ಹುಟ್ಟಿರುವ ಮಗಳು ಅನ್ನಾ ನಿಮೋನ ಮನೆಗೆ ಬರುತ್ತಾಳೆ. ಮನೆಯಲ್ಲಿ ಯಾರಿಗೂ ತಿಳಿಯದಂತೆ ಅವರಿಬ್ಬರೂ ಪರಸ್ಪರ ಹತ್ತಿರವಾಗುತ್ತಾರೆ. ಸಮಯ ಕಳೆದಂತೆ ನಿಮೋ ತಾಯಿಗೂ, ಅನ್ನಾಳ ತಂದೆಗೂ ಹೊಂದಾಣಿಕೆಯಾಗದೆ, ಅವರಿಬ್ಬರೂ ಬೇರೆಯಾಗುತ್ತಾರೆ. ನಿಮೋ ಬೆಳೆದು ಯುವಕನಾಗಿ ಅನ್ನಾಳ ಕಾಯುವಿಕೆಯಲ್ಲೇ ಇರಬೇಕಾದಾಗ, ಆಕಸ್ಮಿಕವಾಗಿ ಅನ್ನಾಳನ್ನು ಭೇಟಿಯಾಗುತ್ತಾನೆ. ಆಗ ಅನ್ನಾ ತನ್ನ ದೂರವಾಣಿ ಸಂಖ್ಯೆಯನ್ನು ಕೊಟ್ಟು ಅಲ್ಲಿಂದ ಹೋಗುತ್ತಾಳೆ. ಆಕಾಶದಿಂದ ಬಿದ್ದ ಮೊದಲ ಮಳೆ ಹನಿ ಅನ್ನಾಳ ದೂರವಾಣಿ ಸಂಖ್ಯೆಯನ್ನು ಅಳಿಸಿಬಿಡುತ್ತದೆ. ಅವಳಿಗಾಗಿ ಜೀವನಪೂರ್ತಿ ಕಾದರೂ ಅನ್ನಾ ಬರದಿರುವುದು ಈ ಕಥೆಯ ಕೊನೆ.

ಮತ್ತೊಂದು ಎಳೆಯಲ್ಲಿ ತಂದೆಯೊಂದಿಗೆ ಹೋದಾಗ ತಂದೆ ಅಪಘಾತವೊಂದರಿಂದ ಅಂಗವಿಕಲನಾಗುತ್ತಾನೆ. ತಂದೆಯನ್ನು ನೋಡಿಕೊಳ್ಳುವ ಜವಾಬ್ದಾರಿ ನಿಮೋಗೆ ಬರುತ್ತದೆ. ಇಲ್ಲಿ ಇನ್ನೊಬ್ಬ ಗೆಳತಿಯಾದ ಎಲ್ಲಿಸ್ಸಾಳನ್ನು ಪ್ರೀತಿಸಿ ಅವಳಿಗೆ ತನ್ನ ಪ್ರೀತಿಯನ್ನು ನಿವೇದಿಸಿಕೊಳ್ಳಲು ಹೋಗುತ್ತಾನೆ. ಎಲ್ಲಿಸ್ಸಾ ಬೇಡವೆಂದಾಗ ಈ ಕಥೆ ಇನ್ನೆರಡಾಗಿ ಸೀಳುತ್ತದೆ. ಒಂದರಲ್ಲಿ ಬೈಕ್ ಅಪಘಾತವಾಗಿ ಆತ ಕೋಮಾಕ್ಕೆ ಹೋದರೆ. ಇನ್ನೊಂದರಲ್ಲಿ ಜೀನ್‌ಳನ್ನು ಮದುವೆಯಾಗಿ ಶ್ರೀಮಂತನಾಗಿ ಬದುಕಿದರೂ ನಿರುತ್ಸಾಹದಲ್ಲಿದ್ದು, ಕೊಲೆಯಾಗುತ್ತಾನೆ. ಎಲ್ಲಿಸ್ಸಾ ಒಪ್ಪಿಕೊಂಡಾಗ ಇಲ್ಲಿಂದ ಕಥೆ ಇನ್ನೆರಡು ಭಾಗಗಳಾಗುತ್ತವೆ. ಎಲ್ಲಿಸ್ಸಾಳನೊಂದಿಗೆ ಮದುವೆಯಾಗಿ ಕಾರು ಅಪಘಾತದಲ್ಲಿ ಎಲ್ಲಿಸ್ಸಾ ಸಾಯುತ್ತಾಳೆ. ಇನ್ನೊಂದು ಕಥಾಭಾಗದಲ್ಲಿ ಎಲ್ಲಿಸ್ಸಾ ಮದುವೆಯಾದರೂ ಸುಖವಾಗಿರದೆ ಎಲ್ಲಿಸ್ಸಾ ನಿಮೋನನ್ನು ಬಿಟ್ಟುಹೋಗುತ್ತಾಳೆ.

ಹೀಗೆ ಅನೇಕ ಕಥೆಗಳನ್ನು ಕೇಳಿದ ಪತ್ರಕರ್ತ, ವೃದ್ಧ ನಿಮೋನನ್ನು ನಿಜವಾಗಿ ನಡೆದ
ಕಥೆಯಾವುದೆಂದು ಕೇಳಿದಾಗ, ವೃದ್ಧ ನಿಮೋ ಇದೆಲ್ಲ ಹತ್ತು ವರ್ಷದ ಬಾಲಕನ ಕಲ್ಪನೆ ಎನ್ನುತ್ತಾನೆ. ತಂದೆ ಅಥವಾ ತಾಯಿಯ ಜೊತೆ ಹೋಗುವ ಆಯ್ಕೆಯಲ್ಲಿರುವ ಬಾಲಕ ನಿಮೋ ಬೇರೆಯದ್ದೇ ದಾರಿ ಆರಿಸಿಕೊಳ್ಳುವುದರ ಮೂಲಕ ಸಿನಿಮಾ ಮುಗಿಯುತ್ತದೆ.

ದಿ ಬ್ರ್ಯಾಂಡ್ ನ್ಯೂ ಟೆಸ್ಟಮೆಂಟ್ (The Brand New Testament,, ಫ್ರೆಂಚ್, 2015):

ಸಾಮಾನ್ಯವಾಗಿ ಬದುಕುತ್ತಿರುವ ಜನರ ಮೊಬೈಲ್ ಫೋನ್‌ಗಳಿಗೆ ಅವರವರ ಸಾವಿನ ದಿನಾಂಕ ಬಂದು, ಬದುಕು ಕೊನೆಯಾಗುವ ದಿನ ಖಚಿತವಾಗಿಬಿಟ್ಟರೆ? ಸಾವಿನ ಭಯವೇ ಇಲ್ಲವಾದರೆ ದೇವರ ಮೌಲ್ಯವೇನಾಗುತ್ತದೆ?
ದೇವರಾದವನು ಬ್ರಸಲ್ಸ್ ನಗರದ ಅಪಾರ್ಟ್‌ಮೆಂಟ್ ಒಂದರಲ್ಲಿ ವಿಧೇಯಳಾಗಿರುವ ಹೆಂಡತಿ ಮತ್ತು ಒಂಭತ್ತು ವರ್ಷಗಳ ಮಗಳೊಂದಿಗೆ ವಾಸವಾಗಿರುತ್ತಾನೆ. ದೇವರು ಜಗಳಗಂಟ, ಸ್ಯಾಡಿಸ್ಟ್ ಆಗಿರುತ್ತಾನೆ. ದೇವರ ಹೆಂಡತಿ ಮುಗ್ಧೆ. ಸದಾ ಮೌನವಾಗಿ ಮನೆ ಕೆಲಸಗಳನ್ನು ಮಾಡುತ್ತಾ ತನ್ನ ಹೊಲಿಗೆ ಕೆಲಸದಲ್ಲಿ ನಿರತಳಾಗಿರುತ್ತಾಳೆ ಮತ್ತು ಅವಳಿಗೆ ಸುಂದರ ಹೂಗಳ ಚಿತ್ತಾರ ಬಿಡಿಸುವುದೆಂದರೆ ಅತಿ ಇಷ್ಟದ ಕೆಲಸ. ದೇವರು ಅವನ ರೂಮಿನ ಕಂಪ್ಯೂಟರಿನ ಮೂಲಕ ಮನುಷ್ಯರ ಹಣೆಬರಹವನ್ನು ನಿರ್ಧಾರಿಸುತ್ತಾನೆ. ಮನುಷ್ಯರು ದೇವರು ಮಾಡಿರುವ ನಿಯಮಗಳಿಂದ ಒದ್ದಾಡುವಾಗ ದೇವರು ನೋಡಿ ಖುಷಿ ಪಡುತ್ತಾನೆ. ರೈಲು, ವಿಮಾನ ಅಪಘಾತಗಳನ್ನು ಅವನ ಮನೋರಂಜನೆಗೋಸ್ಕರ ಅವನು ಮಾಡುತ್ತಿರುತ್ತಾನೆ.

ದೇವರ ಮಗಳಾದ ಈಯಾ ತಂದೆಯ ನಡತೆಯಿಂದ ಬೇಸತ್ತು, ದೇವರ ಕಂಪ್ಯೂಟರ್‌ನಿಂದ ಭೂಮಿಯಲ್ಲಿರುವ ಎಲ್ಲ ಮನುಷ್ಯರಿಗೆ ಅವರವರ ಸಾವಿನ ದಿನಾಂಕವನ್ನು ಅವರುಗಳ ಮೊಬೈಲ್ ಫೋನ್‌ಗಳಿಗೆ ಕಳುಹಿಸಿಬಿಡುತ್ತಾಳೆ. ದೇವರ ಹೆಂಡತಿ ಕಂಪ್ಯೂಟರಿನ ರೂಮನ್ನು ಒರೆಸುವಾಗ ಕಂಪ್ಯೂಟರಿನ ವೈರ್‌ಅನ್ನು ತೆಗೆದುಬಿಡುತ್ತಾಳೆ. ಸಾವಿನ ದಿನಾಂಕ ತಿಳಿದ ಜನರೆಲ್ಲ ಇಷ್ಟವಿಲ್ಲದ ಸಂಗಾತಿಗಳಿಂದ, ಕೆಲಸಗಳಿಂದ ದೂರವಾಗಿ ಅವರವರಿಗೆ ಇಷ್ಟದ ಕೆಲಸಗಳನ್ನು ಮಾಡಲು ಪ್ರಾರಂಭಿಸುತ್ತಾರೆ. ದೇವರ ಬಗ್ಗೆ ನೆನೆಯುವರೇ ಇರುವುದಿಲ್ಲ. ಇತ್ತ ಈಯಾ ಮನೆಯಿಂದ ಹೊರಬಂದು ನಿಜವಾದ ಪ್ರಪಂಚಕ್ಕೆ ಹೋಗಿ, ಅತಿ ನವೀನ ಒಡಂಬಡಿಕೆಯನ್ನು ಮಾಡುವುದಕ್ಕಾಗಿ, ಅಣ್ಣಾ ಜೆಸಿಯ (ಜೀಸಸ್ ಕ್ರೈಸ್ತ್) ಬಳಿ ಸಲಹೆ ಕೇಳುತ್ತಾಳೆ. ಶಿಲೆಯಾಗಿರುವ ಜೆಸಿ, ಈಯಾಳಿಗೆ ವಾಷಿಂಗ್ ಮಿಷನಿನಿಂದ ಹೊರ ಪ್ರಪಂಚಕ್ಕೆ ಹೋಗಿ, ಈಗಿರುವ ಹನ್ನೆರಡು ಮಂದಿ ಧರ್ಮ ಪ್ರಚಾರಕರ (ಅಪೊಸ್ತಲ್) ಜೊತೆಗೆ, ಹೆಚ್ಚುವರಿ ಆರು ಜನರನ್ನು ಹುಡುಕಾಟ ಮಾಡಿ, ಅವರಿಂದಲೇ ಬರೆಸುವಂತೆ ಹೇಳುತ್ತಾನೆ.

ಕೋಪಗೊಂಡ ತನ್ನ ತಂದೆ/ದೇವರ ಕೈಗೆ ಸಿಗದಂತೆ ಈಯಾ ವಾಷಿಂಗ್ ಮಿಷನಿನಿಂದ ನಿಜವಾದ ಪ್ರಪಂಚಕ್ಕೆ ಹೋಗುತ್ತಾಳೆ. ವಿವಿಧ ಬಗೆಯ ಸಾಮಾಜಿಕ, ಆರ್ಥಿಕ ಮತ್ತು ಮಾನಸಿಕ ವಿಭಾಗಗಳಲ್ಲಿ ಆರು ಮಂದಿಯನ್ನು ಹುಡುಕಲು ಈಯಾ ಮುಂದಾಗುತ್ತಿರುವಾಗಲೇ, ಅತ್ತ ಅದೇ ವಾಷಿಂಗ್ ಮಿಷನಿನಿಂದ ದೇವರು ತಾನು ಸೃಷ್ಟಿಸಿದ ಪ್ರಪಂಚಕ್ಕೆ ಮಗಳನ್ನು ಹುಡುಕಿಕೊಂಡು ಕೋಪದಲ್ಲಿ ಬರುತ್ತಾನೆ.

ಇಲ್ಲಿ ದೇವರು ಮಾಡಿದ ಎಲ್ಲ ರೀತಿ ರಿವಾಜುಗಳು ಮತ್ತು ನಿಯಮಗಳು ಅವನಿಗೂ ಅನ್ವಯವಾಗುತ್ತದೆ. ಅವನು ಸಾಮಾನ್ಯ ಮನುಷ್ಯನಂತೆ ಒದ್ದಾಡುತ್ತಾನೆ. ಚರ್ಚಿನಲ್ಲಿ ಊಟಕ್ಕಾಗಿ ಕಾಯುವಾಗ ಏಸುವಿನ ಬಗ್ಗೆ ಅವಹೇಳನಕಾರಿ ಟಿಪ್ಪಣಿ ಮಾಡಿ, ಅಲ್ಲಿ ಒದೆಯನ್ನೂ ತಿನ್ನುತ್ತಾನೆ. ದೇವರಿಗೆ ಗುರುತಿನ ಚೀಟಿ ಇಲ್ಲದ ಕಾರಣ ಅವನನ್ನು ಬೇರೆ ದೇಶಕ್ಕೆ ಕಳುಹಿಸಲಾಗುತ್ತದೆ. ದೇವರು ವಾಷಿಂಗ್ ಮಿಷನಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಾ ಮತ್ತೆ ತನ್ನ ಮನೆಗೆ ವಾಪಸಾಗುವ ದಾರಿಯನ್ನು ಹುಡುಕುತ್ತಾನೆ.

ಇತ್ತ ಪ್ರಪಂಚವೇ ಮುಗಿಯುವ ಹಂತಕ್ಕೆ ಬಂದಾಗ ದೇವರ ಹೆಂಡತಿ ಕಂಪ್ಯೂಟರಿನ ವೈರ್‌ಅನ್ನು ಮತ್ತೆ ಕನೆಕ್ಟ್ ಮಾಡಿ, ಆಗುವ ಅನಾಹುತವನ್ನು ನಿಲ್ಲಿಸುತ್ತಾಳೆ. ನೀಲಿ ಆಕಾಶ ಗುಲಾಬಿ ಬಣ್ಣಕ್ಕೆ ತಿರುಗುತ್ತದೆ. ವಿವಿಧ ಬಗೆಯ ಹೂಗಳ ವಿನ್ಯಾಸಗಳು ಭೂಮಿಯಲ್ಲೆಲ್ಲಾ ಕಾಣುತ್ತವೆ. ಅದನ್ನೆಲ್ಲ ನೋಡಿ ಈಯಾ ಇದು ತಾಯಿಯ ಕೆಲಸವೆಂದು ನಗುತ್ತಾಳೆ.

ಈ ಸಿನಿಮಾ ಕಾಮಿಡಿಯಾಗಿದ್ದು, ಬದುಕಿನ ವಿವಿಧ ಹಂತಗಳಲ್ಲಿರುವ ಜನಗಳ ಕಥೆಗಳನ್ನು ಹೇಳಿದರೂ ಎಲ್ಲರೂ ಪ್ರೀತಿಗಾಗಿ ಹಂಬಲಿಸುವವರೇ ಆಗಿರುತ್ತಾರೆ.

ಜಾಕೊ ವಂಡೊಮಾಲ್ (Jaco Van Dormel)

ಜಾಕೊರ ಕಥಾವಸ್ತುಗಳು ವಿಚಿತ್ರ ಮತ್ತು ವಿಭಿನ್ನವಾದವು. ಇವರ ಒಂದು ಸಿನಿಮಾದಲ್ಲಿ ಒಂದೇ ಕಥೆಯನ್ನು ಹೇಳದೆ ಕಥೆಯೊಳಗೆ ಹಲವಾರು ಕಥೆಗಳನ್ನು ಹೆಣೆದು ಹೇಳುತ್ತಾ, ವಿವಿಧ ಬಗೆಯ ಭಾವನೆಗಳನ್ನು ಹಿಡಿದಿಡಲು ಪ್ರಯತ್ನಿಸುತ್ತಾರೆ.

ಮಿಸ್ಟರ್ ನೋಬಡಿ ಸಿನಿಮಾದಲ್ಲಿ ಒಬ್ಬ ಬಾಲಕನ ಬದುಕಿನ ಹಲವಾರು ಆಯ್ಕೆಗಳು ಮತ್ತು ಆ ಆಯ್ಕೆಗಳಿಂದ ಹೊರಬರುವ ಬದುಕುಗಳನ್ನು ಚಿತ್ರಿಸಿದರೆ, ದಿ ಬ್ರ್ಯಾಂಡ್ ನ್ಯೂ ಟೆಸ್ಟಮೆಂಟಿನಲ್ಲಿ ಬದುಕಿನ ವಿವಿಧ ಹಂತಗಳಲ್ಲಿರುವ ಜನರ ಕಥೆಗಳನ್ನು ಹಿಡಿದಿಟ್ಟಿದ್ದಾರೆ.

ಇವರು ಮೊದಲು ಬೆಲ್ಜಿಯಂನಲ್ಲಿ ಸಿನಿಮಾ ಮಾಡುತ್ತಾ ಹಾಲಿವುಡ್‌ನಲ್ಲಿ ಸಿನಿಮಾ ಮಾಡುವ ಅವಕಾಶಗಳನ್ನು ಗಳಿಸಿಕೊಂಡು ಬಂದವರು. ಇವರ ’ದಿ ಶೇಪ್ (2019) ಎನ್ನುವ ಕಿರುಚಿತ್ರ ಎಲ್ಲರೂ ನೋಡಲೇಬೇಕಾದದ್ದು. ಇದರಲ್ಲಿ ಫ್ರೀಡಂ ಆಫ್ ಎಕ್ಸ್‌ಪ್ರೆಷನ್ (ಅಭಿವ್ಯಕ್ತಿ ಸ್ವಾತಂತ್ರ್ಯ) ಮತ್ತು ಮಿಡಿಯಾ ಪ್ಲೂರಲಿಸಂನ (ಮಾಧ್ಯಮ ಬಹುತ್ವ) ಕುರಿತು ಸ್ಫುಟವಾಗಿ ಮತ್ತು ಅತಿ ಪರಿಣಾಮಕಾರಿಯಾಗಿ ಹೇಳಿದ್ದಾರೆ.

ನಿರಂಕುಶ ಪ್ರಭುತ್ವಗಳು ಹೇಗೆ ವ್ಯಕ್ತಿಯ ಹಕ್ಕುಗಳನ್ನು ಕಿತ್ತುಕೊಳ್ಳಲು ಹವಣಿಸುತ್ತವೆ ಹಾಗೂ ನಂತರದಲ್ಲಿ ಎಲ್ಲ ಸುದ್ದಿವಾಹಿನಿಗಳು ಸರ್ಕಾರದ ಕೈಗೊಂಬೆಗಳಾದಾಗ, ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಪ್ರಜೆಗಳೇ ಧ್ವನಿ ಎತ್ತಿ ಬಲಿಷ್ಟ ಸರ್ಕಾರಗಳ ವಿರುದ್ಧ ಹೋರಾಡಬಹುದೆಂಬುದನ್ನು ದಿ ಶೇಪ್ ಕಿರುಚಿತ್ರದಲ್ಲಿ ಜಾಕೋ ಕಟ್ಟಿಕೊಟ್ಟಿದ್ದಾರೆ. ವಿಶ್ವದೆಲ್ಲೆಡೆ ಹಲವು ನಿರಂಕುಶ ಪ್ರಭುತ್ವಗಳ ಜೊತೆ ಸೆಣೆಸುತ್ತಿರುವ ಸಾಮಾನ್ಯ ಜನರ ಕಥೆಯಾಗಿದೆ ಇದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...