Homeಮುಖಪುಟವಿಜಯೇಂದ್ರನದ್ದು ಅತ್ತೂ, ಕರೆದು ಔತಣ ಮಾಡಿಸಿಕೊಂಡ ಸ್ಥಿತಿ: ಜಗದೀಶ್‌ ಶೆಟ್ಟರ್

ವಿಜಯೇಂದ್ರನದ್ದು ಅತ್ತೂ, ಕರೆದು ಔತಣ ಮಾಡಿಸಿಕೊಂಡ ಸ್ಥಿತಿ: ಜಗದೀಶ್‌ ಶೆಟ್ಟರ್

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ವಿಜಯೇಂದ್ರ ಅವರ ನೇಮಕದ ಬಗ್ಗೆ ಮಾಜಿ ಸಿಎಂ, ಕಾಂಗ್ರೆಸ್‌ ಎಂಎಲ್‌ಸಿ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ವಿಜಯೇಂದ್ರ ಅವರದ್ದು ಅತ್ತೂ ಕರೆದು ಔತಣ ಮಾಡಿಸಿಕೊಂಡಂತಹ ಸ್ಥಿತಿ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನಸಭಾ ಚುನಾವಣೆ ಮುಗಿದ 6 ತಿಂಗಳಿಂದ ಬಿಜೆಪಿ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಿರಲಿಲ್ಲ. ಅತ್ತು ಕರೆದು ಅಧ್ಯಕ್ಷರನ್ನಾಗಿ ಮಾಡಿರುವ ತರಹ ಕಾಣಿಸುತ್ತಿದೆ. ಒಂದು ರಾಜಕೀಯ ಪಕ್ಷವಾಗಿ ತಕ್ಷಣ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಈಗ ಯಾಕೆ ಆಯ್ಕೆ ಮಾಡಿದ್ರು? ಇದನ್ನೆಲ್ಲಾ ನೋಡಿದ್ರೆ ಬಿಜೆಪಿ ಫೇಲ್ ಆಗಿದೆ. ಬಿಜೆಪಿಯವರು ಭ್ರಮೆಯಲ್ಲಿದ್ದಾರೆ ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್‌ನಲ್ಲಿ ಇದ್ದೀನಿ. ಅಧ್ಯಕ್ಷರ ಆಯ್ಕೆ ಅವರ ಪಕ್ಷಕ್ಕೆ ಬಿಟ್ಟ ವಿಚಾರ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ ಬಂದು ಬಲಾಢ್ಯವಾಗಿ ಬೆಳೆದಿದೆ. ಬಿಜೆಪಿಯವರು ಈಗಾಗಲೇ ಬೇರೆ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಹೋಗಿ ಕೈ  ಸುಟ್ಟುಕೊಂಡಿದ್ದಾರೆ. 50-60 ಶಾಸಕರನ್ನು ಕರೆದುಕೊಂಡು ಬಂದು ಮತ್ತೆ ಸರ್ಕಾರ ರಚನೆ ಮಾಡುವುದು ಭ್ರಮೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಪಂಚ ರಾಜ್ಯದ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪರವಾಗಿ ಬರುತ್ತದೆ ಎಂದು ಜಗದೀಶ್ ಶೆಟ್ಟರ್‌ ತಿಳಿಸಿದ್ದಾರೆ.

ವಿಜಯೇಂದ್ರ ಆಯ್ಕೆಯ ಬಗ್ಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕುಟುಂಬ ರಾಜಕಾರಣದ ವಿರುದ್ಧ ಮಾತನಾಡಲು ಮೋದಿಯವರು ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು  ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ದಿನೇಶ್ ಗುಂಡೂರಾವ್, ಗಾಜಿನ‌ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಮೊದಲು ತಾವೆಲ್ಲಿ‌ ಕುಳಿತಿದ್ದೇವೆ ಎಂಬ ವಾಸ್ತವ‌ ಅರಿಯಬೇಕು. ಬೇರೆಯವರು ಮಾಡಿದರೆ ಅಪರಾಧ, ತಾನು ಮಾಡಿದರೆ ಆದರ್ಶ ಎಂಬ ಭ್ರಮೆ ಒಳ್ಳೆಯದಲ್ಲ‌ ಮೋದಿಯವರೆ ಎಂದು ಹೇಳಿದ್ದಾರೆ.

ಕುಟುಂಬ ರಾಜಕಾರಣದ ಬಗ್ಗೆ ಮೋದಿಯವರು ಅವಕಾಶ ಸಿಕ್ಕಾಗಲೆಲ್ಲಾ ಮಾತನಾಡುತ್ತಾರೆ. ಮೊನ್ನೆ ಮಧ್ಯಪ್ರದೇಶ ಚುನಾವಣಾ ಪ್ರಚಾರದಲ್ಲಿ ಕುಟುಂಬ ರಾಜಕಾರಣದ ವಿರುದ್ಧ ಭಾಷಣ ಮಾಡಿದ್ದರು. ಆದರೆ ಈಗ ಮಾಜಿ ಸಿಎಂ ಬಿಎಸ್‌ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದಾರೆ. ಇದ್ಯಾವ ರಾಜಕಾರಣ ಮೋದಿಯವರೆ? ಎಂದು ಗುಂಡೂರಾವ್‌ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸಾಧ್ಯತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...