Homeಮುಖಪುಟಕಾರು ಹರಿದು ವ್ಯಕ್ತಿ ಸಾವು: ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಎಫ್‌ಐಆರ್

ಕಾರು ಹರಿದು ವ್ಯಕ್ತಿ ಸಾವು: ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಗುಂಟೂರು ಹೊರವಲಯದಲ್ಲಿ ಕಾರು ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್‌ಸಿ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಜೂನ್ 18ರಂದು ಅಪಘಾತ ನಡೆದಿದೆ. 65 ವರ್ಷ ವಯಸ್ಸಿನ ಚೀಲಿ ಸಿಂಗಯ್ಯ ಎಂಬವರು ಸಾವಿಗೀಡಾಗಿದ್ದಾರೆ.

ಭಾನುವಾರ (ಜೂ.22) ಜಗನ್ ಅವರ ಬೆಂಗಾವಲು ವಾಹನದ ಚಾಲಕ ರಮಣ ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೀಲಿ ಸಿಂಗಯ್ಯ ಅವರು ತಮ್ಮ ವಾಹನದ ಅಡಿಗೆ ಸಿಲುಕಿಕೊಂಡ ನಂತರವೂ, ರಮಣ ರೆಡ್ಡಿ ವಾಹನ ನಿಲ್ಲಿಸದೆ ತೆರಳಿದ್ದಾರೆ ಎಂದು ಆರೋಪಿಸಲಾಗಿದೆ.

“ಮಾಜಿ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರ ಬೆಂಗಾವಲು ವಾಹನದ ಚಕ್ರಕ್ಕೆ ಸಿಲುಕಿ ಸಿಂಗಯ್ಯ ಅವರು ಸಾವಿಗೀಡಾಗಿದ್ದಾರೆ ಎಂಬುದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ. ಅದಕ್ಕೆ ಅನುಗುಣವಾಗಿ ನಾವು ಪ್ರಕರಣದ ಸೆಕ್ಷನ್‌ಗಳನ್ನು ಬದಲಾಯಿಸಿದ್ದೇವೆ. ಅಲ್ಲದೆ, ಜಗನ್ ಮೋಹನ್ ರೆಡ್ಡಿ, ಬೆಂಗಾವಲು ವಾಹನ ಚಾಲಕ ರಮಣ ರೆಡ್ಡಿ, ಮಾಜಿ ಸಚಿವರಾದ ವೈ.ವಿ ಸುಬ್ಬಾರೆಡ್ಡಿ ಮತ್ತು ವಿಡದಲ ರಜಿನಿ, ಮಾಜಿ ಶಾಸಕ ಪೆರ್ಣಿ ವೆಂಕಟರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಗುಂಟೂರು ಎಸ್ಪಿ ಸತೀಶ್ ಕುಮಾರ್ ಹೇಳಿದ್ದಾರೆ.

ಒಂದು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬವನ್ನು ಭೇಟಿ ಮಾಡಲು ಜಗನ್ ಮೋಹನ್ ರೆಡ್ಡಿ ಅವರು ಬೆಂಗಾವಲು ವಾಹನಗಳೊಂದಿಗೆ ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಗೆ ತೆರಳುತ್ತಿದ್ದಾಗ ಸಿಂಗಯ್ಯ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅಪಘಾತಕ್ಕೆ ಖಾಸಗಿ ವಾಹನವೇ ಕಾರಣ ಎಂಬ ಪ್ರಕರಣದ ಅಂಶವನ್ನು ಪರಿಷ್ಕರಿಸಲಾಗಿದೆ ಎಂದಿದ್ದಾರೆ.

ಪೊಲೀಸರ ಹೇಳಿಕೆಯಲ್ಲಿನ ಬದಲಾವಣೆಯನ್ನು ವೈಎಸ್‌ಆರ್‌ಸಿ ಪಕ್ಷ ಪ್ರಶ್ನಿಸಿದ್ದು, ಅಪಘಾತಕ್ಕೀಡಾದ ವಾಹನವು ಜಗನ್ ಅವರ ಬೆಂಗಾವಲು ಪಡೆಯ ಭಾಗವಾಗಿರಲಿಲ್ಲ. ಅದು ಖಾಸಗಿ ವಾಹನ ಎಂದು ಗುಂಟೂರು ಎಸ್‌ಪಿ ಬುಧವಾರ ಹೇಳಿದ್ದಾರೆ ಎಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಜಗನ್ ಮೋಹನ್ ರೆಡ್ಡಿ ಅವರು ನಿಂತುಕೊಂಡು ಜನರತ್ತ ಕೈಬೀಸುತ್ತಿದ್ದ ಕಾರಿನ ಚಕ್ರದಡಿಗೆ ವ್ಯಕ್ತಿಯೊಬ್ಬರು ಸಿಲುಕಿರುವುದನ್ನು ನೋಡಬಹುದು.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸಿಂಗಯ್ಯ ಅವರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಿಎನ್‌ಎಸ್ ಸೆಕ್ಷನ್ 106(1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಿಸಿಟಿವಿ ದೃಶ್ಯಾವಳಿಗಳು, ಡ್ರೋನ್ ದೃಶ್ಯಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ. ಸಿಂಗಯ್ಯ ಅವರ ಮೇಲೆ ಜಗನ್‌ ಅವರ ಬೆಂಗಾವಲು ಪಡೆ ವಾಹನ ಹರಿದಿದ್ದು, ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪೊಲೀಸರು ಬಿಎನ್‌ಎಸ್ ಸೆಕ್ಷನ್‌ 105 (ಕೊಲೆಗೆ ಸಮಾನವಲ್ಲದ ನರಹತ್ಯೆ) ಮತ್ತು ಸೆಕ್ಷನ್ 49(ಹತ್ಯೆಗೆ ಪ್ರೇರಣೆ) ಅಡಿಯಲ್ಲಿ ಪ್ರಕಣ ದಾಖಲಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...