Homeಮುಖಪುಟಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈಗ ಹಣ, ಅಧಿಕಾರ, ಪ್ರತಿಷ್ಠೆಯದ್ದೆ ಕಾರುಬಾರು. ಸಾರ್ವಜನಿಕರ ಹಣದಲ್ಲಿ ಮಂತ್ರಿಗಳು ಆಸ್ತಿ ಗಳಿಕೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂಬ ಆಪಾದನೆಗಳು ಸಾಮಾನ್ಯವಾಗಿ ಕೇಳಿ ಬಂದಿವೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಾರ್ವಜನಿಕರ ದುಡ್ಡಲ್ಲಿ ಶೋಕಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಜಗನ್‌ ಮೋಹನ್‌ ರೆಡ್ಡಿ ಈಗ ತಾವು ಮಾಡುತ್ತಿರೋದೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಜಗನ್‌ ಮೋಹನ್‌ ರೆಡ್ಡಿ, ಗೆದ್ದು ಸಿಎಂ ಕುರ್ಚಿ ಏರಿದ್ದಾರೆ. ಆದರೆ ಸಿಎಂ ಆದಾಗಿನಿಂದ ಒಂದಲ್ಲ ಒಂದು ವಿವಾದಗಳು ಅವರನ್ನು ಮುತ್ತಿಕೊಳ್ಳುತ್ತಲೇ ಇವೆ. ಕೆಲ ದಿನಗಳ ಹಿಂದೆ ಸರ್ಕಾರಿ ಯೋಜನೆಗಳ ಹೆಸರು ಬದಲಾಯಿಸಿ, ಜನರು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಜನರ ದುಡ್ಡಲ್ಲಿ ಐಷಾರಾಮಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಆಂಧ್ರದ ಗುಂಟೂರು ಜಿಲ್ಲೆಯ ತಡಿಪಲ್ಲಿಯಲ್ಲಿ ಖಾಸಗಿ ಮನೆ ನಿರ್ಮಾಣಕ್ಕೆ 3.25 ಕೋಟಿ ರೂಪಾಯಿಯಲ್ಲಿ 0.15 ಎಕರೆ ಜಮೀನು ಖರೀದಿಸಿದ್ದಾರೆ. ತಡಿಪಲ್ಲಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಹತ್ತಿರದಲ್ಲಿದೆ. ಖಾಸಗಿ ಮನೆಯಲ್ಲಿ ಜಗನ್‌, ಸೋಲಾರ್‌ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸಿಸಿ ಕ್ಯಾಮರಾ, ಹೆಚ್ಚುವರಿ ಹವಾ ನಿಯಂತ್ರಕ ಅಳವಡಿಕೆ, ಅತ್ಯುನ್ನತ ದರ್ಜೆಯ ರೆಫ್ರಿಜರೇಟರ್‌ ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದರಲ್ಲಿ ಹವಾ ನಿಯಂತ್ರಣ ವ್ಯವಸ್ಥೆಗೆ 80 ಲಕ್ಷ ರೂಪಾಯಿ ವೆಚ್ಚ ತಗುಲಿದೆಯಂತೆ. ಇದೆಲ್ಲವನ್ನೂ ಜಗನ್‌ ಸಾರ್ವಜನಿಕರ ಹಣದಲ್ಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ಇದರಲ್ಲಿ ಯಾವುದೇ ಬದಲಾವಣೆ ಏನಿಲ್ಲ. ಏಕೆಂದರೆ ಆಂಧ್ರಪ್ರದೇಶದಲ್ಲಿ ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಹ ಸಾರ್ವಜನಿಕರ ಹಣವನ್ನು ಸಾಕಷ್ಟು ಪೋಲು ಮಾಡಿದ್ದಾರೆ. ಖಾಸಗಿ ನಿವೇಶನಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದಾರೆ. ಈಗ ಜಗನ್‌ ಅಧಿಕಾರದಲ್ಲಿದ್ದು, ಅದೇ ಹಾದಿ ಹಿಡಿದಿದ್ದಾರೆ. ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಡಿಪಲ್ಲಿಯಲ್ಲಿರುವ ಮನೆ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಸ್ವಂತದ್ದು. ವಿಧಾನಸಭೆ ಚುನಾವಣೆಗೂ ಮೊದಲು ಆ ಮನೆಯಲ್ಲೇ ಜಗನ್‌ ವಾಸ್ತವ್ಯ ಹೂಡಿದರು. ಅದನ್ನೇ ಸಿಎಂ ಕ್ಯಾಂಪ್‌ ರೆಸಿಡೆನ್ಸಿ ಅಂತಾ ಹೆಸರು ಬದಲಾಯಿಸಿದರು. ಮೇ ತಿಂಗಳಲ್ಲಿ ಅಧಿಕಾರಕ್ಕೇರಿದ ಜಗನ್‌ ಸರ್ಕಾರದ ಬೊಕ್ಕಸದಲ್ಲಿದ್ದ ಕೋಟಿ ಕೋಟಿ ಹಣವನ್ನ ಬಳಸಿಕೊಂಡಿದ್ದಾರೆ. ಮನೆಗೆ ಒದಗಿಸಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು 15 ಕೋಟಿ ರೂಪಾಯಿ ಬಳಸಿದ್ದರು. ಅದಾದ ನಂತರ ಅಕ್ಟೋಬರ್‌ನಲ್ಲಿ ಸಾರಿಗೆ, ರಸ್ತೆ, ಕಟ್ಟಡ ನಿರ್ಮಾಣಕ್ಕಾಗಿ 73 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿತು. ಅದೇ ಹಣದಲ್ಲಿ ಜಗನ್ ಮನೆಗೆ ಹೊಸ ಬಾಗಿಲುಗಳು, ಕಿಟಕಿಗಳನ್ನು ಕಟ್ಟಿಸಿದ್ದಾರೆ. ಇದಕ್ಕೂ ಮೊದಲು ಮನೆಗೆ ಹೋಗುವ 1.3ಕಿ.ಮೀ ರಸ್ತೆ ದುರಸ್ತಿಗಾಗಿ 5 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

ಜುಲೈನಲ್ಲಿ ಹೈದ್ರಾಬಾದ್‌ನಲ್ಲಿರುವ ಜಗನ್‌ ಅವರ ಪಲಾಟಿಯಲ್‌ ಬಂಜಾರ್‌ ಹಿಲ್ಸ್, ಲೋಟಸ್ ಪಾಂಡ್‌ ರೆಸಿಡೆನ್ಸಿ ಅಂತಲೇ ಹೆಸರುವಾಸಿಯಾಗಿರುವ ಮನೆಗೆ ಭದ್ರತೆ ನಿಯೋಜನೆಗೆ ಸರ್ಕಾರ 24.5 ಲಕ್ಷ ರೂ. ನೀಡಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಜಗನ್‌, ಸಾರ್ವಜನಿಕರ ದುಡ್ಡನ್ನು ದುಂದುವೆಚ್ಚ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ರೋಮ್‌ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಕುಯ್ಯುತ್ತಿದ್ದ. ಹಾಗೆಯೇ 5 ತಿಂಗಳಿಂದ ಆಂಧ್ರಪ್ರದೇಶ ಹಣಕಾಸು ಕೊರತೆ, ಕೆಲಸವಿಲ್ಲದೆ ಜನ ತಮ್ಮ ಜೀವ ಕಳೆದುಳ್ಳುತ್ತಿರುವ ವೇಳೆ, ಜಗನ್‌ ತನ್ನ ಹೈದ್ರಾಬಾದ್‌ನ ಪಲಾಟಿಯಲ್‌ ಮನೆಯಲ್ಲಿ ವಿಡಿಯೋ ಗೇಮ್‌ ಆಡುತ್ತ ಕುಳಿತಿದ್ದರು. ಅದಕ್ಕಾಗಿ ಸರ್ಕಾರ 15.65 ಕೋಟಿ ನೀಡಿತ್ತು ಎಂಬುದೇ ಶಾಕಿಂಗ್‌ ವಿಷಯ ಎಂದು ಬರೆದಿದ್ದರು.

ಇನ್ನು ಜಗನ್‌ ಅವರ ಮನೆಯ ಭದ್ರತೆಗೆ ಸರ್ಕಾರ ವ್ಯಯಿಸಿದ ವೆಚ್ಚದ ಬಗ್ಗೆ ಸಚಿವ ಪೆರ್ನಿ ವೆಂಕಟರಾಮಯ್ಯ ಸಮರ್ಥಿಸಿಕೊಂಡಿದ್ದರು. ಜಗನ್‌ ಅವರ ಮನೆ ಜನಸಂದಣಿ ಪ್ರದೇಶದ ಮಧ್ಯಭಾಗದಲ್ಲಿದೆ. ಅಲ್ಲಿ ಸುತ್ತಮುತ್ತ ಎತ್ತರವಾದ ಕಟ್ಟಡಗಳಿವೆ. ಹೀಗಾಗಿ ಭದ್ರತೆ ಅತೀ ಮುಖ್ಯ. ಬುಲೆಟ್‌ ಪ್ರೂಫ್‌ ಜಾಕೆಟ್, ಕಿಟಕಿ ಸೇರಿದಂತೆ ಹಲವು ವಸ್ತುಗಳ ಅವಶ್ಯಕತೆಯಿದೆ ಎಂದಿದ್ದರು. ನಾಯ್ಡು ಆಡಳಿತದ ಐದು ವರ್ಷದಲ್ಲಿ ೧೦೦ ಕೋಟಿ ರೂಪಾಯಿಯನ್ನು ನಾಯ್ಡು ಹೈದ್ರಾಬಾದ್‌ ಮತ್ತು ವಿಜಯವಾಡದಲ್ಲಿರುವ ಕ್ಯಾಂಪ್‌ ಆಫೀಸ್‌, ಫಾರ್ಮ್‌‌ಹೌಸ್, ಗೆಸ್ಟ್‌ ಹೌಸ್‌ಗಳ ನಿರ್ಮಾಣ ಮತ್ತು ಪೀಠೋಪಕರಣ ಮತ್ತು ಐಷಾರಾಮಿ ವಸ್ತುಗಳ ಅಳವಡಿಕೆಗೆ ವ್ಯಯಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ನಾಯ್ಡು ಕುಟುಂಬಸ್ಥರು ವಾಸವಿದ್ದ ಜುಬಿಲಿ ಹಿಲ್ಸ್‌ ಮನೆ ಮರುನಿರ್ಮಾಣಗೊಳ್ಳುತ್ತಿದ್ದಾಗ ವರ್ಷಗಟ್ಟಲೇ ನಾಯ್ಡು ಮನೆಯವರು ಫೈಸ್ಟಾರ್‌ ಹೋಟೆಲ್‌ನಲ್ಲಿ ವಾಸವಾಗಿದ್ದರು. ಅದೆಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಿತ್ತು. ಅದು ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದ್ದಿರಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...