Homeಮುಖಪುಟಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈಗ ಹಣ, ಅಧಿಕಾರ, ಪ್ರತಿಷ್ಠೆಯದ್ದೆ ಕಾರುಬಾರು. ಸಾರ್ವಜನಿಕರ ಹಣದಲ್ಲಿ ಮಂತ್ರಿಗಳು ಆಸ್ತಿ ಗಳಿಕೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂಬ ಆಪಾದನೆಗಳು ಸಾಮಾನ್ಯವಾಗಿ ಕೇಳಿ ಬಂದಿವೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಾರ್ವಜನಿಕರ ದುಡ್ಡಲ್ಲಿ ಶೋಕಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಜಗನ್‌ ಮೋಹನ್‌ ರೆಡ್ಡಿ ಈಗ ತಾವು ಮಾಡುತ್ತಿರೋದೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಜಗನ್‌ ಮೋಹನ್‌ ರೆಡ್ಡಿ, ಗೆದ್ದು ಸಿಎಂ ಕುರ್ಚಿ ಏರಿದ್ದಾರೆ. ಆದರೆ ಸಿಎಂ ಆದಾಗಿನಿಂದ ಒಂದಲ್ಲ ಒಂದು ವಿವಾದಗಳು ಅವರನ್ನು ಮುತ್ತಿಕೊಳ್ಳುತ್ತಲೇ ಇವೆ. ಕೆಲ ದಿನಗಳ ಹಿಂದೆ ಸರ್ಕಾರಿ ಯೋಜನೆಗಳ ಹೆಸರು ಬದಲಾಯಿಸಿ, ಜನರು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಜನರ ದುಡ್ಡಲ್ಲಿ ಐಷಾರಾಮಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಆಂಧ್ರದ ಗುಂಟೂರು ಜಿಲ್ಲೆಯ ತಡಿಪಲ್ಲಿಯಲ್ಲಿ ಖಾಸಗಿ ಮನೆ ನಿರ್ಮಾಣಕ್ಕೆ 3.25 ಕೋಟಿ ರೂಪಾಯಿಯಲ್ಲಿ 0.15 ಎಕರೆ ಜಮೀನು ಖರೀದಿಸಿದ್ದಾರೆ. ತಡಿಪಲ್ಲಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಹತ್ತಿರದಲ್ಲಿದೆ. ಖಾಸಗಿ ಮನೆಯಲ್ಲಿ ಜಗನ್‌, ಸೋಲಾರ್‌ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸಿಸಿ ಕ್ಯಾಮರಾ, ಹೆಚ್ಚುವರಿ ಹವಾ ನಿಯಂತ್ರಕ ಅಳವಡಿಕೆ, ಅತ್ಯುನ್ನತ ದರ್ಜೆಯ ರೆಫ್ರಿಜರೇಟರ್‌ ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದರಲ್ಲಿ ಹವಾ ನಿಯಂತ್ರಣ ವ್ಯವಸ್ಥೆಗೆ 80 ಲಕ್ಷ ರೂಪಾಯಿ ವೆಚ್ಚ ತಗುಲಿದೆಯಂತೆ. ಇದೆಲ್ಲವನ್ನೂ ಜಗನ್‌ ಸಾರ್ವಜನಿಕರ ಹಣದಲ್ಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ಇದರಲ್ಲಿ ಯಾವುದೇ ಬದಲಾವಣೆ ಏನಿಲ್ಲ. ಏಕೆಂದರೆ ಆಂಧ್ರಪ್ರದೇಶದಲ್ಲಿ ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಹ ಸಾರ್ವಜನಿಕರ ಹಣವನ್ನು ಸಾಕಷ್ಟು ಪೋಲು ಮಾಡಿದ್ದಾರೆ. ಖಾಸಗಿ ನಿವೇಶನಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದಾರೆ. ಈಗ ಜಗನ್‌ ಅಧಿಕಾರದಲ್ಲಿದ್ದು, ಅದೇ ಹಾದಿ ಹಿಡಿದಿದ್ದಾರೆ. ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಡಿಪಲ್ಲಿಯಲ್ಲಿರುವ ಮನೆ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಸ್ವಂತದ್ದು. ವಿಧಾನಸಭೆ ಚುನಾವಣೆಗೂ ಮೊದಲು ಆ ಮನೆಯಲ್ಲೇ ಜಗನ್‌ ವಾಸ್ತವ್ಯ ಹೂಡಿದರು. ಅದನ್ನೇ ಸಿಎಂ ಕ್ಯಾಂಪ್‌ ರೆಸಿಡೆನ್ಸಿ ಅಂತಾ ಹೆಸರು ಬದಲಾಯಿಸಿದರು. ಮೇ ತಿಂಗಳಲ್ಲಿ ಅಧಿಕಾರಕ್ಕೇರಿದ ಜಗನ್‌ ಸರ್ಕಾರದ ಬೊಕ್ಕಸದಲ್ಲಿದ್ದ ಕೋಟಿ ಕೋಟಿ ಹಣವನ್ನ ಬಳಸಿಕೊಂಡಿದ್ದಾರೆ. ಮನೆಗೆ ಒದಗಿಸಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು 15 ಕೋಟಿ ರೂಪಾಯಿ ಬಳಸಿದ್ದರು. ಅದಾದ ನಂತರ ಅಕ್ಟೋಬರ್‌ನಲ್ಲಿ ಸಾರಿಗೆ, ರಸ್ತೆ, ಕಟ್ಟಡ ನಿರ್ಮಾಣಕ್ಕಾಗಿ 73 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿತು. ಅದೇ ಹಣದಲ್ಲಿ ಜಗನ್ ಮನೆಗೆ ಹೊಸ ಬಾಗಿಲುಗಳು, ಕಿಟಕಿಗಳನ್ನು ಕಟ್ಟಿಸಿದ್ದಾರೆ. ಇದಕ್ಕೂ ಮೊದಲು ಮನೆಗೆ ಹೋಗುವ 1.3ಕಿ.ಮೀ ರಸ್ತೆ ದುರಸ್ತಿಗಾಗಿ 5 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

ಜುಲೈನಲ್ಲಿ ಹೈದ್ರಾಬಾದ್‌ನಲ್ಲಿರುವ ಜಗನ್‌ ಅವರ ಪಲಾಟಿಯಲ್‌ ಬಂಜಾರ್‌ ಹಿಲ್ಸ್, ಲೋಟಸ್ ಪಾಂಡ್‌ ರೆಸಿಡೆನ್ಸಿ ಅಂತಲೇ ಹೆಸರುವಾಸಿಯಾಗಿರುವ ಮನೆಗೆ ಭದ್ರತೆ ನಿಯೋಜನೆಗೆ ಸರ್ಕಾರ 24.5 ಲಕ್ಷ ರೂ. ನೀಡಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಜಗನ್‌, ಸಾರ್ವಜನಿಕರ ದುಡ್ಡನ್ನು ದುಂದುವೆಚ್ಚ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ರೋಮ್‌ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಕುಯ್ಯುತ್ತಿದ್ದ. ಹಾಗೆಯೇ 5 ತಿಂಗಳಿಂದ ಆಂಧ್ರಪ್ರದೇಶ ಹಣಕಾಸು ಕೊರತೆ, ಕೆಲಸವಿಲ್ಲದೆ ಜನ ತಮ್ಮ ಜೀವ ಕಳೆದುಳ್ಳುತ್ತಿರುವ ವೇಳೆ, ಜಗನ್‌ ತನ್ನ ಹೈದ್ರಾಬಾದ್‌ನ ಪಲಾಟಿಯಲ್‌ ಮನೆಯಲ್ಲಿ ವಿಡಿಯೋ ಗೇಮ್‌ ಆಡುತ್ತ ಕುಳಿತಿದ್ದರು. ಅದಕ್ಕಾಗಿ ಸರ್ಕಾರ 15.65 ಕೋಟಿ ನೀಡಿತ್ತು ಎಂಬುದೇ ಶಾಕಿಂಗ್‌ ವಿಷಯ ಎಂದು ಬರೆದಿದ್ದರು.

ಇನ್ನು ಜಗನ್‌ ಅವರ ಮನೆಯ ಭದ್ರತೆಗೆ ಸರ್ಕಾರ ವ್ಯಯಿಸಿದ ವೆಚ್ಚದ ಬಗ್ಗೆ ಸಚಿವ ಪೆರ್ನಿ ವೆಂಕಟರಾಮಯ್ಯ ಸಮರ್ಥಿಸಿಕೊಂಡಿದ್ದರು. ಜಗನ್‌ ಅವರ ಮನೆ ಜನಸಂದಣಿ ಪ್ರದೇಶದ ಮಧ್ಯಭಾಗದಲ್ಲಿದೆ. ಅಲ್ಲಿ ಸುತ್ತಮುತ್ತ ಎತ್ತರವಾದ ಕಟ್ಟಡಗಳಿವೆ. ಹೀಗಾಗಿ ಭದ್ರತೆ ಅತೀ ಮುಖ್ಯ. ಬುಲೆಟ್‌ ಪ್ರೂಫ್‌ ಜಾಕೆಟ್, ಕಿಟಕಿ ಸೇರಿದಂತೆ ಹಲವು ವಸ್ತುಗಳ ಅವಶ್ಯಕತೆಯಿದೆ ಎಂದಿದ್ದರು. ನಾಯ್ಡು ಆಡಳಿತದ ಐದು ವರ್ಷದಲ್ಲಿ ೧೦೦ ಕೋಟಿ ರೂಪಾಯಿಯನ್ನು ನಾಯ್ಡು ಹೈದ್ರಾಬಾದ್‌ ಮತ್ತು ವಿಜಯವಾಡದಲ್ಲಿರುವ ಕ್ಯಾಂಪ್‌ ಆಫೀಸ್‌, ಫಾರ್ಮ್‌‌ಹೌಸ್, ಗೆಸ್ಟ್‌ ಹೌಸ್‌ಗಳ ನಿರ್ಮಾಣ ಮತ್ತು ಪೀಠೋಪಕರಣ ಮತ್ತು ಐಷಾರಾಮಿ ವಸ್ತುಗಳ ಅಳವಡಿಕೆಗೆ ವ್ಯಯಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ನಾಯ್ಡು ಕುಟುಂಬಸ್ಥರು ವಾಸವಿದ್ದ ಜುಬಿಲಿ ಹಿಲ್ಸ್‌ ಮನೆ ಮರುನಿರ್ಮಾಣಗೊಳ್ಳುತ್ತಿದ್ದಾಗ ವರ್ಷಗಟ್ಟಲೇ ನಾಯ್ಡು ಮನೆಯವರು ಫೈಸ್ಟಾರ್‌ ಹೋಟೆಲ್‌ನಲ್ಲಿ ವಾಸವಾಗಿದ್ದರು. ಅದೆಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಿತ್ತು. ಅದು ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದ್ದಿರಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...