Homeಮುಖಪುಟಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈಗ ಹಣ, ಅಧಿಕಾರ, ಪ್ರತಿಷ್ಠೆಯದ್ದೆ ಕಾರುಬಾರು. ಸಾರ್ವಜನಿಕರ ಹಣದಲ್ಲಿ ಮಂತ್ರಿಗಳು ಆಸ್ತಿ ಗಳಿಕೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂಬ ಆಪಾದನೆಗಳು ಸಾಮಾನ್ಯವಾಗಿ ಕೇಳಿ ಬಂದಿವೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಾರ್ವಜನಿಕರ ದುಡ್ಡಲ್ಲಿ ಶೋಕಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಜಗನ್‌ ಮೋಹನ್‌ ರೆಡ್ಡಿ ಈಗ ತಾವು ಮಾಡುತ್ತಿರೋದೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಜಗನ್‌ ಮೋಹನ್‌ ರೆಡ್ಡಿ, ಗೆದ್ದು ಸಿಎಂ ಕುರ್ಚಿ ಏರಿದ್ದಾರೆ. ಆದರೆ ಸಿಎಂ ಆದಾಗಿನಿಂದ ಒಂದಲ್ಲ ಒಂದು ವಿವಾದಗಳು ಅವರನ್ನು ಮುತ್ತಿಕೊಳ್ಳುತ್ತಲೇ ಇವೆ. ಕೆಲ ದಿನಗಳ ಹಿಂದೆ ಸರ್ಕಾರಿ ಯೋಜನೆಗಳ ಹೆಸರು ಬದಲಾಯಿಸಿ, ಜನರು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಜನರ ದುಡ್ಡಲ್ಲಿ ಐಷಾರಾಮಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಆಂಧ್ರದ ಗುಂಟೂರು ಜಿಲ್ಲೆಯ ತಡಿಪಲ್ಲಿಯಲ್ಲಿ ಖಾಸಗಿ ಮನೆ ನಿರ್ಮಾಣಕ್ಕೆ 3.25 ಕೋಟಿ ರೂಪಾಯಿಯಲ್ಲಿ 0.15 ಎಕರೆ ಜಮೀನು ಖರೀದಿಸಿದ್ದಾರೆ. ತಡಿಪಲ್ಲಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಹತ್ತಿರದಲ್ಲಿದೆ. ಖಾಸಗಿ ಮನೆಯಲ್ಲಿ ಜಗನ್‌, ಸೋಲಾರ್‌ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸಿಸಿ ಕ್ಯಾಮರಾ, ಹೆಚ್ಚುವರಿ ಹವಾ ನಿಯಂತ್ರಕ ಅಳವಡಿಕೆ, ಅತ್ಯುನ್ನತ ದರ್ಜೆಯ ರೆಫ್ರಿಜರೇಟರ್‌ ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದರಲ್ಲಿ ಹವಾ ನಿಯಂತ್ರಣ ವ್ಯವಸ್ಥೆಗೆ 80 ಲಕ್ಷ ರೂಪಾಯಿ ವೆಚ್ಚ ತಗುಲಿದೆಯಂತೆ. ಇದೆಲ್ಲವನ್ನೂ ಜಗನ್‌ ಸಾರ್ವಜನಿಕರ ಹಣದಲ್ಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ಇದರಲ್ಲಿ ಯಾವುದೇ ಬದಲಾವಣೆ ಏನಿಲ್ಲ. ಏಕೆಂದರೆ ಆಂಧ್ರಪ್ರದೇಶದಲ್ಲಿ ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಹ ಸಾರ್ವಜನಿಕರ ಹಣವನ್ನು ಸಾಕಷ್ಟು ಪೋಲು ಮಾಡಿದ್ದಾರೆ. ಖಾಸಗಿ ನಿವೇಶನಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದಾರೆ. ಈಗ ಜಗನ್‌ ಅಧಿಕಾರದಲ್ಲಿದ್ದು, ಅದೇ ಹಾದಿ ಹಿಡಿದಿದ್ದಾರೆ. ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಡಿಪಲ್ಲಿಯಲ್ಲಿರುವ ಮನೆ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಸ್ವಂತದ್ದು. ವಿಧಾನಸಭೆ ಚುನಾವಣೆಗೂ ಮೊದಲು ಆ ಮನೆಯಲ್ಲೇ ಜಗನ್‌ ವಾಸ್ತವ್ಯ ಹೂಡಿದರು. ಅದನ್ನೇ ಸಿಎಂ ಕ್ಯಾಂಪ್‌ ರೆಸಿಡೆನ್ಸಿ ಅಂತಾ ಹೆಸರು ಬದಲಾಯಿಸಿದರು. ಮೇ ತಿಂಗಳಲ್ಲಿ ಅಧಿಕಾರಕ್ಕೇರಿದ ಜಗನ್‌ ಸರ್ಕಾರದ ಬೊಕ್ಕಸದಲ್ಲಿದ್ದ ಕೋಟಿ ಕೋಟಿ ಹಣವನ್ನ ಬಳಸಿಕೊಂಡಿದ್ದಾರೆ. ಮನೆಗೆ ಒದಗಿಸಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು 15 ಕೋಟಿ ರೂಪಾಯಿ ಬಳಸಿದ್ದರು. ಅದಾದ ನಂತರ ಅಕ್ಟೋಬರ್‌ನಲ್ಲಿ ಸಾರಿಗೆ, ರಸ್ತೆ, ಕಟ್ಟಡ ನಿರ್ಮಾಣಕ್ಕಾಗಿ 73 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿತು. ಅದೇ ಹಣದಲ್ಲಿ ಜಗನ್ ಮನೆಗೆ ಹೊಸ ಬಾಗಿಲುಗಳು, ಕಿಟಕಿಗಳನ್ನು ಕಟ್ಟಿಸಿದ್ದಾರೆ. ಇದಕ್ಕೂ ಮೊದಲು ಮನೆಗೆ ಹೋಗುವ 1.3ಕಿ.ಮೀ ರಸ್ತೆ ದುರಸ್ತಿಗಾಗಿ 5 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

ಜುಲೈನಲ್ಲಿ ಹೈದ್ರಾಬಾದ್‌ನಲ್ಲಿರುವ ಜಗನ್‌ ಅವರ ಪಲಾಟಿಯಲ್‌ ಬಂಜಾರ್‌ ಹಿಲ್ಸ್, ಲೋಟಸ್ ಪಾಂಡ್‌ ರೆಸಿಡೆನ್ಸಿ ಅಂತಲೇ ಹೆಸರುವಾಸಿಯಾಗಿರುವ ಮನೆಗೆ ಭದ್ರತೆ ನಿಯೋಜನೆಗೆ ಸರ್ಕಾರ 24.5 ಲಕ್ಷ ರೂ. ನೀಡಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಜಗನ್‌, ಸಾರ್ವಜನಿಕರ ದುಡ್ಡನ್ನು ದುಂದುವೆಚ್ಚ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ರೋಮ್‌ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಕುಯ್ಯುತ್ತಿದ್ದ. ಹಾಗೆಯೇ 5 ತಿಂಗಳಿಂದ ಆಂಧ್ರಪ್ರದೇಶ ಹಣಕಾಸು ಕೊರತೆ, ಕೆಲಸವಿಲ್ಲದೆ ಜನ ತಮ್ಮ ಜೀವ ಕಳೆದುಳ್ಳುತ್ತಿರುವ ವೇಳೆ, ಜಗನ್‌ ತನ್ನ ಹೈದ್ರಾಬಾದ್‌ನ ಪಲಾಟಿಯಲ್‌ ಮನೆಯಲ್ಲಿ ವಿಡಿಯೋ ಗೇಮ್‌ ಆಡುತ್ತ ಕುಳಿತಿದ್ದರು. ಅದಕ್ಕಾಗಿ ಸರ್ಕಾರ 15.65 ಕೋಟಿ ನೀಡಿತ್ತು ಎಂಬುದೇ ಶಾಕಿಂಗ್‌ ವಿಷಯ ಎಂದು ಬರೆದಿದ್ದರು.

ಇನ್ನು ಜಗನ್‌ ಅವರ ಮನೆಯ ಭದ್ರತೆಗೆ ಸರ್ಕಾರ ವ್ಯಯಿಸಿದ ವೆಚ್ಚದ ಬಗ್ಗೆ ಸಚಿವ ಪೆರ್ನಿ ವೆಂಕಟರಾಮಯ್ಯ ಸಮರ್ಥಿಸಿಕೊಂಡಿದ್ದರು. ಜಗನ್‌ ಅವರ ಮನೆ ಜನಸಂದಣಿ ಪ್ರದೇಶದ ಮಧ್ಯಭಾಗದಲ್ಲಿದೆ. ಅಲ್ಲಿ ಸುತ್ತಮುತ್ತ ಎತ್ತರವಾದ ಕಟ್ಟಡಗಳಿವೆ. ಹೀಗಾಗಿ ಭದ್ರತೆ ಅತೀ ಮುಖ್ಯ. ಬುಲೆಟ್‌ ಪ್ರೂಫ್‌ ಜಾಕೆಟ್, ಕಿಟಕಿ ಸೇರಿದಂತೆ ಹಲವು ವಸ್ತುಗಳ ಅವಶ್ಯಕತೆಯಿದೆ ಎಂದಿದ್ದರು. ನಾಯ್ಡು ಆಡಳಿತದ ಐದು ವರ್ಷದಲ್ಲಿ ೧೦೦ ಕೋಟಿ ರೂಪಾಯಿಯನ್ನು ನಾಯ್ಡು ಹೈದ್ರಾಬಾದ್‌ ಮತ್ತು ವಿಜಯವಾಡದಲ್ಲಿರುವ ಕ್ಯಾಂಪ್‌ ಆಫೀಸ್‌, ಫಾರ್ಮ್‌‌ಹೌಸ್, ಗೆಸ್ಟ್‌ ಹೌಸ್‌ಗಳ ನಿರ್ಮಾಣ ಮತ್ತು ಪೀಠೋಪಕರಣ ಮತ್ತು ಐಷಾರಾಮಿ ವಸ್ತುಗಳ ಅಳವಡಿಕೆಗೆ ವ್ಯಯಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ನಾಯ್ಡು ಕುಟುಂಬಸ್ಥರು ವಾಸವಿದ್ದ ಜುಬಿಲಿ ಹಿಲ್ಸ್‌ ಮನೆ ಮರುನಿರ್ಮಾಣಗೊಳ್ಳುತ್ತಿದ್ದಾಗ ವರ್ಷಗಟ್ಟಲೇ ನಾಯ್ಡು ಮನೆಯವರು ಫೈಸ್ಟಾರ್‌ ಹೋಟೆಲ್‌ನಲ್ಲಿ ವಾಸವಾಗಿದ್ದರು. ಅದೆಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಿತ್ತು. ಅದು ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದ್ದಿರಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....