Homeಮುಖಪುಟಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈಗ ಹಣ, ಅಧಿಕಾರ, ಪ್ರತಿಷ್ಠೆಯದ್ದೆ ಕಾರುಬಾರು. ಸಾರ್ವಜನಿಕರ ಹಣದಲ್ಲಿ ಮಂತ್ರಿಗಳು ಆಸ್ತಿ ಗಳಿಕೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂಬ ಆಪಾದನೆಗಳು ಸಾಮಾನ್ಯವಾಗಿ ಕೇಳಿ ಬಂದಿವೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಾರ್ವಜನಿಕರ ದುಡ್ಡಲ್ಲಿ ಶೋಕಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಜಗನ್‌ ಮೋಹನ್‌ ರೆಡ್ಡಿ ಈಗ ತಾವು ಮಾಡುತ್ತಿರೋದೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಜಗನ್‌ ಮೋಹನ್‌ ರೆಡ್ಡಿ, ಗೆದ್ದು ಸಿಎಂ ಕುರ್ಚಿ ಏರಿದ್ದಾರೆ. ಆದರೆ ಸಿಎಂ ಆದಾಗಿನಿಂದ ಒಂದಲ್ಲ ಒಂದು ವಿವಾದಗಳು ಅವರನ್ನು ಮುತ್ತಿಕೊಳ್ಳುತ್ತಲೇ ಇವೆ. ಕೆಲ ದಿನಗಳ ಹಿಂದೆ ಸರ್ಕಾರಿ ಯೋಜನೆಗಳ ಹೆಸರು ಬದಲಾಯಿಸಿ, ಜನರು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಜನರ ದುಡ್ಡಲ್ಲಿ ಐಷಾರಾಮಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಆಂಧ್ರದ ಗುಂಟೂರು ಜಿಲ್ಲೆಯ ತಡಿಪಲ್ಲಿಯಲ್ಲಿ ಖಾಸಗಿ ಮನೆ ನಿರ್ಮಾಣಕ್ಕೆ 3.25 ಕೋಟಿ ರೂಪಾಯಿಯಲ್ಲಿ 0.15 ಎಕರೆ ಜಮೀನು ಖರೀದಿಸಿದ್ದಾರೆ. ತಡಿಪಲ್ಲಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಹತ್ತಿರದಲ್ಲಿದೆ. ಖಾಸಗಿ ಮನೆಯಲ್ಲಿ ಜಗನ್‌, ಸೋಲಾರ್‌ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸಿಸಿ ಕ್ಯಾಮರಾ, ಹೆಚ್ಚುವರಿ ಹವಾ ನಿಯಂತ್ರಕ ಅಳವಡಿಕೆ, ಅತ್ಯುನ್ನತ ದರ್ಜೆಯ ರೆಫ್ರಿಜರೇಟರ್‌ ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದರಲ್ಲಿ ಹವಾ ನಿಯಂತ್ರಣ ವ್ಯವಸ್ಥೆಗೆ 80 ಲಕ್ಷ ರೂಪಾಯಿ ವೆಚ್ಚ ತಗುಲಿದೆಯಂತೆ. ಇದೆಲ್ಲವನ್ನೂ ಜಗನ್‌ ಸಾರ್ವಜನಿಕರ ಹಣದಲ್ಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ಇದರಲ್ಲಿ ಯಾವುದೇ ಬದಲಾವಣೆ ಏನಿಲ್ಲ. ಏಕೆಂದರೆ ಆಂಧ್ರಪ್ರದೇಶದಲ್ಲಿ ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಹ ಸಾರ್ವಜನಿಕರ ಹಣವನ್ನು ಸಾಕಷ್ಟು ಪೋಲು ಮಾಡಿದ್ದಾರೆ. ಖಾಸಗಿ ನಿವೇಶನಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದಾರೆ. ಈಗ ಜಗನ್‌ ಅಧಿಕಾರದಲ್ಲಿದ್ದು, ಅದೇ ಹಾದಿ ಹಿಡಿದಿದ್ದಾರೆ. ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಡಿಪಲ್ಲಿಯಲ್ಲಿರುವ ಮನೆ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಸ್ವಂತದ್ದು. ವಿಧಾನಸಭೆ ಚುನಾವಣೆಗೂ ಮೊದಲು ಆ ಮನೆಯಲ್ಲೇ ಜಗನ್‌ ವಾಸ್ತವ್ಯ ಹೂಡಿದರು. ಅದನ್ನೇ ಸಿಎಂ ಕ್ಯಾಂಪ್‌ ರೆಸಿಡೆನ್ಸಿ ಅಂತಾ ಹೆಸರು ಬದಲಾಯಿಸಿದರು. ಮೇ ತಿಂಗಳಲ್ಲಿ ಅಧಿಕಾರಕ್ಕೇರಿದ ಜಗನ್‌ ಸರ್ಕಾರದ ಬೊಕ್ಕಸದಲ್ಲಿದ್ದ ಕೋಟಿ ಕೋಟಿ ಹಣವನ್ನ ಬಳಸಿಕೊಂಡಿದ್ದಾರೆ. ಮನೆಗೆ ಒದಗಿಸಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು 15 ಕೋಟಿ ರೂಪಾಯಿ ಬಳಸಿದ್ದರು. ಅದಾದ ನಂತರ ಅಕ್ಟೋಬರ್‌ನಲ್ಲಿ ಸಾರಿಗೆ, ರಸ್ತೆ, ಕಟ್ಟಡ ನಿರ್ಮಾಣಕ್ಕಾಗಿ 73 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿತು. ಅದೇ ಹಣದಲ್ಲಿ ಜಗನ್ ಮನೆಗೆ ಹೊಸ ಬಾಗಿಲುಗಳು, ಕಿಟಕಿಗಳನ್ನು ಕಟ್ಟಿಸಿದ್ದಾರೆ. ಇದಕ್ಕೂ ಮೊದಲು ಮನೆಗೆ ಹೋಗುವ 1.3ಕಿ.ಮೀ ರಸ್ತೆ ದುರಸ್ತಿಗಾಗಿ 5 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

ಜುಲೈನಲ್ಲಿ ಹೈದ್ರಾಬಾದ್‌ನಲ್ಲಿರುವ ಜಗನ್‌ ಅವರ ಪಲಾಟಿಯಲ್‌ ಬಂಜಾರ್‌ ಹಿಲ್ಸ್, ಲೋಟಸ್ ಪಾಂಡ್‌ ರೆಸಿಡೆನ್ಸಿ ಅಂತಲೇ ಹೆಸರುವಾಸಿಯಾಗಿರುವ ಮನೆಗೆ ಭದ್ರತೆ ನಿಯೋಜನೆಗೆ ಸರ್ಕಾರ 24.5 ಲಕ್ಷ ರೂ. ನೀಡಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಜಗನ್‌, ಸಾರ್ವಜನಿಕರ ದುಡ್ಡನ್ನು ದುಂದುವೆಚ್ಚ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ರೋಮ್‌ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಕುಯ್ಯುತ್ತಿದ್ದ. ಹಾಗೆಯೇ 5 ತಿಂಗಳಿಂದ ಆಂಧ್ರಪ್ರದೇಶ ಹಣಕಾಸು ಕೊರತೆ, ಕೆಲಸವಿಲ್ಲದೆ ಜನ ತಮ್ಮ ಜೀವ ಕಳೆದುಳ್ಳುತ್ತಿರುವ ವೇಳೆ, ಜಗನ್‌ ತನ್ನ ಹೈದ್ರಾಬಾದ್‌ನ ಪಲಾಟಿಯಲ್‌ ಮನೆಯಲ್ಲಿ ವಿಡಿಯೋ ಗೇಮ್‌ ಆಡುತ್ತ ಕುಳಿತಿದ್ದರು. ಅದಕ್ಕಾಗಿ ಸರ್ಕಾರ 15.65 ಕೋಟಿ ನೀಡಿತ್ತು ಎಂಬುದೇ ಶಾಕಿಂಗ್‌ ವಿಷಯ ಎಂದು ಬರೆದಿದ್ದರು.

ಇನ್ನು ಜಗನ್‌ ಅವರ ಮನೆಯ ಭದ್ರತೆಗೆ ಸರ್ಕಾರ ವ್ಯಯಿಸಿದ ವೆಚ್ಚದ ಬಗ್ಗೆ ಸಚಿವ ಪೆರ್ನಿ ವೆಂಕಟರಾಮಯ್ಯ ಸಮರ್ಥಿಸಿಕೊಂಡಿದ್ದರು. ಜಗನ್‌ ಅವರ ಮನೆ ಜನಸಂದಣಿ ಪ್ರದೇಶದ ಮಧ್ಯಭಾಗದಲ್ಲಿದೆ. ಅಲ್ಲಿ ಸುತ್ತಮುತ್ತ ಎತ್ತರವಾದ ಕಟ್ಟಡಗಳಿವೆ. ಹೀಗಾಗಿ ಭದ್ರತೆ ಅತೀ ಮುಖ್ಯ. ಬುಲೆಟ್‌ ಪ್ರೂಫ್‌ ಜಾಕೆಟ್, ಕಿಟಕಿ ಸೇರಿದಂತೆ ಹಲವು ವಸ್ತುಗಳ ಅವಶ್ಯಕತೆಯಿದೆ ಎಂದಿದ್ದರು. ನಾಯ್ಡು ಆಡಳಿತದ ಐದು ವರ್ಷದಲ್ಲಿ ೧೦೦ ಕೋಟಿ ರೂಪಾಯಿಯನ್ನು ನಾಯ್ಡು ಹೈದ್ರಾಬಾದ್‌ ಮತ್ತು ವಿಜಯವಾಡದಲ್ಲಿರುವ ಕ್ಯಾಂಪ್‌ ಆಫೀಸ್‌, ಫಾರ್ಮ್‌‌ಹೌಸ್, ಗೆಸ್ಟ್‌ ಹೌಸ್‌ಗಳ ನಿರ್ಮಾಣ ಮತ್ತು ಪೀಠೋಪಕರಣ ಮತ್ತು ಐಷಾರಾಮಿ ವಸ್ತುಗಳ ಅಳವಡಿಕೆಗೆ ವ್ಯಯಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ನಾಯ್ಡು ಕುಟುಂಬಸ್ಥರು ವಾಸವಿದ್ದ ಜುಬಿಲಿ ಹಿಲ್ಸ್‌ ಮನೆ ಮರುನಿರ್ಮಾಣಗೊಳ್ಳುತ್ತಿದ್ದಾಗ ವರ್ಷಗಟ್ಟಲೇ ನಾಯ್ಡು ಮನೆಯವರು ಫೈಸ್ಟಾರ್‌ ಹೋಟೆಲ್‌ನಲ್ಲಿ ವಾಸವಾಗಿದ್ದರು. ಅದೆಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಿತ್ತು. ಅದು ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದ್ದಿರಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...