Homeಮುಖಪುಟಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈಗ ಹಣ, ಅಧಿಕಾರ, ಪ್ರತಿಷ್ಠೆಯದ್ದೆ ಕಾರುಬಾರು. ಸಾರ್ವಜನಿಕರ ಹಣದಲ್ಲಿ ಮಂತ್ರಿಗಳು ಆಸ್ತಿ ಗಳಿಕೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂಬ ಆಪಾದನೆಗಳು ಸಾಮಾನ್ಯವಾಗಿ ಕೇಳಿ ಬಂದಿವೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಾರ್ವಜನಿಕರ ದುಡ್ಡಲ್ಲಿ ಶೋಕಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಜಗನ್‌ ಮೋಹನ್‌ ರೆಡ್ಡಿ ಈಗ ತಾವು ಮಾಡುತ್ತಿರೋದೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಜಗನ್‌ ಮೋಹನ್‌ ರೆಡ್ಡಿ, ಗೆದ್ದು ಸಿಎಂ ಕುರ್ಚಿ ಏರಿದ್ದಾರೆ. ಆದರೆ ಸಿಎಂ ಆದಾಗಿನಿಂದ ಒಂದಲ್ಲ ಒಂದು ವಿವಾದಗಳು ಅವರನ್ನು ಮುತ್ತಿಕೊಳ್ಳುತ್ತಲೇ ಇವೆ. ಕೆಲ ದಿನಗಳ ಹಿಂದೆ ಸರ್ಕಾರಿ ಯೋಜನೆಗಳ ಹೆಸರು ಬದಲಾಯಿಸಿ, ಜನರು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಜನರ ದುಡ್ಡಲ್ಲಿ ಐಷಾರಾಮಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಆಂಧ್ರದ ಗುಂಟೂರು ಜಿಲ್ಲೆಯ ತಡಿಪಲ್ಲಿಯಲ್ಲಿ ಖಾಸಗಿ ಮನೆ ನಿರ್ಮಾಣಕ್ಕೆ 3.25 ಕೋಟಿ ರೂಪಾಯಿಯಲ್ಲಿ 0.15 ಎಕರೆ ಜಮೀನು ಖರೀದಿಸಿದ್ದಾರೆ. ತಡಿಪಲ್ಲಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಹತ್ತಿರದಲ್ಲಿದೆ. ಖಾಸಗಿ ಮನೆಯಲ್ಲಿ ಜಗನ್‌, ಸೋಲಾರ್‌ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸಿಸಿ ಕ್ಯಾಮರಾ, ಹೆಚ್ಚುವರಿ ಹವಾ ನಿಯಂತ್ರಕ ಅಳವಡಿಕೆ, ಅತ್ಯುನ್ನತ ದರ್ಜೆಯ ರೆಫ್ರಿಜರೇಟರ್‌ ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದರಲ್ಲಿ ಹವಾ ನಿಯಂತ್ರಣ ವ್ಯವಸ್ಥೆಗೆ 80 ಲಕ್ಷ ರೂಪಾಯಿ ವೆಚ್ಚ ತಗುಲಿದೆಯಂತೆ. ಇದೆಲ್ಲವನ್ನೂ ಜಗನ್‌ ಸಾರ್ವಜನಿಕರ ಹಣದಲ್ಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ಇದರಲ್ಲಿ ಯಾವುದೇ ಬದಲಾವಣೆ ಏನಿಲ್ಲ. ಏಕೆಂದರೆ ಆಂಧ್ರಪ್ರದೇಶದಲ್ಲಿ ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಹ ಸಾರ್ವಜನಿಕರ ಹಣವನ್ನು ಸಾಕಷ್ಟು ಪೋಲು ಮಾಡಿದ್ದಾರೆ. ಖಾಸಗಿ ನಿವೇಶನಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದಾರೆ. ಈಗ ಜಗನ್‌ ಅಧಿಕಾರದಲ್ಲಿದ್ದು, ಅದೇ ಹಾದಿ ಹಿಡಿದಿದ್ದಾರೆ. ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಡಿಪಲ್ಲಿಯಲ್ಲಿರುವ ಮನೆ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಸ್ವಂತದ್ದು. ವಿಧಾನಸಭೆ ಚುನಾವಣೆಗೂ ಮೊದಲು ಆ ಮನೆಯಲ್ಲೇ ಜಗನ್‌ ವಾಸ್ತವ್ಯ ಹೂಡಿದರು. ಅದನ್ನೇ ಸಿಎಂ ಕ್ಯಾಂಪ್‌ ರೆಸಿಡೆನ್ಸಿ ಅಂತಾ ಹೆಸರು ಬದಲಾಯಿಸಿದರು. ಮೇ ತಿಂಗಳಲ್ಲಿ ಅಧಿಕಾರಕ್ಕೇರಿದ ಜಗನ್‌ ಸರ್ಕಾರದ ಬೊಕ್ಕಸದಲ್ಲಿದ್ದ ಕೋಟಿ ಕೋಟಿ ಹಣವನ್ನ ಬಳಸಿಕೊಂಡಿದ್ದಾರೆ. ಮನೆಗೆ ಒದಗಿಸಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು 15 ಕೋಟಿ ರೂಪಾಯಿ ಬಳಸಿದ್ದರು. ಅದಾದ ನಂತರ ಅಕ್ಟೋಬರ್‌ನಲ್ಲಿ ಸಾರಿಗೆ, ರಸ್ತೆ, ಕಟ್ಟಡ ನಿರ್ಮಾಣಕ್ಕಾಗಿ 73 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿತು. ಅದೇ ಹಣದಲ್ಲಿ ಜಗನ್ ಮನೆಗೆ ಹೊಸ ಬಾಗಿಲುಗಳು, ಕಿಟಕಿಗಳನ್ನು ಕಟ್ಟಿಸಿದ್ದಾರೆ. ಇದಕ್ಕೂ ಮೊದಲು ಮನೆಗೆ ಹೋಗುವ 1.3ಕಿ.ಮೀ ರಸ್ತೆ ದುರಸ್ತಿಗಾಗಿ 5 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

ಜುಲೈನಲ್ಲಿ ಹೈದ್ರಾಬಾದ್‌ನಲ್ಲಿರುವ ಜಗನ್‌ ಅವರ ಪಲಾಟಿಯಲ್‌ ಬಂಜಾರ್‌ ಹಿಲ್ಸ್, ಲೋಟಸ್ ಪಾಂಡ್‌ ರೆಸಿಡೆನ್ಸಿ ಅಂತಲೇ ಹೆಸರುವಾಸಿಯಾಗಿರುವ ಮನೆಗೆ ಭದ್ರತೆ ನಿಯೋಜನೆಗೆ ಸರ್ಕಾರ 24.5 ಲಕ್ಷ ರೂ. ನೀಡಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಜಗನ್‌, ಸಾರ್ವಜನಿಕರ ದುಡ್ಡನ್ನು ದುಂದುವೆಚ್ಚ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ರೋಮ್‌ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಕುಯ್ಯುತ್ತಿದ್ದ. ಹಾಗೆಯೇ 5 ತಿಂಗಳಿಂದ ಆಂಧ್ರಪ್ರದೇಶ ಹಣಕಾಸು ಕೊರತೆ, ಕೆಲಸವಿಲ್ಲದೆ ಜನ ತಮ್ಮ ಜೀವ ಕಳೆದುಳ್ಳುತ್ತಿರುವ ವೇಳೆ, ಜಗನ್‌ ತನ್ನ ಹೈದ್ರಾಬಾದ್‌ನ ಪಲಾಟಿಯಲ್‌ ಮನೆಯಲ್ಲಿ ವಿಡಿಯೋ ಗೇಮ್‌ ಆಡುತ್ತ ಕುಳಿತಿದ್ದರು. ಅದಕ್ಕಾಗಿ ಸರ್ಕಾರ 15.65 ಕೋಟಿ ನೀಡಿತ್ತು ಎಂಬುದೇ ಶಾಕಿಂಗ್‌ ವಿಷಯ ಎಂದು ಬರೆದಿದ್ದರು.

ಇನ್ನು ಜಗನ್‌ ಅವರ ಮನೆಯ ಭದ್ರತೆಗೆ ಸರ್ಕಾರ ವ್ಯಯಿಸಿದ ವೆಚ್ಚದ ಬಗ್ಗೆ ಸಚಿವ ಪೆರ್ನಿ ವೆಂಕಟರಾಮಯ್ಯ ಸಮರ್ಥಿಸಿಕೊಂಡಿದ್ದರು. ಜಗನ್‌ ಅವರ ಮನೆ ಜನಸಂದಣಿ ಪ್ರದೇಶದ ಮಧ್ಯಭಾಗದಲ್ಲಿದೆ. ಅಲ್ಲಿ ಸುತ್ತಮುತ್ತ ಎತ್ತರವಾದ ಕಟ್ಟಡಗಳಿವೆ. ಹೀಗಾಗಿ ಭದ್ರತೆ ಅತೀ ಮುಖ್ಯ. ಬುಲೆಟ್‌ ಪ್ರೂಫ್‌ ಜಾಕೆಟ್, ಕಿಟಕಿ ಸೇರಿದಂತೆ ಹಲವು ವಸ್ತುಗಳ ಅವಶ್ಯಕತೆಯಿದೆ ಎಂದಿದ್ದರು. ನಾಯ್ಡು ಆಡಳಿತದ ಐದು ವರ್ಷದಲ್ಲಿ ೧೦೦ ಕೋಟಿ ರೂಪಾಯಿಯನ್ನು ನಾಯ್ಡು ಹೈದ್ರಾಬಾದ್‌ ಮತ್ತು ವಿಜಯವಾಡದಲ್ಲಿರುವ ಕ್ಯಾಂಪ್‌ ಆಫೀಸ್‌, ಫಾರ್ಮ್‌‌ಹೌಸ್, ಗೆಸ್ಟ್‌ ಹೌಸ್‌ಗಳ ನಿರ್ಮಾಣ ಮತ್ತು ಪೀಠೋಪಕರಣ ಮತ್ತು ಐಷಾರಾಮಿ ವಸ್ತುಗಳ ಅಳವಡಿಕೆಗೆ ವ್ಯಯಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ನಾಯ್ಡು ಕುಟುಂಬಸ್ಥರು ವಾಸವಿದ್ದ ಜುಬಿಲಿ ಹಿಲ್ಸ್‌ ಮನೆ ಮರುನಿರ್ಮಾಣಗೊಳ್ಳುತ್ತಿದ್ದಾಗ ವರ್ಷಗಟ್ಟಲೇ ನಾಯ್ಡು ಮನೆಯವರು ಫೈಸ್ಟಾರ್‌ ಹೋಟೆಲ್‌ನಲ್ಲಿ ವಾಸವಾಗಿದ್ದರು. ಅದೆಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಿತ್ತು. ಅದು ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದ್ದಿರಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...