Homeಮುಖಪುಟಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈಗ ಹಣ, ಅಧಿಕಾರ, ಪ್ರತಿಷ್ಠೆಯದ್ದೆ ಕಾರುಬಾರು. ಸಾರ್ವಜನಿಕರ ಹಣದಲ್ಲಿ ಮಂತ್ರಿಗಳು ಆಸ್ತಿ ಗಳಿಕೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂಬ ಆಪಾದನೆಗಳು ಸಾಮಾನ್ಯವಾಗಿ ಕೇಳಿ ಬಂದಿವೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಾರ್ವಜನಿಕರ ದುಡ್ಡಲ್ಲಿ ಶೋಕಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಜಗನ್‌ ಮೋಹನ್‌ ರೆಡ್ಡಿ ಈಗ ತಾವು ಮಾಡುತ್ತಿರೋದೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಜಗನ್‌ ಮೋಹನ್‌ ರೆಡ್ಡಿ, ಗೆದ್ದು ಸಿಎಂ ಕುರ್ಚಿ ಏರಿದ್ದಾರೆ. ಆದರೆ ಸಿಎಂ ಆದಾಗಿನಿಂದ ಒಂದಲ್ಲ ಒಂದು ವಿವಾದಗಳು ಅವರನ್ನು ಮುತ್ತಿಕೊಳ್ಳುತ್ತಲೇ ಇವೆ. ಕೆಲ ದಿನಗಳ ಹಿಂದೆ ಸರ್ಕಾರಿ ಯೋಜನೆಗಳ ಹೆಸರು ಬದಲಾಯಿಸಿ, ಜನರು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಜನರ ದುಡ್ಡಲ್ಲಿ ಐಷಾರಾಮಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಆಂಧ್ರದ ಗುಂಟೂರು ಜಿಲ್ಲೆಯ ತಡಿಪಲ್ಲಿಯಲ್ಲಿ ಖಾಸಗಿ ಮನೆ ನಿರ್ಮಾಣಕ್ಕೆ 3.25 ಕೋಟಿ ರೂಪಾಯಿಯಲ್ಲಿ 0.15 ಎಕರೆ ಜಮೀನು ಖರೀದಿಸಿದ್ದಾರೆ. ತಡಿಪಲ್ಲಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಹತ್ತಿರದಲ್ಲಿದೆ. ಖಾಸಗಿ ಮನೆಯಲ್ಲಿ ಜಗನ್‌, ಸೋಲಾರ್‌ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸಿಸಿ ಕ್ಯಾಮರಾ, ಹೆಚ್ಚುವರಿ ಹವಾ ನಿಯಂತ್ರಕ ಅಳವಡಿಕೆ, ಅತ್ಯುನ್ನತ ದರ್ಜೆಯ ರೆಫ್ರಿಜರೇಟರ್‌ ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದರಲ್ಲಿ ಹವಾ ನಿಯಂತ್ರಣ ವ್ಯವಸ್ಥೆಗೆ 80 ಲಕ್ಷ ರೂಪಾಯಿ ವೆಚ್ಚ ತಗುಲಿದೆಯಂತೆ. ಇದೆಲ್ಲವನ್ನೂ ಜಗನ್‌ ಸಾರ್ವಜನಿಕರ ಹಣದಲ್ಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ಇದರಲ್ಲಿ ಯಾವುದೇ ಬದಲಾವಣೆ ಏನಿಲ್ಲ. ಏಕೆಂದರೆ ಆಂಧ್ರಪ್ರದೇಶದಲ್ಲಿ ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಹ ಸಾರ್ವಜನಿಕರ ಹಣವನ್ನು ಸಾಕಷ್ಟು ಪೋಲು ಮಾಡಿದ್ದಾರೆ. ಖಾಸಗಿ ನಿವೇಶನಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದಾರೆ. ಈಗ ಜಗನ್‌ ಅಧಿಕಾರದಲ್ಲಿದ್ದು, ಅದೇ ಹಾದಿ ಹಿಡಿದಿದ್ದಾರೆ. ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಡಿಪಲ್ಲಿಯಲ್ಲಿರುವ ಮನೆ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಸ್ವಂತದ್ದು. ವಿಧಾನಸಭೆ ಚುನಾವಣೆಗೂ ಮೊದಲು ಆ ಮನೆಯಲ್ಲೇ ಜಗನ್‌ ವಾಸ್ತವ್ಯ ಹೂಡಿದರು. ಅದನ್ನೇ ಸಿಎಂ ಕ್ಯಾಂಪ್‌ ರೆಸಿಡೆನ್ಸಿ ಅಂತಾ ಹೆಸರು ಬದಲಾಯಿಸಿದರು. ಮೇ ತಿಂಗಳಲ್ಲಿ ಅಧಿಕಾರಕ್ಕೇರಿದ ಜಗನ್‌ ಸರ್ಕಾರದ ಬೊಕ್ಕಸದಲ್ಲಿದ್ದ ಕೋಟಿ ಕೋಟಿ ಹಣವನ್ನ ಬಳಸಿಕೊಂಡಿದ್ದಾರೆ. ಮನೆಗೆ ಒದಗಿಸಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು 15 ಕೋಟಿ ರೂಪಾಯಿ ಬಳಸಿದ್ದರು. ಅದಾದ ನಂತರ ಅಕ್ಟೋಬರ್‌ನಲ್ಲಿ ಸಾರಿಗೆ, ರಸ್ತೆ, ಕಟ್ಟಡ ನಿರ್ಮಾಣಕ್ಕಾಗಿ 73 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿತು. ಅದೇ ಹಣದಲ್ಲಿ ಜಗನ್ ಮನೆಗೆ ಹೊಸ ಬಾಗಿಲುಗಳು, ಕಿಟಕಿಗಳನ್ನು ಕಟ್ಟಿಸಿದ್ದಾರೆ. ಇದಕ್ಕೂ ಮೊದಲು ಮನೆಗೆ ಹೋಗುವ 1.3ಕಿ.ಮೀ ರಸ್ತೆ ದುರಸ್ತಿಗಾಗಿ 5 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

ಜುಲೈನಲ್ಲಿ ಹೈದ್ರಾಬಾದ್‌ನಲ್ಲಿರುವ ಜಗನ್‌ ಅವರ ಪಲಾಟಿಯಲ್‌ ಬಂಜಾರ್‌ ಹಿಲ್ಸ್, ಲೋಟಸ್ ಪಾಂಡ್‌ ರೆಸಿಡೆನ್ಸಿ ಅಂತಲೇ ಹೆಸರುವಾಸಿಯಾಗಿರುವ ಮನೆಗೆ ಭದ್ರತೆ ನಿಯೋಜನೆಗೆ ಸರ್ಕಾರ 24.5 ಲಕ್ಷ ರೂ. ನೀಡಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಜಗನ್‌, ಸಾರ್ವಜನಿಕರ ದುಡ್ಡನ್ನು ದುಂದುವೆಚ್ಚ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ರೋಮ್‌ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಕುಯ್ಯುತ್ತಿದ್ದ. ಹಾಗೆಯೇ 5 ತಿಂಗಳಿಂದ ಆಂಧ್ರಪ್ರದೇಶ ಹಣಕಾಸು ಕೊರತೆ, ಕೆಲಸವಿಲ್ಲದೆ ಜನ ತಮ್ಮ ಜೀವ ಕಳೆದುಳ್ಳುತ್ತಿರುವ ವೇಳೆ, ಜಗನ್‌ ತನ್ನ ಹೈದ್ರಾಬಾದ್‌ನ ಪಲಾಟಿಯಲ್‌ ಮನೆಯಲ್ಲಿ ವಿಡಿಯೋ ಗೇಮ್‌ ಆಡುತ್ತ ಕುಳಿತಿದ್ದರು. ಅದಕ್ಕಾಗಿ ಸರ್ಕಾರ 15.65 ಕೋಟಿ ನೀಡಿತ್ತು ಎಂಬುದೇ ಶಾಕಿಂಗ್‌ ವಿಷಯ ಎಂದು ಬರೆದಿದ್ದರು.

ಇನ್ನು ಜಗನ್‌ ಅವರ ಮನೆಯ ಭದ್ರತೆಗೆ ಸರ್ಕಾರ ವ್ಯಯಿಸಿದ ವೆಚ್ಚದ ಬಗ್ಗೆ ಸಚಿವ ಪೆರ್ನಿ ವೆಂಕಟರಾಮಯ್ಯ ಸಮರ್ಥಿಸಿಕೊಂಡಿದ್ದರು. ಜಗನ್‌ ಅವರ ಮನೆ ಜನಸಂದಣಿ ಪ್ರದೇಶದ ಮಧ್ಯಭಾಗದಲ್ಲಿದೆ. ಅಲ್ಲಿ ಸುತ್ತಮುತ್ತ ಎತ್ತರವಾದ ಕಟ್ಟಡಗಳಿವೆ. ಹೀಗಾಗಿ ಭದ್ರತೆ ಅತೀ ಮುಖ್ಯ. ಬುಲೆಟ್‌ ಪ್ರೂಫ್‌ ಜಾಕೆಟ್, ಕಿಟಕಿ ಸೇರಿದಂತೆ ಹಲವು ವಸ್ತುಗಳ ಅವಶ್ಯಕತೆಯಿದೆ ಎಂದಿದ್ದರು. ನಾಯ್ಡು ಆಡಳಿತದ ಐದು ವರ್ಷದಲ್ಲಿ ೧೦೦ ಕೋಟಿ ರೂಪಾಯಿಯನ್ನು ನಾಯ್ಡು ಹೈದ್ರಾಬಾದ್‌ ಮತ್ತು ವಿಜಯವಾಡದಲ್ಲಿರುವ ಕ್ಯಾಂಪ್‌ ಆಫೀಸ್‌, ಫಾರ್ಮ್‌‌ಹೌಸ್, ಗೆಸ್ಟ್‌ ಹೌಸ್‌ಗಳ ನಿರ್ಮಾಣ ಮತ್ತು ಪೀಠೋಪಕರಣ ಮತ್ತು ಐಷಾರಾಮಿ ವಸ್ತುಗಳ ಅಳವಡಿಕೆಗೆ ವ್ಯಯಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ನಾಯ್ಡು ಕುಟುಂಬಸ್ಥರು ವಾಸವಿದ್ದ ಜುಬಿಲಿ ಹಿಲ್ಸ್‌ ಮನೆ ಮರುನಿರ್ಮಾಣಗೊಳ್ಳುತ್ತಿದ್ದಾಗ ವರ್ಷಗಟ್ಟಲೇ ನಾಯ್ಡು ಮನೆಯವರು ಫೈಸ್ಟಾರ್‌ ಹೋಟೆಲ್‌ನಲ್ಲಿ ವಾಸವಾಗಿದ್ದರು. ಅದೆಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಿತ್ತು. ಅದು ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದ್ದಿರಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...