Homeಮುಖಪುಟಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈಗ ಹಣ, ಅಧಿಕಾರ, ಪ್ರತಿಷ್ಠೆಯದ್ದೆ ಕಾರುಬಾರು. ಸಾರ್ವಜನಿಕರ ಹಣದಲ್ಲಿ ಮಂತ್ರಿಗಳು ಆಸ್ತಿ ಗಳಿಕೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂಬ ಆಪಾದನೆಗಳು ಸಾಮಾನ್ಯವಾಗಿ ಕೇಳಿ ಬಂದಿವೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಾರ್ವಜನಿಕರ ದುಡ್ಡಲ್ಲಿ ಶೋಕಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಜಗನ್‌ ಮೋಹನ್‌ ರೆಡ್ಡಿ ಈಗ ತಾವು ಮಾಡುತ್ತಿರೋದೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಜಗನ್‌ ಮೋಹನ್‌ ರೆಡ್ಡಿ, ಗೆದ್ದು ಸಿಎಂ ಕುರ್ಚಿ ಏರಿದ್ದಾರೆ. ಆದರೆ ಸಿಎಂ ಆದಾಗಿನಿಂದ ಒಂದಲ್ಲ ಒಂದು ವಿವಾದಗಳು ಅವರನ್ನು ಮುತ್ತಿಕೊಳ್ಳುತ್ತಲೇ ಇವೆ. ಕೆಲ ದಿನಗಳ ಹಿಂದೆ ಸರ್ಕಾರಿ ಯೋಜನೆಗಳ ಹೆಸರು ಬದಲಾಯಿಸಿ, ಜನರು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಜನರ ದುಡ್ಡಲ್ಲಿ ಐಷಾರಾಮಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಆಂಧ್ರದ ಗುಂಟೂರು ಜಿಲ್ಲೆಯ ತಡಿಪಲ್ಲಿಯಲ್ಲಿ ಖಾಸಗಿ ಮನೆ ನಿರ್ಮಾಣಕ್ಕೆ 3.25 ಕೋಟಿ ರೂಪಾಯಿಯಲ್ಲಿ 0.15 ಎಕರೆ ಜಮೀನು ಖರೀದಿಸಿದ್ದಾರೆ. ತಡಿಪಲ್ಲಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಹತ್ತಿರದಲ್ಲಿದೆ. ಖಾಸಗಿ ಮನೆಯಲ್ಲಿ ಜಗನ್‌, ಸೋಲಾರ್‌ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸಿಸಿ ಕ್ಯಾಮರಾ, ಹೆಚ್ಚುವರಿ ಹವಾ ನಿಯಂತ್ರಕ ಅಳವಡಿಕೆ, ಅತ್ಯುನ್ನತ ದರ್ಜೆಯ ರೆಫ್ರಿಜರೇಟರ್‌ ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದರಲ್ಲಿ ಹವಾ ನಿಯಂತ್ರಣ ವ್ಯವಸ್ಥೆಗೆ 80 ಲಕ್ಷ ರೂಪಾಯಿ ವೆಚ್ಚ ತಗುಲಿದೆಯಂತೆ. ಇದೆಲ್ಲವನ್ನೂ ಜಗನ್‌ ಸಾರ್ವಜನಿಕರ ಹಣದಲ್ಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ಇದರಲ್ಲಿ ಯಾವುದೇ ಬದಲಾವಣೆ ಏನಿಲ್ಲ. ಏಕೆಂದರೆ ಆಂಧ್ರಪ್ರದೇಶದಲ್ಲಿ ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಹ ಸಾರ್ವಜನಿಕರ ಹಣವನ್ನು ಸಾಕಷ್ಟು ಪೋಲು ಮಾಡಿದ್ದಾರೆ. ಖಾಸಗಿ ನಿವೇಶನಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದಾರೆ. ಈಗ ಜಗನ್‌ ಅಧಿಕಾರದಲ್ಲಿದ್ದು, ಅದೇ ಹಾದಿ ಹಿಡಿದಿದ್ದಾರೆ. ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಡಿಪಲ್ಲಿಯಲ್ಲಿರುವ ಮನೆ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಸ್ವಂತದ್ದು. ವಿಧಾನಸಭೆ ಚುನಾವಣೆಗೂ ಮೊದಲು ಆ ಮನೆಯಲ್ಲೇ ಜಗನ್‌ ವಾಸ್ತವ್ಯ ಹೂಡಿದರು. ಅದನ್ನೇ ಸಿಎಂ ಕ್ಯಾಂಪ್‌ ರೆಸಿಡೆನ್ಸಿ ಅಂತಾ ಹೆಸರು ಬದಲಾಯಿಸಿದರು. ಮೇ ತಿಂಗಳಲ್ಲಿ ಅಧಿಕಾರಕ್ಕೇರಿದ ಜಗನ್‌ ಸರ್ಕಾರದ ಬೊಕ್ಕಸದಲ್ಲಿದ್ದ ಕೋಟಿ ಕೋಟಿ ಹಣವನ್ನ ಬಳಸಿಕೊಂಡಿದ್ದಾರೆ. ಮನೆಗೆ ಒದಗಿಸಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು 15 ಕೋಟಿ ರೂಪಾಯಿ ಬಳಸಿದ್ದರು. ಅದಾದ ನಂತರ ಅಕ್ಟೋಬರ್‌ನಲ್ಲಿ ಸಾರಿಗೆ, ರಸ್ತೆ, ಕಟ್ಟಡ ನಿರ್ಮಾಣಕ್ಕಾಗಿ 73 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿತು. ಅದೇ ಹಣದಲ್ಲಿ ಜಗನ್ ಮನೆಗೆ ಹೊಸ ಬಾಗಿಲುಗಳು, ಕಿಟಕಿಗಳನ್ನು ಕಟ್ಟಿಸಿದ್ದಾರೆ. ಇದಕ್ಕೂ ಮೊದಲು ಮನೆಗೆ ಹೋಗುವ 1.3ಕಿ.ಮೀ ರಸ್ತೆ ದುರಸ್ತಿಗಾಗಿ 5 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

ಜುಲೈನಲ್ಲಿ ಹೈದ್ರಾಬಾದ್‌ನಲ್ಲಿರುವ ಜಗನ್‌ ಅವರ ಪಲಾಟಿಯಲ್‌ ಬಂಜಾರ್‌ ಹಿಲ್ಸ್, ಲೋಟಸ್ ಪಾಂಡ್‌ ರೆಸಿಡೆನ್ಸಿ ಅಂತಲೇ ಹೆಸರುವಾಸಿಯಾಗಿರುವ ಮನೆಗೆ ಭದ್ರತೆ ನಿಯೋಜನೆಗೆ ಸರ್ಕಾರ 24.5 ಲಕ್ಷ ರೂ. ನೀಡಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಜಗನ್‌, ಸಾರ್ವಜನಿಕರ ದುಡ್ಡನ್ನು ದುಂದುವೆಚ್ಚ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ರೋಮ್‌ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಕುಯ್ಯುತ್ತಿದ್ದ. ಹಾಗೆಯೇ 5 ತಿಂಗಳಿಂದ ಆಂಧ್ರಪ್ರದೇಶ ಹಣಕಾಸು ಕೊರತೆ, ಕೆಲಸವಿಲ್ಲದೆ ಜನ ತಮ್ಮ ಜೀವ ಕಳೆದುಳ್ಳುತ್ತಿರುವ ವೇಳೆ, ಜಗನ್‌ ತನ್ನ ಹೈದ್ರಾಬಾದ್‌ನ ಪಲಾಟಿಯಲ್‌ ಮನೆಯಲ್ಲಿ ವಿಡಿಯೋ ಗೇಮ್‌ ಆಡುತ್ತ ಕುಳಿತಿದ್ದರು. ಅದಕ್ಕಾಗಿ ಸರ್ಕಾರ 15.65 ಕೋಟಿ ನೀಡಿತ್ತು ಎಂಬುದೇ ಶಾಕಿಂಗ್‌ ವಿಷಯ ಎಂದು ಬರೆದಿದ್ದರು.

ಇನ್ನು ಜಗನ್‌ ಅವರ ಮನೆಯ ಭದ್ರತೆಗೆ ಸರ್ಕಾರ ವ್ಯಯಿಸಿದ ವೆಚ್ಚದ ಬಗ್ಗೆ ಸಚಿವ ಪೆರ್ನಿ ವೆಂಕಟರಾಮಯ್ಯ ಸಮರ್ಥಿಸಿಕೊಂಡಿದ್ದರು. ಜಗನ್‌ ಅವರ ಮನೆ ಜನಸಂದಣಿ ಪ್ರದೇಶದ ಮಧ್ಯಭಾಗದಲ್ಲಿದೆ. ಅಲ್ಲಿ ಸುತ್ತಮುತ್ತ ಎತ್ತರವಾದ ಕಟ್ಟಡಗಳಿವೆ. ಹೀಗಾಗಿ ಭದ್ರತೆ ಅತೀ ಮುಖ್ಯ. ಬುಲೆಟ್‌ ಪ್ರೂಫ್‌ ಜಾಕೆಟ್, ಕಿಟಕಿ ಸೇರಿದಂತೆ ಹಲವು ವಸ್ತುಗಳ ಅವಶ್ಯಕತೆಯಿದೆ ಎಂದಿದ್ದರು. ನಾಯ್ಡು ಆಡಳಿತದ ಐದು ವರ್ಷದಲ್ಲಿ ೧೦೦ ಕೋಟಿ ರೂಪಾಯಿಯನ್ನು ನಾಯ್ಡು ಹೈದ್ರಾಬಾದ್‌ ಮತ್ತು ವಿಜಯವಾಡದಲ್ಲಿರುವ ಕ್ಯಾಂಪ್‌ ಆಫೀಸ್‌, ಫಾರ್ಮ್‌‌ಹೌಸ್, ಗೆಸ್ಟ್‌ ಹೌಸ್‌ಗಳ ನಿರ್ಮಾಣ ಮತ್ತು ಪೀಠೋಪಕರಣ ಮತ್ತು ಐಷಾರಾಮಿ ವಸ್ತುಗಳ ಅಳವಡಿಕೆಗೆ ವ್ಯಯಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ನಾಯ್ಡು ಕುಟುಂಬಸ್ಥರು ವಾಸವಿದ್ದ ಜುಬಿಲಿ ಹಿಲ್ಸ್‌ ಮನೆ ಮರುನಿರ್ಮಾಣಗೊಳ್ಳುತ್ತಿದ್ದಾಗ ವರ್ಷಗಟ್ಟಲೇ ನಾಯ್ಡು ಮನೆಯವರು ಫೈಸ್ಟಾರ್‌ ಹೋಟೆಲ್‌ನಲ್ಲಿ ವಾಸವಾಗಿದ್ದರು. ಅದೆಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಿತ್ತು. ಅದು ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದ್ದಿರಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...