Homeಮುಖಪುಟಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

ಖಾಸಗಿ ಮನೆ ನಿರ್ಮಾಣಕ್ಕೆ ಸಾರ್ವಜನಿಕರ ಕೋಟಿ ಕೋಟಿ ಹಣ ಬಳಸಿಕೊಂಡರೆ ಆಂಧ್ರ ಸಿಎಂ ಜಗನ್‌!?

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಈಗ ಹಣ, ಅಧಿಕಾರ, ಪ್ರತಿಷ್ಠೆಯದ್ದೆ ಕಾರುಬಾರು. ಸಾರ್ವಜನಿಕರ ಹಣದಲ್ಲಿ ಮಂತ್ರಿಗಳು ಆಸ್ತಿ ಗಳಿಕೆ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂಬ ಆಪಾದನೆಗಳು ಸಾಮಾನ್ಯವಾಗಿ ಕೇಳಿ ಬಂದಿವೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಾರ್ವಜನಿಕರ ದುಡ್ಡಲ್ಲಿ ಶೋಕಿ ಮಾಡ್ತಿದ್ದಾರೆ ಎಂದು ಆರೋಪಿಸಿದ್ದ ಜಗನ್‌ ಮೋಹನ್‌ ರೆಡ್ಡಿ ಈಗ ತಾವು ಮಾಡುತ್ತಿರೋದೇನು ಎಂದು ಜನ ಪ್ರಶ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಜಗನ್‌ ಮೋಹನ್‌ ರೆಡ್ಡಿ, ಗೆದ್ದು ಸಿಎಂ ಕುರ್ಚಿ ಏರಿದ್ದಾರೆ. ಆದರೆ ಸಿಎಂ ಆದಾಗಿನಿಂದ ಒಂದಲ್ಲ ಒಂದು ವಿವಾದಗಳು ಅವರನ್ನು ಮುತ್ತಿಕೊಳ್ಳುತ್ತಲೇ ಇವೆ. ಕೆಲ ದಿನಗಳ ಹಿಂದೆ ಸರ್ಕಾರಿ ಯೋಜನೆಗಳ ಹೆಸರು ಬದಲಾಯಿಸಿ, ಜನರು, ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಜನರ ದುಡ್ಡಲ್ಲಿ ಐಷಾರಾಮಿ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: ಅಯೋಧ್ಯೆ ತೀರ್ಪು- ವಿಚಿತ್ರ ತರ್ಕದ ಆಧಾರ: ಮಾರ್ಕಂಡೇಯ ಕಟ್ಜು

ಆಂಧ್ರದ ಗುಂಟೂರು ಜಿಲ್ಲೆಯ ತಡಿಪಲ್ಲಿಯಲ್ಲಿ ಖಾಸಗಿ ಮನೆ ನಿರ್ಮಾಣಕ್ಕೆ 3.25 ಕೋಟಿ ರೂಪಾಯಿಯಲ್ಲಿ 0.15 ಎಕರೆ ಜಮೀನು ಖರೀದಿಸಿದ್ದಾರೆ. ತಡಿಪಲ್ಲಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿಗೆ ಹತ್ತಿರದಲ್ಲಿದೆ. ಖಾಸಗಿ ಮನೆಯಲ್ಲಿ ಜಗನ್‌, ಸೋಲಾರ್‌ ಅಳವಡಿಕೆ, ಬೆಳಕಿನ ವ್ಯವಸ್ಥೆ, ಸಿಸಿ ಕ್ಯಾಮರಾ, ಹೆಚ್ಚುವರಿ ಹವಾ ನಿಯಂತ್ರಕ ಅಳವಡಿಕೆ, ಅತ್ಯುನ್ನತ ದರ್ಜೆಯ ರೆಫ್ರಿಜರೇಟರ್‌ ಅಳವಡಿಕೆಗೆ 3 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದರಲ್ಲಿ ಹವಾ ನಿಯಂತ್ರಣ ವ್ಯವಸ್ಥೆಗೆ 80 ಲಕ್ಷ ರೂಪಾಯಿ ವೆಚ್ಚ ತಗುಲಿದೆಯಂತೆ. ಇದೆಲ್ಲವನ್ನೂ ಜಗನ್‌ ಸಾರ್ವಜನಿಕರ ಹಣದಲ್ಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಆದರೆ ಇದರಲ್ಲಿ ಯಾವುದೇ ಬದಲಾವಣೆ ಏನಿಲ್ಲ. ಏಕೆಂದರೆ ಆಂಧ್ರಪ್ರದೇಶದಲ್ಲಿ ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಸಹ ಸಾರ್ವಜನಿಕರ ಹಣವನ್ನು ಸಾಕಷ್ಟು ಪೋಲು ಮಾಡಿದ್ದಾರೆ. ಖಾಸಗಿ ನಿವೇಶನಕ್ಕಾಗಿ ಸಾಕಷ್ಟು ಹಣ ವೆಚ್ಚ ಮಾಡಿದ್ದಾರೆ. ಈಗ ಜಗನ್‌ ಅಧಿಕಾರದಲ್ಲಿದ್ದು, ಅದೇ ಹಾದಿ ಹಿಡಿದಿದ್ದಾರೆ. ಸಾರ್ವಜನಿಕರ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಡಿಪಲ್ಲಿಯಲ್ಲಿರುವ ಮನೆ ಸಿಎಂ ಜಗನ್‌ ಮೋಹನ್‌ ರೆಡ್ಡಿ ಅವರ ಸ್ವಂತದ್ದು. ವಿಧಾನಸಭೆ ಚುನಾವಣೆಗೂ ಮೊದಲು ಆ ಮನೆಯಲ್ಲೇ ಜಗನ್‌ ವಾಸ್ತವ್ಯ ಹೂಡಿದರು. ಅದನ್ನೇ ಸಿಎಂ ಕ್ಯಾಂಪ್‌ ರೆಸಿಡೆನ್ಸಿ ಅಂತಾ ಹೆಸರು ಬದಲಾಯಿಸಿದರು. ಮೇ ತಿಂಗಳಲ್ಲಿ ಅಧಿಕಾರಕ್ಕೇರಿದ ಜಗನ್‌ ಸರ್ಕಾರದ ಬೊಕ್ಕಸದಲ್ಲಿದ್ದ ಕೋಟಿ ಕೋಟಿ ಹಣವನ್ನ ಬಳಸಿಕೊಂಡಿದ್ದಾರೆ. ಮನೆಗೆ ಒದಗಿಸಿದ್ದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲು 15 ಕೋಟಿ ರೂಪಾಯಿ ಬಳಸಿದ್ದರು. ಅದಾದ ನಂತರ ಅಕ್ಟೋಬರ್‌ನಲ್ಲಿ ಸಾರಿಗೆ, ರಸ್ತೆ, ಕಟ್ಟಡ ನಿರ್ಮಾಣಕ್ಕಾಗಿ 73 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿತು. ಅದೇ ಹಣದಲ್ಲಿ ಜಗನ್ ಮನೆಗೆ ಹೊಸ ಬಾಗಿಲುಗಳು, ಕಿಟಕಿಗಳನ್ನು ಕಟ್ಟಿಸಿದ್ದಾರೆ. ಇದಕ್ಕೂ ಮೊದಲು ಮನೆಗೆ ಹೋಗುವ 1.3ಕಿ.ಮೀ ರಸ್ತೆ ದುರಸ್ತಿಗಾಗಿ 5 ಕೋಟಿ ರೂಪಾಯಿ ವ್ಯಯಿಸಿದ್ದಾರೆ.

ಜುಲೈನಲ್ಲಿ ಹೈದ್ರಾಬಾದ್‌ನಲ್ಲಿರುವ ಜಗನ್‌ ಅವರ ಪಲಾಟಿಯಲ್‌ ಬಂಜಾರ್‌ ಹಿಲ್ಸ್, ಲೋಟಸ್ ಪಾಂಡ್‌ ರೆಸಿಡೆನ್ಸಿ ಅಂತಲೇ ಹೆಸರುವಾಸಿಯಾಗಿರುವ ಮನೆಗೆ ಭದ್ರತೆ ನಿಯೋಜನೆಗೆ ಸರ್ಕಾರ 24.5 ಲಕ್ಷ ರೂ. ನೀಡಿದೆ.

ಇನ್ನು ಕೆಲ ದಿನಗಳ ಹಿಂದಷ್ಟೇ ಜಗನ್‌, ಸಾರ್ವಜನಿಕರ ದುಡ್ಡನ್ನು ದುಂದುವೆಚ್ಚ ಮಾಡುತ್ತಿರುವ ಬಗ್ಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರಸ್ತಾಪಿಸಿದ್ದರು. ರೋಮ್‌ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಕುಯ್ಯುತ್ತಿದ್ದ. ಹಾಗೆಯೇ 5 ತಿಂಗಳಿಂದ ಆಂಧ್ರಪ್ರದೇಶ ಹಣಕಾಸು ಕೊರತೆ, ಕೆಲಸವಿಲ್ಲದೆ ಜನ ತಮ್ಮ ಜೀವ ಕಳೆದುಳ್ಳುತ್ತಿರುವ ವೇಳೆ, ಜಗನ್‌ ತನ್ನ ಹೈದ್ರಾಬಾದ್‌ನ ಪಲಾಟಿಯಲ್‌ ಮನೆಯಲ್ಲಿ ವಿಡಿಯೋ ಗೇಮ್‌ ಆಡುತ್ತ ಕುಳಿತಿದ್ದರು. ಅದಕ್ಕಾಗಿ ಸರ್ಕಾರ 15.65 ಕೋಟಿ ನೀಡಿತ್ತು ಎಂಬುದೇ ಶಾಕಿಂಗ್‌ ವಿಷಯ ಎಂದು ಬರೆದಿದ್ದರು.

ಇನ್ನು ಜಗನ್‌ ಅವರ ಮನೆಯ ಭದ್ರತೆಗೆ ಸರ್ಕಾರ ವ್ಯಯಿಸಿದ ವೆಚ್ಚದ ಬಗ್ಗೆ ಸಚಿವ ಪೆರ್ನಿ ವೆಂಕಟರಾಮಯ್ಯ ಸಮರ್ಥಿಸಿಕೊಂಡಿದ್ದರು. ಜಗನ್‌ ಅವರ ಮನೆ ಜನಸಂದಣಿ ಪ್ರದೇಶದ ಮಧ್ಯಭಾಗದಲ್ಲಿದೆ. ಅಲ್ಲಿ ಸುತ್ತಮುತ್ತ ಎತ್ತರವಾದ ಕಟ್ಟಡಗಳಿವೆ. ಹೀಗಾಗಿ ಭದ್ರತೆ ಅತೀ ಮುಖ್ಯ. ಬುಲೆಟ್‌ ಪ್ರೂಫ್‌ ಜಾಕೆಟ್, ಕಿಟಕಿ ಸೇರಿದಂತೆ ಹಲವು ವಸ್ತುಗಳ ಅವಶ್ಯಕತೆಯಿದೆ ಎಂದಿದ್ದರು. ನಾಯ್ಡು ಆಡಳಿತದ ಐದು ವರ್ಷದಲ್ಲಿ ೧೦೦ ಕೋಟಿ ರೂಪಾಯಿಯನ್ನು ನಾಯ್ಡು ಹೈದ್ರಾಬಾದ್‌ ಮತ್ತು ವಿಜಯವಾಡದಲ್ಲಿರುವ ಕ್ಯಾಂಪ್‌ ಆಫೀಸ್‌, ಫಾರ್ಮ್‌‌ಹೌಸ್, ಗೆಸ್ಟ್‌ ಹೌಸ್‌ಗಳ ನಿರ್ಮಾಣ ಮತ್ತು ಪೀಠೋಪಕರಣ ಮತ್ತು ಐಷಾರಾಮಿ ವಸ್ತುಗಳ ಅಳವಡಿಕೆಗೆ ವ್ಯಯಿಸಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೇ ನಾಯ್ಡು ಕುಟುಂಬಸ್ಥರು ವಾಸವಿದ್ದ ಜುಬಿಲಿ ಹಿಲ್ಸ್‌ ಮನೆ ಮರುನಿರ್ಮಾಣಗೊಳ್ಳುತ್ತಿದ್ದಾಗ ವರ್ಷಗಟ್ಟಲೇ ನಾಯ್ಡು ಮನೆಯವರು ಫೈಸ್ಟಾರ್‌ ಹೋಟೆಲ್‌ನಲ್ಲಿ ವಾಸವಾಗಿದ್ದರು. ಅದೆಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಿತ್ತು. ಅದು ಸಾರ್ವಜನಿಕರ ಹಣವನ್ನು ದುಂದುವೆಚ್ಚ ಮಾಡಿದ್ದಿರಲಿಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...