Homeಮುಖಪುಟಜಗನ್ ಆದೇಶದ ಮೇರೆಗೆ ಸಂಸ್ಥೆಯ ಸ್ವಾಧೀನ; ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಎಫ್‌ಐಆರ್

ಜಗನ್ ಆದೇಶದ ಮೇರೆಗೆ ಸಂಸ್ಥೆಯ ಸ್ವಾಧೀನ; ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಇಚ್ಛೆಯ ಮೇರೆಗೆ ಕಂಪನಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ ಅಧ್ಯಕ್ಷರು ನೀಡಿದ ದೂರಿನ ಆಧಾರದ ಮೇಲೆ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆಯು ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜಗನ್ ಆದೇಶದ

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೂವರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ವಿ. ವಿಜಯಸಾಯಿ ರೆಡ್ಡಿ, ವೈ.ವಿ. ವಿಕ್ರಾಂತ್ ರೆಡ್ಡಿ ಮತ್ತು ಅರಬಿಂದೋ ಫಾರ್ಮಾದ ನಿರ್ದೇಶಕ ಪಿ. ಶರತ್ ಚಂದ್ರ ರೆಡ್ಡಿ ಇದ್ದಾರೆ. ವೈ.ವಿ. ವಿಕ್ರಾಂತ್ ರೆಡ್ಡಿ ಅವರು ಪಕ್ಷದ ಸಂಸದ ವೈ.ವಿ. ಸುಬ್ಬಾ ರೆಡ್ಡಿ ಅವರ ಪುತ್ರನಾಗಿದ್ದು, ಪಿ. ಶರತ್ ಚಂದ್ರ ರೆಡ್ಡಿ ಅವರು ವಿ. ವಿಜಯಸಾಯಿ ರೆಡ್ಡಿ ಅವರ ಅಳಿಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೊತೆಗೆ, ಎರಡು ಕಂಪನಿಗಳಾದ PKF ಶ್ರೀಧರ್ ಆಂಡ್ ಸಂತಾನಂ LLP ಮತ್ತು ಅರಬಿಂದೋ ರಿಯಾಲ್ಟಿ ಆಂಡ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಹೆಸರನ್ನು ಕೂಡಾ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಜಗನ್ ಆದೇಶದ

ಈ ಬಗ್ಗೆ ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕರ್ನಾಟಿ ವೆಂಕಟೇಶ್ವರ ರಾವ್ ಅವರು ಸೋಮವಾರ ದೂರು ದಾಖಲಿಸಿದ್ದರು. 2,500 ಕೋಟಿ ಮೌಲ್ಯದ ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ 40% ರಷ್ಟು ಶೇರುಗಳನ್ನು ಬಲವಂತವಾಗಿ ಮತ್ತು ಬೆದರಿಕೆಯ ಮೂಲಕ 494 ಕೋಟಿ ರೂಪಾಯಿಗಳಿಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ವೆಂಕಟೇಶ್ವರ ರಾವ್ ಆರೋಪಿಸಿದ್ದಾರೆ.

400 ಕೋಟಿ ಮೌಲ್ಯದ ಕಾಕಿನಾಡ ವಿಶೇಷ ಆರ್ಥಿಕ ವಲಯದ 49%ರಷ್ಟು ಜಾಗವನ್ನು 12 ಕೋಟಿ ರೂ.ಗೆ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಒಪ್ಪಂದಕ್ಕೆ ಬಹುರಾಷ್ಟ್ರೀಯ ಸಂಸ್ಥೆಯು 400 ಕೋಟಿ ನೀಡಲು ಮುಂದಾಗಿತ್ತು.

“ಈ ಸಂಪೂರ್ಣ ಕಾರ್ಯಾಚರಣೆಯನ್ನು ಕೆಎಸ್‌ಪಿಎಲ್ ಮತ್ತು ಕಾಕಿನಾಡ ಎಸ್‌ಇಜೆಡ್‌ನಲ್ಲಿನ ನನ್ನ ಷೇರುಗಳನ್ನು ಕಸಿದುಕೊಳ್ಳಲು ಮತ್ತು ಷೇರುಗಳನ್ನು ಅರಬಿಂದೋ ಗ್ರೂಪ್‌ಗೆ ವರ್ಗಾಯಿಸಲು ಯೋಜಿಸಿ ನಡೆಸಲಾಗಿದೆ” ಎಂದು ವೆಂಕಟೇಶ್ವರ ರಾವ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಅದಾಗ್ಯೂ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಕಾಕಣಿ ಗೋವರ್ಧನ್ ರೆಡ್ಡಿ ಅವರು ಈ ಆರೋಪಗಳನ್ನು ರಾಜಕೀಯ ಸೇಡಿನ ಆರೋಪ ಎಂದು ಬಣ್ಣಿಸಿದ್ದಾರೆ. “ಇದು ರಾಜಕೀಯ ದ್ವೇಷದ ಭಾಗವಾಗಿದೆ ಎಂಬುದು ಸ್ಪಷ್ಟವಾಗಿದೆ… ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಡುತ್ತಿರುವ ಆಟದ ಭಾಗವಾಗಿ ಇದನ್ನು ಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಜೂನ್‌ ವೇಳೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಸೋತು, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದ ಸರ್ಕಾರ ಅಧಿಕಾರಕ್ಕೆ ಏರಿತ್ತು.

ಇದನ್ನೂ ಓದಿ: ‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...