Homeಮುಖಪುಟಜಗನ್ ಆದೇಶದ ಮೇರೆಗೆ ಸಂಸ್ಥೆಯ ಸ್ವಾಧೀನ; ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಎಫ್‌ಐಆರ್

ಜಗನ್ ಆದೇಶದ ಮೇರೆಗೆ ಸಂಸ್ಥೆಯ ಸ್ವಾಧೀನ; ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಇಚ್ಛೆಯ ಮೇರೆಗೆ ಕಂಪನಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ ಅಧ್ಯಕ್ಷರು ನೀಡಿದ ದೂರಿನ ಆಧಾರದ ಮೇಲೆ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆಯು ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜಗನ್ ಆದೇಶದ

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೂವರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ವಿ. ವಿಜಯಸಾಯಿ ರೆಡ್ಡಿ, ವೈ.ವಿ. ವಿಕ್ರಾಂತ್ ರೆಡ್ಡಿ ಮತ್ತು ಅರಬಿಂದೋ ಫಾರ್ಮಾದ ನಿರ್ದೇಶಕ ಪಿ. ಶರತ್ ಚಂದ್ರ ರೆಡ್ಡಿ ಇದ್ದಾರೆ. ವೈ.ವಿ. ವಿಕ್ರಾಂತ್ ರೆಡ್ಡಿ ಅವರು ಪಕ್ಷದ ಸಂಸದ ವೈ.ವಿ. ಸುಬ್ಬಾ ರೆಡ್ಡಿ ಅವರ ಪುತ್ರನಾಗಿದ್ದು, ಪಿ. ಶರತ್ ಚಂದ್ರ ರೆಡ್ಡಿ ಅವರು ವಿ. ವಿಜಯಸಾಯಿ ರೆಡ್ಡಿ ಅವರ ಅಳಿಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೊತೆಗೆ, ಎರಡು ಕಂಪನಿಗಳಾದ PKF ಶ್ರೀಧರ್ ಆಂಡ್ ಸಂತಾನಂ LLP ಮತ್ತು ಅರಬಿಂದೋ ರಿಯಾಲ್ಟಿ ಆಂಡ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಹೆಸರನ್ನು ಕೂಡಾ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಜಗನ್ ಆದೇಶದ

ಈ ಬಗ್ಗೆ ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕರ್ನಾಟಿ ವೆಂಕಟೇಶ್ವರ ರಾವ್ ಅವರು ಸೋಮವಾರ ದೂರು ದಾಖಲಿಸಿದ್ದರು. 2,500 ಕೋಟಿ ಮೌಲ್ಯದ ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ 40% ರಷ್ಟು ಶೇರುಗಳನ್ನು ಬಲವಂತವಾಗಿ ಮತ್ತು ಬೆದರಿಕೆಯ ಮೂಲಕ 494 ಕೋಟಿ ರೂಪಾಯಿಗಳಿಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ವೆಂಕಟೇಶ್ವರ ರಾವ್ ಆರೋಪಿಸಿದ್ದಾರೆ.

400 ಕೋಟಿ ಮೌಲ್ಯದ ಕಾಕಿನಾಡ ವಿಶೇಷ ಆರ್ಥಿಕ ವಲಯದ 49%ರಷ್ಟು ಜಾಗವನ್ನು 12 ಕೋಟಿ ರೂ.ಗೆ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಒಪ್ಪಂದಕ್ಕೆ ಬಹುರಾಷ್ಟ್ರೀಯ ಸಂಸ್ಥೆಯು 400 ಕೋಟಿ ನೀಡಲು ಮುಂದಾಗಿತ್ತು.

“ಈ ಸಂಪೂರ್ಣ ಕಾರ್ಯಾಚರಣೆಯನ್ನು ಕೆಎಸ್‌ಪಿಎಲ್ ಮತ್ತು ಕಾಕಿನಾಡ ಎಸ್‌ಇಜೆಡ್‌ನಲ್ಲಿನ ನನ್ನ ಷೇರುಗಳನ್ನು ಕಸಿದುಕೊಳ್ಳಲು ಮತ್ತು ಷೇರುಗಳನ್ನು ಅರಬಿಂದೋ ಗ್ರೂಪ್‌ಗೆ ವರ್ಗಾಯಿಸಲು ಯೋಜಿಸಿ ನಡೆಸಲಾಗಿದೆ” ಎಂದು ವೆಂಕಟೇಶ್ವರ ರಾವ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಅದಾಗ್ಯೂ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಕಾಕಣಿ ಗೋವರ್ಧನ್ ರೆಡ್ಡಿ ಅವರು ಈ ಆರೋಪಗಳನ್ನು ರಾಜಕೀಯ ಸೇಡಿನ ಆರೋಪ ಎಂದು ಬಣ್ಣಿಸಿದ್ದಾರೆ. “ಇದು ರಾಜಕೀಯ ದ್ವೇಷದ ಭಾಗವಾಗಿದೆ ಎಂಬುದು ಸ್ಪಷ್ಟವಾಗಿದೆ… ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಡುತ್ತಿರುವ ಆಟದ ಭಾಗವಾಗಿ ಇದನ್ನು ಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಜೂನ್‌ ವೇಳೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಸೋತು, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದ ಸರ್ಕಾರ ಅಧಿಕಾರಕ್ಕೆ ಏರಿತ್ತು.

ಇದನ್ನೂ ಓದಿ: ‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...