Homeಮುಖಪುಟಜಗನ್ ಆದೇಶದ ಮೇರೆಗೆ ಸಂಸ್ಥೆಯ ಸ್ವಾಧೀನ; ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಎಫ್‌ಐಆರ್

ಜಗನ್ ಆದೇಶದ ಮೇರೆಗೆ ಸಂಸ್ಥೆಯ ಸ್ವಾಧೀನ; ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಇಚ್ಛೆಯ ಮೇರೆಗೆ ಕಂಪನಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ ಅಧ್ಯಕ್ಷರು ನೀಡಿದ ದೂರಿನ ಆಧಾರದ ಮೇಲೆ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆಯು ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜಗನ್ ಆದೇಶದ

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೂವರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ವಿ. ವಿಜಯಸಾಯಿ ರೆಡ್ಡಿ, ವೈ.ವಿ. ವಿಕ್ರಾಂತ್ ರೆಡ್ಡಿ ಮತ್ತು ಅರಬಿಂದೋ ಫಾರ್ಮಾದ ನಿರ್ದೇಶಕ ಪಿ. ಶರತ್ ಚಂದ್ರ ರೆಡ್ಡಿ ಇದ್ದಾರೆ. ವೈ.ವಿ. ವಿಕ್ರಾಂತ್ ರೆಡ್ಡಿ ಅವರು ಪಕ್ಷದ ಸಂಸದ ವೈ.ವಿ. ಸುಬ್ಬಾ ರೆಡ್ಡಿ ಅವರ ಪುತ್ರನಾಗಿದ್ದು, ಪಿ. ಶರತ್ ಚಂದ್ರ ರೆಡ್ಡಿ ಅವರು ವಿ. ವಿಜಯಸಾಯಿ ರೆಡ್ಡಿ ಅವರ ಅಳಿಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೊತೆಗೆ, ಎರಡು ಕಂಪನಿಗಳಾದ PKF ಶ್ರೀಧರ್ ಆಂಡ್ ಸಂತಾನಂ LLP ಮತ್ತು ಅರಬಿಂದೋ ರಿಯಾಲ್ಟಿ ಆಂಡ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಹೆಸರನ್ನು ಕೂಡಾ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಜಗನ್ ಆದೇಶದ

ಈ ಬಗ್ಗೆ ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕರ್ನಾಟಿ ವೆಂಕಟೇಶ್ವರ ರಾವ್ ಅವರು ಸೋಮವಾರ ದೂರು ದಾಖಲಿಸಿದ್ದರು. 2,500 ಕೋಟಿ ಮೌಲ್ಯದ ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ 40% ರಷ್ಟು ಶೇರುಗಳನ್ನು ಬಲವಂತವಾಗಿ ಮತ್ತು ಬೆದರಿಕೆಯ ಮೂಲಕ 494 ಕೋಟಿ ರೂಪಾಯಿಗಳಿಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ವೆಂಕಟೇಶ್ವರ ರಾವ್ ಆರೋಪಿಸಿದ್ದಾರೆ.

400 ಕೋಟಿ ಮೌಲ್ಯದ ಕಾಕಿನಾಡ ವಿಶೇಷ ಆರ್ಥಿಕ ವಲಯದ 49%ರಷ್ಟು ಜಾಗವನ್ನು 12 ಕೋಟಿ ರೂ.ಗೆ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಒಪ್ಪಂದಕ್ಕೆ ಬಹುರಾಷ್ಟ್ರೀಯ ಸಂಸ್ಥೆಯು 400 ಕೋಟಿ ನೀಡಲು ಮುಂದಾಗಿತ್ತು.

“ಈ ಸಂಪೂರ್ಣ ಕಾರ್ಯಾಚರಣೆಯನ್ನು ಕೆಎಸ್‌ಪಿಎಲ್ ಮತ್ತು ಕಾಕಿನಾಡ ಎಸ್‌ಇಜೆಡ್‌ನಲ್ಲಿನ ನನ್ನ ಷೇರುಗಳನ್ನು ಕಸಿದುಕೊಳ್ಳಲು ಮತ್ತು ಷೇರುಗಳನ್ನು ಅರಬಿಂದೋ ಗ್ರೂಪ್‌ಗೆ ವರ್ಗಾಯಿಸಲು ಯೋಜಿಸಿ ನಡೆಸಲಾಗಿದೆ” ಎಂದು ವೆಂಕಟೇಶ್ವರ ರಾವ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಅದಾಗ್ಯೂ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಕಾಕಣಿ ಗೋವರ್ಧನ್ ರೆಡ್ಡಿ ಅವರು ಈ ಆರೋಪಗಳನ್ನು ರಾಜಕೀಯ ಸೇಡಿನ ಆರೋಪ ಎಂದು ಬಣ್ಣಿಸಿದ್ದಾರೆ. “ಇದು ರಾಜಕೀಯ ದ್ವೇಷದ ಭಾಗವಾಗಿದೆ ಎಂಬುದು ಸ್ಪಷ್ಟವಾಗಿದೆ… ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಡುತ್ತಿರುವ ಆಟದ ಭಾಗವಾಗಿ ಇದನ್ನು ಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಜೂನ್‌ ವೇಳೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಸೋತು, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದ ಸರ್ಕಾರ ಅಧಿಕಾರಕ್ಕೆ ಏರಿತ್ತು.

ಇದನ್ನೂ ಓದಿ: ‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...