Homeಮುಖಪುಟಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ - ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ...

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

- Advertisement -
- Advertisement -

2021 ರಲ್ಲಿ ಅಂದಿನ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಸಹಿ ಮಾಡಿದ ವಿದ್ಯುತ್ ಸರಬರಾಜು ಒಪ್ಪಂದದ ಕುರಿತು ಆಂಧ್ರ ಪ್ರದೇಶ ಕಾಂಗ್ರೆಸ್ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ)ದಲ್ಲಿ ಪ್ರಕರಣ ದಾಖಲಿಸಿದೆ. ಜಗನ್ ನಡೆಸಿದ್ದ

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರು ಆಂಧ್ರದ ಆಗಿನ ಸಿಎಂ ಜಗನ್‌ಗೆ 1750 ಕೋಟಿ ರೂಪಾಯಿಗಳ ಲಂಚವನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಅಮೆರಿಕದ ಸೆಕ್ಯುರಿಟೀಸ್ ಎಕ್ಸ್‌ಚೇಂಜ್ ಕಮಿಷನ್‌ನ ದೋಷಾರೋಪಣೆ ಮಾಡಿತ್ತು. ಅದಾನಿಯ ಲಂಚ ನೀಡುವುದಾಗಿ ಹೇಳಿದ ನಂತರ ಸರ್ಕಾರವು ಸೌರ ವಿದ್ಯುತ್ ದರಗಳನ್ನು ಒಪ್ಪಿಕೊಂಡಿತ್ತು ಎಂದು ಆರೋಪಿಸಲಾಗಿದೆ. ಜಗನ್ ನಡೆಸಿದ್ದ

ಆಂಧ್ರಪ್ರದೇಶದ ಪ್ರಸ್ತುತ ಸಿಎಂ ಚಂದ್ರಬಾಬು ನಾಯ್ಡು ಅವರು ಎಸಿಬಿಯನ್ನು ನಿಯಂತ್ರಿಸುತ್ತಿದ್ದಾರೆ ಮತ್ತು ಆದ್ದರಿಂದ ಆಪಾದಿತ ಹಗರಣದ ಬಗ್ಗೆ ಯಾವುದೇ ತನಿಖೆ ನಡೆಸುತ್ತಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಜಗನ್ ಅವರ ಸಹೋದರಿ ವೈಎಸ್ ಶರ್ಮಿಳಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಎಸಿಬಿ ಚಂದ್ರಬಾಬು ನಾಯ್ಡು ನಿಯಂತ್ರಣದಲ್ಲಿದೆಯೇ? ಈ ಡೀಲ್ ಅಥವಾ ಅದರ ಹಿಂದಿನ ಭ್ರಷ್ಟಾಚಾರವನ್ನು ತನಿಖೆ ಮಾಡಲು ಎಸಿಬಿಗೆ ಅಧಿಕಾರವಿದೆಯೇ ಅಥವಾ ಅದನ್ನು ಚಂದ್ರಬಾಬು ನಾಯ್ಡು ನಿಯಂತ್ರಿಸುತ್ತಿದ್ದಾರೆಯೇ? ತಾನು ಭ್ರಷ್ಟಾಚಾರದ ವಿರುದ್ಧ ಇದ್ದೇನೆ ಎಂದು ಎಸಿಬಿ ತನ್ನನ್ನು ತಾನು ಸಾಬೀತುಪಡಿಸಬೇಕು. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು” ಎಂದು ಶರ್ಮಿಳಾ ಆಗ್ರಹಿಸಿದ್ದಾರೆ.

ಆರೋಪದ ಬಗ್ಗೆ ತನಿಖೆ ನಡೆಸದ ಚಂದ್ರಬಾಬು ನಾಯ್ಡು ಮತ್ತು ಟಿಡಿಪಿಯನ್ನು ಪ್ರಶ್ನಿಸಿದ ಶರ್ಮಿಳಾ, “ರಾಜಕೀಯ ಒಲವು ಮತ್ತು ಎನ್‌ಡಿಎ ಮೈತ್ರಿಕೂಟ ತೆಗೆದುಕೊಳ್ಳುತ್ತಿರುವ ನಿಲುವಿನಿಂದಾಗಿ ಮಾತ್ರ ಯಾವುದೇ ತನಿಖೆ ನಡೆಯುತ್ತಿಲ್ಲ” ಎಂದು ಅವರು ಹೇಳಿದ್ದಾರೆ. ಈ ಒಪ್ಪಂದದಲ್ಲಿ ಭಾಗಿಯಾಗಿರುವ ಭ್ರಷ್ಟಾಚಾರವನ್ನು ಎತ್ತಿತೋರಿಸಿದ ಅವರು ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಆಂಧ್ರಪ್ರದೇಶದ ಹಣಕಾಸು ಸಚಿವ ಪಯ್ಯವುಲಾ ಕೇಶವ್ ಅವರು 2021 ರಲ್ಲಿ ಸಲ್ಲಿಸಿದ ಅರ್ಜಿಯನ್ನು ಅವರು ಹೈಲೈಟ್ ಮಾಡಿದ್ದಾರೆ.

“ಟಿಡಿಪಿಗೆ 2021 ರಿಂದ ಹಗರಣದ ಬಗ್ಗೆ ತಿಳಿದಿತ್ತು. ಅವರು ನಡೆಸಿದ ತನಿಖೆಯ ಪ್ರಕಾರ, 2021 ರಲ್ಲಿ 1300 ಪುಟಗಳ ಅರ್ಜಿಯನ್ನು ಸಲ್ಲಿಸಲಾಗಿದೆ. ಅವರು ಈ ಹಗರಣದ ಬಗ್ಗೆ ಏಕೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ? ಚಂದ್ರಬಾಬು ನಾಯ್ಡು ಈಗ ಮುಖ್ಯಮಂತ್ರಿ. ಪಯ್ಯಾವುಲ ಕೇಶವ್ ಕೂಡ ಸಚಿವರಾಗಿದ್ದಾರೆ. ಅವರೇಕೆ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಕೇಳಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡುವಾಗ, ಚಂದ್ರಬಾಬು ನಾಯ್ಡು ಅವರು ಒಪ್ಪಂದಕ್ಕೆ ಸಹಿ ಹಾಕಲು ಜಗನ್ ಮೋಹನ್ ರೆಡ್ಡಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಅದಾನಿ ಭಾಗಿಯಾಗಿರುವ ಬಗ್ಗೆ ಒಂದು ಮಾತನ್ನೂ ಅವರು ಉಲ್ಲೇಖಿಸಲಿಲ್ಲ. ಅದಾನಿ ಬಿಜೆಪಿ ಪರವಾಗಿರುವ ಕಾರಣಕ್ಕೆ ಮತ್ತು ಬಿಜೆಪಿಯು ಟಿಡಿಪಿ ನಡುವಿನ ಮೈತ್ರಿಯನ್ನು ಒಪ್ಪಿಕೊಂಡಿರುವ ಕಾರಣ ಅವರ ಬಗ್ಗೆ ಮಾತನಾಡಲು ಟಿಡಿಪಿ ಹೆದರುತ್ತಿದೆ ಅಥವಾ ಹಿಂಜರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅದಾನಿಯನ್ನು ಬೆಂಬಲಿಸಿದರೆ ರಾಹುಲ್ ಗಾಂಧಿ ಅವರು ಅದಾನಿಯನ್ನು ಅನೇಕ ವಿಷಯಗಳಲ್ಲಿ ಟೀಕಿಸುತ್ತಿದ್ದಾರೆ ಎಂದು ಶರ್ಮಿಳಾ ಪ್ರತಿಪಾದಿಸಿದ್ದಾರೆ. “ಮೋದಿ ಸರ್ಕಾರ ಅದಾನಿಯನ್ನು ಉಳಿಸಲು ನೋಡುತ್ತಿದೆ. ಏಕೆಂದರೆ ಅವರು ಬಿಜೆಪಿಗೆ ಹಣ ನೀಡುತ್ತಾರೆ. ಈ ಹಗರಣವನ್ನು ಪರಿಶೀಲಿಸಲು ಜಂಟಿ ಸಂಸದೀಯ ಸಮಿತಿಯನ್ನು ರಚಿಸದಿರುವ ಹಿಂದಿನ ಕಾರಣ ಇದೆ ಆಗಿದೆ. ಹಗರಣದ ತನಿಖೆಯಾಗದಿರಲು ಬಿಜೆಪಿ ಮತ್ತು ಅದಾನಿ ಸ್ನೇಹ ಸಂಬಂಧವೇ ಕಾರಣ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: 6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...