Homeಮುಖಪುಟಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ - ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ...

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

- Advertisement -
- Advertisement -

2021 ರಲ್ಲಿ ಅಂದಿನ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಸಹಿ ಮಾಡಿದ ವಿದ್ಯುತ್ ಸರಬರಾಜು ಒಪ್ಪಂದದ ಕುರಿತು ಆಂಧ್ರ ಪ್ರದೇಶ ಕಾಂಗ್ರೆಸ್ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ)ದಲ್ಲಿ ಪ್ರಕರಣ ದಾಖಲಿಸಿದೆ. ಜಗನ್ ನಡೆಸಿದ್ದ

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರು ಆಂಧ್ರದ ಆಗಿನ ಸಿಎಂ ಜಗನ್‌ಗೆ 1750 ಕೋಟಿ ರೂಪಾಯಿಗಳ ಲಂಚವನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಅಮೆರಿಕದ ಸೆಕ್ಯುರಿಟೀಸ್ ಎಕ್ಸ್‌ಚೇಂಜ್ ಕಮಿಷನ್‌ನ ದೋಷಾರೋಪಣೆ ಮಾಡಿತ್ತು. ಅದಾನಿಯ ಲಂಚ ನೀಡುವುದಾಗಿ ಹೇಳಿದ ನಂತರ ಸರ್ಕಾರವು ಸೌರ ವಿದ್ಯುತ್ ದರಗಳನ್ನು ಒಪ್ಪಿಕೊಂಡಿತ್ತು ಎಂದು ಆರೋಪಿಸಲಾಗಿದೆ. ಜಗನ್ ನಡೆಸಿದ್ದ

ಆಂಧ್ರಪ್ರದೇಶದ ಪ್ರಸ್ತುತ ಸಿಎಂ ಚಂದ್ರಬಾಬು ನಾಯ್ಡು ಅವರು ಎಸಿಬಿಯನ್ನು ನಿಯಂತ್ರಿಸುತ್ತಿದ್ದಾರೆ ಮತ್ತು ಆದ್ದರಿಂದ ಆಪಾದಿತ ಹಗರಣದ ಬಗ್ಗೆ ಯಾವುದೇ ತನಿಖೆ ನಡೆಸುತ್ತಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಜಗನ್ ಅವರ ಸಹೋದರಿ ವೈಎಸ್ ಶರ್ಮಿಳಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಎಸಿಬಿ ಚಂದ್ರಬಾಬು ನಾಯ್ಡು ನಿಯಂತ್ರಣದಲ್ಲಿದೆಯೇ? ಈ ಡೀಲ್ ಅಥವಾ ಅದರ ಹಿಂದಿನ ಭ್ರಷ್ಟಾಚಾರವನ್ನು ತನಿಖೆ ಮಾಡಲು ಎಸಿಬಿಗೆ ಅಧಿಕಾರವಿದೆಯೇ ಅಥವಾ ಅದನ್ನು ಚಂದ್ರಬಾಬು ನಾಯ್ಡು ನಿಯಂತ್ರಿಸುತ್ತಿದ್ದಾರೆಯೇ? ತಾನು ಭ್ರಷ್ಟಾಚಾರದ ವಿರುದ್ಧ ಇದ್ದೇನೆ ಎಂದು ಎಸಿಬಿ ತನ್ನನ್ನು ತಾನು ಸಾಬೀತುಪಡಿಸಬೇಕು. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು” ಎಂದು ಶರ್ಮಿಳಾ ಆಗ್ರಹಿಸಿದ್ದಾರೆ.

ಆರೋಪದ ಬಗ್ಗೆ ತನಿಖೆ ನಡೆಸದ ಚಂದ್ರಬಾಬು ನಾಯ್ಡು ಮತ್ತು ಟಿಡಿಪಿಯನ್ನು ಪ್ರಶ್ನಿಸಿದ ಶರ್ಮಿಳಾ, “ರಾಜಕೀಯ ಒಲವು ಮತ್ತು ಎನ್‌ಡಿಎ ಮೈತ್ರಿಕೂಟ ತೆಗೆದುಕೊಳ್ಳುತ್ತಿರುವ ನಿಲುವಿನಿಂದಾಗಿ ಮಾತ್ರ ಯಾವುದೇ ತನಿಖೆ ನಡೆಯುತ್ತಿಲ್ಲ” ಎಂದು ಅವರು ಹೇಳಿದ್ದಾರೆ. ಈ ಒಪ್ಪಂದದಲ್ಲಿ ಭಾಗಿಯಾಗಿರುವ ಭ್ರಷ್ಟಾಚಾರವನ್ನು ಎತ್ತಿತೋರಿಸಿದ ಅವರು ಆಂಧ್ರಪ್ರದೇಶ ಹೈಕೋರ್ಟ್‌ನಲ್ಲಿ ಆಂಧ್ರಪ್ರದೇಶದ ಹಣಕಾಸು ಸಚಿವ ಪಯ್ಯವುಲಾ ಕೇಶವ್ ಅವರು 2021 ರಲ್ಲಿ ಸಲ್ಲಿಸಿದ ಅರ್ಜಿಯನ್ನು ಅವರು ಹೈಲೈಟ್ ಮಾಡಿದ್ದಾರೆ.

“ಟಿಡಿಪಿಗೆ 2021 ರಿಂದ ಹಗರಣದ ಬಗ್ಗೆ ತಿಳಿದಿತ್ತು. ಅವರು ನಡೆಸಿದ ತನಿಖೆಯ ಪ್ರಕಾರ, 2021 ರಲ್ಲಿ 1300 ಪುಟಗಳ ಅರ್ಜಿಯನ್ನು ಸಲ್ಲಿಸಲಾಗಿದೆ. ಅವರು ಈ ಹಗರಣದ ಬಗ್ಗೆ ಏಕೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ? ಚಂದ್ರಬಾಬು ನಾಯ್ಡು ಈಗ ಮುಖ್ಯಮಂತ್ರಿ. ಪಯ್ಯಾವುಲ ಕೇಶವ್ ಕೂಡ ಸಚಿವರಾಗಿದ್ದಾರೆ. ಅವರೇಕೆ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಕೇಳಿದ್ದಾರೆ.

ಈ ವಿಷಯದ ಬಗ್ಗೆ ಮಾತನಾಡುವಾಗ, ಚಂದ್ರಬಾಬು ನಾಯ್ಡು ಅವರು ಒಪ್ಪಂದಕ್ಕೆ ಸಹಿ ಹಾಕಲು ಜಗನ್ ಮೋಹನ್ ರೆಡ್ಡಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಅದಾನಿ ಭಾಗಿಯಾಗಿರುವ ಬಗ್ಗೆ ಒಂದು ಮಾತನ್ನೂ ಅವರು ಉಲ್ಲೇಖಿಸಲಿಲ್ಲ. ಅದಾನಿ ಬಿಜೆಪಿ ಪರವಾಗಿರುವ ಕಾರಣಕ್ಕೆ ಮತ್ತು ಬಿಜೆಪಿಯು ಟಿಡಿಪಿ ನಡುವಿನ ಮೈತ್ರಿಯನ್ನು ಒಪ್ಪಿಕೊಂಡಿರುವ ಕಾರಣ ಅವರ ಬಗ್ಗೆ ಮಾತನಾಡಲು ಟಿಡಿಪಿ ಹೆದರುತ್ತಿದೆ ಅಥವಾ ಹಿಂಜರಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅದಾನಿಯನ್ನು ಬೆಂಬಲಿಸಿದರೆ ರಾಹುಲ್ ಗಾಂಧಿ ಅವರು ಅದಾನಿಯನ್ನು ಅನೇಕ ವಿಷಯಗಳಲ್ಲಿ ಟೀಕಿಸುತ್ತಿದ್ದಾರೆ ಎಂದು ಶರ್ಮಿಳಾ ಪ್ರತಿಪಾದಿಸಿದ್ದಾರೆ. “ಮೋದಿ ಸರ್ಕಾರ ಅದಾನಿಯನ್ನು ಉಳಿಸಲು ನೋಡುತ್ತಿದೆ. ಏಕೆಂದರೆ ಅವರು ಬಿಜೆಪಿಗೆ ಹಣ ನೀಡುತ್ತಾರೆ. ಈ ಹಗರಣವನ್ನು ಪರಿಶೀಲಿಸಲು ಜಂಟಿ ಸಂಸದೀಯ ಸಮಿತಿಯನ್ನು ರಚಿಸದಿರುವ ಹಿಂದಿನ ಕಾರಣ ಇದೆ ಆಗಿದೆ. ಹಗರಣದ ತನಿಖೆಯಾಗದಿರಲು ಬಿಜೆಪಿ ಮತ್ತು ಅದಾನಿ ಸ್ನೇಹ ಸಂಬಂಧವೇ ಕಾರಣ” ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: 6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

6 ವಾರಗಳಲ್ಲಿ ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ ನೋಂದಾಯಿಸಿ – ಕಾರ್ಮಿಕರ ಹೋರಾಟಕ್ಕೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...