Homeಮುಖಪುಟಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

ಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

- Advertisement -
- Advertisement -

ಕೆಲ ದಿನಗಳ ಹಿಂದಷ್ಟೇ ಭಾರಿ ಸದ್ದು ಮಾಡಿದ್ದ ಮೀಸಲಾತಿ ಹೋರಾಟ ಈಗ ನಡೆಯುತ್ತಿರುವ ಕಲಾಪದಲ್ಲಿ ಪ್ರಸ್ತಾಪವೇ ಆಗುತ್ತಿಲ್ಲ. ಭಾರಿ ಹವಾ ಮಾಡಿದ ಪಂಚಮಸಾಲಿ ಹೋರಾಟವೂ ಸಿ.ಡಿ ಗದ್ದಲದಲ್ಲಿ ಗಾಯಬ್ ಆಗಿದೆ. ಈ ನಡುವೆ, ಲಿಂಗಾಯತ ಧರ್ಮದಲ್ಲಿ ಈ ವೀರಶೈವರದೇನು ಕೆಲಸ, ಅವರು ಲಿಂಗಾಯತ ಧರ್ಮದ 100 ಉಪಪಂಗಡಗಳಲ್ಲಿ ಒಂದು ಅಷ್ಟೇ ಎಂದು ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಶಿವಾನಂದ್ ಜಾಮದಾರ್ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗಿನ ದೂರವಾಣಿ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ನಾನುಗೌರಿ: ಇತ್ತೀಚೆಗೆ ಸುದ್ದಿಯಾದ ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಸುದ್ದಿಯೇ ಆಗಲಿಲ್ಲ. ಈ ಕುರಿತು ನಿಮ್ಮ ಅಭಿಪ್ರಾಯ?

ಜಾಮದಾರ್: ರೀ ಅದೊಂದು ಹೋರಾಟವಾ? ಅಮಾಯಕ ಪಂಚಮಸಾಲಿಗಳನ್ನು ದಿಕ್ಕು ತಪ್ಪಿಸಿದ ಮತ್ತು ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಂಡ ಹೋರಾಟವಾಗಿದೆ.

ನಾನುಗೌರಿ: ಅಂದರೆ ಪಂಚಮಸಾಲಿಗಳು 2ಎ ಮೀಸಲಾತಿಗೆ ಅರ್ಹರೇ ಅಲ್ಲ ಎಂಬುದು ನಿಮ್ಮ ಅಭಿಪ್ರಾಯವೇ?

ಜಾಮದಾರ್: ಎಲ್ಲ ಸಮುದಾಯಗಳಿಗೂ ತಮ್ಮ ಪಾಲಿನ ಮೀಸಲಾತಿ ಕೇಳುವ ಹಕ್ಕಿದೆ. ಆದರೆ ಇದನ್ನು ಯಡಿಯೂರಪ್ಪ ಆಗಲಿ, ಸಿಸಿ ಪಾಟೀಲ್, ನಿರಾಣಿ ಅವರಾಗಲಿ ಏಕ್‌ಧಂ ನಿರ್ಣಯ ಮಾಡಲು ಆಗಲ್ಲ. ಅದಕ್ಕೆ ಒಂದು ಪ್ರೊಸೆಸ್ ಅಂತಾ ಇದೆ. ಈ ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ.

ನಾನುಗೌರಿ.ಕಾಂ: 3-ಬಿಯಿಂದ 2ಎ ಗೆ ಸೇರಲು ಅವರ ಪ್ರತಿಭಟನೆ ನಡೆಯಿತು. ಈ ಕುರಿತು ನಿಮ್ಮ ಅಭಿಪ್ರಾಯ ಏನು?

ಜಾಮದಾರ್: ಲಿಂಗಾಯತ ಧರ್ಮದಲ್ಲಿ 100 ಉಪ ಪಂಗಡಗಳಿವೆ. 3-ಬಿಯಲ್ಲಿ ಉಲ್ಲೇಖ ಆಗಿರುವುದು ಕೇವಲ 23 ಲಿಂಗಾಯತ ಉಪ ಪಂಗಡಗಳಷ್ಟೆ. ಉಳಿದ 77 ಉಪ ಪಂಗಡಗಳ ಬಗ್ಗೆ ಯಾರೂ ಯೊಚಿಸುತ್ತಿಲ್ಲ. ಕೆಲವು ರಾಜಕಾರಣಿಗಳ ಪುಸಲಾವಣೆಯೊಂದಿಗೆ ಕಾವಿ ತೊಟ್ಟವರು ಪಂಚಮಸಾಲಿ ಸಮಯದಾಯದ ದಿಕ್ಕು ತಪ್ಪಿಸಲು ನೋಡಿದರು. ಅದರ ಭಾಗವೇ ಈ ಹೋರಾಟ. ಈ ಹೋರಾಟ ಲಿಂಗಾಯತರಿಗೆ ಒಂದು ಕಪ್ಪು ಚುಕ್ಕೆ.

ನಾನುಗೌರಿ: ಇದರ ಹಿಂದೆ ಒಂದು ದೊಡ್ಡ ಶಕ್ತಿಯೇ ಇದೆಯಲ್ಲವಾ?

ಜಾಮದಾರ್: ಎಲ್ಲ ಪಂಚಮಸಾಲಿಗಳಲ್ಲ. ಆದರೆ ಅವರನ್ನು ಪ್ರತಿನಿಧಿಸುತ್ತೇವೆ ಎನ್ನುವ ಸ್ವಾಮಿಗಳು, ರಾಜಕಾರಣಿಗಳ ಒಂದು ಗುಂಪಿದೆ. ಬೇಡ ಜಂಗಮರ ಹೆಸರಲ್ಲಿ ಬೇಡರ ಮೀಸಲಾತಿ ಕದಿಯುವ ಗುಂಪಿದೆ ಮತ್ತು ವೀರಶೈವ-ಲಿಂಗಾಯತ ಎನ್ನುವ ತಳಬುಡವಿಲ್ಲದ ಗುಂಪೂ ಇದೆ. ಈ ಮೂರೂ ಗುಂಪುಗಳು ಅಖಂಡ ಲಿಂಗಾಯತ ಧರ್ಮವನ್ನು ಒಡೆದು ಹಾಕುತ್ತಿವೆ.

ನಾನುಗೌರಿ: ನೀವು ವೀರಶೈವ-ಲಿಂಗಾಯತ ಎಂಬ ತಳಬುಡವಿಲ್ಲದ ಗುಂಪು ಎಂದಿರಿ. ಈಗ ಅದೇ ಹೆಸರಲ್ಲಿ ಒಂದು ನಿಗಮ ಆಗಿದೆಯಲ್ಲ?

ಜಾಮದಾರ್: ವೀರಶೈವ-ಲಿಂಗಾಯತ ಅಂದರೆ ಯಾರ‍್ರಿ ಇವರು? ವೀರಶೈವರೂ ಅಲ್ಲ, ಈ ಕಡೆ ಲಿಂಗಾಯತರೂ ಅಲ್ಲ. ಲಿಂಗಾಯತ ಧರ್ಮಧ ನೂರು ಉಪ ಪಂಗಡಗಳಲ್ಲಿ ಅದೂ ಒಂದು ಅಷ್ಟೇ. ಈ ಹೆಸರಲ್ಲಿ ಒಂದು ಸರ್ವಶ್ರೇಷ್ಠ ಧರ್ಮವಾದ ಲಿಂಗಾಯತ ಧರ್ಮವನ್ನು ಇವರೆಲ್ಲ ನಾಶ ಮಾಡಲು ಹೊರಟಿದ್ದಾರೆ. ನಾವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮಾಡಿದಾಗ, ನೀವೆಲ್ಲ ಧರ್ಮ ಒಡೆಯುತ್ತಿದ್ದೀರಾ ಎಂದರು. ಈಗ ಅವರು ಮಾಡುತ್ತಿರುವುದೇನು? ಕೆಲವು ಸ್ವ ಹಿತಾಸಕ್ತಿ ಗುಂಪುಗಳು ಪುಡಿಗಾಸಿಗಾಗಿ ಧರ್ಮ ಒಡೆಯುತ್ತಿವೆ. ಇದರ ಹಿಂದೆ ಒಂದು ವ್ಯವಸ್ಥಿತ ಲಾಭಕರ ಸ್ವ ಹಿತಾಸಕ್ತಿಯ ಗುಂಪು ಇವೆ.

ನಾನುಗೌರಿ: ಈ ನಿಗಮಕ್ಕೆ 500 ಕೋಟೊ ರೂ ಕೊಟ್ಟಿದ್ದಾರಲ್ಲ?

ಜಾಮದಾರ್: ಅಲ್ರೀ ಇನ್ನೂ ಆ ನಿಗಮ ಅಧಿಕೃತವಾಗಿ ಚಾಲನೆಗೇ ಬಂದಿಲ್ಲ. ಅದಕ್ಕೆ 500 ಅಲ್ಲ, 100 ಕೋಟಿ ಅಲ್ಲ, 10 ಕೋಟಿ ರೂ ಕೂಡ ಸಿಗಲ್ಲ. ಇದೆಲ್ಲ ಒಂದು ಹುಚ್ಚಾಟ ಮತ್ತು ಪಾಲಿಟಿಕಲ್ ಗೇಮ್ ಅಷ್ಟೇ.

ನಾನುಗೌರಿ: ಅಂದರೆ ಈ ಹೋರಾಟಕ್ಕೆ ಭದ್ರ ಬುನಾದಿಯೇ ಇಲ್ಲ ಎನ್ನುತ್ತೀರಾ?

ಜಾಮದಾರ್: ಈ ಕುರಿತು ಅಂತಿಮ ತೀರ್ಮಾನ ಕೊಡಲಾರೆ, ಆದರೆ ಖಾವಿ ಧರಿಸಿ ಮೀಸಲಾತಿ ಕೇಳಿದ ಕೂಡಲೇ ಅದು ಸಿಗಲ್ಲ. ಅದಕ್ಕೆ ಪ್ರೊಸೆಸ್ ಇದೆ. ಯಡಿಯೂರಪ್ಪ ಅಂತಲ್ಲ, ಯಾರೇ ಸಿಎಂ ಆಗಿದ್ದರೂ ಆ ಪ್ರಕ್ರಿಯೆಯ ಮೂಲಕವೇ ಹೋಗಬೇಕು. ಲಿಂಗಾಯತ ಪ್ರತ್ಯೇಕ ಧರ್ಮ ಸಾಂವಿಧಾನಿಕ ಮಾನ್ಯತೆ ತಡೆದ ಬಿಜೆಪಿ-ಆರ್‌ಎಸ್‌ಎಸ್ ಇಂತಹ ದುಸ್ಸಾಹಸ ಮಾಡುತ್ತಿವೆ. ಈ ವಿಷಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲ ಒಂದೇ ಬಿಡಿ.

ನಾನುಗೌರಿ: ಪಂಚಮಸಾಲಿಗಳಿಗೆ 2-ಎ ಸ್ಥಾನಮಾನ ಸಿಕ್ಕಿತು ಅಂದುಕೊಳ್ಳೋಣ. ಆಗ ಏನಾಗಬಹುದು?

ಜಾಮದಾರ್: ಈಗ ಕೇಂದ್ರ ಸರ್ಕಾರ ಕಳೆದ ವರ್ಷ ಜಾರಿ ಮಾಡಿದ 10 ಪರ್ಸೆಂಟ್ ಮೀಸಲಾತಿಯಲ್ಲಿ ಪಂಚಮಸಾಲಿಗಳು, ಬೇಡ ಜಂಗಮರು, ಬಣಜಿಗರು ಕೂಡ ಬರುತ್ತಾರೆ. 2-ಎ ಮತ್ತು 10 ಪರ್ಸೆಂಟ್ ಎರಡನ್ನೂ ಪಡೆಯಲಾಗಲ್ಲ. ಈ ಕಾನೂನು ಬಗ್ಗೆ ತಿಳಿಯದೇ ಏನೇನೋ ಹೋರಾಟ ಮಾಡುತ್ತಿದ್ದಾರೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್

(ಈ ಸಂದರ್ಶನದಲ್ಲಿ ತಪ್ಪು ಗ್ರಹಿಕೆಯಿಂದಾಗಿ ಖಾವಿ ಧರಿಸಿದವರ ಪುಡಿಗಾಸಿನ ಹೋರಾಟ ಎಂದು ಬಂದಿತ್ತು. ಅದಕ್ಕಾಗಿ ವಿಷಾಧಿಸುತ್ತೇವೆ)


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜಾಮದಾರರದು ತಪ್ಪು ಅಭಿಪ್ರಾಯ..
    ಈ ಹಿಂದೆ ಬೇಡಜಂಗಮರೆಂಬ ಪಂಗಡ ಲಿಂಗಾಯತ ಪಂಥದಲ್ಲಿ ಬರುವುದು ಎಂದಿದ್ದರು.
    ಜಂಗಮ, ಜಾತಿ ಪಟ್ಟಿಯಲ್ಲಿ ಏಕಿಲ್ಲ ಎಂಬುದನ್ನು ಜಾಮದಾರ ವಿವರಿಸಲಿ.
    ಮೀಸಲಾತಿ ಇರುವುದು ಜಾತಿಗೇ ಹೊರತು ಮತ, ಧರ್ಮಕ್ಕಲ್ಲ ಎನ್ನುವ ಸಾಮಾನ್ಯ ಅರಿವೂ ಜಾಮದಾರರಿಗಿಲ್ಲ.
    ಬಣಜಿಗ, 2A ದಲ್ಲಿ ಶೈಕ್ಷಣಿಕ ಮೀಸಲಾತಿ ಮತ್ತು ಕೇಂದ್ರ OBC ಯಲ್ಲಿ ಬರುತ್ತದೆ ಎನ್ನುವ ಸತ್ಯವನ್ನೂ ಮುಚ್ಚಿಡುತ್ತಾರೆ. ಮೀಸಲಾತಿ ವಂಚಿಸಿ ವೀರಶೈವ ಅಥವಾ ಲಿಂಗಾಯತರನ್ನು ಶೋಷಿಸುವುದೇ ಧರ್ಮವಾಗಬಾರದು..!!

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...