Homeಮುಖಪುಟಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

ಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

- Advertisement -
- Advertisement -

ಕೆಲ ದಿನಗಳ ಹಿಂದಷ್ಟೇ ಭಾರಿ ಸದ್ದು ಮಾಡಿದ್ದ ಮೀಸಲಾತಿ ಹೋರಾಟ ಈಗ ನಡೆಯುತ್ತಿರುವ ಕಲಾಪದಲ್ಲಿ ಪ್ರಸ್ತಾಪವೇ ಆಗುತ್ತಿಲ್ಲ. ಭಾರಿ ಹವಾ ಮಾಡಿದ ಪಂಚಮಸಾಲಿ ಹೋರಾಟವೂ ಸಿ.ಡಿ ಗದ್ದಲದಲ್ಲಿ ಗಾಯಬ್ ಆಗಿದೆ. ಈ ನಡುವೆ, ಲಿಂಗಾಯತ ಧರ್ಮದಲ್ಲಿ ಈ ವೀರಶೈವರದೇನು ಕೆಲಸ, ಅವರು ಲಿಂಗಾಯತ ಧರ್ಮದ 100 ಉಪಪಂಗಡಗಳಲ್ಲಿ ಒಂದು ಅಷ್ಟೇ ಎಂದು ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಶಿವಾನಂದ್ ಜಾಮದಾರ್ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗಿನ ದೂರವಾಣಿ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ನಾನುಗೌರಿ: ಇತ್ತೀಚೆಗೆ ಸುದ್ದಿಯಾದ ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಸುದ್ದಿಯೇ ಆಗಲಿಲ್ಲ. ಈ ಕುರಿತು ನಿಮ್ಮ ಅಭಿಪ್ರಾಯ?

ಜಾಮದಾರ್: ರೀ ಅದೊಂದು ಹೋರಾಟವಾ? ಅಮಾಯಕ ಪಂಚಮಸಾಲಿಗಳನ್ನು ದಿಕ್ಕು ತಪ್ಪಿಸಿದ ಮತ್ತು ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಂಡ ಹೋರಾಟವಾಗಿದೆ.

ನಾನುಗೌರಿ: ಅಂದರೆ ಪಂಚಮಸಾಲಿಗಳು 2ಎ ಮೀಸಲಾತಿಗೆ ಅರ್ಹರೇ ಅಲ್ಲ ಎಂಬುದು ನಿಮ್ಮ ಅಭಿಪ್ರಾಯವೇ?

ಜಾಮದಾರ್: ಎಲ್ಲ ಸಮುದಾಯಗಳಿಗೂ ತಮ್ಮ ಪಾಲಿನ ಮೀಸಲಾತಿ ಕೇಳುವ ಹಕ್ಕಿದೆ. ಆದರೆ ಇದನ್ನು ಯಡಿಯೂರಪ್ಪ ಆಗಲಿ, ಸಿಸಿ ಪಾಟೀಲ್, ನಿರಾಣಿ ಅವರಾಗಲಿ ಏಕ್‌ಧಂ ನಿರ್ಣಯ ಮಾಡಲು ಆಗಲ್ಲ. ಅದಕ್ಕೆ ಒಂದು ಪ್ರೊಸೆಸ್ ಅಂತಾ ಇದೆ. ಈ ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ.

ನಾನುಗೌರಿ.ಕಾಂ: 3-ಬಿಯಿಂದ 2ಎ ಗೆ ಸೇರಲು ಅವರ ಪ್ರತಿಭಟನೆ ನಡೆಯಿತು. ಈ ಕುರಿತು ನಿಮ್ಮ ಅಭಿಪ್ರಾಯ ಏನು?

ಜಾಮದಾರ್: ಲಿಂಗಾಯತ ಧರ್ಮದಲ್ಲಿ 100 ಉಪ ಪಂಗಡಗಳಿವೆ. 3-ಬಿಯಲ್ಲಿ ಉಲ್ಲೇಖ ಆಗಿರುವುದು ಕೇವಲ 23 ಲಿಂಗಾಯತ ಉಪ ಪಂಗಡಗಳಷ್ಟೆ. ಉಳಿದ 77 ಉಪ ಪಂಗಡಗಳ ಬಗ್ಗೆ ಯಾರೂ ಯೊಚಿಸುತ್ತಿಲ್ಲ. ಕೆಲವು ರಾಜಕಾರಣಿಗಳ ಪುಸಲಾವಣೆಯೊಂದಿಗೆ ಕಾವಿ ತೊಟ್ಟವರು ಪಂಚಮಸಾಲಿ ಸಮಯದಾಯದ ದಿಕ್ಕು ತಪ್ಪಿಸಲು ನೋಡಿದರು. ಅದರ ಭಾಗವೇ ಈ ಹೋರಾಟ. ಈ ಹೋರಾಟ ಲಿಂಗಾಯತರಿಗೆ ಒಂದು ಕಪ್ಪು ಚುಕ್ಕೆ.

ನಾನುಗೌರಿ: ಇದರ ಹಿಂದೆ ಒಂದು ದೊಡ್ಡ ಶಕ್ತಿಯೇ ಇದೆಯಲ್ಲವಾ?

ಜಾಮದಾರ್: ಎಲ್ಲ ಪಂಚಮಸಾಲಿಗಳಲ್ಲ. ಆದರೆ ಅವರನ್ನು ಪ್ರತಿನಿಧಿಸುತ್ತೇವೆ ಎನ್ನುವ ಸ್ವಾಮಿಗಳು, ರಾಜಕಾರಣಿಗಳ ಒಂದು ಗುಂಪಿದೆ. ಬೇಡ ಜಂಗಮರ ಹೆಸರಲ್ಲಿ ಬೇಡರ ಮೀಸಲಾತಿ ಕದಿಯುವ ಗುಂಪಿದೆ ಮತ್ತು ವೀರಶೈವ-ಲಿಂಗಾಯತ ಎನ್ನುವ ತಳಬುಡವಿಲ್ಲದ ಗುಂಪೂ ಇದೆ. ಈ ಮೂರೂ ಗುಂಪುಗಳು ಅಖಂಡ ಲಿಂಗಾಯತ ಧರ್ಮವನ್ನು ಒಡೆದು ಹಾಕುತ್ತಿವೆ.

ನಾನುಗೌರಿ: ನೀವು ವೀರಶೈವ-ಲಿಂಗಾಯತ ಎಂಬ ತಳಬುಡವಿಲ್ಲದ ಗುಂಪು ಎಂದಿರಿ. ಈಗ ಅದೇ ಹೆಸರಲ್ಲಿ ಒಂದು ನಿಗಮ ಆಗಿದೆಯಲ್ಲ?

ಜಾಮದಾರ್: ವೀರಶೈವ-ಲಿಂಗಾಯತ ಅಂದರೆ ಯಾರ‍್ರಿ ಇವರು? ವೀರಶೈವರೂ ಅಲ್ಲ, ಈ ಕಡೆ ಲಿಂಗಾಯತರೂ ಅಲ್ಲ. ಲಿಂಗಾಯತ ಧರ್ಮಧ ನೂರು ಉಪ ಪಂಗಡಗಳಲ್ಲಿ ಅದೂ ಒಂದು ಅಷ್ಟೇ. ಈ ಹೆಸರಲ್ಲಿ ಒಂದು ಸರ್ವಶ್ರೇಷ್ಠ ಧರ್ಮವಾದ ಲಿಂಗಾಯತ ಧರ್ಮವನ್ನು ಇವರೆಲ್ಲ ನಾಶ ಮಾಡಲು ಹೊರಟಿದ್ದಾರೆ. ನಾವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮಾಡಿದಾಗ, ನೀವೆಲ್ಲ ಧರ್ಮ ಒಡೆಯುತ್ತಿದ್ದೀರಾ ಎಂದರು. ಈಗ ಅವರು ಮಾಡುತ್ತಿರುವುದೇನು? ಕೆಲವು ಸ್ವ ಹಿತಾಸಕ್ತಿ ಗುಂಪುಗಳು ಪುಡಿಗಾಸಿಗಾಗಿ ಧರ್ಮ ಒಡೆಯುತ್ತಿವೆ. ಇದರ ಹಿಂದೆ ಒಂದು ವ್ಯವಸ್ಥಿತ ಲಾಭಕರ ಸ್ವ ಹಿತಾಸಕ್ತಿಯ ಗುಂಪು ಇವೆ.

ನಾನುಗೌರಿ: ಈ ನಿಗಮಕ್ಕೆ 500 ಕೋಟೊ ರೂ ಕೊಟ್ಟಿದ್ದಾರಲ್ಲ?

ಜಾಮದಾರ್: ಅಲ್ರೀ ಇನ್ನೂ ಆ ನಿಗಮ ಅಧಿಕೃತವಾಗಿ ಚಾಲನೆಗೇ ಬಂದಿಲ್ಲ. ಅದಕ್ಕೆ 500 ಅಲ್ಲ, 100 ಕೋಟಿ ಅಲ್ಲ, 10 ಕೋಟಿ ರೂ ಕೂಡ ಸಿಗಲ್ಲ. ಇದೆಲ್ಲ ಒಂದು ಹುಚ್ಚಾಟ ಮತ್ತು ಪಾಲಿಟಿಕಲ್ ಗೇಮ್ ಅಷ್ಟೇ.

ನಾನುಗೌರಿ: ಅಂದರೆ ಈ ಹೋರಾಟಕ್ಕೆ ಭದ್ರ ಬುನಾದಿಯೇ ಇಲ್ಲ ಎನ್ನುತ್ತೀರಾ?

ಜಾಮದಾರ್: ಈ ಕುರಿತು ಅಂತಿಮ ತೀರ್ಮಾನ ಕೊಡಲಾರೆ, ಆದರೆ ಖಾವಿ ಧರಿಸಿ ಮೀಸಲಾತಿ ಕೇಳಿದ ಕೂಡಲೇ ಅದು ಸಿಗಲ್ಲ. ಅದಕ್ಕೆ ಪ್ರೊಸೆಸ್ ಇದೆ. ಯಡಿಯೂರಪ್ಪ ಅಂತಲ್ಲ, ಯಾರೇ ಸಿಎಂ ಆಗಿದ್ದರೂ ಆ ಪ್ರಕ್ರಿಯೆಯ ಮೂಲಕವೇ ಹೋಗಬೇಕು. ಲಿಂಗಾಯತ ಪ್ರತ್ಯೇಕ ಧರ್ಮ ಸಾಂವಿಧಾನಿಕ ಮಾನ್ಯತೆ ತಡೆದ ಬಿಜೆಪಿ-ಆರ್‌ಎಸ್‌ಎಸ್ ಇಂತಹ ದುಸ್ಸಾಹಸ ಮಾಡುತ್ತಿವೆ. ಈ ವಿಷಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲ ಒಂದೇ ಬಿಡಿ.

ನಾನುಗೌರಿ: ಪಂಚಮಸಾಲಿಗಳಿಗೆ 2-ಎ ಸ್ಥಾನಮಾನ ಸಿಕ್ಕಿತು ಅಂದುಕೊಳ್ಳೋಣ. ಆಗ ಏನಾಗಬಹುದು?

ಜಾಮದಾರ್: ಈಗ ಕೇಂದ್ರ ಸರ್ಕಾರ ಕಳೆದ ವರ್ಷ ಜಾರಿ ಮಾಡಿದ 10 ಪರ್ಸೆಂಟ್ ಮೀಸಲಾತಿಯಲ್ಲಿ ಪಂಚಮಸಾಲಿಗಳು, ಬೇಡ ಜಂಗಮರು, ಬಣಜಿಗರು ಕೂಡ ಬರುತ್ತಾರೆ. 2-ಎ ಮತ್ತು 10 ಪರ್ಸೆಂಟ್ ಎರಡನ್ನೂ ಪಡೆಯಲಾಗಲ್ಲ. ಈ ಕಾನೂನು ಬಗ್ಗೆ ತಿಳಿಯದೇ ಏನೇನೋ ಹೋರಾಟ ಮಾಡುತ್ತಿದ್ದಾರೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್

(ಈ ಸಂದರ್ಶನದಲ್ಲಿ ತಪ್ಪು ಗ್ರಹಿಕೆಯಿಂದಾಗಿ ಖಾವಿ ಧರಿಸಿದವರ ಪುಡಿಗಾಸಿನ ಹೋರಾಟ ಎಂದು ಬಂದಿತ್ತು. ಅದಕ್ಕಾಗಿ ವಿಷಾಧಿಸುತ್ತೇವೆ)


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜಾಮದಾರರದು ತಪ್ಪು ಅಭಿಪ್ರಾಯ..
    ಈ ಹಿಂದೆ ಬೇಡಜಂಗಮರೆಂಬ ಪಂಗಡ ಲಿಂಗಾಯತ ಪಂಥದಲ್ಲಿ ಬರುವುದು ಎಂದಿದ್ದರು.
    ಜಂಗಮ, ಜಾತಿ ಪಟ್ಟಿಯಲ್ಲಿ ಏಕಿಲ್ಲ ಎಂಬುದನ್ನು ಜಾಮದಾರ ವಿವರಿಸಲಿ.
    ಮೀಸಲಾತಿ ಇರುವುದು ಜಾತಿಗೇ ಹೊರತು ಮತ, ಧರ್ಮಕ್ಕಲ್ಲ ಎನ್ನುವ ಸಾಮಾನ್ಯ ಅರಿವೂ ಜಾಮದಾರರಿಗಿಲ್ಲ.
    ಬಣಜಿಗ, 2A ದಲ್ಲಿ ಶೈಕ್ಷಣಿಕ ಮೀಸಲಾತಿ ಮತ್ತು ಕೇಂದ್ರ OBC ಯಲ್ಲಿ ಬರುತ್ತದೆ ಎನ್ನುವ ಸತ್ಯವನ್ನೂ ಮುಚ್ಚಿಡುತ್ತಾರೆ. ಮೀಸಲಾತಿ ವಂಚಿಸಿ ವೀರಶೈವ ಅಥವಾ ಲಿಂಗಾಯತರನ್ನು ಶೋಷಿಸುವುದೇ ಧರ್ಮವಾಗಬಾರದು..!!

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...