Homeಮುಖಪುಟಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

ಜಾಗತಿಕ ಲಿಂಗಾಯಿತ ಮಹಾಸಭಾದ ಜಾಮದಾರ್ ಸಂದರ್ಶನ; ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ

- Advertisement -
- Advertisement -

ಕೆಲ ದಿನಗಳ ಹಿಂದಷ್ಟೇ ಭಾರಿ ಸದ್ದು ಮಾಡಿದ್ದ ಮೀಸಲಾತಿ ಹೋರಾಟ ಈಗ ನಡೆಯುತ್ತಿರುವ ಕಲಾಪದಲ್ಲಿ ಪ್ರಸ್ತಾಪವೇ ಆಗುತ್ತಿಲ್ಲ. ಭಾರಿ ಹವಾ ಮಾಡಿದ ಪಂಚಮಸಾಲಿ ಹೋರಾಟವೂ ಸಿ.ಡಿ ಗದ್ದಲದಲ್ಲಿ ಗಾಯಬ್ ಆಗಿದೆ. ಈ ನಡುವೆ, ಲಿಂಗಾಯತ ಧರ್ಮದಲ್ಲಿ ಈ ವೀರಶೈವರದೇನು ಕೆಲಸ, ಅವರು ಲಿಂಗಾಯತ ಧರ್ಮದ 100 ಉಪಪಂಗಡಗಳಲ್ಲಿ ಒಂದು ಅಷ್ಟೇ ಎಂದು ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭೆಯ ಪ್ರಧಾನ ಕಾರ್ಯದರ್ಶಿ ಶಿವಾನಂದ್ ಜಾಮದಾರ್ ಹೇಳಿದ್ದಾರೆ. ನಾನುಗೌರಿ.ಕಾಂ ಜೊತೆಗಿನ ದೂರವಾಣಿ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ನಾನುಗೌರಿ: ಇತ್ತೀಚೆಗೆ ಸುದ್ದಿಯಾದ ಪಂಚಮಸಾಲಿ ಮೀಸಲಾತಿ ಹೋರಾಟ ಸದನದಲ್ಲಿ ಸುದ್ದಿಯೇ ಆಗಲಿಲ್ಲ. ಈ ಕುರಿತು ನಿಮ್ಮ ಅಭಿಪ್ರಾಯ?

ಜಾಮದಾರ್: ರೀ ಅದೊಂದು ಹೋರಾಟವಾ? ಅಮಾಯಕ ಪಂಚಮಸಾಲಿಗಳನ್ನು ದಿಕ್ಕು ತಪ್ಪಿಸಿದ ಮತ್ತು ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಂಡ ಹೋರಾಟವಾಗಿದೆ.

ನಾನುಗೌರಿ: ಅಂದರೆ ಪಂಚಮಸಾಲಿಗಳು 2ಎ ಮೀಸಲಾತಿಗೆ ಅರ್ಹರೇ ಅಲ್ಲ ಎಂಬುದು ನಿಮ್ಮ ಅಭಿಪ್ರಾಯವೇ?

ಜಾಮದಾರ್: ಎಲ್ಲ ಸಮುದಾಯಗಳಿಗೂ ತಮ್ಮ ಪಾಲಿನ ಮೀಸಲಾತಿ ಕೇಳುವ ಹಕ್ಕಿದೆ. ಆದರೆ ಇದನ್ನು ಯಡಿಯೂರಪ್ಪ ಆಗಲಿ, ಸಿಸಿ ಪಾಟೀಲ್, ನಿರಾಣಿ ಅವರಾಗಲಿ ಏಕ್‌ಧಂ ನಿರ್ಣಯ ಮಾಡಲು ಆಗಲ್ಲ. ಅದಕ್ಕೆ ಒಂದು ಪ್ರೊಸೆಸ್ ಅಂತಾ ಇದೆ. ಈ ರಾಜಕಾರಣಿಗಳು ತಮ್ಮ ಲಾಭಕ್ಕೆ ಸ್ವಾಮಿಗಳನ್ನು ಬಳಸಿಕೊಳ್ಳುತ್ತಿದಾರಷ್ಟೇ.

ನಾನುಗೌರಿ.ಕಾಂ: 3-ಬಿಯಿಂದ 2ಎ ಗೆ ಸೇರಲು ಅವರ ಪ್ರತಿಭಟನೆ ನಡೆಯಿತು. ಈ ಕುರಿತು ನಿಮ್ಮ ಅಭಿಪ್ರಾಯ ಏನು?

ಜಾಮದಾರ್: ಲಿಂಗಾಯತ ಧರ್ಮದಲ್ಲಿ 100 ಉಪ ಪಂಗಡಗಳಿವೆ. 3-ಬಿಯಲ್ಲಿ ಉಲ್ಲೇಖ ಆಗಿರುವುದು ಕೇವಲ 23 ಲಿಂಗಾಯತ ಉಪ ಪಂಗಡಗಳಷ್ಟೆ. ಉಳಿದ 77 ಉಪ ಪಂಗಡಗಳ ಬಗ್ಗೆ ಯಾರೂ ಯೊಚಿಸುತ್ತಿಲ್ಲ. ಕೆಲವು ರಾಜಕಾರಣಿಗಳ ಪುಸಲಾವಣೆಯೊಂದಿಗೆ ಕಾವಿ ತೊಟ್ಟವರು ಪಂಚಮಸಾಲಿ ಸಮಯದಾಯದ ದಿಕ್ಕು ತಪ್ಪಿಸಲು ನೋಡಿದರು. ಅದರ ಭಾಗವೇ ಈ ಹೋರಾಟ. ಈ ಹೋರಾಟ ಲಿಂಗಾಯತರಿಗೆ ಒಂದು ಕಪ್ಪು ಚುಕ್ಕೆ.

ನಾನುಗೌರಿ: ಇದರ ಹಿಂದೆ ಒಂದು ದೊಡ್ಡ ಶಕ್ತಿಯೇ ಇದೆಯಲ್ಲವಾ?

ಜಾಮದಾರ್: ಎಲ್ಲ ಪಂಚಮಸಾಲಿಗಳಲ್ಲ. ಆದರೆ ಅವರನ್ನು ಪ್ರತಿನಿಧಿಸುತ್ತೇವೆ ಎನ್ನುವ ಸ್ವಾಮಿಗಳು, ರಾಜಕಾರಣಿಗಳ ಒಂದು ಗುಂಪಿದೆ. ಬೇಡ ಜಂಗಮರ ಹೆಸರಲ್ಲಿ ಬೇಡರ ಮೀಸಲಾತಿ ಕದಿಯುವ ಗುಂಪಿದೆ ಮತ್ತು ವೀರಶೈವ-ಲಿಂಗಾಯತ ಎನ್ನುವ ತಳಬುಡವಿಲ್ಲದ ಗುಂಪೂ ಇದೆ. ಈ ಮೂರೂ ಗುಂಪುಗಳು ಅಖಂಡ ಲಿಂಗಾಯತ ಧರ್ಮವನ್ನು ಒಡೆದು ಹಾಕುತ್ತಿವೆ.

ನಾನುಗೌರಿ: ನೀವು ವೀರಶೈವ-ಲಿಂಗಾಯತ ಎಂಬ ತಳಬುಡವಿಲ್ಲದ ಗುಂಪು ಎಂದಿರಿ. ಈಗ ಅದೇ ಹೆಸರಲ್ಲಿ ಒಂದು ನಿಗಮ ಆಗಿದೆಯಲ್ಲ?

ಜಾಮದಾರ್: ವೀರಶೈವ-ಲಿಂಗಾಯತ ಅಂದರೆ ಯಾರ‍್ರಿ ಇವರು? ವೀರಶೈವರೂ ಅಲ್ಲ, ಈ ಕಡೆ ಲಿಂಗಾಯತರೂ ಅಲ್ಲ. ಲಿಂಗಾಯತ ಧರ್ಮಧ ನೂರು ಉಪ ಪಂಗಡಗಳಲ್ಲಿ ಅದೂ ಒಂದು ಅಷ್ಟೇ. ಈ ಹೆಸರಲ್ಲಿ ಒಂದು ಸರ್ವಶ್ರೇಷ್ಠ ಧರ್ಮವಾದ ಲಿಂಗಾಯತ ಧರ್ಮವನ್ನು ಇವರೆಲ್ಲ ನಾಶ ಮಾಡಲು ಹೊರಟಿದ್ದಾರೆ. ನಾವು ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮಾಡಿದಾಗ, ನೀವೆಲ್ಲ ಧರ್ಮ ಒಡೆಯುತ್ತಿದ್ದೀರಾ ಎಂದರು. ಈಗ ಅವರು ಮಾಡುತ್ತಿರುವುದೇನು? ಕೆಲವು ಸ್ವ ಹಿತಾಸಕ್ತಿ ಗುಂಪುಗಳು ಪುಡಿಗಾಸಿಗಾಗಿ ಧರ್ಮ ಒಡೆಯುತ್ತಿವೆ. ಇದರ ಹಿಂದೆ ಒಂದು ವ್ಯವಸ್ಥಿತ ಲಾಭಕರ ಸ್ವ ಹಿತಾಸಕ್ತಿಯ ಗುಂಪು ಇವೆ.

ನಾನುಗೌರಿ: ಈ ನಿಗಮಕ್ಕೆ 500 ಕೋಟೊ ರೂ ಕೊಟ್ಟಿದ್ದಾರಲ್ಲ?

ಜಾಮದಾರ್: ಅಲ್ರೀ ಇನ್ನೂ ಆ ನಿಗಮ ಅಧಿಕೃತವಾಗಿ ಚಾಲನೆಗೇ ಬಂದಿಲ್ಲ. ಅದಕ್ಕೆ 500 ಅಲ್ಲ, 100 ಕೋಟಿ ಅಲ್ಲ, 10 ಕೋಟಿ ರೂ ಕೂಡ ಸಿಗಲ್ಲ. ಇದೆಲ್ಲ ಒಂದು ಹುಚ್ಚಾಟ ಮತ್ತು ಪಾಲಿಟಿಕಲ್ ಗೇಮ್ ಅಷ್ಟೇ.

ನಾನುಗೌರಿ: ಅಂದರೆ ಈ ಹೋರಾಟಕ್ಕೆ ಭದ್ರ ಬುನಾದಿಯೇ ಇಲ್ಲ ಎನ್ನುತ್ತೀರಾ?

ಜಾಮದಾರ್: ಈ ಕುರಿತು ಅಂತಿಮ ತೀರ್ಮಾನ ಕೊಡಲಾರೆ, ಆದರೆ ಖಾವಿ ಧರಿಸಿ ಮೀಸಲಾತಿ ಕೇಳಿದ ಕೂಡಲೇ ಅದು ಸಿಗಲ್ಲ. ಅದಕ್ಕೆ ಪ್ರೊಸೆಸ್ ಇದೆ. ಯಡಿಯೂರಪ್ಪ ಅಂತಲ್ಲ, ಯಾರೇ ಸಿಎಂ ಆಗಿದ್ದರೂ ಆ ಪ್ರಕ್ರಿಯೆಯ ಮೂಲಕವೇ ಹೋಗಬೇಕು. ಲಿಂಗಾಯತ ಪ್ರತ್ಯೇಕ ಧರ್ಮ ಸಾಂವಿಧಾನಿಕ ಮಾನ್ಯತೆ ತಡೆದ ಬಿಜೆಪಿ-ಆರ್‌ಎಸ್‌ಎಸ್ ಇಂತಹ ದುಸ್ಸಾಹಸ ಮಾಡುತ್ತಿವೆ. ಈ ವಿಷಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲ ಒಂದೇ ಬಿಡಿ.

ನಾನುಗೌರಿ: ಪಂಚಮಸಾಲಿಗಳಿಗೆ 2-ಎ ಸ್ಥಾನಮಾನ ಸಿಕ್ಕಿತು ಅಂದುಕೊಳ್ಳೋಣ. ಆಗ ಏನಾಗಬಹುದು?

ಜಾಮದಾರ್: ಈಗ ಕೇಂದ್ರ ಸರ್ಕಾರ ಕಳೆದ ವರ್ಷ ಜಾರಿ ಮಾಡಿದ 10 ಪರ್ಸೆಂಟ್ ಮೀಸಲಾತಿಯಲ್ಲಿ ಪಂಚಮಸಾಲಿಗಳು, ಬೇಡ ಜಂಗಮರು, ಬಣಜಿಗರು ಕೂಡ ಬರುತ್ತಾರೆ. 2-ಎ ಮತ್ತು 10 ಪರ್ಸೆಂಟ್ ಎರಡನ್ನೂ ಪಡೆಯಲಾಗಲ್ಲ. ಈ ಕಾನೂನು ಬಗ್ಗೆ ತಿಳಿಯದೇ ಏನೇನೋ ಹೋರಾಟ ಮಾಡುತ್ತಿದ್ದಾರೆ.

ಸಂದರ್ಶನ: ಪಿ.ಕೆ. ಮಲ್ಲನಗೌಡರ್

(ಈ ಸಂದರ್ಶನದಲ್ಲಿ ತಪ್ಪು ಗ್ರಹಿಕೆಯಿಂದಾಗಿ ಖಾವಿ ಧರಿಸಿದವರ ಪುಡಿಗಾಸಿನ ಹೋರಾಟ ಎಂದು ಬಂದಿತ್ತು. ಅದಕ್ಕಾಗಿ ವಿಷಾಧಿಸುತ್ತೇವೆ)


ಇದನ್ನೂ ಓದಿ: ‘ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಳ್ಳಲ್ಲ’ – ಪಂಚಮಸಾಲಿ ಸ್ವಾಮೀಜಿಯ ವಿಶೇಷ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜಾಮದಾರರದು ತಪ್ಪು ಅಭಿಪ್ರಾಯ..
    ಈ ಹಿಂದೆ ಬೇಡಜಂಗಮರೆಂಬ ಪಂಗಡ ಲಿಂಗಾಯತ ಪಂಥದಲ್ಲಿ ಬರುವುದು ಎಂದಿದ್ದರು.
    ಜಂಗಮ, ಜಾತಿ ಪಟ್ಟಿಯಲ್ಲಿ ಏಕಿಲ್ಲ ಎಂಬುದನ್ನು ಜಾಮದಾರ ವಿವರಿಸಲಿ.
    ಮೀಸಲಾತಿ ಇರುವುದು ಜಾತಿಗೇ ಹೊರತು ಮತ, ಧರ್ಮಕ್ಕಲ್ಲ ಎನ್ನುವ ಸಾಮಾನ್ಯ ಅರಿವೂ ಜಾಮದಾರರಿಗಿಲ್ಲ.
    ಬಣಜಿಗ, 2A ದಲ್ಲಿ ಶೈಕ್ಷಣಿಕ ಮೀಸಲಾತಿ ಮತ್ತು ಕೇಂದ್ರ OBC ಯಲ್ಲಿ ಬರುತ್ತದೆ ಎನ್ನುವ ಸತ್ಯವನ್ನೂ ಮುಚ್ಚಿಡುತ್ತಾರೆ. ಮೀಸಲಾತಿ ವಂಚಿಸಿ ವೀರಶೈವ ಅಥವಾ ಲಿಂಗಾಯತರನ್ನು ಶೋಷಿಸುವುದೇ ಧರ್ಮವಾಗಬಾರದು..!!

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...