Homeಮುಖಪುಟರಾಜ್ಯಸಭೆ ಎಎಪಿ ನಾಯಕರಾಗಿ ಚಡ್ಡಾ ನೇಮಕಕ್ಕೆ ಒಪ್ಪದ ಜಗದೀಪ್ ಧನ್ಖರ್

ರಾಜ್ಯಸಭೆ ಎಎಪಿ ನಾಯಕರಾಗಿ ಚಡ್ಡಾ ನೇಮಕಕ್ಕೆ ಒಪ್ಪದ ಜಗದೀಪ್ ಧನ್ಖರ್

- Advertisement -
- Advertisement -

ಸಂಸತ್ತಿನ ಮೇಲ್ಮನೆಯಲ್ಲಿ ಪಕ್ಷದ ಹಂಗಾಮಿ ನಾಯಕರಾಗಿ ರಾಘವ್ ಚಡ್ಡಾ ಅವರನ್ನು ನೇಮಿಸುವಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಕೋರಿಕೆಯನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ನಿರಾಕರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯಸಭೆಯಲ್ಲಿ ಪಕ್ಷದ ಹಂಗಾಮಿ ನಾಯಕರಾಗಿ ಚಡ್ಡಾ ಅವರನ್ನು ನೇಮಿಸುವಂತೆ ಕೋರಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ಧನ್ಖರ್, ‘ಈ ಅಂಶವು ಸಂಸತ್ತಿನಲ್ಲಿ ಮಾನ್ಯತೆ ಪಡೆದ ಪಕ್ಷಗಳು, ಗುಂಪುಗಳ ನಾಯಕರು ಮತ್ತು ಮುಖ್ಯ ಸಚೇತಕರು (ಸೌಲಭ್ಯಗಳು)-1998 ಕಾಯಿದೆಗೆ ಒಳಪಟ್ಟಿರುತ್ತದೆ. ಅದರ ಅಡಿಯಲ್ಲಿ ತಮ್ಮ ವಿನಂತಿಯು ಅನ್ವಯವಾಗುವ ಕಾನೂನು ಆಡಳಿತಕ್ಕೆ ಅನುಗುಣವಾಗಿಲ್ಲ, ಮನವಿಯನ್ನು ಅಂಗೀಕರಿಸಲಾಗುವುದಿಲ್ಲ’ ಎಂದು ಹೇಳಿದ್ದಾರೆ ಎನ್ನಲಾಗಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಬಂಧನದಲ್ಲಿದ್ದು, ಅವರು ಬಿಡುಗಡೆಯಾಗುವವರೆಗೆ ಹಂಗಾಮಿ ನಾಯಕರಾಗಿ ಚಡ್ಡಾ ನೇಮಕ್ಕೆ ಎಎಪಿ ನಾಯಕರು ಮುಂದಾಗಿದ್ದಾರೆ. ಆದರೆ, ಸಂಸತ್ತಿನ ಮೇಲ್ಮನೆಯಲ್ಲಿ ಪಕ್ಷದ ಹಂಗಾಮಿ ನಾಯಕರಾಗಿ ರಾಘವ್ ಚಡ್ಡಾ ಅವರನ್ನು ನೇಮಿಸುವಂತೆ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ತಿರಸ್ಕರಿಸಿದ್ದಾರೆ ಎಂಬ ವರದಿಗಳನ್ನು ಆಮ್ ಆದ್ಮಿ ಪಕ್ಷ ನಿರಾಕರಿಸಿದೆ.

‘ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಲು ಸಲ್ಲಿಸಿರುವ ಕೋರಿಕೆಯನ್ನು ತಿರಸ್ಕರಿಸಲಾಗಿಲ್ಲ. ಕೆಲವು ತಿದ್ದುಪಡಿಗಳನ್ನು ಕೋರಲಾಗಿದೆ, ಅದನ್ನು ಪರಿಹರಿಸಲಾಗುವುದು’ ಎಂದು ಎಎಪಿ ಮೂಲದಿಂದ ತಿಳಿದುಬಬಂದಿದೆ.

ಈ ತಿಂಗಳ ಆರಂಭದಲ್ಲಿ ಎಎಪಿ ನಾಯಕರು ಧನ್ಖರ್ಗೆ ಬರೆದ ಪತ್ರವೊಂದರಲ್ಲಿ, ಸಂಜಯ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಸಂಸತ್ತಿನ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಿ ಚಡ್ಡಾ ಅವರನ್ನು ನೇಮಿಸುವಂತೆ ವಿನಂತಿಸಿದೆ.

‘ಮುಂದಿನ ಬದಲಾವಣೆಗಳು ಅಗತ್ಯವೆಂದು ಪರಿಗಣಿಸುವವರೆಗೆ ನಾನು ರಾಜ್ಯಸಭೆಯಲ್ಲಿ ಹಂಗಾಮಿ ಪಕ್ಷದ ನಾಯಕರಾಗಿ ರಾಘವ್ ಚಡ್ಡಾ ಅವರ ಹೆಸರನ್ನು ಪ್ರಸ್ತಾಪಿಸಲು ಬಯಸುತ್ತೇನೆ. ರಾಜ್ಯಸಭೆಯ ನಿಯಮಗಳು ಮತ್ತು ಕಾರ್ಯವಿಧಾನಗಳ ಪ್ರಕಾರ ಈ ಬದಲಾವಣೆಯನ್ನು ಅನುಮತಿಸಬೇಕೆಂದು ನಾವು ವಿನಂತಿಸುತ್ತೇವೆ’ ಎಂದು ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದರು.

ಪಂಜಾಬ್ ರಾಜ್ಯವನ್ನು ಪ್ರತಿನಿಧಿಸುವ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಚಡ್ಡಾ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ಅತಿದೊಡ್ಡ ಬಲವನ್ನು ಹೊಂದಿದೆ.

ಇದನ್ನೂ ಓದಿ; ‘ಇದು ನನ್ನ ಕೊನೆ ಚುನಾವಣೆಯಾಗಬಹುದು..’; ರಾಜಕೀಯ ನಿವೃತ್ತಿ ಘೋಷಿಸಿದ್ರಾ ತರೂರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...