Homeಮುಖಪುಟರಾಜ್ಯಸಭೆ ಎಎಪಿ ನಾಯಕರಾಗಿ ಚಡ್ಡಾ ನೇಮಕಕ್ಕೆ ಒಪ್ಪದ ಜಗದೀಪ್ ಧನ್ಖರ್

ರಾಜ್ಯಸಭೆ ಎಎಪಿ ನಾಯಕರಾಗಿ ಚಡ್ಡಾ ನೇಮಕಕ್ಕೆ ಒಪ್ಪದ ಜಗದೀಪ್ ಧನ್ಖರ್

- Advertisement -
- Advertisement -

ಸಂಸತ್ತಿನ ಮೇಲ್ಮನೆಯಲ್ಲಿ ಪಕ್ಷದ ಹಂಗಾಮಿ ನಾಯಕರಾಗಿ ರಾಘವ್ ಚಡ್ಡಾ ಅವರನ್ನು ನೇಮಿಸುವಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಕೋರಿಕೆಯನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ನಿರಾಕರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯಸಭೆಯಲ್ಲಿ ಪಕ್ಷದ ಹಂಗಾಮಿ ನಾಯಕರಾಗಿ ಚಡ್ಡಾ ಅವರನ್ನು ನೇಮಿಸುವಂತೆ ಕೋರಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ ಧನ್ಖರ್, ‘ಈ ಅಂಶವು ಸಂಸತ್ತಿನಲ್ಲಿ ಮಾನ್ಯತೆ ಪಡೆದ ಪಕ್ಷಗಳು, ಗುಂಪುಗಳ ನಾಯಕರು ಮತ್ತು ಮುಖ್ಯ ಸಚೇತಕರು (ಸೌಲಭ್ಯಗಳು)-1998 ಕಾಯಿದೆಗೆ ಒಳಪಟ್ಟಿರುತ್ತದೆ. ಅದರ ಅಡಿಯಲ್ಲಿ ತಮ್ಮ ವಿನಂತಿಯು ಅನ್ವಯವಾಗುವ ಕಾನೂನು ಆಡಳಿತಕ್ಕೆ ಅನುಗುಣವಾಗಿಲ್ಲ, ಮನವಿಯನ್ನು ಅಂಗೀಕರಿಸಲಾಗುವುದಿಲ್ಲ’ ಎಂದು ಹೇಳಿದ್ದಾರೆ ಎನ್ನಲಾಗಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಬಂಧನದಲ್ಲಿದ್ದು, ಅವರು ಬಿಡುಗಡೆಯಾಗುವವರೆಗೆ ಹಂಗಾಮಿ ನಾಯಕರಾಗಿ ಚಡ್ಡಾ ನೇಮಕ್ಕೆ ಎಎಪಿ ನಾಯಕರು ಮುಂದಾಗಿದ್ದಾರೆ. ಆದರೆ, ಸಂಸತ್ತಿನ ಮೇಲ್ಮನೆಯಲ್ಲಿ ಪಕ್ಷದ ಹಂಗಾಮಿ ನಾಯಕರಾಗಿ ರಾಘವ್ ಚಡ್ಡಾ ಅವರನ್ನು ನೇಮಿಸುವಂತೆ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ತಿರಸ್ಕರಿಸಿದ್ದಾರೆ ಎಂಬ ವರದಿಗಳನ್ನು ಆಮ್ ಆದ್ಮಿ ಪಕ್ಷ ನಿರಾಕರಿಸಿದೆ.

‘ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಲು ಸಲ್ಲಿಸಿರುವ ಕೋರಿಕೆಯನ್ನು ತಿರಸ್ಕರಿಸಲಾಗಿಲ್ಲ. ಕೆಲವು ತಿದ್ದುಪಡಿಗಳನ್ನು ಕೋರಲಾಗಿದೆ, ಅದನ್ನು ಪರಿಹರಿಸಲಾಗುವುದು’ ಎಂದು ಎಎಪಿ ಮೂಲದಿಂದ ತಿಳಿದುಬಬಂದಿದೆ.

ಈ ತಿಂಗಳ ಆರಂಭದಲ್ಲಿ ಎಎಪಿ ನಾಯಕರು ಧನ್ಖರ್ಗೆ ಬರೆದ ಪತ್ರವೊಂದರಲ್ಲಿ, ಸಂಜಯ್ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಸಂಸತ್ತಿನ ಮೇಲ್ಮನೆಯಲ್ಲಿ ಪಕ್ಷದ ನಾಯಕರಾಗಿ ಚಡ್ಡಾ ಅವರನ್ನು ನೇಮಿಸುವಂತೆ ವಿನಂತಿಸಿದೆ.

‘ಮುಂದಿನ ಬದಲಾವಣೆಗಳು ಅಗತ್ಯವೆಂದು ಪರಿಗಣಿಸುವವರೆಗೆ ನಾನು ರಾಜ್ಯಸಭೆಯಲ್ಲಿ ಹಂಗಾಮಿ ಪಕ್ಷದ ನಾಯಕರಾಗಿ ರಾಘವ್ ಚಡ್ಡಾ ಅವರ ಹೆಸರನ್ನು ಪ್ರಸ್ತಾಪಿಸಲು ಬಯಸುತ್ತೇನೆ. ರಾಜ್ಯಸಭೆಯ ನಿಯಮಗಳು ಮತ್ತು ಕಾರ್ಯವಿಧಾನಗಳ ಪ್ರಕಾರ ಈ ಬದಲಾವಣೆಯನ್ನು ಅನುಮತಿಸಬೇಕೆಂದು ನಾವು ವಿನಂತಿಸುತ್ತೇವೆ’ ಎಂದು ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದರು.

ಪಂಜಾಬ್ ರಾಜ್ಯವನ್ನು ಪ್ರತಿನಿಧಿಸುವ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಚಡ್ಡಾ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ಅತಿದೊಡ್ಡ ಬಲವನ್ನು ಹೊಂದಿದೆ.

ಇದನ್ನೂ ಓದಿ; ‘ಇದು ನನ್ನ ಕೊನೆ ಚುನಾವಣೆಯಾಗಬಹುದು..’; ರಾಜಕೀಯ ನಿವೃತ್ತಿ ಘೋಷಿಸಿದ್ರಾ ತರೂರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...