Homeಕರ್ನಾಟಕಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

- Advertisement -
- Advertisement -

ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ ಸುಭಾಷ್ ಅವರ ಫೇಸ್‌ಬುಕ್‌‌ ಖಾತೆಯ ಮೂಲಕ ಲೈವ್ ಬಂದಿದ್ದ ಅವರು, ಬಹಳ ಖುಷಿ ಹಾಗೂ ಲವಲವಿಕೆಯಿಂದ ಮಾತನಾಡಿದರು.

“ಕಳೆದ 24 ದಿನಗಳ ಹಿಂದೆ ಒಂದು ಕೇಸ್‌ನಲ್ಲಿ ಬಂಧಿಸಿ, ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದರು. ಇಂದು ರಿಲೀಸ್ ಆಗಿದ್ದೀನಿ. ನನಗಾಗಿ ಸಾಕಷ್ಟು ಹೃದಯಗಳು ಸ್ಪಂದಿಸಿವೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಣ್ಣಪುಟ್ಟ ತಪ್ಪುಗಳಿಂದ ಅದು ಹಳಿ ತಪ್ಪಿತ್ತು. ಮತ್ತೆ ಟ್ರಾಕ್‌ಗೆ ಬಂದಿದೆ. ಎಲ್ಲ ನೈತಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೋರಾಟ ಮುಂದುವರಿಸುವೆ” ಎಂದು ಗುಡುಗಿದ್ದಾರೆ.

“ನನಗಾಗಿ ಸಾಕಷ್ಟು ಜನರು ಹೋರಾಟ ಮಾಡಿದ್ದಾರೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೈಲಿಗೆ ಪತ್ರಿಕೆ ಬರುತ್ತಿತ್ತು, ಅದನ್ನು ಓದಿ ಇದನ್ನೆಲ್ಲ ತಿಳಿದುಕೊಳ್ಳುತ್ತಿದೆ. ಜೈಲು ನಿಜಕ್ಕೂ ವಂಡರ್‌ಫುಲ್‌. ಇದನ್ನು ಜೈಲು ಅನ್ನುವುದಕ್ಕಿಂತ ಮನಪರಿವರ್ತನೆಯ ಸ್ಥಳ ಎಂದು ಕರೆದಿದ್ದಾರೆ. ಬಹುಶಃ ನಾನು ಕೂಡ ನನ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇನೆ” ಎಂದಿದ್ದಾರೆ.

“ಜೈಲಿನ ಸಿಬ್ಬಂದಿ ನಿಜಕ್ಕೂ ಅದ್ಭುತ. ಜೈಲಿನ ಬಗ್ಗೆ ಸಾಕಷ್ಟು ಜನ ಕೆಟ್ಟದ್ದಾಗಿ ಮಾತನಾಡುತ್ತಾರೆ. ಆದರೆ ನಾನು ಹೇಳುತ್ತೇನೆ: ಜೈಲಿನಲ್ಲಿ ತುಂಬಾ ಒಳ್ಳೆಯ ವಾತಾವರಣ ಇದೆ. ಗಾರ್ಡ್‌ಗಳಾಗಿ ನೇಮಕವಾಗಿರುವ ಯುವಕರು ನಿಜಕ್ಕೂ ಅದ್ಭುತ. ಜೈಲರ್‌ಗಳೆಲ್ಲ ನಿಜಕ್ಕೂ ನನ್ನ ಪಾಲಿಗೆ ಜಂಟಲ್‌ಮನ್‌ಗಳು. ಜೈಲೆಂದು ಯಾವತ್ತೂ ನನಗೆ ಫೀಲ್ ಆಗಿಲ್ಲ. ನನ್ನನ್ನು ನೋಡಿಕೊಂಡ ಡಾಕ್ಟರ್‌ಗಳಿಗೆ ತುಂಬಾ ಧನ್ಯವಾದ” ಎಂದು ತಿಳಿಸಿದ್ದಾರೆ.

“ಜೈಲು ಸಿಬ್ಬಂದಿ ಬಹುತೇಕ ಇಂಜಿನಿಯರ್‌ಗಳೆಂದು ಕೇಳಿ ನನ್ನ ಹೃದಯ ಒಡೆದುಹೋಯಿತು. ಸುಮಾರು ಒಂದು ಸಾವಿರ ಜನ ನೇಮಕವಾಗಿದ್ದಾರೆ. ಅದರಲ್ಲಿ ಏಳನೂರು ಜನ ಇಂಜಿನಿಯರ್‌ಗಳಿದ್ದಾರೆ. ಪಿಎಚ್‌ಡಿ ಪಡೆದವರು ಇದ್ದಾರೆ. ಮೇಷ್ಟ್ರಾದವರು ಇದ್ದಾರೆ. ಬೇಜಾರಾದ ಸಂಗತಿ ಏನೆಂದರೆ ಕೇವಲ ಹತ್ತನೇ ತರಗತಿ ವಿದ್ಯಾರ್ಹತೆ ಬೇಕಾದ ಗಾರ್ಡ್ ಕೆಲಸಕ್ಕೆ ಇಂಜಿನಿಯರ್‌ಗಳು ಬಂದಿದ್ದಾರೆ. ತುಂಬಾ ನೋವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇಪ್ಪತ್ತು ನಾಲ್ಕು ದಿನಗಳು ಹೇಗೆ ಕಳೆದವು ಎಂಬುದೇ ಗೊತ್ತಾಗಲಿಲ್ಲ. ನನ್ನ ಫೇಸ್‌ಬುಕ್ ಲೈವ್ ಮಿಸ್‌ ಮಾಡಿಕೊಂಡೆ… ಕೆಲವು ದಿನಗಳಲ್ಲಿ  ಬ್ಲಾಕ್ ಆಗಿರುವ ಫೇಸ್‌ಬುಕ್ ಖಾತೆ ಓಪನ್‌ ಮಾಡಿಸುತ್ತೇನೆ” ಎಂದು ಹೇಳಿದ ಅವರು, ತಮಗಾಗಿ ಹೋರಾಟ ಮಾಡಿದವರನ್ನು ಮನಪೂರ್ವಕವಾಗಿ ನೆನೆದು ಧನ್ಯವಾದ ತಿಳಿಸಿದ್ದಾರೆ.

“ಈ ಹೋರಾಟ ಎಂದ ಮೇಲೆ ಇವೆಲ್ಲ ಸಾಮಾನ್ಯ. ತಾಳ್ಮೆಯನ್ನು ಕಳೆದುಕೊಂಡೆ ಅನಿಸುತ್ತೆ. ಒಬ್ಬ ತಂದೆಯಾಗಿ ಹೀಗೆ ವರ್ತಿಸಿದ್ದು ಸರಿ. ಆದರೆ ಒಬ್ಬ ವಕೀಲನಾಗಿ ನಾನು ಹೀಗೆ ನಡೆದುಕೊಳ್ಳಬಾರದಿತ್ತು” ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

“ಜೈಲಿನಲ್ಲಿ ನಾನು ಸಹ ಒಂದು ಒಳ್ಳೆಯ ಕೆಲಸವನ್ನು ಮಾಡಿಕೊಂಡು ಬಂದಿದ್ದೇನೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ. ಈಗ ಹೇಳಿದರೆ ವಿರೋಧಿಗಳು ಅಲರ್ಟ್ ಆಗಿಬಿಡುತ್ತಾರೆ. ಇನ್ನ ಮೇಲೆ ಮುಚ್ಚಿಡುವ ಕೆಲಸಗಳನ್ನು ಮಾಡಬೇಕಾಗುತ್ತದೆ” ಎಂದಿದ್ದಾರೆ.

ಏನಿದು ಪ್ರಕರಣ?

ಕೊಲೆ ಯತ್ನ ಪ್ರಕರಣ ಆರೋಪಿಸಿ ಜಗದೀಶ್‌ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆಂದೂ ಆರೋಪಿಸಲಾಗಿತ್ತು. ಈಗ ಈ ಎರಡು ಪ್ರಕರಣಗಳಲ್ಲಿಯೂ ಜಾಮೀನು ದೊರೆತು ಜಗದೀಶ್‌ ಬಿಡುಗಡೆಯಾಗಿದ್ದಾರೆ.


ಇದನ್ನೂ ಓದಿರಿ: ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...