Homeಕರ್ನಾಟಕಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

- Advertisement -
- Advertisement -

ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ ಸುಭಾಷ್ ಅವರ ಫೇಸ್‌ಬುಕ್‌‌ ಖಾತೆಯ ಮೂಲಕ ಲೈವ್ ಬಂದಿದ್ದ ಅವರು, ಬಹಳ ಖುಷಿ ಹಾಗೂ ಲವಲವಿಕೆಯಿಂದ ಮಾತನಾಡಿದರು.

“ಕಳೆದ 24 ದಿನಗಳ ಹಿಂದೆ ಒಂದು ಕೇಸ್‌ನಲ್ಲಿ ಬಂಧಿಸಿ, ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದರು. ಇಂದು ರಿಲೀಸ್ ಆಗಿದ್ದೀನಿ. ನನಗಾಗಿ ಸಾಕಷ್ಟು ಹೃದಯಗಳು ಸ್ಪಂದಿಸಿವೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಣ್ಣಪುಟ್ಟ ತಪ್ಪುಗಳಿಂದ ಅದು ಹಳಿ ತಪ್ಪಿತ್ತು. ಮತ್ತೆ ಟ್ರಾಕ್‌ಗೆ ಬಂದಿದೆ. ಎಲ್ಲ ನೈತಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೋರಾಟ ಮುಂದುವರಿಸುವೆ” ಎಂದು ಗುಡುಗಿದ್ದಾರೆ.

“ನನಗಾಗಿ ಸಾಕಷ್ಟು ಜನರು ಹೋರಾಟ ಮಾಡಿದ್ದಾರೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೈಲಿಗೆ ಪತ್ರಿಕೆ ಬರುತ್ತಿತ್ತು, ಅದನ್ನು ಓದಿ ಇದನ್ನೆಲ್ಲ ತಿಳಿದುಕೊಳ್ಳುತ್ತಿದೆ. ಜೈಲು ನಿಜಕ್ಕೂ ವಂಡರ್‌ಫುಲ್‌. ಇದನ್ನು ಜೈಲು ಅನ್ನುವುದಕ್ಕಿಂತ ಮನಪರಿವರ್ತನೆಯ ಸ್ಥಳ ಎಂದು ಕರೆದಿದ್ದಾರೆ. ಬಹುಶಃ ನಾನು ಕೂಡ ನನ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇನೆ” ಎಂದಿದ್ದಾರೆ.

“ಜೈಲಿನ ಸಿಬ್ಬಂದಿ ನಿಜಕ್ಕೂ ಅದ್ಭುತ. ಜೈಲಿನ ಬಗ್ಗೆ ಸಾಕಷ್ಟು ಜನ ಕೆಟ್ಟದ್ದಾಗಿ ಮಾತನಾಡುತ್ತಾರೆ. ಆದರೆ ನಾನು ಹೇಳುತ್ತೇನೆ: ಜೈಲಿನಲ್ಲಿ ತುಂಬಾ ಒಳ್ಳೆಯ ವಾತಾವರಣ ಇದೆ. ಗಾರ್ಡ್‌ಗಳಾಗಿ ನೇಮಕವಾಗಿರುವ ಯುವಕರು ನಿಜಕ್ಕೂ ಅದ್ಭುತ. ಜೈಲರ್‌ಗಳೆಲ್ಲ ನಿಜಕ್ಕೂ ನನ್ನ ಪಾಲಿಗೆ ಜಂಟಲ್‌ಮನ್‌ಗಳು. ಜೈಲೆಂದು ಯಾವತ್ತೂ ನನಗೆ ಫೀಲ್ ಆಗಿಲ್ಲ. ನನ್ನನ್ನು ನೋಡಿಕೊಂಡ ಡಾಕ್ಟರ್‌ಗಳಿಗೆ ತುಂಬಾ ಧನ್ಯವಾದ” ಎಂದು ತಿಳಿಸಿದ್ದಾರೆ.

“ಜೈಲು ಸಿಬ್ಬಂದಿ ಬಹುತೇಕ ಇಂಜಿನಿಯರ್‌ಗಳೆಂದು ಕೇಳಿ ನನ್ನ ಹೃದಯ ಒಡೆದುಹೋಯಿತು. ಸುಮಾರು ಒಂದು ಸಾವಿರ ಜನ ನೇಮಕವಾಗಿದ್ದಾರೆ. ಅದರಲ್ಲಿ ಏಳನೂರು ಜನ ಇಂಜಿನಿಯರ್‌ಗಳಿದ್ದಾರೆ. ಪಿಎಚ್‌ಡಿ ಪಡೆದವರು ಇದ್ದಾರೆ. ಮೇಷ್ಟ್ರಾದವರು ಇದ್ದಾರೆ. ಬೇಜಾರಾದ ಸಂಗತಿ ಏನೆಂದರೆ ಕೇವಲ ಹತ್ತನೇ ತರಗತಿ ವಿದ್ಯಾರ್ಹತೆ ಬೇಕಾದ ಗಾರ್ಡ್ ಕೆಲಸಕ್ಕೆ ಇಂಜಿನಿಯರ್‌ಗಳು ಬಂದಿದ್ದಾರೆ. ತುಂಬಾ ನೋವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇಪ್ಪತ್ತು ನಾಲ್ಕು ದಿನಗಳು ಹೇಗೆ ಕಳೆದವು ಎಂಬುದೇ ಗೊತ್ತಾಗಲಿಲ್ಲ. ನನ್ನ ಫೇಸ್‌ಬುಕ್ ಲೈವ್ ಮಿಸ್‌ ಮಾಡಿಕೊಂಡೆ… ಕೆಲವು ದಿನಗಳಲ್ಲಿ  ಬ್ಲಾಕ್ ಆಗಿರುವ ಫೇಸ್‌ಬುಕ್ ಖಾತೆ ಓಪನ್‌ ಮಾಡಿಸುತ್ತೇನೆ” ಎಂದು ಹೇಳಿದ ಅವರು, ತಮಗಾಗಿ ಹೋರಾಟ ಮಾಡಿದವರನ್ನು ಮನಪೂರ್ವಕವಾಗಿ ನೆನೆದು ಧನ್ಯವಾದ ತಿಳಿಸಿದ್ದಾರೆ.

“ಈ ಹೋರಾಟ ಎಂದ ಮೇಲೆ ಇವೆಲ್ಲ ಸಾಮಾನ್ಯ. ತಾಳ್ಮೆಯನ್ನು ಕಳೆದುಕೊಂಡೆ ಅನಿಸುತ್ತೆ. ಒಬ್ಬ ತಂದೆಯಾಗಿ ಹೀಗೆ ವರ್ತಿಸಿದ್ದು ಸರಿ. ಆದರೆ ಒಬ್ಬ ವಕೀಲನಾಗಿ ನಾನು ಹೀಗೆ ನಡೆದುಕೊಳ್ಳಬಾರದಿತ್ತು” ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

“ಜೈಲಿನಲ್ಲಿ ನಾನು ಸಹ ಒಂದು ಒಳ್ಳೆಯ ಕೆಲಸವನ್ನು ಮಾಡಿಕೊಂಡು ಬಂದಿದ್ದೇನೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ. ಈಗ ಹೇಳಿದರೆ ವಿರೋಧಿಗಳು ಅಲರ್ಟ್ ಆಗಿಬಿಡುತ್ತಾರೆ. ಇನ್ನ ಮೇಲೆ ಮುಚ್ಚಿಡುವ ಕೆಲಸಗಳನ್ನು ಮಾಡಬೇಕಾಗುತ್ತದೆ” ಎಂದಿದ್ದಾರೆ.

ಏನಿದು ಪ್ರಕರಣ?

ಕೊಲೆ ಯತ್ನ ಪ್ರಕರಣ ಆರೋಪಿಸಿ ಜಗದೀಶ್‌ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆಂದೂ ಆರೋಪಿಸಲಾಗಿತ್ತು. ಈಗ ಈ ಎರಡು ಪ್ರಕರಣಗಳಲ್ಲಿಯೂ ಜಾಮೀನು ದೊರೆತು ಜಗದೀಶ್‌ ಬಿಡುಗಡೆಯಾಗಿದ್ದಾರೆ.


ಇದನ್ನೂ ಓದಿರಿ: ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...