Homeಕರ್ನಾಟಕಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌

- Advertisement -
- Advertisement -

ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ ಸುಭಾಷ್ ಅವರ ಫೇಸ್‌ಬುಕ್‌‌ ಖಾತೆಯ ಮೂಲಕ ಲೈವ್ ಬಂದಿದ್ದ ಅವರು, ಬಹಳ ಖುಷಿ ಹಾಗೂ ಲವಲವಿಕೆಯಿಂದ ಮಾತನಾಡಿದರು.

“ಕಳೆದ 24 ದಿನಗಳ ಹಿಂದೆ ಒಂದು ಕೇಸ್‌ನಲ್ಲಿ ಬಂಧಿಸಿ, ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಿದ್ದರು. ಇಂದು ರಿಲೀಸ್ ಆಗಿದ್ದೀನಿ. ನನಗಾಗಿ ಸಾಕಷ್ಟು ಹೃದಯಗಳು ಸ್ಪಂದಿಸಿವೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಣ್ಣಪುಟ್ಟ ತಪ್ಪುಗಳಿಂದ ಅದು ಹಳಿ ತಪ್ಪಿತ್ತು. ಮತ್ತೆ ಟ್ರಾಕ್‌ಗೆ ಬಂದಿದೆ. ಎಲ್ಲ ನೈತಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೋರಾಟ ಮುಂದುವರಿಸುವೆ” ಎಂದು ಗುಡುಗಿದ್ದಾರೆ.

“ನನಗಾಗಿ ಸಾಕಷ್ಟು ಜನರು ಹೋರಾಟ ಮಾಡಿದ್ದಾರೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೈಲಿಗೆ ಪತ್ರಿಕೆ ಬರುತ್ತಿತ್ತು, ಅದನ್ನು ಓದಿ ಇದನ್ನೆಲ್ಲ ತಿಳಿದುಕೊಳ್ಳುತ್ತಿದೆ. ಜೈಲು ನಿಜಕ್ಕೂ ವಂಡರ್‌ಫುಲ್‌. ಇದನ್ನು ಜೈಲು ಅನ್ನುವುದಕ್ಕಿಂತ ಮನಪರಿವರ್ತನೆಯ ಸ್ಥಳ ಎಂದು ಕರೆದಿದ್ದಾರೆ. ಬಹುಶಃ ನಾನು ಕೂಡ ನನ್ನಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಿಕೊಂಡಿದ್ದೇನೆ” ಎಂದಿದ್ದಾರೆ.

“ಜೈಲಿನ ಸಿಬ್ಬಂದಿ ನಿಜಕ್ಕೂ ಅದ್ಭುತ. ಜೈಲಿನ ಬಗ್ಗೆ ಸಾಕಷ್ಟು ಜನ ಕೆಟ್ಟದ್ದಾಗಿ ಮಾತನಾಡುತ್ತಾರೆ. ಆದರೆ ನಾನು ಹೇಳುತ್ತೇನೆ: ಜೈಲಿನಲ್ಲಿ ತುಂಬಾ ಒಳ್ಳೆಯ ವಾತಾವರಣ ಇದೆ. ಗಾರ್ಡ್‌ಗಳಾಗಿ ನೇಮಕವಾಗಿರುವ ಯುವಕರು ನಿಜಕ್ಕೂ ಅದ್ಭುತ. ಜೈಲರ್‌ಗಳೆಲ್ಲ ನಿಜಕ್ಕೂ ನನ್ನ ಪಾಲಿಗೆ ಜಂಟಲ್‌ಮನ್‌ಗಳು. ಜೈಲೆಂದು ಯಾವತ್ತೂ ನನಗೆ ಫೀಲ್ ಆಗಿಲ್ಲ. ನನ್ನನ್ನು ನೋಡಿಕೊಂಡ ಡಾಕ್ಟರ್‌ಗಳಿಗೆ ತುಂಬಾ ಧನ್ಯವಾದ” ಎಂದು ತಿಳಿಸಿದ್ದಾರೆ.

“ಜೈಲು ಸಿಬ್ಬಂದಿ ಬಹುತೇಕ ಇಂಜಿನಿಯರ್‌ಗಳೆಂದು ಕೇಳಿ ನನ್ನ ಹೃದಯ ಒಡೆದುಹೋಯಿತು. ಸುಮಾರು ಒಂದು ಸಾವಿರ ಜನ ನೇಮಕವಾಗಿದ್ದಾರೆ. ಅದರಲ್ಲಿ ಏಳನೂರು ಜನ ಇಂಜಿನಿಯರ್‌ಗಳಿದ್ದಾರೆ. ಪಿಎಚ್‌ಡಿ ಪಡೆದವರು ಇದ್ದಾರೆ. ಮೇಷ್ಟ್ರಾದವರು ಇದ್ದಾರೆ. ಬೇಜಾರಾದ ಸಂಗತಿ ಏನೆಂದರೆ ಕೇವಲ ಹತ್ತನೇ ತರಗತಿ ವಿದ್ಯಾರ್ಹತೆ ಬೇಕಾದ ಗಾರ್ಡ್ ಕೆಲಸಕ್ಕೆ ಇಂಜಿನಿಯರ್‌ಗಳು ಬಂದಿದ್ದಾರೆ. ತುಂಬಾ ನೋವಾಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಇಪ್ಪತ್ತು ನಾಲ್ಕು ದಿನಗಳು ಹೇಗೆ ಕಳೆದವು ಎಂಬುದೇ ಗೊತ್ತಾಗಲಿಲ್ಲ. ನನ್ನ ಫೇಸ್‌ಬುಕ್ ಲೈವ್ ಮಿಸ್‌ ಮಾಡಿಕೊಂಡೆ… ಕೆಲವು ದಿನಗಳಲ್ಲಿ  ಬ್ಲಾಕ್ ಆಗಿರುವ ಫೇಸ್‌ಬುಕ್ ಖಾತೆ ಓಪನ್‌ ಮಾಡಿಸುತ್ತೇನೆ” ಎಂದು ಹೇಳಿದ ಅವರು, ತಮಗಾಗಿ ಹೋರಾಟ ಮಾಡಿದವರನ್ನು ಮನಪೂರ್ವಕವಾಗಿ ನೆನೆದು ಧನ್ಯವಾದ ತಿಳಿಸಿದ್ದಾರೆ.

“ಈ ಹೋರಾಟ ಎಂದ ಮೇಲೆ ಇವೆಲ್ಲ ಸಾಮಾನ್ಯ. ತಾಳ್ಮೆಯನ್ನು ಕಳೆದುಕೊಂಡೆ ಅನಿಸುತ್ತೆ. ಒಬ್ಬ ತಂದೆಯಾಗಿ ಹೀಗೆ ವರ್ತಿಸಿದ್ದು ಸರಿ. ಆದರೆ ಒಬ್ಬ ವಕೀಲನಾಗಿ ನಾನು ಹೀಗೆ ನಡೆದುಕೊಳ್ಳಬಾರದಿತ್ತು” ಎಂದು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ.

“ಜೈಲಿನಲ್ಲಿ ನಾನು ಸಹ ಒಂದು ಒಳ್ಳೆಯ ಕೆಲಸವನ್ನು ಮಾಡಿಕೊಂಡು ಬಂದಿದ್ದೇನೆ. ಅದನ್ನು ಸಮಯ ಬಂದಾಗ ತಿಳಿಸುತ್ತೇನೆ. ಈಗ ಹೇಳಿದರೆ ವಿರೋಧಿಗಳು ಅಲರ್ಟ್ ಆಗಿಬಿಡುತ್ತಾರೆ. ಇನ್ನ ಮೇಲೆ ಮುಚ್ಚಿಡುವ ಕೆಲಸಗಳನ್ನು ಮಾಡಬೇಕಾಗುತ್ತದೆ” ಎಂದಿದ್ದಾರೆ.

ಏನಿದು ಪ್ರಕರಣ?

ಕೊಲೆ ಯತ್ನ ಪ್ರಕರಣ ಆರೋಪಿಸಿ ಜಗದೀಶ್‌ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ಆವರಣದಲ್ಲಿ ಈಚೆಗೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ವಕೀಲರಾದ ಕೆ.ಎನ್.ಜಗದೀಶ್‌ ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ. ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದರು.

ಜಾತಿ ನಿಂದನೆ ಮತ್ತು ಪೊಲೀಸ್‌ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾರೆಂದೂ ಆರೋಪಿಸಲಾಗಿತ್ತು. ಈಗ ಈ ಎರಡು ಪ್ರಕರಣಗಳಲ್ಲಿಯೂ ಜಾಮೀನು ದೊರೆತು ಜಗದೀಶ್‌ ಬಿಡುಗಡೆಯಾಗಿದ್ದಾರೆ.


ಇದನ್ನೂ ಓದಿರಿ: ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...