Homeಕರ್ನಾಟಕಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ರಾತ್ರಿಯೇ ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ  ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ತಡರಾತ್ರಿ ವರೆಗೂ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರೂ ಬಿಜೆಪಿಗೆ ಯಾವುದೇ ಉಪಯೋಗವಾಗಲಿಲ್ಲ. ಅಂತಿಮವಾಗಿ ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಬೆಂಗಳೂರಿಗೆ ಕರೆತರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಗಳು ಶೆಟ್ಟರ್ ಕಾಂಗ್ರೆಸ್‌ ಸೇರುವ ವಿಚಾರಕ್ಕೆ ಪುಷ್ಟಿ ನೀಡುತ್ತಿವೆ. ಇಂದು ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲೇ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ ಸೇರಬಹುದು ಎಂದು ರಾಜಕೀಯ ವಲಯದಿಂದ ಕೇಳಿಬರುತ್ತಿವೆ.

ಶನಿವಾರ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ತಡರಾತ್ರಿ ಸುದ್ದಿಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್‌, ನಾಳೆ (ಏಪ್ರಿಲ್ 16) ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದರು.

”ಒಂದು ಷಡ್ಯಂತ್ರ ನಡೆಯುತ್ತಿದೆ. ಯಡಿಯೂರಪ್ಪ 80 ವರ್ಷ, ಅವರು ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ನಾನು ಈಗ ಸೀನಿಯರ್ ಲೀಡರ್. ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರಿಟ್ ಮಾಡಿರುವುದು ನನಗೆ ಶಾಂಕ್‌ ಆಗಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇನೆ ಎಂದು ಹೇಳಿದ್ದರು ಆದರೆ ಪಟ್ಟಿಯಲ್ಲಿ ಈ ವರೆಗೂ ನನ್ನ ಹೆಸರು ಬರುತ್ತಿಲ್ಲ. ನಾನು ಇವತ್ತೆ ಅವರಿಗೆ ನಾನು ಶಾಸಕನಾಗುತ್ತೇನೆ ಎಂದು ಹೇಳಿದ್ದೇನೆ. ನನಗೆ ಟಿಕೆಟ್ ತಪ್ಪಿಸಲು ಯಾರು ಏನು ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ, ಆದರೆ ಈಗ ನಾನು ಹೇಳಲ್ಲ. ಇನ್ನುಮುಂದೆ ಎಲ್ಲವನ್ನೂ ತೆರೆ ಮೇಲೆ ನೋಡಿ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

”ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ” ಎಂದು ಭಾವುಕರಾದರು.

”ನನಗೆ ಟಿಕೆಟ್ ಕೊಡದೇ ಇರುವುದಕ್ಕೆ ನಮ್ಮ ಲಿಂಗಾಯತ ಸಮಾಜದವರಿಗೆ ಬಹಳಷ್ಟು ನೋವಾಗಿದೆ. ನಾನು ಹೊರ ಹೋದ ಮೇಲೆ ಅಸಮಾಧಾನಿತರ ಸಂಪರ್ಕ ಮಾಡಬಹುದು. ಈಗಾಗಲೇ ಕೆಲವರು ಸಂಪರ್ಕ ಮಾಡಿದ್ದಾರೆ. ಮೂರು ತಿಂಗಳಿಂದ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಮೊದಲಿನ ಬಿಜೆಪಿಯಾಗಿ ಉಳದಿಲ್ಲ. ಬಿಜೆಪಿ ಕೆಲವು ವ್ಯಕ್ತಿಗಳಿಂದ ಹಾಳಾಗುತ್ತಿದೆ. ಸ್ವಂತ ಹಿತಾಸಕ್ತಿಗಾಗಿ ಪಕ್ಷ ಹಾಳಾಗುತ್ತಿದೆ” ಎಂದು ಬಿಜೆಪಿಯ ಕೆಲ ನಾಯಕರ ವಿರುದ್ಧ ಕಿಡಿಕಾರಿದರು.

”ಟಿಕೆಟ್ ಇಲ್ಲ ಅಂದಾಗ ನನ್ನ ಮನಸ್ಸಿಗೆ ಆಘಾತ ಅಗಿತ್ತು. ನನ್ನ ಬಳಿ ಬಂದು ಮಾತನಾಡಿದವರೂ ಕೂಡ ಅದಕ್ಕೆ ಉತ್ತರ ಕೊಡಲಿಲ್ಲ. ನನಗೆ ರಾಜಕೀಯ ನಿವೃತ್ತಿ ಆಗಬೇಕು ಎಂದು ಹೇಳಿದ್ದರೆ ನಾನು ಗೌರವಯುತವಾಗಿ ಹೋಗುತ್ತಿದ್ದೆನು. ನಮ್ಮಂತ ಲೀಡರ್‌ರನ್ನು ಯುಸ್ ಆ್ಯಂಡ್ ಥ್ರೋ ಎಂಬಂತೆ ಮಾಡಿದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಹಾಗೇ ಕುಟುಂಬದ ಸದಸ್ಯರಿಗೆ ಟಿಕೆಡ್ ಕೊಡುವುದಕ್ಕೆ ಓಕೆ ಎಂದು ಹೇಳಿದರು. ಇದಕ್ಕೆ ನಾನು, ಜಗದೀಶ್ ಶೆಟ್ಟರ್​ಗೆ ಯಾಕೆ ಇಲ್ಲ? ಎಂದು ನಾನು ಧರ್ಮೆಂದ್ರ ಪ್ರಧಾನ ಅವರಿಗೆ ಕೇಳಿದೆ. ಅದಕ್ಜೆ ಅವರ ಬಳಿ ಉತ್ತರ ಇರಲಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...