Homeಕರ್ನಾಟಕಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ರಾತ್ರಿಯೇ ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ  ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ತಡರಾತ್ರಿ ವರೆಗೂ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರೂ ಬಿಜೆಪಿಗೆ ಯಾವುದೇ ಉಪಯೋಗವಾಗಲಿಲ್ಲ. ಅಂತಿಮವಾಗಿ ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಬೆಂಗಳೂರಿಗೆ ಕರೆತರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಗಳು ಶೆಟ್ಟರ್ ಕಾಂಗ್ರೆಸ್‌ ಸೇರುವ ವಿಚಾರಕ್ಕೆ ಪುಷ್ಟಿ ನೀಡುತ್ತಿವೆ. ಇಂದು ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲೇ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ ಸೇರಬಹುದು ಎಂದು ರಾಜಕೀಯ ವಲಯದಿಂದ ಕೇಳಿಬರುತ್ತಿವೆ.

ಶನಿವಾರ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ತಡರಾತ್ರಿ ಸುದ್ದಿಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್‌, ನಾಳೆ (ಏಪ್ರಿಲ್ 16) ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದರು.

”ಒಂದು ಷಡ್ಯಂತ್ರ ನಡೆಯುತ್ತಿದೆ. ಯಡಿಯೂರಪ್ಪ 80 ವರ್ಷ, ಅವರು ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ನಾನು ಈಗ ಸೀನಿಯರ್ ಲೀಡರ್. ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರಿಟ್ ಮಾಡಿರುವುದು ನನಗೆ ಶಾಂಕ್‌ ಆಗಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇನೆ ಎಂದು ಹೇಳಿದ್ದರು ಆದರೆ ಪಟ್ಟಿಯಲ್ಲಿ ಈ ವರೆಗೂ ನನ್ನ ಹೆಸರು ಬರುತ್ತಿಲ್ಲ. ನಾನು ಇವತ್ತೆ ಅವರಿಗೆ ನಾನು ಶಾಸಕನಾಗುತ್ತೇನೆ ಎಂದು ಹೇಳಿದ್ದೇನೆ. ನನಗೆ ಟಿಕೆಟ್ ತಪ್ಪಿಸಲು ಯಾರು ಏನು ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ, ಆದರೆ ಈಗ ನಾನು ಹೇಳಲ್ಲ. ಇನ್ನುಮುಂದೆ ಎಲ್ಲವನ್ನೂ ತೆರೆ ಮೇಲೆ ನೋಡಿ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

”ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ” ಎಂದು ಭಾವುಕರಾದರು.

”ನನಗೆ ಟಿಕೆಟ್ ಕೊಡದೇ ಇರುವುದಕ್ಕೆ ನಮ್ಮ ಲಿಂಗಾಯತ ಸಮಾಜದವರಿಗೆ ಬಹಳಷ್ಟು ನೋವಾಗಿದೆ. ನಾನು ಹೊರ ಹೋದ ಮೇಲೆ ಅಸಮಾಧಾನಿತರ ಸಂಪರ್ಕ ಮಾಡಬಹುದು. ಈಗಾಗಲೇ ಕೆಲವರು ಸಂಪರ್ಕ ಮಾಡಿದ್ದಾರೆ. ಮೂರು ತಿಂಗಳಿಂದ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಮೊದಲಿನ ಬಿಜೆಪಿಯಾಗಿ ಉಳದಿಲ್ಲ. ಬಿಜೆಪಿ ಕೆಲವು ವ್ಯಕ್ತಿಗಳಿಂದ ಹಾಳಾಗುತ್ತಿದೆ. ಸ್ವಂತ ಹಿತಾಸಕ್ತಿಗಾಗಿ ಪಕ್ಷ ಹಾಳಾಗುತ್ತಿದೆ” ಎಂದು ಬಿಜೆಪಿಯ ಕೆಲ ನಾಯಕರ ವಿರುದ್ಧ ಕಿಡಿಕಾರಿದರು.

”ಟಿಕೆಟ್ ಇಲ್ಲ ಅಂದಾಗ ನನ್ನ ಮನಸ್ಸಿಗೆ ಆಘಾತ ಅಗಿತ್ತು. ನನ್ನ ಬಳಿ ಬಂದು ಮಾತನಾಡಿದವರೂ ಕೂಡ ಅದಕ್ಕೆ ಉತ್ತರ ಕೊಡಲಿಲ್ಲ. ನನಗೆ ರಾಜಕೀಯ ನಿವೃತ್ತಿ ಆಗಬೇಕು ಎಂದು ಹೇಳಿದ್ದರೆ ನಾನು ಗೌರವಯುತವಾಗಿ ಹೋಗುತ್ತಿದ್ದೆನು. ನಮ್ಮಂತ ಲೀಡರ್‌ರನ್ನು ಯುಸ್ ಆ್ಯಂಡ್ ಥ್ರೋ ಎಂಬಂತೆ ಮಾಡಿದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಹಾಗೇ ಕುಟುಂಬದ ಸದಸ್ಯರಿಗೆ ಟಿಕೆಡ್ ಕೊಡುವುದಕ್ಕೆ ಓಕೆ ಎಂದು ಹೇಳಿದರು. ಇದಕ್ಕೆ ನಾನು, ಜಗದೀಶ್ ಶೆಟ್ಟರ್​ಗೆ ಯಾಕೆ ಇಲ್ಲ? ಎಂದು ನಾನು ಧರ್ಮೆಂದ್ರ ಪ್ರಧಾನ ಅವರಿಗೆ ಕೇಳಿದೆ. ಅದಕ್ಜೆ ಅವರ ಬಳಿ ಉತ್ತರ ಇರಲಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...