Homeಕರ್ನಾಟಕಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

- Advertisement -
- Advertisement -

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಟಿಕೆಟ್​ ಕೈತಪ್ಪುವ ಭೀತಿ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶನಿವಾರ ರಾತ್ರಿಯೇ ಬಿಜೆಪಿಗೆ​ ರಾಜೀನಾಮೆ ಘೋಷಿಸಿದ್ದರು. ಇದೀಗ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ  ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌, ಕೇಂದ್ರ ಸಚಿವ ಜೋಶಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಶನಿವಾರ ತಡರಾತ್ರಿ ವರೆಗೂ ಜಗದೀಶ್ ಶೆಟ್ಟರ್​ ಮನವೊಲಿಸುವ ಪ್ರಯತ್ನ ನಡೆಸಿದರೂ ಬಿಜೆಪಿಗೆ ಯಾವುದೇ ಉಪಯೋಗವಾಗಲಿಲ್ಲ. ಅಂತಿಮವಾಗಿ ಜಗದೀಶ್ ಶೆಟ್ಟರ್​ ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದರು. ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಕಾಂಗ್ರೆಸ್ ಪಕ್ಷ ಜಗದೀಶ್ ಶೆಟ್ಟರ್ ಅವರನ್ನು ಬೆಂಗಳೂರಿಗೆ ಕರೆತರು ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಗಳು ಶೆಟ್ಟರ್ ಕಾಂಗ್ರೆಸ್‌ ಸೇರುವ ವಿಚಾರಕ್ಕೆ ಪುಷ್ಟಿ ನೀಡುತ್ತಿವೆ. ಇಂದು ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರ ಸಮ್ಮುಖದಲ್ಲೇ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ ಸೇರಬಹುದು ಎಂದು ರಾಜಕೀಯ ವಲಯದಿಂದ ಕೇಳಿಬರುತ್ತಿವೆ.

ಶನಿವಾರ ಸಂಧಾನ ಸಭೆ ಬಳಿಕ ಹುಬ್ಬಳ್ಳಿಯ ನಿವಾಸದಲ್ಲಿ ತಡರಾತ್ರಿ ಸುದ್ದಿಗೋಷ್ಠಿ ನಡೆಸಿದ ಜಗದೀಶ್ ಶೆಟ್ಟರ್‌, ನಾಳೆ (ಏಪ್ರಿಲ್ 16) ರಾಜೀನಾಮೆ ನೀಡುತ್ತೇನೆ. ರಾಜೀನಾಮೆ ಕೊಟ್ಟ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದು ಹೇಳಿದ್ದರು.

”ಒಂದು ಷಡ್ಯಂತ್ರ ನಡೆಯುತ್ತಿದೆ. ಯಡಿಯೂರಪ್ಪ 80 ವರ್ಷ, ಅವರು ಚುನಾವಣೆ ರಾಜಕೀಯ ನಿವೃತ್ತಿ ಆಗಿದ್ದಾರೆ. ನಾನು ಈಗ ಸೀನಿಯರ್ ಲೀಡರ್. ನನ್ನ ವಿರುದ್ದ ಕುತಂತ್ರ, ಷಡ್ಯಂತ್ರ ನಡೆದಿದೆ. ನನ್ನ ಈ ರೀತಿ ಟ್ರಿಟ್ ಮಾಡಿರುವುದು ನನಗೆ ಶಾಂಕ್‌ ಆಗಿದೆ. ನಮ್ಮ ಕುಟುಂಬಕ್ಕೆ ಟಿಕೆಟ್ ಕೊಡುತ್ತೇನೆ ಎಂದು ಹೇಳಿದ್ದರು ಆದರೆ ಪಟ್ಟಿಯಲ್ಲಿ ಈ ವರೆಗೂ ನನ್ನ ಹೆಸರು ಬರುತ್ತಿಲ್ಲ. ನಾನು ಇವತ್ತೆ ಅವರಿಗೆ ನಾನು ಶಾಸಕನಾಗುತ್ತೇನೆ ಎಂದು ಹೇಳಿದ್ದೇನೆ. ನನಗೆ ಟಿಕೆಟ್ ತಪ್ಪಿಸಲು ಯಾರು ಏನು ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ, ಆದರೆ ಈಗ ನಾನು ಹೇಳಲ್ಲ. ಇನ್ನುಮುಂದೆ ಎಲ್ಲವನ್ನೂ ತೆರೆ ಮೇಲೆ ನೋಡಿ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತೇನೆ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

”ರಾಜ್ಯದಲ್ಲಿ ಬಿಜೆಪಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ನನ್ನದು ಯಾವುದೇ ಭ್ರಷ್ಟಾಚಾರ, ಸೆಕ್ಸ್‌ ಸಿಡಿಯೂ ಇಲ್ಲ. ಹೈಕಮಾಂಡ್ ಸರ್ವೆ ವರದಿಯೂ ಸಹ ನನ್ನ ಪರ ಬಂದಿದೆ. ಆದರೂ ನನಗೆ ಇನ್ನೂ ಟಿಕೆಟ್ ನೀಡದಿರುವುದು ಅಚ್ಚರಿ ತಂದಿದೆ. ನಾನು ಶಿಸ್ತಿನ ರಾಜಕಾರಣಿಯಾದರೂ ಟಿಕೆಟ್ ಘೋಷಿಸಿಲ್ಲ” ಎಂದು ಭಾವುಕರಾದರು.

”ನನಗೆ ಟಿಕೆಟ್ ಕೊಡದೇ ಇರುವುದಕ್ಕೆ ನಮ್ಮ ಲಿಂಗಾಯತ ಸಮಾಜದವರಿಗೆ ಬಹಳಷ್ಟು ನೋವಾಗಿದೆ. ನಾನು ಹೊರ ಹೋದ ಮೇಲೆ ಅಸಮಾಧಾನಿತರ ಸಂಪರ್ಕ ಮಾಡಬಹುದು. ಈಗಾಗಲೇ ಕೆಲವರು ಸಂಪರ್ಕ ಮಾಡಿದ್ದಾರೆ. ಮೂರು ತಿಂಗಳಿಂದ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಮೊದಲಿನ ಬಿಜೆಪಿಯಾಗಿ ಉಳದಿಲ್ಲ. ಬಿಜೆಪಿ ಕೆಲವು ವ್ಯಕ್ತಿಗಳಿಂದ ಹಾಳಾಗುತ್ತಿದೆ. ಸ್ವಂತ ಹಿತಾಸಕ್ತಿಗಾಗಿ ಪಕ್ಷ ಹಾಳಾಗುತ್ತಿದೆ” ಎಂದು ಬಿಜೆಪಿಯ ಕೆಲ ನಾಯಕರ ವಿರುದ್ಧ ಕಿಡಿಕಾರಿದರು.

”ಟಿಕೆಟ್ ಇಲ್ಲ ಅಂದಾಗ ನನ್ನ ಮನಸ್ಸಿಗೆ ಆಘಾತ ಅಗಿತ್ತು. ನನ್ನ ಬಳಿ ಬಂದು ಮಾತನಾಡಿದವರೂ ಕೂಡ ಅದಕ್ಕೆ ಉತ್ತರ ಕೊಡಲಿಲ್ಲ. ನನಗೆ ರಾಜಕೀಯ ನಿವೃತ್ತಿ ಆಗಬೇಕು ಎಂದು ಹೇಳಿದ್ದರೆ ನಾನು ಗೌರವಯುತವಾಗಿ ಹೋಗುತ್ತಿದ್ದೆನು. ನಮ್ಮಂತ ಲೀಡರ್‌ರನ್ನು ಯುಸ್ ಆ್ಯಂಡ್ ಥ್ರೋ ಎಂಬಂತೆ ಮಾಡಿದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಹಾಗೇ ಕುಟುಂಬದ ಸದಸ್ಯರಿಗೆ ಟಿಕೆಡ್ ಕೊಡುವುದಕ್ಕೆ ಓಕೆ ಎಂದು ಹೇಳಿದರು. ಇದಕ್ಕೆ ನಾನು, ಜಗದೀಶ್ ಶೆಟ್ಟರ್​ಗೆ ಯಾಕೆ ಇಲ್ಲ? ಎಂದು ನಾನು ಧರ್ಮೆಂದ್ರ ಪ್ರಧಾನ ಅವರಿಗೆ ಕೇಳಿದೆ. ಅದಕ್ಜೆ ಅವರ ಬಳಿ ಉತ್ತರ ಇರಲಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...