Homeಕರ್ನಾಟಕಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

- Advertisement -
- Advertisement -

2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಪಕ್ಷ ನಿನ್ನೆಯಷ್ಟೇ (ಮಂಗಳವಾರ) ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಮತ್ತು ರಾಮದುರ್ಗ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳ ಪ್ರಬಲ ಆಕಾಂಕ್ಷಿಗಳಿಗೆ ಟಿಕೆಟ್ ನೀಡುತ್ತಿಲ್ಲ. ಇದರಿಂದ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ಮಧಾನಗೊಂಡಿದ್ದು, ಪಕ್ಷದ ಹೈಕಮಾಂಡ್ ವಿರುದ್ಧವೇ ಗುಡುಗಿದ್ದಾರೆ.

ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹುಬ್ಬಳ್ಳಿ ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ. ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಾರೆ. ಈ ಬಾರಿ ಇಲ್ಲಿಂದಲೇ ಸ್ಪರ್ಧಿಸುವ ಬಯಕೆ ಹೊಂದಿದ್ದರು. ಮೊದಲಪಟ್ಟಿಯಲ್ಲಿ ಏಕೆ ತಮ್ಮ ಹೆಸರು ಘೋಷಣೆ ಆಗಿಲ್ಲ ಎಂಬುದರ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ.

ಅವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನುವ ವಿಚಾರ ನಿನ್ನೆಯಿಂದ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದೇ ಉದ್ದೇಶದಿಂದ ಬಿಜೆಪಿ ಜೈಕಮಾಂಡ್ ಅವರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ ಎನ್ನಲಾಗಿದೆ. ಹೀಗಾಗಿ ಅವರು ಇಂದು (ಬುಧವಾರ) ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: 189 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ಸಂಪೂರ್ಣ ವಿವರ ಇಲ್ಲಿದೆ

ಟಿಕೆಟ್ ನೀಡದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ

ಒಂದು ವೇಳೆ ಈ ಭಾರಿ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಆದಲ್ಲಿ ಜಗದೀಶ್ ಶೆಟ್ಟರ್ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ. ಮೊದಲ ಪಟ್ಟಿ ಘೋಷಣೆಯಾದ ಬಳಿಕ ಅವರು ಪಕ್ಷೇತರ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.

ಅಸಮಾಧಾನಗೊಂಡಿರುವ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಬರುವಂತೆ ಹೇಳಿದ್ದಾರೆ. ಅವರಿಗೆ ರಾಜ್ಯಪಾಲ ಹುದ್ದೆಯ ಭರವಸೆ ನೀಡಿ ಸಮಾಧಾನಪಡಿಸುವ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗ ಸಿದ್ಧರಾಗಿದ್ದರು. ಟಿಕೆಟ್ ನೀಡದಿರುವುದಕ್ಕೆ ಸಹಜವಾಗಿ ಬೇಸರಗೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ (67) ಸತತವಾಗಿ ಆರು ಬಾರಿ ಗೆದ್ದಿದ್ದಾರೆ. ಹಾಗಾಗಿ ತನಗೆ ಟಿಕೆಟ್ ಸಿಗುತ್ತದೆ ಎನ್ನುವ ಭರವಸೆಯಲ್ಲಿದ್ದ ಶೆಟ್ಟರ್ ಟಿಕೆಟ್ ಕೈತಪ್ಪುವ ಸೂಚನೆ ಸಿಗುತ್ತಿದ್ದಂತೆ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು 6 ಸಲ ಚುನಾವಣೆಯಲ್ಲಿ 21,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಚುನಾಯಿತನಾಗಿದ್ದೇನೆ. ನನ್ನ ವಿರುದ್ಧ ಆರೋಪಗಳಿಲ್ಲ. ಹೀಗಿದ್ದರೂ ಏಕೆ ಚುನಾವಣೆಯಿಂದ ಹೊರಗಿಡಲಾಗಿದೆ? ಚುನಾವಣೆ ಸಂಬಂಧ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇನೆ. ಟಿಕೆಟ್ ನೀಡದಿದ್ದರೂ ನಾನು ಕ್ಷೇತ್ರದಲ್ಲಿ ಪ್ರಚಾರ ಮುಂದುವರಿಸುತ್ತೇನೆ. ಜೊತೆಗೆ ಬರಲಿರುವ ಚುನವಣೆಯಲ್ಲಿ ನಾನು ಸ್ಪರ್ಧಿಸಿಯೇ ತಿರುತ್ತೇನೆ” ಎಂದು ಹೇಳುವ ಮೂಲಕ ಬಿಜೆಪಿಯಿಂದ ಟಿಕೆಟ್ ನೀಡದಿದ್ದರೂ ಪಕ್ಷೇತರರಾಗಿ ಸ್ಪಧಿಸುವ ಮುನ್ಸೂಚನೆ ನೀಡಿದ್ದಾರೆ.

ಈ ಹಿಂದೆ ಬಿಜೆಪಿ ಹೈಕಮಾಂಡ್ ನಾಯಕರು ಮುಂಬರುವ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡುವಂತೆ ಶೆಟ್ಟರ್ ಬಳಿ ಮನವಿ ಮಾಡಿತ್ತು. ಇದರಿಂದ ಬೇಸರಗೊಂಡಿದ್ದ ಅವರು ಸುದ್ದಿಗೋಷ್ಠಿ ನಡೆಸಿ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಟಿಕೆಟ್ ನೀಡದಿದ್ದರೂ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವತಂತ್ರವಾಗಿ ಆಯ್ಕೆ ಮಾಡುವ ಎಚ್ಚರಿಕೆ ನೀಡಿದ್ದರು. ಬಂಡಾಯದ ಬಾವುಟ ನೆಡಲು ಸಿದ್ಧರಾಗಿದ್ದ ಶೆಟ್ಟರ್‌ಗೆ ದೆಹಲಿ ನಾಯಕರು ಡೋಂಟ್‌ ಕೇರ್ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...