Homeಕರ್ನಾಟಕಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

ಟಿಕೆಟ್ ವಿಚಾರಕ್ಕೆ ಜಗದೀಶ್ ಶೆಟ್ಟರ್ ಅಸಮಾಧಾನ ಸ್ಪೋಟ; ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ!

- Advertisement -
- Advertisement -

2023ರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತರೂಢ ಬಿಜೆಪಿ ಪಕ್ಷ ನಿನ್ನೆಯಷ್ಟೇ (ಮಂಗಳವಾರ) ಮೊದಲ ಹಂತದ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಮತ್ತು ರಾಮದುರ್ಗ ವಿಧಾನಸಭಾ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳ ಪ್ರಬಲ ಆಕಾಂಕ್ಷಿಗಳಿಗೆ ಟಿಕೆಟ್ ನೀಡುತ್ತಿಲ್ಲ. ಇದರಿಂದ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತೀವ್ರ ಮಧಾನಗೊಂಡಿದ್ದು, ಪಕ್ಷದ ಹೈಕಮಾಂಡ್ ವಿರುದ್ಧವೇ ಗುಡುಗಿದ್ದಾರೆ.

ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹುಬ್ಬಳ್ಳಿ ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆಯಾಗಿಲ್ಲ. ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕ ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಾರೆ. ಈ ಬಾರಿ ಇಲ್ಲಿಂದಲೇ ಸ್ಪರ್ಧಿಸುವ ಬಯಕೆ ಹೊಂದಿದ್ದರು. ಮೊದಲಪಟ್ಟಿಯಲ್ಲಿ ಏಕೆ ತಮ್ಮ ಹೆಸರು ಘೋಷಣೆ ಆಗಿಲ್ಲ ಎಂಬುದರ ಬಗ್ಗೆ ಅವರು ಹೆಚ್ಚು ತಲೆಕೆಡಿಸಿಕೊಂಡಿದ್ದಾರೆ.

ಅವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನುವ ವಿಚಾರ ನಿನ್ನೆಯಿಂದ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದೇ ಉದ್ದೇಶದಿಂದ ಬಿಜೆಪಿ ಜೈಕಮಾಂಡ್ ಅವರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ ಎನ್ನಲಾಗಿದೆ. ಹೀಗಾಗಿ ಅವರು ಇಂದು (ಬುಧವಾರ) ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: 189 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ಸಂಪೂರ್ಣ ವಿವರ ಇಲ್ಲಿದೆ

ಟಿಕೆಟ್ ನೀಡದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸುವ ಮುನ್ಸೂಚನೆ

ಒಂದು ವೇಳೆ ಈ ಭಾರಿ ಟಿಕೆಟ್ ನೀಡದೇ ಹೊಸ ಮುಖಗಳಿಗೆ ಮಣೆ ಹಾಕಿದ್ದೇ ಆದಲ್ಲಿ ಜಗದೀಶ್ ಶೆಟ್ಟರ್ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ. ಮೊದಲ ಪಟ್ಟಿ ಘೋಷಣೆಯಾದ ಬಳಿಕ ಅವರು ಪಕ್ಷೇತರ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.

ಅಸಮಾಧಾನಗೊಂಡಿರುವ ಅವರನ್ನು ಹೈಕಮಾಂಡ್ ನಾಯಕರು ದೆಹಲಿಗೆ ಬರುವಂತೆ ಹೇಳಿದ್ದಾರೆ. ಅವರಿಗೆ ರಾಜ್ಯಪಾಲ ಹುದ್ದೆಯ ಭರವಸೆ ನೀಡಿ ಸಮಾಧಾನಪಡಿಸುವ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಅವರು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗ ಸಿದ್ಧರಾಗಿದ್ದರು. ಟಿಕೆಟ್ ನೀಡದಿರುವುದಕ್ಕೆ ಸಹಜವಾಗಿ ಬೇಸರಗೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ (67) ಸತತವಾಗಿ ಆರು ಬಾರಿ ಗೆದ್ದಿದ್ದಾರೆ. ಹಾಗಾಗಿ ತನಗೆ ಟಿಕೆಟ್ ಸಿಗುತ್ತದೆ ಎನ್ನುವ ಭರವಸೆಯಲ್ಲಿದ್ದ ಶೆಟ್ಟರ್ ಟಿಕೆಟ್ ಕೈತಪ್ಪುವ ಸೂಚನೆ ಸಿಗುತ್ತಿದ್ದಂತೆ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು 6 ಸಲ ಚುನಾವಣೆಯಲ್ಲಿ 21,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಚುನಾಯಿತನಾಗಿದ್ದೇನೆ. ನನ್ನ ವಿರುದ್ಧ ಆರೋಪಗಳಿಲ್ಲ. ಹೀಗಿದ್ದರೂ ಏಕೆ ಚುನಾವಣೆಯಿಂದ ಹೊರಗಿಡಲಾಗಿದೆ? ಚುನಾವಣೆ ಸಂಬಂಧ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇನೆ. ಟಿಕೆಟ್ ನೀಡದಿದ್ದರೂ ನಾನು ಕ್ಷೇತ್ರದಲ್ಲಿ ಪ್ರಚಾರ ಮುಂದುವರಿಸುತ್ತೇನೆ. ಜೊತೆಗೆ ಬರಲಿರುವ ಚುನವಣೆಯಲ್ಲಿ ನಾನು ಸ್ಪರ್ಧಿಸಿಯೇ ತಿರುತ್ತೇನೆ” ಎಂದು ಹೇಳುವ ಮೂಲಕ ಬಿಜೆಪಿಯಿಂದ ಟಿಕೆಟ್ ನೀಡದಿದ್ದರೂ ಪಕ್ಷೇತರರಾಗಿ ಸ್ಪಧಿಸುವ ಮುನ್ಸೂಚನೆ ನೀಡಿದ್ದಾರೆ.

ಈ ಹಿಂದೆ ಬಿಜೆಪಿ ಹೈಕಮಾಂಡ್ ನಾಯಕರು ಮುಂಬರುವ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡುವಂತೆ ಶೆಟ್ಟರ್ ಬಳಿ ಮನವಿ ಮಾಡಿತ್ತು. ಇದರಿಂದ ಬೇಸರಗೊಂಡಿದ್ದ ಅವರು ಸುದ್ದಿಗೋಷ್ಠಿ ನಡೆಸಿ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಟಿಕೆಟ್ ನೀಡದಿದ್ದರೂ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸ್ವತಂತ್ರವಾಗಿ ಆಯ್ಕೆ ಮಾಡುವ ಎಚ್ಚರಿಕೆ ನೀಡಿದ್ದರು. ಬಂಡಾಯದ ಬಾವುಟ ನೆಡಲು ಸಿದ್ಧರಾಗಿದ್ದ ಶೆಟ್ಟರ್‌ಗೆ ದೆಹಲಿ ನಾಯಕರು ಡೋಂಟ್‌ ಕೇರ್ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...